AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಡಿಯೂರಪ್ಪನವರ ಆಪ್ತ, ಮಾಜಿ ಶಾಸಕ ಬಿಜೆಪಿಗೆ ಗುಡ್​ ಬೈ, ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ

ವಿಧಾನಸಭೆ ಚುನಾವಣೆ ಹತ್ತಿರ ಇರುವಾಗಲೇ ಮಾಜಿ ಶಾಸಕ, ಬಿಎಸ್ ಯಡಿಯೂರಪ್ಪನವರ ಆಪ್ತ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.

ಯಡಿಯೂರಪ್ಪನವರ ಆಪ್ತ, ಮಾಜಿ ಶಾಸಕ ಬಿಜೆಪಿಗೆ ಗುಡ್​ ಬೈ, ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ
UB banakar
TV9 Web
| Edited By: |

Updated on:Nov 09, 2022 | 5:31 PM

Share

ಹಾವೇರಿ: ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪನವರ (BS Yediyurappa) ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಮಾಜಿ ಶಾಸಕ ಯು.ಬಿ.ಬಣಕಾರ್ (U B Banakar) ಬಿಜೆಪಿಗೆ ಗುಡ್​ ಬೈ ಹೇಳಿದ್ದಾರೆ. ಬಿಜೆಪಿ (BJP_ ಪಕ್ಷದ ಸದಸ್ಯತ್ವ, ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನ ಹಾಗೂ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ನಿರ್ದೇಶಕ ಸ್ಥಾನಕ್ಕೆ ಬಣಕಾರ್ ರಾಜೀನಾಮೆ ನೀಡಿದ್ದು, ರಾಜೀನಾಮೆ ಕುರಿತು ಟಿವಿ9ಗೆ ಖಚಿತಪಡಿಸಿದ್ದಾರೆ.

ಕಾಂಗ್ರೆಸ್​ಗೆ ಭಾರಿ ದುಬಾರಿಯಾದ ಸತೀಶ್ ಜಾರಕಿಹೊಳಿ ನಡೆ: ಕೈ ಹೋರಾಟಗಳೆಲ್ಲ ನೀರಿನಲ್ಲಿ ಹೋಮ

ಹಾವೇರಿ ಜಿಲ್ಲೆ ಹಿರೇಕೆರೂರು ಕ್ಷೇತ್ರದ ಮಾಜಿ ಶಾಸಕರಾಗಿದ್ದ ಬಣಕಾರ್, ತಾಲೂಕಿನಲ್ಲಿನ ರಾಜಕೀಯ ಬೆಳವಣಿಗೆಗಳಿಂದ ಬೇಸತ್ತು ಬಿಜೆಪಿ ತೊರೆದಿದ್ದಾರೆ. ಎದುರಾಳಿಯಾಗಿದ್ದ ಬಿ.ಸಿ. ಪಾಟೀಲ್ ಅವರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಂಡಿದ್ದಕ್ಕೆ ಬಣಕರ್ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಬಣಕಾರ್ ಅವರನ್ನು ಸಮಾಧಾನಪಡಿಸಲು ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನದ ಜೊತೆಗೆ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ನಿರ್ದೇಶಕರನ್ನಾಗಿ ಮಾಡಲಾಗಿತ್ತು. ಆದ್ರೆ, ಇದೀಗ ಬಣಕರ್ ಎಲ್ಲಾ ಸ್ಥಾನಮಾನಗಳಿಗೆ ರಾಜೀನಾಮೆ ನೀಡಿದ್ದಾರೆ.

2 ಬಾರಿ ಹಿರೇಕೆರೂರು ಕ್ಷೇತ್ರದ ಶಾಸಕರಾಗಿದ್ದ ಯು.ಬಿ.ಬಣಕಾರ್​​ 1994 ಹಾಗೂ 2013ರ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆದ್ರೆ, 2018ರ ವಿಧಾನಸಭೆ ಚುನಾವಣೆಯಲ್ಲಿ ಬಿ.ಸಿ. ಪಾಟೀಲ್ ವಿರುದ್ಧ ಸೋಲುಕಂಡಿದ್ದರು. ಬಳಿಕ ಬದಲಾದ ರಾಜಕೀಯ ವಿದ್ಯಾಮಾನದಿಂದ ಬಿ.ಸಿ.ಪಾಟೀಲ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂದಿನ ಚುನಾವಣೆಯಲ್ಲಿ ಬಣಕರ್ ಅವರಿಗೆ ಬಿಜೆಪಿ ಟಿಕೆಟ್ ಸಿಗುವುದು ಸಾಧ್ಯತೆಗಳು ಕಡಿಮೆ.

ಇದರಿಂದ ಬಣಕಾರ್ ತಮ್ಮ ಮುಂದಿನ ರಾಜಕೀಯ ನಡೆಗಾಗಿ ಬಿಜೆಪಿಗೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆಗಳು ಇವೆ ಎನ್ನಲಾಗುತ್ತಿದೆ. ಅಲ್ಲದೇ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿ.ಸಿ. ಪಾಟೀಲ್ ವಿರುದ್ಧ ಕಾಂಗ್ರೆಸ್​ನಿಂದ ಅಖಾಡಕ್ಕಿಳಿಯಲಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:29 pm, Wed, 9 November 22

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ