AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CT Ravi: ಕರ್ನಾಟಕ ಬಿಜೆಪಿ ಅಧ್ಯಕ್ಷ ಹುದ್ದೆ ಬಗ್ಗೆ ಸಿಟಿ ರವಿ ಅಚ್ಚರಿ ಹೇಳಿಕೆ

ಕರ್ನಾಟಕ ಬಿಜೆಪಿ ಅಧ್ಯಕ್ಷ ಹುದ್ದೆ ಬಗ್ಗೆ ಮಾಜಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅಚ್ಚರಿ ಹೇಳಿಕೆ ನೀಡಿದ್ದಾರೆ.

CT Ravi: ಕರ್ನಾಟಕ ಬಿಜೆಪಿ ಅಧ್ಯಕ್ಷ ಹುದ್ದೆ ಬಗ್ಗೆ ಸಿಟಿ ರವಿ ಅಚ್ಚರಿ ಹೇಳಿಕೆ
ಸಿಟಿ ರವಿ
Anil Kalkere
| Edited By: |

Updated on:Jul 30, 2023 | 3:56 PM

Share

ಬೆಂಗಳೂರು, (ಜುಲೈ 30): ನಳಿನ್ ಕುಮಾರ್ ಕಟೀಲ್ (Nalin Kumar Kateel)​ ಅವರ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಕರ್ನಾಟಕ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ(Karnataka BJP President Post) ಹೊಸಬರನ್ನು ನೇಮಕ ಮಾಡುವ ಬಗ್ಗೆ ಚರ್ಚೆಗಳು ನಡೆದಿವೆ. ಸಿಟಿ ರವಿ(CT Ravi) ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲ ಹೈಕಮಾಂಡ್​ ಚಿಂತನೆ ನಡೆಸಿದೆ. ಸಿಟಿ ರವಿಯವರೇ ರಾಜ್ಯ ಬಿಜೆಪಿ ಅಧ್ಯಕ್ಷ ಎಂದು ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ಸಹ ಸುಳಿವು ನೀಡಿದ್ದರು. ಇದಲ್ಲದೆ ಇದಕ್ಕೆ ಪುಷ್ಟಿ ನೀಡುವಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿಟಿ ರವಿಗೆ ಹೈಕಮಾಂಡ್ ಕೊಕ್ ಕೊಟ್ಟಿದೆ. ಹೀಗಾಗಿ ಸಿಟಿ ರವಿಗೆ ರಾಜ್ಯಾಧ್ಯಕ್ಷ ಹುದ್ದೆ ಬಹುತೇಕ ಫಿಕ್ಸ್ ಎನ್ನಲಾಗಿದೆ. ಆದ್ರೆ, ಇದರ ಮಧ್ಯೆ ಸ್ವತಃ ಸಿಟಿ ರವಿ ಈ ಬಗ್ಗೆ ಪ್ರತಿಕ್ರಿಯಿಸಿ ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿಟಿ ರವಿಗೆ ಕೊಕ್, ಒಲಿಯುತ್ತಾ ರಾಜ್ಯಾಧ್ಯಕ್ಷ ಪಟ್ಟ?

ಬೆಂಗಳೂರಿನಲ್ಲಿ ಇಂದು(ಜುಲೈ 30) ಸುದ್ದಿಗಾರರೊಂದಿಗೆ ಮಾತನಾಡಿದ ಸಿಟಿ ರವಿ, ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ಪಕ್ಷದ ರಾಜ್ಯಾಧ್ಯಕ್ಷ ಎನ್ನುವುದು ಜವಾಬ್ದಾರಿಯುತವಾದ ಸ್ಥಾನ. ಹುದ್ದೆಯನ್ನು ಕೇಳಿ ಪಡೆಯುವಂತದ್ದಲ್ಲ, ಈ ಬಗ್ಗೆ ಪಕ್ಷ ನಿರ್ಧರಿಸುತ್ತೆ ಎಂದು ಸ್ಪಷ್ಟಪಡಿಸಿದರು.

ಇನ್ನು ಇದೇ ವೇಳೆ ರಾಷ್ಟ್ರೀಯ ಪ್ರ.ಕಾರ್ಯದರ್ಶಿ ಹುದ್ದೆಯಿಂದ ಕೊಕ್ ಕೊಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿ.ಟಿ.ರವಿ, ಪಕ್ಷದ ಯಾವುದೇ ಹುದ್ದೆ, ಅಧಿಕಾರ ಶಾಶ್ವತ ಅಲ್ಲ. 35 ವರ್ಷ ಹಿಂದೆ ಬೂತ್ ಅಧ್ಯಕ್ಷನಾಗಿ ಕೆಲಸ ಆರಂಭಿಸಿದ್ದೆ. ಈವರೆಗೂ ಪಕ್ಷ ನೀಡಿದ ಹಲವು ಹುದ್ದೆಗಳಲ್ಲಿ ಕೆಲಸ ಮಾಡಿದ್ದೇನೆ. ರಾಜಕೀಯ ವೃತ್ತಿಯಲ್ಲಿ ಹಲವು ಕೆಲಸ ಮಾಡಿದ್ದೇನೆ. 2 ವರ್ಷ 10 ತಿಂಗಳು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದೇನೆ. ನಾನೀಗ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದು, ಮುಂದೆ ಪಕ್ಷದ ಕಾರ್ಯಕರ್ತನಾಗಿ ನನ್ನ ಕೆಲಸ ಮುಂದುವರಿಸುತ್ತೇನೆ ಎಂದರು.

ಇದನ್ನೂ ಓದಿ: ಸಿಟಿ ರವಿ ಬಿಜೆಪಿ ರಾಜ್ಯಾಧ್ಯಕ್ಷ, ಯತ್ನಾಳ್ ವಿಪಕ್ಷ ನಾಯಕರಾಗುವುದು ಬಹುತೇಕ ತೀರ್ಮಾನವಾಗಿದೆ: ಹೆಚ್​​.ಡಿ.ದೇವೇಗೌಡ

ಸಿಟಿ ರವಿ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ಫಿಕ್ಸ್​ ಆಗಿದ್ದು, ಹೈಕಮಾಂಡ್​ನಿಂದ ಅಧಿಕೃತ ಘೋಷಣೆ ಅಷ್ಟೇ ಬಾಕಿ ಇದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಆದ್ರೆ, ಇದೀಗ ಸಿಟಿ ರವಿ ಹೇಳಿಕೆ ಅಚ್ಚರಿ ಮೂಡಿಸಿದೆ. ಹೈಕಮಾಂಡ್ ಘೋಷಣೆ ಮಾಡುವುದಕ್ಕೂ ಮೊದಲೇ ತಾವೇ ಹೇಳಿಕೊಳ್ಳಬಾರದು ಎಂದು ರೀತಿ ಹೇಳಿಕೆ ನೀಡಿರುವ ಸಾಧ್ಯತೆಗಳಿವೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:54 pm, Sun, 30 July 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ