AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Year Ender 2024: ಭಾರತೀಯ ರಾಜಕೀಯದಲ್ಲಿ ಈ ವರ್ಷದ ಅಚ್ಚರಿಯ ಬೆಳವಣಿಗೆ, ಪ್ರಮುಖ ಹಿನ್ನಡೆಗಳಿವು

2024ನೇ ವರ್ಷ ಭಾರತೀಯ ರಾಜಕೀಯಕ್ಕೆ ಮಹತ್ವದ ತಿರುವು ನೀಡಿದ ವರ್ಷ. ಈ ವರ್ಷ ಅನೇಕ ಐತಿಹಾಸಿಕ ಘಟನೆಗಳು ನಡೆದವು. ಕೆಲವು ನಾಯಕರು ರಾಜಕೀಯದಲ್ಲಿ ಗಟ್ಟಿ ನೆಲೆ ಕಂಡುಕೊಂಡು ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿದರೆ ಇನ್ನು ಕೆಲವು ನಾಯಕರ ರಾಜಕೀಯ ಜೀವನ ತಳ ಕಂಡಿತು. ಈ ವರ್ಷ ಭಾರತೀಯ ರಾಜಕೀಯದಲ್ಲಿ ಉಂಟಾದ ಮಹತ್ವದ ಬದಲಾವಣೆಗಳು ಯಾವುವು? ಎಂಬ ಕುರಿತು ಮಾಹಿತಿ ಇಲ್ಲಿದೆ.

Year Ender 2024: ಭಾರತೀಯ ರಾಜಕೀಯದಲ್ಲಿ ಈ ವರ್ಷದ ಅಚ್ಚರಿಯ ಬೆಳವಣಿಗೆ, ಪ್ರಮುಖ ಹಿನ್ನಡೆಗಳಿವು
Modi Rahul Gandhi Arvind Kejriwal
Follow us
ಸುಷ್ಮಾ ಚಕ್ರೆ
|

Updated on: Dec 31, 2024 | 5:27 PM

ನವದೆಹಲಿ: 2024 ಭಾರತೀಯ ರಾಜಕೀಯದಲ್ಲಿ ಮಹತ್ವದ ವರ್ಷವಾಗಿದೆ. ಬಿಜೆಪಿ, ಕಾಂಗ್ರೆಸ್, ಶಿವಸೇನೆ, ಜೆಡಿಎಸ್​, ಆಮ್ ಆದ್ಮಿ ಪಕ್ಷ ಸೇರಿದಂತೆ ದೇಶದ ಹಲವು ರಾಜಕೀಯ ಪಕ್ಷಗಳ ಪಾಲಿಗೆ ತಿರುವು ನೀಡಿದ ವರ್ಷವಿದು. ಸತತ ಮೂರನೇ ಅವಧಿಗೆ ಅಧಿಕಾರಕ್ಕೆ ಮರಳುವ ಮೂಲಕ ಈ ವರ್ಷ ಬಿಜೆಪಿ ಇತಿಹಾಸ ನಿರ್ಮಿಸಿತು. ಆದರೆ, 2014 ಮತ್ತು 2019ರಲ್ಲಿ ಮ್ಯಾಜಿಕ್ ಅಂಕಿ-ಅಂಶವನ್ನು ಆರಾಮವಾಗಿ ದಾಟಿದ ನಂತರ ಅದರ ಸಂಖ್ಯೆಯು 240 ಸ್ಥಾನಗಳಿಗೆ ನಿಂತಿದೆ.

ಭಾರತೀಯ ರಾಜಕೀಯದಲ್ಲಿ 2024ನೇ ವರ್ಷವು ನಾಯಕರು ಮತ್ತು ಅವರ ಪಕ್ಷಗಳಿಗೆ ರೋಲರ್ ಕೋಸ್ಟರ್ ಸವಾರಿಯಾಗಿತ್ತು. ಕಳೆದ ಚಳಿಗಾಲದಲ್ಲಿ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ ನಂತರ ಆಡಳಿತಾರೂಢ ಬಿಜೆಪಿಯ “ಅಬ್ಕಿ ಬಾರ್ 400 ಪಾರ್” ಘೋಷಣೆಯ ಬಗ್ಗೆ ಟೀಕೆ ವ್ಯಕ್ತವಾಯಿತು. ಬಿಜೆಪಿ ದಿಗ್ವಿಜಯ ಸಾಧಿಸಿದರೂ ನಿರೀಕ್ಷಿತ ಮೊತ್ತ ಸಿಗಲಿಲ್ಲ. ಹೀಗಾಗಿ, 2024ರ ಚುನಾವಣಾ ಫಲಿತಾಂಶದ ನಂತರ ಪ್ರತಿಪಕ್ಷಗಳು ಹುರುಪುಗೊಂಡವು. 2014 ಮತ್ತು 2019 ರಲ್ಲಿ ಮ್ಯಾಜಿಕ್ ಅಂಕಿಅಂಶವನ್ನು ಆರಾಮವಾಗಿ ದಾಟಿದ ನಂತರ ಬಿಜೆಪಿಯು ಮೂರನೇ ನೇರ ಅವಧಿಗೆ ಅಧಿಕಾರಕ್ಕೆ ಮರಳುವ ಮೂಲಕ ಇತಿಹಾಸವನ್ನು ಬರೆದಿದೆ. ಆದರೆ ಅದರ ಸಂಖ್ಯೆಯು 240 ಸ್ಥಾನಗಳಲ್ಲಿ ನಿಂತಿದೆ. ಇದು ಬಹುಮತದ 272ಕ್ಕಿಂತ 32 ಸ್ಥಾನ ಕಡಿಮೆ. ಕಾಂಗ್ರೆಸ್ ಈ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದರೂ 2019ರ ಚುನಾವಣೆಗಿಂತ ಹೆಚ್ಚು ಸ್ಥಾನಗಳನ್ನು ಪಡೆಯುವ ಮೂಲಕ ಹೊಸ ಜೀವ ಪಡೆಯಿತು,

ಲೋಕಸಭೆ ಚುನಾವಣೆ 2024:

ಈ ವರ್ಷ ಏಪ್ರಿಲ್ 19ರಿಂದ ಜೂನ್ 1ರ ನಡುವೆ ಭಾರತದಲ್ಲಿ 7 ಹಂತಗಳಲ್ಲಿ ಲೋಕಸಭಾ ಚುನಾವಣೆ ನಡೆಯಿತು. ಈ ವರ್ಷದ ಲೋಕಸಭೆ ಚುನಾವಣೆ ಫಲಿತಾಂಶ ಅಚ್ಚರಿಗಳ ಆಗರವಾಗಿತ್ತು. ಮೊದಲನೆಯದಾಗಿ, 543 ಸದಸ್ಯರ ಸದನದಲ್ಲಿ ಬಿಜೆಪಿ 240 ಸ್ಥಾನಗಳನ್ನು ಗೆದ್ದಿತು. ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸುಮಾರು 290 ಸ್ಥಾನಗಳನ್ನು ಗಳಿಸಿತು. ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತು ಹರಿಯಾಣ ಬಿಜೆಪಿಯನ್ನು ನಿರಾಶೆಗೊಳಿಸಿತು. ಫಲಿತಾಂಶಕ್ಕೂ ಮುನ್ನ ಎನ್​ಡಿಎ 400 ಸ್ಥಾನಗಳನ್ನು ಗೆದ್ದೇ ಗೆಲ್ಲುವುದಾಗಿ ಘೋಷಿಸಿಕೊಂಡಿತ್ತು. ಆದರೆ, ಮೋದಿ 3ನೇ ಬಾರಿ ಪ್ರಧಾನಿಯಾಗಿ ಆಯ್ಕೆಯಾದರೂ ಎನ್​ಡಿಎ 400 ಸ್ಥಾನಗಳನ್ನು ಪಡೆಯಲು ಸಾಧ್ಯವಾಗಲಿಲ್ಲ.

ಇದನ್ನೂ ಓದಿ: 2024ರಲ್ಲಿ ಹೇಗಿತ್ತು ಪ್ರಧಾನಿ ಮೋದಿ ಹಾದಿ, ಪಯಣ: ಇಲ್ಲಿದೆ ಇಣುಕುನೋಟ

ಬಿಜೆಪಿಯು ಪಶ್ಚಿಮ ಬಂಗಾಳ ಮತ್ತು ದಕ್ಷಿಣ ರಾಜ್ಯಗಳಲ್ಲಿ ತನ್ನ ಸ್ಥಾನಗಳನ್ನು ಹೆಚ್ಚಿಸಲು ಆಶಿಸಿತ್ತು. ಆದರೆ ಪ್ರಾದೇಶಿಕ ಪಕ್ಷಗಳಾದ ಮಮತಾ ಬ್ಯಾನರ್ಜಿಯ ತೃಣಮೂಲ ಕಾಂಗ್ರೆಸ್ ಮತ್ತು ಎಂಕೆ ಸ್ಟಾಲಿನ್ ಅವರ ಡಿಎಂಕೆ (ದ್ರಾವಿಡ ಮುನ್ನೇತ್ರ ಕಳಗಂ) ತಮ್ಮ ನೆಲೆಯಲ್ಲಿ ನಿಂತಿದ್ದರು. ಮತ್ತೊಂದೆಡೆ, ಗುಜರಾತ್, ಮಧ್ಯಪ್ರದೇಶ, ಒಡಿಶಾ, ದೆಹಲಿ, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಗೆದ್ದಿದೆ. ಮಹಾರಾಷ್ಟ್ರ, ತೆಲಂಗಾಣ, ಹರಿಯಾಣ ಮತ್ತು ಪಂಜಾಬ್‌ನಲ್ಲಿ ಕಾಂಗ್ರೆಸ್ ಕಳೆದುಕೊಂಡಿದ್ದ ಸ್ಥಾನವನ್ನು ಮರಳಿ ಪಡೆದುಕೊಂಡಿದೆ.

ಮೋದಿಯವರ 6 ತಿಂಗಳುಗಳು 3.0:

ಬಹುಮತ ಕಳೆದುಕೊಂಡರೂ ಗೃಹ, ಹಣಕಾಸು, ರಕ್ಷಣೆ, ವಿದೇಶಾಂಗ ವ್ಯವಹಾರಗಳಂತಹ ಎಲ್ಲ ಪ್ರಮುಖ ಖಾತೆಗಳನ್ನು ಬಿಜೆಪಿ ತನ್ನಲ್ಲೇ ಉಳಿಸಿಕೊಂಡಿದೆ. ಪಕ್ಷವು ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದ ಸಚಿವರಿಗೆ ಅದೇ ಖಾತೆಗಳನ್ನು ನಿಯೋಜಿಸಿತು. ಓಂ ಬಿರ್ಲಾ ಅವರನ್ನು ಮತ್ತೆ ಲೋಕಸಭೆಯ ಸ್ಪೀಕರ್ ಆಗಿ ಮಾಡಿತು. ಬಿಜೆಪಿಯ ಬಿಹಾರದ ಮಿತ್ರಪಕ್ಷಗಳಾದ ನಿತೀಶ್ ಕುಮಾರ್ ಅವರ ಜೆಡಿಯು ಮತ್ತು ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) ಆಕ್ಷೇಪಣೆಗಳ ನಂತರ ಯುಪಿಎಸ್‌ಸಿಯ ಲ್ಯಾಟರಲ್ ಎಂಟ್ರಿ ನೀತಿಯನ್ನು ಸರ್ಕಾರ ರದ್ದುಗೊಳಿಸಿರುವುದನ್ನು ಪ್ರತಿಪಕ್ಷಗಳು “ಯು-ಟರ್ನ್” ಎಂದು ಕರೆದವು.

ಅರವಿಂದ್ ಕೇಜ್ರಿವಾಲ್ ರಾಜೀನಾಮೆ:

ಈ ವರ್ಷದ ಅತ್ಯಂತ ಆಘಾತಕಾರಿ ಘಟನೆಯೆಂದರೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ರಾಜೀನಾಮೆ. ತಿಹಾರ್ ಜೈಲಿನಿಂದ ಜಾಮೀನಿನ ಮೇಲೆ ಹೊರಬಂದ ನಂತರ ಪತ್ರಿಕಾಗೋಷ್ಠಿ ನಡೆಸಿದ ಅರವಿಂದ್ ಕೇಜ್ರಿವಾಲ್ ದೆಹಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದರು. ಅವರ ಸ್ಥಾನಕ್ಕೆ ಅತಿಶಿ ಅವರನ್ನು ಆಯ್ಕೆ ಮಾಡಿ ಸಿಎಂ ಸ್ಥಾನದಲ್ಲಿ ಕೂರಿಸಲಾಯಿತು.

ವಿಧಾನಸಭೆ ಚುನಾವಣೆ:

ಈ ವರ್ಷ 6 ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆದಿವೆ. ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ನಾಲ್ಕರಲ್ಲಿ ಜಯ ಗಳಿಸಿದರೆ, ಪ್ರತಿಪಕ್ಷವಾದ ಇಂಡಿಯಾ ಬಣವು ಜಮ್ಮು ಮತ್ತು ಕಾಶ್ಮೀರವನ್ನು ಗೆಲ್ಲುವಲ್ಲಿ ಮತ್ತು ಜಾರ್ಖಂಡ್ ಅನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. 2019ರಲ್ಲಿ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಮೊದಲ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆಗಿನ ಮೈತ್ರಿಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ವಿಜಯಶಾಲಿಯಾಯಿತು. ಆದರೆ, ಜಮ್ಮು ಪ್ರದೇಶದಲ್ಲಿ ಬಿಜೆಪಿ ಅರ್ಧದಷ್ಟು ಸ್ಥಾನಗಳನ್ನು ಗಳಿಸಿತು. ಜಾರ್ಖಂಡ್‌ನಲ್ಲಿ ಕಾಂಗ್ರೆಸ್ ಮತ್ತು ಆರ್‌ಜೆಡಿ ಬೆಂಬಲದೊಂದಿಗೆ ಜಾರ್ಖಂಡ್ ಮುಕ್ತಿ ಮೋರ್ಚಾದ (ಜೆಎಂಎಂ) ಹೇಮಂತ್ ಸೊರೆನ್ ಮತ್ತೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಒಡಿಶಾ ಮತ್ತು ಆಂಧ್ರಪ್ರದೇಶ ರಾಜ್ಯಗಳ ಚುನಾವಣೆಗಳು ರಾಷ್ಟ್ರೀಯ ಚುನಾವಣೆಯೊಂದಿಗೆ ಏಕಕಾಲದಲ್ಲಿ ನಡೆದವು. ಒಡಿಶಾದಲ್ಲಿ, ಬಿಜು ಜನತಾ ದಳ (ಬಿಜೆಡಿ) ಮತ್ತು ನವೀನ್ ಪಟ್ನಾಯಕ್ ಅವರ ಎರಡು ದಶಕಗಳ ಆಡಳಿತವನ್ನು ಬಿಜೆಪಿ ಕೊನೆಗೊಳಿಸಿತು.

ಇದನ್ನೂ ಓದಿ: 2024ರಲ್ಲಿ ಹೇಗಿತ್ತು ಪ್ರಧಾನಿ ಮೋದಿ ಹಾದಿ, ಪಯಣ: ಇಲ್ಲಿದೆ ಇಣುಕುನೋಟ

ಆಂಧ್ರಪ್ರದೇಶದಲ್ಲಿ ಜಗನ್ ರೆಡ್ಡಿಯ ವೈಎಸ್‌ಆರ್‌ಸಿಪಿಯು 5 ವರ್ಷಗಳ ನಂತರ ಭಾರಿ ಜನಾದೇಶದೊಂದಿಗೆ ಅಧಿಕಾರಕ್ಕೆ ಬಂದ ನಂತರ ನಾಶವಾಯಿತು. ಭ್ರಷ್ಟಾಚಾರ ಪ್ರಕರಣದಲ್ಲಿ ಜಾಮೀನು ಪಡೆಯುವ ಮೊದಲು 53 ದಿನಗಳನ್ನು ಜೈಲಿನಲ್ಲಿ ಕಳೆದ ಬಿಜೆಪಿ ಮಿತ್ರ ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಕ್ಷಕ್ಕೆ (ಟಿಡಿಪಿ) ಭಾರಿ ಜನಾದೇಶ ನೀಡಿದ ನಂತರ ಮುಖ್ಯಮಂತ್ರಿಯಾಗಿ ಮರಳಿದರು.

ಹೆಚ್ಚಿನ ಸಮೀಕ್ಷೆಗಾರರು ಹರಿಯಾಣದಲ್ಲಿ ಬಿಜೆಪಿಯ ಸೋಲನ್ನು ಊಹಿಸಿದ್ದರು. ಆದರೆ ಬಿಜೆಪಿ ಉತ್ತರ ರಾಜ್ಯದಲ್ಲಿ ಸತತ ಮೂರನೇ ಬಾರಿಗೆ ಪವಾಡದ ರೀತಿ ಪುನರಾಗಮನ ಮಾಡಿ ಸರ್ಕಾರವನ್ನು ರಚಿಸಿತು. ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿಯು 288 ಸದಸ್ಯ ಬಲದ ವಿಧಾನಸಭೆಯಲ್ಲಿ 200ಕ್ಕೂ ಹೆಚ್ಚು ಸ್ಥಾನಗಳನ್ನು ಗಳಿಸುವ ಮೂಲಕ ದೊಡ್ಡ ಜನಾದೇಶವನ್ನು ಗೆದ್ದುಕೊಂಡಿತು. ಸುಮಾರು 90% ಸ್ಟ್ರೈಕ್ ರೇಟ್‌ನೊಂದಿಗೆ ಬಿಜೆಪಿ ತನ್ನದೇ ಆದ 134 ಸ್ಥಾನಗಳನ್ನು ಗೆದ್ದಿತು. ಏಕನಾಥ್ ಶಿಂಧೆ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ ಬಿಜೆಪಿಯ ದೇವೇಂದ್ರ ಫಡ್ನವಿಸ್ ಸಿಎಂ ಆಗಿ ಅಧಿಕಾರಕ್ಕೇರಿದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ:

1 ದಶಕದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ನಡೆದವು. ಜಮ್ಮು ಕಾಶ್ಮೀರದಲ್ಲಿ ಕೇಂದ್ರ ಸರ್ಕಾರ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ನಡೆದ ಮೊದಲ ಚುನಾವಣೆ ಇದಾಗಿದೆ. ಒಮರ್ ಅಬ್ದುಲ್ಲಾ ಅವರ ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಅಧಿಕಾರಕ್ಕೆ ಬಂದಿತು.

ಪ್ರಿಯಾಂಕಾ ಗಾಂಧಿಯ ರಾಜಕೀಯ ಎಂಟ್ರಿ:

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಈ ಬಾರಿ ಲೋಕಸಭಾ ಉಪಚುನಾವಣೆಯಲ್ಲಿ ಕೇರಳದ ವಯನಾಡು ಕ್ಷೇತ್ರದಿಂದ ಸ್ಪರ್ಧಿಸಿ ರಾಜಕೀಯಕ್ಕೆ ಎಂಟ್ರಿ ನೀಡಿದರು. ವಯನಾಡಿನಿಂದ ಅದ್ಭುತ ಅಂತರದಿಂದ ಗೆದ್ದ ಅವರು ಮೊದಲ ಬಾರಿ ಸಂಸತ್ ಪ್ರವೇಶಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್