AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಡಿಯೂರಪ್ಪ ರಾಜಾಹುಲಿ, ವಿಜಯೇಂದ್ರ ಹೆಬ್ಬುಲಿ ಎಂದ ಶಾಸಕ ರಾಜುಗೌಡ

ಯಡಿಯೂರಪ್ಪ ನಮ್ಮ ರಾಜಾಹುಲಿ. ವಿಜಯೇಂದ್ರ ನಮ್ಮ ಸೂಪರ್ ಸ್ಟಾರ್. ಅವರು ಸಣ್ಣ ಹುಲಿ ಅಲ್ಲ, ಹೆಬ್ಬುಲಿಯಾಗಿ ಬೆಳೆದಿದ್ದಾರೆ ಎಂದು ಶಾಸಕ ರಾಜುಗೌಡ ಹೇಳಿದರು.

ಯಡಿಯೂರಪ್ಪ ರಾಜಾಹುಲಿ, ವಿಜಯೇಂದ್ರ ಹೆಬ್ಬುಲಿ ಎಂದ ಶಾಸಕ ರಾಜುಗೌಡ
ಬ.ಎಸ್​​. ಯಡಿಯೂರಪ್ಪ, ರಾಜುಗೌಡ, ಬಿ.ವೈ.ವಿಜಯೇಂದ್ರ
ಗಂಗಾಧರ​ ಬ. ಸಾಬೋಜಿ
|

Updated on: Mar 24, 2023 | 3:34 PM

Share

ಚಾಮರಾಜನಗರ: ಯಡಿಯೂರಪ್ಪ (Yediyurappa) ನಮ್ಮ ರಾಜಾಹುಲಿ. ವಿಜಯೇಂದ್ರ ನಮ್ಮ ಸೂಪರ್ ಸ್ಟಾರ್. ಅವರು ಸಣ್ಣ ಹುಲಿ ಅಲ್ಲ, ಹೆಬ್ಬುಲಿಯಾಗಿ ಬೆಳೆದಿದ್ದಾರೆ ಎಂದು ಶಾಸಕ ರಾಜುಗೌಡ (MLA Raju Gowda) ಹೇಳಿದರು. ಯುವ ಸಮಾವೇಶದಲ್ಲಿ ಮಾತನಾಡಿದ ಅವರು, ಪಕ್ಷವನ್ನು ಅಧಿಕಾರಕ್ಕೆ ತರಲು ವಿಜಯೇಂದ್ರ ಸಂಘಟನೆ ಮಾಡುತ್ತಿದ್ದಾರೆ. ಕಾಂಗ್ರೆಸ್ 70 ವರ್ಷ ಆಳ್ವಿಕೆ ಮಾಡಿದರು ಮೀಸಲಾತಿ ಹೆಚ್ಚಿಸಲಿಲ್ಲ. ಆದರೆ ಬಿಜೆಪಿ ಸರ್ಕಾರ ಎಸ್​ಸಿ, ಎಸ್​ಟಿ ಮೀಸಲಾತಿ ಹೆಚ್ಚಳ ಮಾಡಿದೆ. ಪರಿವಾರ ಸಮುದಾಯಕ್ಕೆ ಮೀಸಲಾತಿ ಜಾಸ್ತಿ ಮಾಡಿದ್ದಾರೆ. ಶಾಸಕ ನಿರಂಜನ್ ಕುಮಾರ್​ರನ್ನು ಅತಿ ಹೆಚ್ಚು ಮತದಿಂದ ಗೆಲ್ಲಿಸಿ. ವಿಜಯೇಂದ್ರರನ್ನು ಪವರ್ ಪುಲ್ ಲೀಡರ್ ಆಗಲೂ ಬೆಂಬಲಿಸಿ. ಎಲ್ಲರನ್ನೂ ಒಂದಾಗಿ ತೆಗೆದುಕೊಂಡು ಹೋಗುವ ಪಕ್ಷ ಬಿಜೆಪಿ. ನಮ್ಮ ಉಸಿರುವವರೆಗೂ ನಮ್ಮ ಸಮಾಜದ ಬಂಧುಗಳು ಮರೆಯಬಾರದು. ಯಡಿಯೂರಪ್ಪ ಕಮಲ ಗೆಲ್ಲಿಸಿದ್ದಾರೆ, ಅದನ್ನು ಹೆಮ್ಮರ ಮಾಡಿ ಎಂದು ಹೇಳಿದರು.

ಗುಂಡ್ಲುಪೇಟೆ ನಗರಕ್ಕೆ ಪ್ರತಿ ಮನೆಗೂ ಕುಡಿಯುವ ನೀರು ಕೊಡಲು 127 ಕೋಟಿ ಕಾಮಗಾರಿ ತಂದಿದ್ದಾರೆ. ನಾಳೆ ಈ ಕಾಮಗಾರಿಯ ಗುದ್ದಲಿ ಪೂಜೆ ನಡೆಯುತ್ತೆ. ಬಿಜೆಪಿ ಪಕ್ಷ ಅಂದ್ರೆ ಲಿಂಗಾಯತರ ಪಕ್ಷ ಅಂತಾ ಹೇಳಿತ್ತಿದ್ದರು ಎಂದು ಕಿಡಿಕಾರಿದರು.

ಇದನ್ನೂ ಓದಿ: ಕೊನೆಗೂ ವರುಣಾದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ ಸಿದ್ದರಾಮಯ್ಯ, ಮತ್ತೊಂದು ಕ್ಷೇತ್ರದ ಮೇಲೂ ಆಸೆ

ನನಗೂ ಒಂದೊಂದು ಸಲ ಹೊಟ್ಟೆ ಉರಿಯುತ್ತೆ: ವಿಜಯೇಂದ್ರ

ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಮಾತನಾಡಿ, ಇವತ್ತು ಬಹಳ ವಿಶೇಷ ದಿನ. ನನ್ನ ಜೀವನದಲ್ಲಿ ಮರೆಲಾಗದ ದಿನ. ದೇಶದ ಗೃಹ ಸಚಿವರು ಇಂದು ಯಡಿಯೂರಪ್ಪ ಅವರ ಮನೆಗೆ ಬಂದು ಚರ್ಚೆ ಮಾಡಿದರು. ಮತ ಎಣಿಕೆ ವೇಳೆ ಮೊದಲ ಬಿಜೆಪಿ ಕ್ಷೇತ್ರ ಬರುವುದು ಗುಂಡ್ಲುಪೇಟೆ. ನನಗೂ ಒಂದೊಂದು ಸಲ ಹೊಟ್ಟೆ ಉರಿಯುತ್ತೆ. ನಾನ್ಯಾಕೆ ಅಲ್ಲಿ ಇಲ್ಲಿ ಅಂತಾ ಒದ್ದಾಡುತ್ತಿದ್ದೇನೆ. ಇಲ್ಲೇ ಬಂದು‌ ನಿಲ್ಲಬಹುದಲ್ಲಾ‌ ಅಂತಾ ಎಂದು ಹೇಳುವ ಮೂಲಕ ಬಿ.ವೈ. ವಿಜಯೇಂದ್ರ ಮಾರ್ಮಿಕವಾಗಿ ನುಡಿದಿದ್ದಾರೆ. ಹಾಗಾದರೆ ವಿಜಯೇಂದ್ರ ಶಿಕಾರಿಪುರ, ವರುಣಾ ಮತ್ತು ಇನ್ಯಾವ ಕ್ಷೇತ್ರದಲ್ಲಿ ನಿಲ್ಲೋದಕ್ಕೆ ಪ್ಲಾನ್ ಮಾಡುತ್ತಿದ್ದಾರೆ ಎಂಬ ಅನುಮಾನಗಳು ಹುಟ್ಟಿಕೊಳ್ಳುತ್ತಿವೆ.

ನಾನು ಇವತ್ತು ಗುಂಡ್ಲುಪೇಟೆ ಕ್ಷೇತ್ರಕ್ಕೆ ಹೋಗುತ್ತಿದ್ದೇನೆ ಅಂದಾಗ ಯಡಿಯೂರಪ್ಪ ಬಹಳ ಖುಷಿಪಟ್ಟರು. ಯಡಿಯೂರಪ್ಪರವರು ಶಿಕಾರಿ ಪುರದಲ್ಲಿ ಎಷ್ಟು‌ ಮನೆಗಳಿಗೆ ಭೇಟಿ ಕೊಟ್ಟಿದ್ದಾರೆ ಅನ್ನೋದು ಗೊತ್ತಿಲ್ಲ. ಉಪಚುನಾವಣೆಯಲ್ಲಿ ಕ್ಷೇತ್ರದ ಪ್ರತಿಯೊಂದು ಮನೆಗೂ ಯಡಿಯೂರಪ್ಪ ಭೇಟಿ ನೀಡಿದರು. ಒಂದು‌ ಜಿಪಂ ಚುನಾವಣೆ ಸೋತರೆ ಮನೆಮಠ ಮಾರ್ಕೊಂಡು ಚುನಾವಣೆ ಬೇಡ ಎಂಬ ಪರಿಸ್ಥಿತಿ ಆಗುತ್ತೆ. ಆದರೆ ನಿರಂಜನಕುಮಾರ್ ಮೂರು ಸೋಲು ಕಂಡರು. ನಾನು‌ ಚುನಾವಣೆಗೆ ನಿಲ್ಲಲ್ಲ‌ ಎಂದು ಹೇಳಿದ್ದರು. ಆಗ ಯಡಿಯೂರಪ್ಪ ಕ್ಷೇತ್ರದ ಕಾರ್ಯಕರ್ತರ ಮೇಲೆ ವಿಶ್ವಾಸ ಇಡು. ಈ ಬಾರಿಯೂ ನೀನೆ ಸ್ಪರ್ಧೆ ಮಾಡು‌ ಎಂದು ಹೇಳಿದ್ದರು ಎಂದರು.

ಇದನ್ನೂ ಓದಿ: ಮುರಿದ ರಥ ನಿರ್ಮಾಣ ಮಾಡಿ ಕೊಡುವುದಾಗಿ ಹೇಳಿ ಮಾತು ತಪ್ಪಿದ ಸೋಮಣ್ಣ; ಸಚಿವರ ವಿರುದ್ಧ ಗೋ ಬ್ಯಾಕ್​ ಅಭಿಯಾನ

ರಾಜ್ಯದಲ್ಲಿ ಕಾಂಗ್ರೆಸ್​ಗೆ ಒಂದು ಕಡೆ ನಾವು ಬಿಜೆಪಿಯವರು ಖೆಡ್ಡಾ ತೋಡುತ್ತಿದ್ದೇವೆ. ಯಾವ ಕಾರಣಕ್ಕೂ ಸಿದ್ದರಾಮಯ್ಯ ಸಿಎಂ ಆಗಬಾರದು ಅಂತ ಕಾಂಗ್ರೆಸ್ ಪಕ್ಷದವರೇ ಖೆಡ್ಡಾ ತೋಡುತ್ತಿದ್ದಾರೆ. ಕಾಂಗ್ರೆಸ್ ನಿರ್ಣಾಮ ಮಾಡಲು ಆ ಪಕ್ಷದ ಕಾರ್ಯಕರ್ತರು ಮುಖಂಡರೇ ಸಾಕು. ಇನ್ನು ಅತಂತ್ರ ವಿಧಾನಸಭೆ ಮೂಲಕ ಅಧಿಕಾರಕ್ಕೆ ಬರಬಹುದು ಅಂತ ಜೆಡಿಎಸ್ ಕನಸು ಕಾಣುತ್ತಿದೆ. ಯಾವುದೇ ಕಾರಣಕ್ಕೂ ಇವರ ಕನಸು ನನಸಾಗುವುದಿಲ್ಲ. ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್
ಬಿಹಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರುದ್ಧ ರಾಹುಲ್ ಜಾಥಾ
ಬಿಹಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರುದ್ಧ ರಾಹುಲ್ ಜಾಥಾ
ಧರ್ಮಸ್ಥಳ ಪ್ರಕರಣದ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು: ಸಿಟಿ ರವಿ ಆರೋಪ
ಧರ್ಮಸ್ಥಳ ಪ್ರಕರಣದ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು: ಸಿಟಿ ರವಿ ಆರೋಪ