AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೆ ರಾಜ್ಯಾಧ್ಯಕ್ಷ ಸ್ಥಾನ ನೀಡದಿದ್ದರೆ ಮುಂದಿನ ತೀರ್ಮಾನ ಕೈಗೊಳ್ಳುವೆ: ಮಾಜಿ ಸಚಿವ ವಿ ಸೋಮಣ್ಣ

ಕಳೆದ 40 ವರ್ಷಗಳಿಂದ ರಾಜ್ಯ ರಾಜಕಾರಣದ ಆಗುಹೋಗು ನನಗೆ ಗೊತ್ತು. ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಹಗಲಿರುಳು ಪಕ್ಷಕ್ಕಾಗಿ ಶ್ರಮಿಸುವೆ. ಕೊಡದೇ ಹೋದರೆ ಕಾರ್ಯಕರ್ತರ ಸಭೆ ಕರೆದು ಮುಂದಿನ ತೀರ್ಮಾನ ಪ್ರಕಟಿಸುತ್ತೇನೆ ಎಂದು ಮಾಜಿ ಸಚಿವ ವಿ ಸೋಮಣ್ಣ ಹೇಳಿದ್ದಾರೆ.

ನನಗೆ ರಾಜ್ಯಾಧ್ಯಕ್ಷ ಸ್ಥಾನ ನೀಡದಿದ್ದರೆ ಮುಂದಿನ ತೀರ್ಮಾನ ಕೈಗೊಳ್ಳುವೆ: ಮಾಜಿ ಸಚಿವ ವಿ ಸೋಮಣ್ಣ
ಮಾಜಿ ಸಚಿವ ವಿ.ಸೋಮಣ್ಣ
ಕಿರಣ್​ ಹನಿಯಡ್ಕ
| Edited By: |

Updated on:Jul 16, 2023 | 3:30 PM

Share

ಬೆಂಗಳೂರು, ಜುಲೈ 16: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಮಾನ ನೀಡದೇ ಹೋದರೆ ಕಾರ್ಯಕರ್ತರ ಅಭಿಪ್ರಾಯದ ಮೇರೆಗೆ ಮುಂದಿನ ತೀರ್ಮಾನ ಕೈಗೊಳ್ಳುವೆ ಎಂದು ಮಾಜಿ ಸಚಿವ ವಿ ಸೋಮಣ್ಣ (V Somanna) ಹೇಳಿದ್ದಾರೆ. ವಿಜಯನಗರದಲ್ಲಿರುವ ತಮ್ಮ ಕಚೇರಿಯಲ್ಲಿ ಗೋವಿಂದರಾಜನಗರ ಕ್ಷೇತ್ರದ ವಾರ್ಡ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, 365 ದಿನವೂ ಜನರ ನಡುವೆ ಇದ್ದು, ಜನ ಸಂಘಟನೆ ಮಾಡಿದ ಅನುಭವವಿದೆ. ಆದ್ದರಿಂದ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಮಾನ ಕೊಡಿ ಎಂದು ಹೇಳಿದ್ದೇನೆ ಎಂದರು.

ಕಳೆದ 40 ವರ್ಷಗಳಿಂದ ರಾಜ್ಯ ರಾಜಕಾರಣದ ಆಗುಹೋಗು ನನಗೆ ಗೊತ್ತು. ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಹಗಲಿರುಳು ಪಕ್ಷಕ್ಕಾಗಿ ಶ್ರಮಿಸುವೆ. ಕೊಡದೇ ಹೋದರೆ ಕಾರ್ಯಕರ್ತರ ಸಭೆ ಕರೆದು ಮುಂದಿನ ತೀರ್ಮಾನ ಪ್ರಕಟ ಮಾಡುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಾವೇರಿ ಕ್ಯಾತೆ: ಇಲ್ಲೇ ನೀರಿನ ಸಮಸ್ಯೆ ಇದೆ, ತಮಿಳುನಾಡಿಗೆ ನೀರು ಬಿಡಲಾಗುತ್ತಿಲ್ಲ ಎಂದ ಸಚಿವ ಎನ್​​ ಚಲುವರಾಯಸ್ವಾಮಿ

ಬಿಜೆಪಿ ಸೋಲಿಗೆ ಪಕ್ಷದಲ್ಲಿರುವ ಅಸಮಾಧಾನವೇ ಕಾರಣ

ಗೋವಿಂದರಾಜನಗರ ಕ್ಷೇತ್ರವನ್ನು ಮೂಲಭೂತ ಸೌಲಭ್ಯ ಕಲ್ಪಿಸುವ ಮೂಲಕ ರಾಜ್ಯದ ಮಾದರಿ ವಿಧಾನಸಭಾ ಕ್ಷೇತ್ರವನ್ನಾಗಿ ಮಾಡಿದೆ. ಬಿಜೆಪಿ ಹೈಕಮಾಂಡ್ ಮಾತಿಗೆ ಗೌರವ ನೀಡಿ ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸಿದೆ. ಗೋವಿಂದರಾಜನಗರ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸುಲಭವಾಗಿತ್ತು ಎಂದರು.

ಇದನ್ನೂ ಓದಿ: Karnataka Politics: ಎನ್​ಡಿಎ ಮೈತ್ರಿಕೂಟ ಸೇರುತ್ತಾ ಜೆಡಿಎಸ್? ದೆಹಲಿಗೆ ತೆರಳಲು ಕುಮಾರಸ್ವಾಮಿ ಸಿದ್ಧತೆ; ವರದಿ

ಚುನಾವಣೆಯಲ್ಲಿ ಸೋಲಿಗೆ ಪಕ್ಷದಲ್ಲಿರುವ ಅಸಮಾಧಾನವೇ ಕಾರಣವಾಯಿತು. ಹಿರಿಯ ಮುಖಂಡರುಗಳ ಪಕ್ಷ ವಿರೋಧಿ ಕೆಲಸದಿಂದ ನನಗೆ ಸೋಲುಂಟಾಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:29 pm, Sun, 16 July 23

ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
‘ಚಾನೆಲ್ ಮನೆ ಮಗಳಾದರೆ ಉಳಿಯಲು ಸಾಧ್ಯವಿಲ್ಲ, ಅದು ಸುಳ್ಳು’; ಸ್ಪಂದನಾ
‘ಚಾನೆಲ್ ಮನೆ ಮಗಳಾದರೆ ಉಳಿಯಲು ಸಾಧ್ಯವಿಲ್ಲ, ಅದು ಸುಳ್ಳು’; ಸ್ಪಂದನಾ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ