AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್ ಪಾಲು ಆದ್ರೂ ಸುಮಲತಾ ಸ್ಪರ್ಧೆ?ಯಾವ ಪಕ್ಷದಿಂದ?

ಮಂಡ್ಯ ರಾಜಕಾರಣ ಅಂದರೆ ಇಂಡಿಯಾನೇ ತಿರುಗಿ ನೋಡುತ್ತೆ. ಈಗ ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಚುನಾವಣೆ ರಂಗು ಪಡೆದುಕೊಳ್ಳುತ್ತಿದೆ. ಇನ್ನು ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಂಡಿದೆ. ಬಹುತೇಕ ಜೆಡಿಎಸ್​ನಿಂದಲೇ ಅಭ್ಯರ್ಥಿ ಘೋಷಣೆ ಆಗುವ ಸಂಭವ ಕೂಡ ಇದೆ. ಈ ನಡುವೆ ಬಿಜೆಪಿಗೆ ಸಂಪೂರ್ಣ ಬೆಂಬಲ ಘೋಷಿಸಿರೋ ಸಂಸದೆ ಸುಮಲತಾ ನಡೆ ಕುತೂಹಲ ಮೂಡಿಸಿದೆ

ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್ ಪಾಲು ಆದ್ರೂ  ಸುಮಲತಾ ಸ್ಪರ್ಧೆ?ಯಾವ ಪಕ್ಷದಿಂದ?
ಸುಮಲತಾ
ಪ್ರಶಾಂತ್​ ಬಿ.
| Edited By: |

Updated on:Dec 25, 2023 | 6:36 PM

Share

ಮಂಡ್ಯ, ಡಿ.25: ಲೋಕಸಭಾ ಚುನಾವಣೆ(Lok Sabha Elections)ಗೆ ಅಭ್ಯರ್ಥಿ ಆಗುತ್ತೇನೆ ಎನ್ನುವ ಗುಟ್ಟನ್ನ ಸಂಸದೆ ಸುಮಲತಾ(Sumalatha) ಬಿಟ್ಟು ಕೊಟ್ಟಂತಿದೆ.ಈಗಾಗಲೇ ಬಿಜೆಪಿಗೆ ತಮ್ಮ ಬೆಂಬಲ ಸಂಪೂರ್ಣ ಇದೆ ಎಂದು ಸುಮಲತಾ ಘೋಷಣೆ ಮಾಡಿದ್ದರು. ಮೊದಲೇ ಜೆಡಿಎಸ್ ಹಾಗೂ ಸಂಸದೆ ಸುಮಲತಾ ನಡುವೆ ಟೀಕಾಪ್ರಹಾರ ನಡೀತಿದೆ. ಈ ಮದ್ಯೆ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಂಡಿದೆ. ಹೇಳಿ ಕೇಳಿ ಮೊದಲೇ ಮಂಡ್ಯ ಜಿಲ್ಲೆಯು ಜೆಡಿಎಸ್​ನ ಭದ್ರಕೋಟೆ. ಶತಾಯ ಗತಾಯ ಇಲ್ಲಿ ಜೆಡಿಎಸ್ ತನ್ನ ಅಭ್ಯರ್ಥಿಯನ್ನೇ ಕಣಕ್ಕಿಳಿಸಿ ಗೆಲ್ಲಿಸಿಕೊಂಡು ತನ್ನ ಹಿಡಿತ ಸಾಧಿಸಲು ಹೊರಟಿದ್ದು, ಬಿಜೆಪಿಯಿಂದ ಸುಮಲತಾಗೆ ಟಿಕೆಟ್ ನೀಡುವುದು ಅನುಮಾನವಾಗಿದೆ. ಈ ನಡುವೆ ಬಿಜೆಪಿ ಬಿಜೆಪಿ ಜೆಡಿಎಸ್ ಮೈತ್ರಿ ಬಗ್ಗೆನೂ ಕೂಡ ಸುಮಲತಾ ಏನು ಹೇಳುತ್ತಿಲ್ಲ.

 ಕುತೂಹಲ ಮೂಡಿಸಿದ ಸುಮಲತಾರ ನಡೆ

ಇನ್ನು ಈ ಕುರಿತು ಯಾವಾಗ ಕೇಳಿದರೂ ಮಂಡ್ಯ ಜನ ನನ್ನನ್ನ ಗೆಲ್ಲಿಸಿದ್ದಾರೆ. ಸ್ವಾಭಿಮಾನಕ್ಕೆ ಬೆಲೆ ಕೊಟ್ಟಿದ್ದಾರೆ. ನಾನು ಮಂಡ್ಯ ಬಿಟ್ಟು ಎಲ್ಲೂ ಹೋಗಲ್ಲ. ನಾನು ಸ್ಪರ್ಧೆ ಮಾಡೋದಾದರೆ ಮಂಡ್ಯದಿಂದಲೇ ಎಂದು ಸಂಸದೆ ಸುಮಲತಾ ಹೇಳುತ್ತಾನೆ ಇದ್ದಾರೆ. ಆದ್ರೆ, ಈವರೆಗೂ ಯಾವ ಪಕ್ಷದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಮಾತ್ರ ಹೇಳಿಲ್ಲ. ಈ ಮಧ್ಯೆ ಮೊನ್ನೆ ಕಾಟೇರ ಚಿತ್ರದ ಹಾಡು ಬಿಡುಗಡೆ ಸಂದರ್ಭ ನಟ ದರ್ಶನ್ ಕೂಡ ಸಂಸದೆ ಸುಮಲತಾಗೆ ಜಿಲ್ಲೆಯ ಜನ ಆಶೀರ್ವಾದ ಮಾಡಿ ಎಂದು ಮನವಿ ಮಾಡೋ ಮೂಲಕ ಮತ್ತೆ ಸುಮಲತಾ ಸ್ಪರ್ಧೆ ಮಾಡುತ್ತಾರೆ ಎನ್ನುವುದನ್ನ ಪರೋಕ್ಷವಾಗಿ ಹೇಳಿದ್ದಾರೆ.

ಇದನ್ನೂ ಓದಿ:Mandya: ಪಕ್ಷಗಳ ಟಿಕೆಟ್ ಸಿಗದಿದ್ದರೂ ಸುಮಲತಾ ಮಂಡ್ಯದಲ್ಲಿ ಸ್ಪರ್ಧೆ ಖಚಿತ? ಸುಳಿವು ಕೊಟ್ಟ ಚಾಲೆಂಜಿಂಗ್ ಸ್ಟಾರ್ ದರ್ಶನ್

ಇದೆಲ್ಲವನ್ನೂ ನೋಡಿದರೆ ಮತ್ತೆ ಮಂಡ್ಯ ಲೋಕಸಭಾ ಅಖಾಡದಲ್ಲಿ ಸುಮಲತಾ ಸ್ಪರ್ಧೆ ಫಿಕ್ಸ್ ಎನ್ನುವುದು ಖಾತ್ರಿಯಾಗಿದೆ. ಇಷ್ಟಲ್ಲದೆ ಸುಮಲತಾ ಕಾಂಗ್ರೆಸ್​ಗೆ ಬರುವುದು ಕಾಂಗ್ರೆಸ್ಸಿಗರಿಗೆ ಇಷ್ಟ ಇಲ್ಲ, ಒಟ್ಟಾರೆ ಸುಮಲತಾ ಬಿಜೆಪಿಯಿಂದ ಅಭ್ಯರ್ಥಿ ಆಗ್ತಾರಾ?, ಕಾಂಗ್ರೆಸ್​ನಿಂದ ನಿಲ್ತಾರಾ? ಅಥವಾ ಕಳೆದ ಭಾರಿಯಂತೆ ಸ್ವತಂತ್ರ ಅಭ್ಯರ್ಥಿ ಆಗಿ ಅಕಾಡಕ್ಕೆ ಇಳಿತಾರಾ? ಕಾದು ನೋಡಬೇಕಿದೆ. ಅದೇನೇ ಆಗಲಿ ಸಂಸದೆ ಸುಮಲತಾ ಮಾತ್ರ ಮಂಡ್ಯದಿಂದಲೇ ಸ್ಪರ್ಧೆ ಮಾಡುತ್ತಾರೆ ಎನ್ನುವುದು ಖಚಿತವಾದಂತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:26 pm, Mon, 25 December 23

KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ