AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ನಿರ್ವಹಣೆ ವೇಳೆ ಕೋಟ್ಯಂತರ ರೂ. ಅವ್ಯವಹಾರ ಆರೋಪ: ಯಡಿಯೂರಪ್ಪ ಸೇರಿದಂತೆ 28 ಜನರ ವಿರುದ್ಧ ಲೋಕಾಯುಕ್ತಗೆ ದೂರು

ಬರೋಬ್ಬರಿ 821.22 ಕೋಟಿ ಬೃಹತ್ ಮೊತ್ತದ ಹಗರಣ ನಡೆಸಿದ ಆರೋಪ ಹಿನ್ನೆಲೆ ಮಾಜಿ ಸಿಎಂ ಬಿ.ಎಸ್​​ ಯಡಿಯೂರಪ್ಪ, ಸಚಿವರು ಮತ್ತು ಐಎಎಸ್​ ಅಧಿಕಾರಿಗಳು ಸೇರಿದಂತೆ ಒಟ್ಟು 28 ಜನರ ವಿರುದ್ಧ ಲೋಕಾಯುಕ್ತಗೆ ದೂರು ನೀಡಲಾಗಿದೆ.

ಕೊವಿಡ್​ ನಿರ್ವಹಣೆ ವೇಳೆ ಕೋಟ್ಯಂತರ ರೂ. ಅವ್ಯವಹಾರ ಆರೋಪ: ಯಡಿಯೂರಪ್ಪ ಸೇರಿದಂತೆ 28 ಜನರ ವಿರುದ್ಧ ಲೋಕಾಯುಕ್ತಗೆ ದೂರು
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ
ಗಂಗಾಧರ​ ಬ. ಸಾಬೋಜಿ
|

Updated on:May 03, 2023 | 6:11 PM

Share

ಬೆಂಗಳೂರು: ಬರೋಬ್ಬರಿ 821.22 ಕೋಟಿ ಬೃಹತ್ ಮೊತ್ತದ ಹಗರಣ ನಡೆಸಿದ ಆರೋಪ ಹಿನ್ನೆಲೆ ಮಾಜಿ ಸಿಎಂ ಬಿ.ಎಸ್​​ ಯಡಿಯೂರಪ್ಪ (BS Yediyurappa), ಸಚಿವರು ಮತ್ತು ಐಎಎಸ್​ ಅಧಿಕಾರಿಗಳು ಸೇರಿದಂತೆ ಒಟ್ಟು 28 ಜನರ ವಿರುದ್ಧ ಲೋಕಾಯುಕ್ತಗೆ ದೂರು ನೀಡಲಾಗಿದೆ. ದಾಖಲೆ ಸಮೇತ ಆರ್​ಟಿಐ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಎನ್ನುವವರಿಂದ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಕೊವಿಡ್​ ನಿರ್ವಹಣೆ ವೇಳೆ ಬಿಬಿಎಂಪಿಯಿಂದ ಕೋಟ್ಯಂತರ ಅವ್ಯವಹಾರ, ಆಂಬ್ಯುಲೆನ್ಸ್ ಖರೀದಿ ನೆಪದಲ್ಲಿ ಹೆಚ್ಚಿನ ವಾಹನಗಳ ಸಂಖ್ಯೆ ತೋರಿಸಿದ್ದಾರೆ. ಆ ಸಂದರ್ಭದಲ್ಲಿ ಬಿ.ಎಸ್. ಯಡಿಯೂರಪ್ಪ ಕೊವಿಡ್​ ವಲಯವಾರು ಉಸ್ತುವಾರಿಯಾಗಿದ್ದರು. ಸಚಿವರಾದ ವಿ.ಸೋಮಣ್ಣ ಅಶ್ವತ್ಥ್ ನಾರಾಯಣ, ಸುರೇಶ್ ಕುಮಾರ್, ಎಸ್.ಟಿ.ಸೋಮಶೇಖರ್, ಗೋಪಾಲಯ್ಯ ಜೋನಲ್ ಮ್ಯಾನೇಜ್​ಮೆಂಟ್ ನಿರ್ವಹಿಸಿದ್ದರು ಎಂದಿದ್ದಾರೆ.

ಆ್ಯಂಬುಲೆನ್ಸ್​ಗಳ ಖರೀದಿಗೆ ನಕಲಿ ದಾಖಲೆ ಸೃಷ್ಟಿ 

IAS ಅಧಿಕಾರಿಗಳಾದ ಗೌರವ್ ಗುಪ್ತಾ, ಪಿ.ಸಿ.ಜಾಫರ್​, ಮನೋಜ್ ಕುಮಾರ್ ಮೀನಾ, ರವಿಕುಮಾರ್, ವಿ.ಅನ್ಬುಕುಮಾರ್, ಉಜ್ವಲ್ ಕುಮಾರ್, ಪಂಕಜ್ ಕುಮಾರ್ ಕೋಆರ್ಡಿನೇಟ್​ ಮಾಡುತ್ತಿದ್ದರು. 821 ಕೋಟಿಗೂ ಹೆಚ್ಚು ಅವ್ಯವಹಾರದಲ್ಲಿ 28 ಜನರು ಭಾಗಿಯಾಗಿದ್ದಾರೆ. ಕೊವಿಡ್ ವೇಳೆ ಬೆಂಗಳೂರನ್ನು 8 ವಲಯಗಳಾಗಿ ವಿಂಗಡಿಸಿದ್ದರು. ಸಾವಿರಾರು ಆ್ಯಂಬುಲೆನ್ಸ್​ಗಳನ್ನು ಖರೀದಿಸುವುದಾಗಿ ನಕಲಿ ದಾಖಲೆ ಸೃಷ್ಟಿಸಿದ್ದಾರೆ.

ಇದನ್ನೂ ಓದಿ: ನಾವು ಹನುಮಂತನ ಭಕ್ತರು, ನಮ್ಮ ಪ್ರಣಾಳಿಕೆಯಲ್ಲಿ ಯಾವುದೇ ಬದಲಾವಣೆ ಇಲ್ಲ: ಡಿಕೆ ಶಿವಕುಮಾರ್ ಸ್ಪಷ್ಟನೆ

ಹಗರಣದಲ್ಲಿ ಬಹುಪಾಲು ಸರ್ಕಾರಿ ಅಧಿಕಾರಿಗಳು ಭಾಗಿ ಆರೋಪ

ಆ್ಯಂಬುಲೆನ್ಸ್ ಹೊರತಾದ ವಾಹನಗಳ ನೋಂದಣಿ ಸಂಖ್ಯೆಗಳಿವೆ. ಬಿಎಸ್​ವೈ ಪುತ್ರ ಬಿ.ವೈ.ವಿಜಯೇಂದ್ರ ಆಪ್ತ ನಕಲಿ ದಾಖಲೆ ಸೃಷ್ಟಿಸಿದ್ದಾರೆ. ಹಗರಣದಲ್ಲಿ ಬಹುಪಾಲು ಸರ್ಕಾರಿ ಅಧಿಕಾರಿಗಳು ಭಾಗಿಯಾಗಿದ್ದಾರೆ‌. ಕೊವಿಡ್ ವೇಳೆ ಜನರ ಹೆಣ ಮಾರಿ ಹಣ ಮಾಡಿದ್ದಾರೆ. ಟ್ರಾವೆಲ್ಸ್​ನಲ್ಲಿ ಖರೀದಿ ಮಾಡಿರುವುದಾಗಿ ದಾಖಲೆ ಸೃಷ್ಟಿಸಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು FIR ದಾಖಲಿಸಿ ತನಿಖೆ ಮಾಡಬೇಕಿದೆ. ಒಂದು ವೇಳೆ ದಾಖಲಿಸದಿದ್ದರೆ ಮುಂದೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಚ್ಚರಿಕೆ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:43 pm, Wed, 3 May 23

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ