AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವುದಿಲ್ಲ; ಶಾಸಕ ಭೈರತಿ ಬಸವರಾಜ ಸ್ಪಷ್ಟನೆ

ಬಿಜೆಪಿಯಲ್ಲಿ ನನಗೆ ಅಧಿಕಾರ, ಸ್ಥಾನ ಮಾನ, ಗೌರವ ಎಲ್ಲವೂ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಪಕ್ಷ ಬಲಪಡಿಸುವ ಕೆಲಸ ಮಾಡುತ್ತೇನೆ. ಯಾರು ಏನೇ ಹೇಳಿದರೂ ನಾನು ಬಿಜೆಪಿ ಕಾರ್ಯಕರ್ತನಾಗಿರುತ್ತೇನೆ. ಎಸ್​​ಟಿ ಸೋಮಶೇಖರ್​ ಕೂಡ ಬಿಜೆಪಿ ಬಿಡುವುದಿಲ್ಲ ಅಂದಿದ್ದಾರೆ. ನಮ್ಮ ವಿಚಾರದಲ್ಲಿ ಸೃಷ್ಟಿಯಾಗಿರುವ ಗೊಂದಲ ಬಗೆಹರಿಸಬೇಕಿದೆ ಎಂದು ಬಸವರಾಜ ಹೇಳಿದ್ದಾರೆ.

ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವುದಿಲ್ಲ; ಶಾಸಕ ಭೈರತಿ ಬಸವರಾಜ ಸ್ಪಷ್ಟನೆ
ಭೈರತಿ ಬಸವರಾಜImage Credit source: Facebook
ಕಿರಣ್​ ಹನಿಯಡ್ಕ
| Edited By: |

Updated on:Aug 24, 2023 | 8:49 PM

Share

ಬೆಂಗಳೂರು, ಆಗಸ್ಟ್ 24: ಆಪರೇಷನ್​​ ಹಸ್ತದ ವದಂತಿಗಳು ಜೋರಾಗಿರುವ ಬೆನ್ನಲ್ಲೇ ಅತೃಪ್ತ ಶಾಸಕರನ್ನು, ನಾಯಕರನ್ನು ಮನವೊಲಿಸುವ ತಂತ್ರಕ್ಕೆ ಬಿಜೆಪಿ (BJP) ಮೊರೆ ಹೋಗಿದೆ. ಯಶವಂತಪುರದ ಶಾಸಕ ಎಸ್​ಟಿ ಸೋಮಶೇಖರ್​ ಜತೆ ಬಿಜೆಪಿ ನಾಯಕರು ಸರಣಿ ಸಭೆ ನಡೆಸಿದ್ದಾರೆ. ಈ ಮಧ್ಯೆ, ಕಾಂಗ್ರೆಸ್ ಸೇರುವ ಕುರಿತ ವದಂತಿಗಳ ಬಗ್ಗೆ ಕೆಆರ್ ಪುರಂ ಕ್ಷೇತ್ರದ ಶಾಸಕ ಭೈರತಿ ಬಸವರಾಜ (Byrati Basavaraj) ಸ್ಪಷ್ಟನೆ ನೀಡಿದ್ದು, ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವುದಿಲ್ಲ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ನಾನು ಭಾರತೀಯ ಜನತಾ ಪಕ್ಷ ತೊರೆಯಲ್ಲ. ನಾನು ಬಿಜೆಪಿ ಬಿಡುತ್ತಿದ್ದೇನೆಂದು ಯಾರೋ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಒಂದು ವೇಳೆ ನಾನು ಬಿಜೆಪಿ ಬಿಡುವ ಸಂದರ್ಭ ಒದಗಿ ಬಂದರೆ ನಿವೃತ್ತಿಯಾಗಿ ಮನೆಯಲ್ಲಿರುವೆ. ಅದರ ಬದಲು ಕಾಂಗ್ರೆಸ್ ಸೇರಲಾರೆ ಎಂದು ಹೇಳಿದ್ದಾರೆ.

ಕಾಂಗ್ರೆಸ್​ನಿಂದ ನನಗೆ ಆಹ್ವಾನ ಬಂದಿಲ್ಲ, ನನ್ನನ್ನು ಯಾರೂ ಸಂಪರ್ಕಿಸಿಲ್ಲ. ಬಿಜೆಪಿಯಲ್ಲಿ ನನಗೆ ಅಧಿಕಾರ, ಸ್ಥಾನ ಮಾನ, ಗೌರವ ಎಲ್ಲವೂ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಪಕ್ಷ ಬಲಪಡಿಸುವ ಕೆಲಸ ಮಾಡುತ್ತೇನೆ. ಯಾರು ಏನೇ ಹೇಳಿದರೂ ನಾನು ಬಿಜೆಪಿ ಕಾರ್ಯಕರ್ತನಾಗಿರುತ್ತೇನೆ. ಎಸ್​​ಟಿ ಸೋಮಶೇಖರ್​ ಕೂಡ ಬಿಜೆಪಿ ಬಿಡುವುದಿಲ್ಲ ಅಂದಿದ್ದಾರೆ. ನಮ್ಮ ವಿಚಾರದಲ್ಲಿ ಸೃಷ್ಟಿಯಾಗಿರುವ ಗೊಂದಲ ಬಗೆಹರಿಸಬೇಕಿದೆ ಎಂದು ಬಸವರಾಜ ಹೇಳಿದ್ದಾರೆ.

ಇದನ್ನೂ ಓದಿ: ಯಶವಂತಪುರ ಕ್ಷೇತ್ರದಲ್ಲಿ ಸುಂಟರಗಾಳಿ ಎದ್ದಿದೆ, ಇದು ನಮಗೆ ಎಚ್ಚರಿಕೆ ಗಂಟೆ; ಸೋಮಶೇಖರ್ ಭೇಟಿ ಬಳಿಕ ಹೀಗೆ ಹೇಳಿದ್ದೇಕೆ ಅಶೋಕ್?

ಈ ಮಧ್ಯೆ, ಎಸ್​ಟಿ ಸೋಮಶೇಖರ್ ಅವರು ಬಿಜೆಪಿ ನಾಯಕ ಆರ್. ಅಶೋಕ ಅವರನ್ನು ಭೇಟಿಯಾಗಿ ಅಸಮಾಧಾನ ತೋಡಿಕೊಂಡಿದ್ದಾರೆ. ಸಮಸ್ಯೆಗಳನ್ನು ಬಗೆಹರಿಸಿಕೊಡುವುದಾಗಿ ಆರ್ ಅಶೋಕ ಅವರು ಸೋಮಶೇಖರ್​​ಗೆ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:49 pm, Thu, 24 August 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ