AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕರ್ನಾಟಕಕ್ಕೆ ನ್ಯಾಯ ಸಿಗುವವರೆಗೆ ವಿಪಕ್ಷ ನಾಯಕನಿ​ಗೆ ಶುಭ ಕೋರುವುದಿಲ್ಲ: ಯತ್ನಾಳ್

ಸದನದಲ್ಲಿ ಇಂದು ವಿಪಕ್ಷ ನಾಯಕರ ಆರ್​.ಅಶೋಕ್​ ಅವರಿಗೆ ಬಸನಗೌಡ ಪಾಟೀಲ್ ಯತ್ನಾಳ್ ಅವರು ಶುಭಕೋರಿಲ್ಲ. ಉತ್ತರ ಕರ್ನಾಟಕಕ್ಕೆ ನ್ಯಾಯ ಸಿಗುವವರೆಗೂ ನಾನು ಶುಭಕೋರುವುದಿಲ್ಲ ಎಂದಿದ್ದಾರೆ. ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ಸ್ಥಾನ ಬದಲಾಗುವವರೆಗೂ ನಾನು ಶಾಸಕಾಂಗ ಸಭೆಗೆ ಹೋಗುವುದಿಲ್ಲ ಎಂದು ಯತ್ನಾಳ್ ಇಂದು ಹೇಳಿಕೆ ನೀಡಿದ್ದರು.

ಉತ್ತರ ಕರ್ನಾಟಕಕ್ಕೆ ನ್ಯಾಯ ಸಿಗುವವರೆಗೆ ವಿಪಕ್ಷ ನಾಯಕನಿ​ಗೆ ಶುಭ ಕೋರುವುದಿಲ್ಲ: ಯತ್ನಾಳ್
ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಆರ್ ಅಶೋಕ್
Anil Kalkere
| Updated By: Rakesh Nayak Manchi|

Updated on: Dec 04, 2023 | 8:21 PM

Share

ಬೆಳಗಾವಿ, ಡಿ.4: ಸುವರ್ಣ ವಿಧಾನಸೌಧದಲ್ಲಿ ನಡೆದ ಅಧಿವೇಶನದಲ್ಲಿ ಇಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಅವರು ವಿಪಕ್ಷ ನಾಯಕ ಆರ್.ಅಶೋಕ್ (R.Ashok) ಅವರಿಗೆ ಶುಭ ಕೋರಿಲ್ಲ. ಈ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯತ್ನಾಳ್, ಎಲ್ಲಿಯವರೆಗೆ ಉತ್ತರ ಕರ್ನಾಟಕಕ್ಕೆ ನ್ಯಾಯ ಸಿಗುವುದಿಲ್ಲವೋ ಅಲ್ಲಿಯತನಕ ನಾನು ಶುಭ ಕೊರುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಉತ್ತರ ಕರ್ನಾಟಕದ ಸ್ವಾಭಿಮಾನಕ್ಕೆ ಧಕ್ಕೆ ಆಗಿದೆ. ಅಲ್ಲಿಯತನಕ ನಾನು ಶುಭ ಕೋರುವುದಿಲ್ಲ ಎಂದು ಯತ್ನಾಳ್ ಹೇಳಿದರು. ನಿಮ್ಮ ಕೋಪ ಯಾರ ವಿರುದ್ಧವಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಯತ್ನಾಳ್, ನನ್ನ ಹೋರಾಟ ಉತ್ತರ ಕರ್ನಾಟಕದ ಪರವಾಗಿ ಎಂದರು.

ಪಿಸಿಐ ಪರೀಕ್ಷೆ ಮುಂದೂಡಿಕೆ ಮತ್ತು ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಮಾತನಾಡಲು ಅಧ್ಯಕ್ಷರು ಅವಕಾಶ ಮಾಡಿಕೊಟ್ಟರು. ನನ್ನ ಹೋರಾಟಕ್ಕೆ ಎಲ್ಲರು ಮಣಿಯುತ್ತಾರೆ. ನಾನು ಎರಡು ಹೋರಾಟವನ್ನ ಗೆದ್ದಿದೇನೆ ಎಂದು ಯತ್ನಾಳ್ ಹೇಳಿದರು.

ಇದನ್ನೂ ಓದಿ: ಬೆಳಗಾವಿ ಅಧಿವೇಶನ; ಪಿಎಸ್​ಐ ಹಗರಣದಲ್ಲಿ ಭಾಗಿಯಾಗಿರುವವರನ್ನು ಚೆನ್ನಾಗಿ ತದುಕಿ ಜೈಲಿಗೆ ಹಾಕಬೇಕು: ಬಸನಗೌಡ ಪಾಟೀಲ್ ಯತ್ನಾಳ್

ಇಂದು ಬೆಳಗ್ಗೆ ಮಾತನಾಡಿದ್ದ ಯತ್ನಾಳ್, ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಶಾಸಕಾಂಗ ಪಕ್ಷದ ಸಭೆಗೆ ಹೋಗುವುದಿಲ್ಲ ಎಂದಿದ್ದರು. ರಾಜ್ಯದ ಜನರ ದೃಷ್ಟಿಯಲ್ಲಿ ನಾನು ಎಲ್ಲಾ ರೀತಿಯ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕ ಆಗಲು ಸಮರ್ಥನಾಗಿದ್ದೇನೆ. ಉತ್ತರ ಕರ್ನಾಟಕ ಭಾಗಕ್ಕೆ ರಾಜ್ಯಾಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕ ಸ್ಥಾನ ಸಿಗಲೇಬೇಕು. ಅದಕ್ಕೆ ನಾನು ಯಾರ ಮುಲಾಜಿಗೂ ಹೆದರುವುದಿಲ್ಲ ಎಂದಿದ್ದರು.

ಮುಖ್ಯಮಂತ್ರಿ ಹಳೆ ಮೈಸೂರು ಭಾಗ, ಉಪಮುಖ್ಯಮಂತ್ರಿಯ ಹಳೆ ಮೈಸೂರು ಭಾಗ, ವಿರೋಧ ಪಕ್ಷದ ನಾಯಕ ಹಳೆ ಮೈಸೂರು ಭಾಗ, ಬಿಜೆಪಿ ವಿರೋಧ ಪಕ್ಷದ ನಾಯಕ ಮತ್ತು ರಾಜ್ಯಾಧ್ಯಕ್ಷ ಹಳೆ ಮೈಸೂರು ಭಾಗ ಮತ್ತು ಬೆಂಗಳೂರಿನವರು. ಉತ್ತರ ಕರ್ನಾಟಕದವರು ಗಂಟೆ ಹೊಡಿಬೇಕಾ? ನಮಗೆ ನ್ಯಾಯ ಸಿಗುವವರೆಗೂ ಯಾವುದೇ ಹೋರಾಟಕ್ಕೂ ನಾನು ಸಿದ್ಧ. ಯಾವ ಸ್ಥಾನವನ್ನು ತ್ಯಾಗವನ್ನು ಬೇಕಾದರೂ ಮಾಡುತ್ತೇನೆ ಎಂದು ಪರೋಕ್ಷವಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ರೆಡಿ ಎನ್ನುವ ಅರ್ಥದಲ್ಲಿ ಹೇಳಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ