AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

15 ಲಕ್ಷ ರೂ. ಕೊಡುತ್ತೇವೆ ಎಂದು ಮೋದಿ ಹೇಳಿದ್ದರೆ ರಾಜಕೀಯದಿಂದ ನಿವೃತ್ತಿ: ಎ.ನಾರಾಯಣಸ್ವಾಮಿ

ಕಾಂಗ್ರೆಸ್​ ಗ್ಯಾರಂಟಿ ಯೋಜನೆ ಬಗ್ಗೆ ಟೀಕೆ ಮಾಡಿದ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ರಾಜ್ಯದ ಜನರನ್ನು ಭಿಕ್ಷಾಟನೆ ಕೂಪಕ್ಕೆ ತಳ್ಳುವ ವ್ಯವಸ್ಥೆ ನಡೆದಿದೆ ಎಂದು ಆರೋಪಿಸಿದ್ದಾರೆ.

15 ಲಕ್ಷ ರೂ. ಕೊಡುತ್ತೇವೆ ಎಂದು ಮೋದಿ ಹೇಳಿದ್ದರೆ ರಾಜಕೀಯದಿಂದ ನಿವೃತ್ತಿ: ಎ.ನಾರಾಯಣಸ್ವಾಮಿ
ಎ ನಾರಾಯಣಸ್ವಾಮಿ ಮತ್ತು ಸಿದ್ದರಾಮಯ್ಯ
Rakesh Nayak Manchi
Rakesh Nayak Manchi|

Updated on: Jun 02, 2023 | 4:57 PM

Share

ಚಿತ್ರದುರ್ಗ: ಕಾಂಗ್ರೆಸ್ ಗ್ಯಾರಂಟಿಗಳಿಗೆ ಷರತ್ತುಗಳನ್ನು ವಿಧಿಸುವುದಾಗಿ ಹೇಳಿದಾಗ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಪ್ರತಿಯೊಬ್ಬರ ಅಕೌಂಟ್​ಗೆ 15 ಲಕ್ಷ ರೂಪಾಯಿ ಹಾಕುತ್ತೇನೆ ಎಂದಿದ್ದರು, ಕೊಟ್ಟಿದ್ದಾರಾ? ಎಂದು ವಿಪಕ್ಷಗಳು ಹಾಗೂ ಕಾರ್ಯಕರ್ತರು ಪ್ರಶ್ನಿಸಲು ಆರಂಭಿಸಿದ್ದಾರೆ. ಈ ಬಗ್ಗೆ ಚಿತ್ರದುರ್ಗದಲ್ಲಿ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ (A Narayanaswamy), ಸಿದ್ಧರಾಮಯ್ಯ (Siddaramaiah), ಡಿಕೆ ಶಿವಕುಮಾರ್ (DK Shivakumar) ಅವರು ನೀಡಿದ ‘ಗ್ಯಾರಂಟಿ’ ಹೇಳಿಕೆಗಳು ಎಲ್ಲರ ಬಳಿ ಇವೆ. 15 ಲಕ್ಷ ಬಗ್ಗೆ ನರೇಂದ್ರ ಮೋದಿ ಅವರು ಹೇಳಿಕೆ ನೀಡಿದ್ದರೆ ಸಾಕ್ಷಿ ಕೊಡಿ, ಕ್ಷಮೆ ಕೇಳುತ್ತೇನೆ. 15 ಲಕ್ಷ ರೂ. ಕೊಡುತ್ತೇವೆ ಎಂದು ಹೇಳಿದ್ದರೆ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದು ಹೇಳಿದರು.

ಕಾಂಗ್ರೆಸ್​ ಗ್ಯಾರಂಟಿ ಯೋಜನೆ ಬಗ್ಗೆ ಟೀಕಿಸಿದ ನಾರಾಯಣಸ್ವಾಮಿ, ರಾಜ್ಯದ ಜನರನ್ನು ಭಿಕ್ಷಾಟನೆ ಕೂಪಕ್ಕೆ ತಳ್ಳುವ ವ್ಯವಸ್ಥೆ ನಡೆದಿದೆ ಎಂದು ಆರೋಪಿಸಿದ್ದಾರೆ. ಜನರನ್ನು ಭಿಕ್ಷಾಟನೆ ಸರದಿಗೆ ನಿಲ್ಲಿಸಿ ಅಧಿಕಾರ ಪಡೆಯಲು ಷಡ್ಯಂತ್ರ ನಡೆಸಿದೆ. ಸ್ವತಂತ್ರ್ಯ ಹೋರಾಟಗಾರರ ಕನಸು ನುಚ್ಚುನೂರು ಮಾಡಿ, ಕಾಂಗ್ರೆಸ್ ಸಿದ್ಧಾಂತ ಗಾಳಿಗೆ ತೂರಿ ಮತದಾರರಿಗೆ ಆಮಿಷವೊಡ್ಡಿದೆ. ಕಾಂಗ್ರೆಸ್​ನಿಂದ ಪ್ರಜಾಪ್ರಭುತ್ವಕ್ಕೆ ಮಸಿ ಬಳಿಯುವ ಕೆಲಸ ನಡೆದಿದೆ. ಸಿದ್ಧಾಂತದಿಂದ ಗೆದ್ದೆವು ಎನ್ನುವ ಎದೆಗಾರಿಕೆ ಕಾಂಗ್ರೆಸ್ ನಾಯಕರಿಗಿಲ್ಲ. ಗ್ಯಾರಂಟಿ ಕಾರ್ಡ್ ಮೂಲಕ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದೆ ಎಂದರು.

ಇದನ್ನೂ ಓದಿ: Yuva Nidhi Scheme: 2022-23ನೇ ಸಾಲಿನಲ್ಲಿ ಪದವಿ ಪಡೆದವರಿಗೆ ‘ಯುವನಿಧಿ’, ತೃತೀಯ ಲಿಂಗಿಗಳಿಗೂ ಯೋಜನೆ ಭಾಗ್ಯ

ರಾಜ್ಯದ ಸಚಿವರಿಗೆ ಪ್ರಕೃತಿ ವಿಕೋಪ ಬಗ್ಗೆ ಗಮನಹರಿಸಲು ಸಮಯವಿಲ್ಲ. ರಾಜ್ಯದ ಸರ್ವತೋಮುಖ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ಕಳೆದ 15 ದಿನಗಳಿಂದ ಗ್ಯಾರಂಟಿ ಕಾರ್ಡ್​ಗಳ ಬಗ್ಗೆ ಚರ್ಚೆ ನಡೆಯುತ್ತಿದೆ. ಗ್ಯಾರಂಟಿ ಕಾರ್ಡ್​ಗಾಗಿ ಐದು ವರ್ಷದ ಸರ್ಕಾರ ಎಂಬ ಚಿಂತನೆ ಮೂಡಿದೆ ಎಂದು ಕೇಂದ್ರ ಸಚಿವರು ಟೀಕಿಸಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!