Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್ ಪಾಲು ಆದ್ರೂ ಸುಮಲತಾ ಸ್ಪರ್ಧೆ?ಯಾವ ಪಕ್ಷದಿಂದ?

ಮಂಡ್ಯ ರಾಜಕಾರಣ ಅಂದರೆ ಇಂಡಿಯಾನೇ ತಿರುಗಿ ನೋಡುತ್ತೆ. ಈಗ ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಚುನಾವಣೆ ರಂಗು ಪಡೆದುಕೊಳ್ಳುತ್ತಿದೆ. ಇನ್ನು ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಂಡಿದೆ. ಬಹುತೇಕ ಜೆಡಿಎಸ್​ನಿಂದಲೇ ಅಭ್ಯರ್ಥಿ ಘೋಷಣೆ ಆಗುವ ಸಂಭವ ಕೂಡ ಇದೆ. ಈ ನಡುವೆ ಬಿಜೆಪಿಗೆ ಸಂಪೂರ್ಣ ಬೆಂಬಲ ಘೋಷಿಸಿರೋ ಸಂಸದೆ ಸುಮಲತಾ ನಡೆ ಕುತೂಹಲ ಮೂಡಿಸಿದೆ

ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್ ಪಾಲು ಆದ್ರೂ  ಸುಮಲತಾ ಸ್ಪರ್ಧೆ?ಯಾವ ಪಕ್ಷದಿಂದ?
ಸುಮಲತಾ
Follow us
ಪ್ರಶಾಂತ್​ ಬಿ.
| Updated By: ಕಿರಣ್ ಹನುಮಂತ್​ ಮಾದಾರ್

Updated on:Dec 25, 2023 | 6:36 PM

ಮಂಡ್ಯ, ಡಿ.25: ಲೋಕಸಭಾ ಚುನಾವಣೆ(Lok Sabha Elections)ಗೆ ಅಭ್ಯರ್ಥಿ ಆಗುತ್ತೇನೆ ಎನ್ನುವ ಗುಟ್ಟನ್ನ ಸಂಸದೆ ಸುಮಲತಾ(Sumalatha) ಬಿಟ್ಟು ಕೊಟ್ಟಂತಿದೆ.ಈಗಾಗಲೇ ಬಿಜೆಪಿಗೆ ತಮ್ಮ ಬೆಂಬಲ ಸಂಪೂರ್ಣ ಇದೆ ಎಂದು ಸುಮಲತಾ ಘೋಷಣೆ ಮಾಡಿದ್ದರು. ಮೊದಲೇ ಜೆಡಿಎಸ್ ಹಾಗೂ ಸಂಸದೆ ಸುಮಲತಾ ನಡುವೆ ಟೀಕಾಪ್ರಹಾರ ನಡೀತಿದೆ. ಈ ಮದ್ಯೆ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಂಡಿದೆ. ಹೇಳಿ ಕೇಳಿ ಮೊದಲೇ ಮಂಡ್ಯ ಜಿಲ್ಲೆಯು ಜೆಡಿಎಸ್​ನ ಭದ್ರಕೋಟೆ. ಶತಾಯ ಗತಾಯ ಇಲ್ಲಿ ಜೆಡಿಎಸ್ ತನ್ನ ಅಭ್ಯರ್ಥಿಯನ್ನೇ ಕಣಕ್ಕಿಳಿಸಿ ಗೆಲ್ಲಿಸಿಕೊಂಡು ತನ್ನ ಹಿಡಿತ ಸಾಧಿಸಲು ಹೊರಟಿದ್ದು, ಬಿಜೆಪಿಯಿಂದ ಸುಮಲತಾಗೆ ಟಿಕೆಟ್ ನೀಡುವುದು ಅನುಮಾನವಾಗಿದೆ. ಈ ನಡುವೆ ಬಿಜೆಪಿ ಬಿಜೆಪಿ ಜೆಡಿಎಸ್ ಮೈತ್ರಿ ಬಗ್ಗೆನೂ ಕೂಡ ಸುಮಲತಾ ಏನು ಹೇಳುತ್ತಿಲ್ಲ.

 ಕುತೂಹಲ ಮೂಡಿಸಿದ ಸುಮಲತಾರ ನಡೆ

ಇನ್ನು ಈ ಕುರಿತು ಯಾವಾಗ ಕೇಳಿದರೂ ಮಂಡ್ಯ ಜನ ನನ್ನನ್ನ ಗೆಲ್ಲಿಸಿದ್ದಾರೆ. ಸ್ವಾಭಿಮಾನಕ್ಕೆ ಬೆಲೆ ಕೊಟ್ಟಿದ್ದಾರೆ. ನಾನು ಮಂಡ್ಯ ಬಿಟ್ಟು ಎಲ್ಲೂ ಹೋಗಲ್ಲ. ನಾನು ಸ್ಪರ್ಧೆ ಮಾಡೋದಾದರೆ ಮಂಡ್ಯದಿಂದಲೇ ಎಂದು ಸಂಸದೆ ಸುಮಲತಾ ಹೇಳುತ್ತಾನೆ ಇದ್ದಾರೆ. ಆದ್ರೆ, ಈವರೆಗೂ ಯಾವ ಪಕ್ಷದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಮಾತ್ರ ಹೇಳಿಲ್ಲ. ಈ ಮಧ್ಯೆ ಮೊನ್ನೆ ಕಾಟೇರ ಚಿತ್ರದ ಹಾಡು ಬಿಡುಗಡೆ ಸಂದರ್ಭ ನಟ ದರ್ಶನ್ ಕೂಡ ಸಂಸದೆ ಸುಮಲತಾಗೆ ಜಿಲ್ಲೆಯ ಜನ ಆಶೀರ್ವಾದ ಮಾಡಿ ಎಂದು ಮನವಿ ಮಾಡೋ ಮೂಲಕ ಮತ್ತೆ ಸುಮಲತಾ ಸ್ಪರ್ಧೆ ಮಾಡುತ್ತಾರೆ ಎನ್ನುವುದನ್ನ ಪರೋಕ್ಷವಾಗಿ ಹೇಳಿದ್ದಾರೆ.

ಇದನ್ನೂ ಓದಿ:Mandya: ಪಕ್ಷಗಳ ಟಿಕೆಟ್ ಸಿಗದಿದ್ದರೂ ಸುಮಲತಾ ಮಂಡ್ಯದಲ್ಲಿ ಸ್ಪರ್ಧೆ ಖಚಿತ? ಸುಳಿವು ಕೊಟ್ಟ ಚಾಲೆಂಜಿಂಗ್ ಸ್ಟಾರ್ ದರ್ಶನ್

ಇದೆಲ್ಲವನ್ನೂ ನೋಡಿದರೆ ಮತ್ತೆ ಮಂಡ್ಯ ಲೋಕಸಭಾ ಅಖಾಡದಲ್ಲಿ ಸುಮಲತಾ ಸ್ಪರ್ಧೆ ಫಿಕ್ಸ್ ಎನ್ನುವುದು ಖಾತ್ರಿಯಾಗಿದೆ. ಇಷ್ಟಲ್ಲದೆ ಸುಮಲತಾ ಕಾಂಗ್ರೆಸ್​ಗೆ ಬರುವುದು ಕಾಂಗ್ರೆಸ್ಸಿಗರಿಗೆ ಇಷ್ಟ ಇಲ್ಲ, ಒಟ್ಟಾರೆ ಸುಮಲತಾ ಬಿಜೆಪಿಯಿಂದ ಅಭ್ಯರ್ಥಿ ಆಗ್ತಾರಾ?, ಕಾಂಗ್ರೆಸ್​ನಿಂದ ನಿಲ್ತಾರಾ? ಅಥವಾ ಕಳೆದ ಭಾರಿಯಂತೆ ಸ್ವತಂತ್ರ ಅಭ್ಯರ್ಥಿ ಆಗಿ ಅಕಾಡಕ್ಕೆ ಇಳಿತಾರಾ? ಕಾದು ನೋಡಬೇಕಿದೆ. ಅದೇನೇ ಆಗಲಿ ಸಂಸದೆ ಸುಮಲತಾ ಮಾತ್ರ ಮಂಡ್ಯದಿಂದಲೇ ಸ್ಪರ್ಧೆ ಮಾಡುತ್ತಾರೆ ಎನ್ನುವುದು ಖಚಿತವಾದಂತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:26 pm, Mon, 25 December 23

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್