AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವುದಿಲ್ಲ; ಶಾಸಕ ಭೈರತಿ ಬಸವರಾಜ ಸ್ಪಷ್ಟನೆ

ಬಿಜೆಪಿಯಲ್ಲಿ ನನಗೆ ಅಧಿಕಾರ, ಸ್ಥಾನ ಮಾನ, ಗೌರವ ಎಲ್ಲವೂ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಪಕ್ಷ ಬಲಪಡಿಸುವ ಕೆಲಸ ಮಾಡುತ್ತೇನೆ. ಯಾರು ಏನೇ ಹೇಳಿದರೂ ನಾನು ಬಿಜೆಪಿ ಕಾರ್ಯಕರ್ತನಾಗಿರುತ್ತೇನೆ. ಎಸ್​​ಟಿ ಸೋಮಶೇಖರ್​ ಕೂಡ ಬಿಜೆಪಿ ಬಿಡುವುದಿಲ್ಲ ಅಂದಿದ್ದಾರೆ. ನಮ್ಮ ವಿಚಾರದಲ್ಲಿ ಸೃಷ್ಟಿಯಾಗಿರುವ ಗೊಂದಲ ಬಗೆಹರಿಸಬೇಕಿದೆ ಎಂದು ಬಸವರಾಜ ಹೇಳಿದ್ದಾರೆ.

ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವುದಿಲ್ಲ; ಶಾಸಕ ಭೈರತಿ ಬಸವರಾಜ ಸ್ಪಷ್ಟನೆ
ಭೈರತಿ ಬಸವರಾಜImage Credit source: Facebook
ಕಿರಣ್​ ಹನಿಯಡ್ಕ
| Edited By: |

Updated on:Aug 24, 2023 | 8:49 PM

Share

ಬೆಂಗಳೂರು, ಆಗಸ್ಟ್ 24: ಆಪರೇಷನ್​​ ಹಸ್ತದ ವದಂತಿಗಳು ಜೋರಾಗಿರುವ ಬೆನ್ನಲ್ಲೇ ಅತೃಪ್ತ ಶಾಸಕರನ್ನು, ನಾಯಕರನ್ನು ಮನವೊಲಿಸುವ ತಂತ್ರಕ್ಕೆ ಬಿಜೆಪಿ (BJP) ಮೊರೆ ಹೋಗಿದೆ. ಯಶವಂತಪುರದ ಶಾಸಕ ಎಸ್​ಟಿ ಸೋಮಶೇಖರ್​ ಜತೆ ಬಿಜೆಪಿ ನಾಯಕರು ಸರಣಿ ಸಭೆ ನಡೆಸಿದ್ದಾರೆ. ಈ ಮಧ್ಯೆ, ಕಾಂಗ್ರೆಸ್ ಸೇರುವ ಕುರಿತ ವದಂತಿಗಳ ಬಗ್ಗೆ ಕೆಆರ್ ಪುರಂ ಕ್ಷೇತ್ರದ ಶಾಸಕ ಭೈರತಿ ಬಸವರಾಜ (Byrati Basavaraj) ಸ್ಪಷ್ಟನೆ ನೀಡಿದ್ದು, ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವುದಿಲ್ಲ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ನಾನು ಭಾರತೀಯ ಜನತಾ ಪಕ್ಷ ತೊರೆಯಲ್ಲ. ನಾನು ಬಿಜೆಪಿ ಬಿಡುತ್ತಿದ್ದೇನೆಂದು ಯಾರೋ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಒಂದು ವೇಳೆ ನಾನು ಬಿಜೆಪಿ ಬಿಡುವ ಸಂದರ್ಭ ಒದಗಿ ಬಂದರೆ ನಿವೃತ್ತಿಯಾಗಿ ಮನೆಯಲ್ಲಿರುವೆ. ಅದರ ಬದಲು ಕಾಂಗ್ರೆಸ್ ಸೇರಲಾರೆ ಎಂದು ಹೇಳಿದ್ದಾರೆ.

ಕಾಂಗ್ರೆಸ್​ನಿಂದ ನನಗೆ ಆಹ್ವಾನ ಬಂದಿಲ್ಲ, ನನ್ನನ್ನು ಯಾರೂ ಸಂಪರ್ಕಿಸಿಲ್ಲ. ಬಿಜೆಪಿಯಲ್ಲಿ ನನಗೆ ಅಧಿಕಾರ, ಸ್ಥಾನ ಮಾನ, ಗೌರವ ಎಲ್ಲವೂ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಪಕ್ಷ ಬಲಪಡಿಸುವ ಕೆಲಸ ಮಾಡುತ್ತೇನೆ. ಯಾರು ಏನೇ ಹೇಳಿದರೂ ನಾನು ಬಿಜೆಪಿ ಕಾರ್ಯಕರ್ತನಾಗಿರುತ್ತೇನೆ. ಎಸ್​​ಟಿ ಸೋಮಶೇಖರ್​ ಕೂಡ ಬಿಜೆಪಿ ಬಿಡುವುದಿಲ್ಲ ಅಂದಿದ್ದಾರೆ. ನಮ್ಮ ವಿಚಾರದಲ್ಲಿ ಸೃಷ್ಟಿಯಾಗಿರುವ ಗೊಂದಲ ಬಗೆಹರಿಸಬೇಕಿದೆ ಎಂದು ಬಸವರಾಜ ಹೇಳಿದ್ದಾರೆ.

ಇದನ್ನೂ ಓದಿ: ಯಶವಂತಪುರ ಕ್ಷೇತ್ರದಲ್ಲಿ ಸುಂಟರಗಾಳಿ ಎದ್ದಿದೆ, ಇದು ನಮಗೆ ಎಚ್ಚರಿಕೆ ಗಂಟೆ; ಸೋಮಶೇಖರ್ ಭೇಟಿ ಬಳಿಕ ಹೀಗೆ ಹೇಳಿದ್ದೇಕೆ ಅಶೋಕ್?

ಈ ಮಧ್ಯೆ, ಎಸ್​ಟಿ ಸೋಮಶೇಖರ್ ಅವರು ಬಿಜೆಪಿ ನಾಯಕ ಆರ್. ಅಶೋಕ ಅವರನ್ನು ಭೇಟಿಯಾಗಿ ಅಸಮಾಧಾನ ತೋಡಿಕೊಂಡಿದ್ದಾರೆ. ಸಮಸ್ಯೆಗಳನ್ನು ಬಗೆಹರಿಸಿಕೊಡುವುದಾಗಿ ಆರ್ ಅಶೋಕ ಅವರು ಸೋಮಶೇಖರ್​​ಗೆ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:49 pm, Thu, 24 August 23

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್