AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಹೆಂಡತಿಯೂ ಕಾಂಗ್ರೆಸ್​ ಬಿಡಲು ಸಿದ್ಧರಿದ್ದಾರಾ?; ಅಮರಿಂದರ್ ಸಿಂಗ್​ಗೆ ನವಜೋತ್ ಸಿಧು ಲೇವಡಿ

"ನೀವು ಗುಡುಗು-ಸಿಡಿಲಿನ ಹೊಡೆತಕ್ಕೆ ಸಿಲುಕಿ ಸಾಯುತ್ತಿರುವ ಬಾತುಕೋಳಿ. ನಿಮ್ಮ ಹೆಂಡತಿ ಪ್ರಣೀತ್ ಕೌರ್ ಕಾಂಗ್ರೆಸ್ ಪಕ್ಷವನ್ನು ತೊರೆಯುತ್ತಾರೆಯೇ?" ಎಂದು ಮಾಧ್ಯಮಗಳ ಎದುರು ಕ್ಯಾಪ್ಟನ್​ ಅಮರಿಂದರ್ ಸಿಂಗ್​ಗೆ ನವಜೋತ್ ಸಿಂಗ್ ಸಿಧು ಪ್ರಶ್ನೆ ಹಾಕಿದ್ದಾರೆ.

ನಿಮ್ಮ ಹೆಂಡತಿಯೂ ಕಾಂಗ್ರೆಸ್​ ಬಿಡಲು ಸಿದ್ಧರಿದ್ದಾರಾ?; ಅಮರಿಂದರ್ ಸಿಂಗ್​ಗೆ ನವಜೋತ್ ಸಿಧು ಲೇವಡಿ
ನವಜೋತ್ ಸಿಂಗ್ ಸಿಧು
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Nov 03, 2021 | 5:09 PM

ಚಂಡೀಗಢ: ಪಂಜಾಬ್​ನ ಮಾಜಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ನಿನ್ನೆಯಷ್ಟೇ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಅದರ ಬೆನ್ನಲ್ಲೇ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಇಂದು ಅಮರಿಂದರ್ ಸಿಂಗ್ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದು, ಅಮರಿಂದರ್ ಸಿಂಗ್ ಬಿರುಗಾಳಿಗೆ ಸಾಯುತ್ತಿರುವ ಬಾತುಕೋಳಿ ಎಂದು ಕಟುವಾಗಿ ಟೀಕಿಸಿದ್ದಾರೆ. ಅಮರಿಂದರ್ ಸಿಂಗ್ ಅವರ ಹೆಂಡತಿಯೇ ಅವರ ಬೆನ್ನಿಗೆ ನಿಲ್ಲುತ್ತಿಲ್ಲ. ನೀವು ಹೊಸ ಪಕ್ಷ ಕಟ್ಟುವುದೇ ಹೌದಾದರೆ ನಿಮ್ಮ ಹೆಂಡತಿಯೂ ಕಾಂಗ್ರೆಸ್​ ತೊರೆಯಲು ಸಿದ್ಧರಿದ್ದಾರಾ? ಎಂದು ಸಿಧು ಲೇವಡಿ ಮಾಡಿದ್ದಾರೆ.

ಅಮರಿಂದರ್ ಸಿಂಗ್ ಅವರ ಪತ್ನಿ ಕೂಡ ಅವರೊಂದಿಗೆ ನಿಲ್ಲುತ್ತಿಲ್ಲ ಎಂದು ಹೇಳಿರುವ ನವಜೋತ್ ಸಿಂಗ್ ಸಿಧು, ಪ್ರಣೀತ್ ಕೌರ್ ಕೂಡ ಕಾಂಗ್ರೆಸ್ ತೊರೆಯುತ್ತಾರಾ? ಎಂದು ಪ್ರಶ್ನಿಸಿದ್ದಾರೆ. ಪಂಜಾಬ್ ಮಾಜಿ ಸಿಎಂ ಈಗ ಸೋತಿದ್ದಾರೆ. ಅವರೊಂದಿಗೆ ಅವರ ಕುಟುಂಬವೂ ಬೆಂಬಲವಾಗಿ ನಿಂತಿಲ್ಲ ಎಂದು ಸಿಧು ಟೀಕಿಸಿದ್ದಾರೆ.

“ನೀವು ಗುಡುಗು-ಸಿಡಿಲಿನ ಹೊಡೆತಕ್ಕೆ ಸಿಲುಕಿ ಸಾಯುತ್ತಿರುವ ಬಾತುಕೋಳಿ. ನಿಮ್ಮ ಹೆಂಡತಿ ಕೂಡ ನಿಮ್ಮೊಂದಿಗೆ ನಿಲ್ಲುತ್ತಿಲ್ಲ. ಅವರು ಕಾಂಗ್ರೆಸ್ ಬಿಡುತ್ತಾರೆಯೇ? ಪ್ರಣೀತ್ ಕೌರ್ ಕಾಂಗ್ರೆಸ್ ಪಕ್ಷವನ್ನು ತೊರೆಯುತ್ತಾರೆಯೇ?” ಎಂದು ಮಾಧ್ಯಮಗಳ ಎದುರು ಕ್ಯಾಪ್ಟನ್​ಗೆ ಸಿಧು ಪ್ರಶ್ನೆ ಹಾಕಿದ್ದಾರೆ.

ಅಮರಿಂದರ್ ಸಿಂಗ್ ಮಂಗಳವಾರ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದರು. ಹಾಗೇ ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಗೆ ಮುನ್ನ ‘ಪಂಜಾಬ್ ಲೋಕ ಕಾಂಗ್ರೆಸ್’ ಎಂಬ ಹೊಸ ಪಕ್ಷವನ್ನು ಸ್ಥಾಪಿಸುವುದಾಗಿ ಘೋಷಿಸಿದ್ದರು. ಕಾಂಗ್ರೆಸ್ ರಾಜ್ಯಾಧ್ಯಕ್ಷ ನವಜೋತ್ ಸಿಂಗ್ ಸಿಧು ಅವರೊಂದಿಗಿನ ಭಿನ್ನಾಭಿಪ್ರಾಯದಿಂದಲೇ ಪಕ್ಷವನ್ನು ತೊರೆಯುವುದಾಗಿ ಸೋನಿಯಾ ಗಾಂಧಿಗೆ ಬರೆದ ಪತ್ರದಲ್ಲಿ ಅಮರಿಂದರ್ ಸಿಂಗ್ ಉಲ್ಲೇಖಿಸಿದ್ದರು.

ಇದನ್ನೂ ಓದಿ: Punjab Politics ಅಮರಿಂದರ್ ಸಿಂಗ್ ವಿರುದ್ಧ ಸಿಧು ಆಪ್ತರಾದ ಪರಗಟ್ ಸಿಂಗ್, ವಾರಿಂಗ್ ಟೀಕೆ

Captain Amarinder Singh ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್

Published On - 5:07 pm, Wed, 3 November 21

ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ