Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕಾಂಗ ಸಭೆಯಲ್ಲಿ ರಾಜೀನಾಮೆ ನೀಡುತ್ತೇನೆ ಎಂದಿದ್ದು ನಿಜ: ಸತ್ಯ ಒಪ್ಪಿಕೊಂಡ ಕಾಂಗ್ರೆಸ್ ಶಾಸಕ

ಮೊನ್ನೆ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ರಾಜೀನಾಮೆ ನೀಡುವುದಾಗಿ ಹೇಳಿರುವುದು ನಿಜ ಎಂದು ಶಾಸಕ ಬಿಆರ್ ಪಾಟೀಲ್ ಸತ್ಯ ಒಪ್ಪಿಕೊಂಡಿದ್ದಾರೆ.

ಶಾಸಕಾಂಗ ಸಭೆಯಲ್ಲಿ ರಾಜೀನಾಮೆ ನೀಡುತ್ತೇನೆ ಎಂದಿದ್ದು ನಿಜ: ಸತ್ಯ ಒಪ್ಪಿಕೊಂಡ ಕಾಂಗ್ರೆಸ್ ಶಾಸಕ
ಬಿ.ಆರ್.ಪಾಟೀಲ್‌
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ರಮೇಶ್ ಬಿ. ಜವಳಗೇರಾ

Updated on: Jul 30, 2023 | 7:00 PM

ಕಲಬುರಗಿ, (ಜುಲೈ 30): ಮೊನ್ನೇ ಅಷ್ಟೇ ನಡೆದಿದ್ದ ಕಾಂಗ್ರೆಸ್ (Congress)  ಶಾಸಕಾಂಗ ಸಭೆಯಲ್ಲಿ ಆಳಂದ ಶಾಸಕ ಬಿಆರ್ ಪಾಟೀಲ್ (BR Patil)ರಾಜೀನಾಮೆ ನೀಡುವ ಬಗ್ಗೆ ಪ್ರಸ್ತಾಪ ಮಾಡಿದ್ದು, ಇದು ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ ಸೃಷ್ಟಿಸಿತ್ತು. ಈ ಬಗ್ಗೆ ಟಿವಿ9 ಮಾತ್ರ ರಾಜೀನಾಮೆ ಪ್ರಸ್ತಾಪಿಸಿರುವುದನ್ನು ಪ್ರಸಾರ ಮಾಡಿತ್ತು. ಆದ್ರೆ, ಇದನ್ನು ಕೆಲವರು ಸುಳ್ಳು ಎಂದು ಅಲ್ಲಗೆಳೆದಿದ್ದರೆ, ಇನ್ನೂ ಕೆಲವರು ಈ ಬಗ್ಗೆ ಏನು ಹೇಳಿದ ಮೌನಕ್ಕೆ ಜಾರಿದ್ದರು. ಆದ್ರೆ, ಇದೀಗ ಅದು ನಿಜ ಎಂದು ಸಾಬೀತಾಗಿದೆ. ಹೌದು.. ರಾಜೀನಾಮೆ ಪ್ರಸ್ತಾಪ ಮಾಡಿರುವುದು ನಿಜ ಎಂದು ಸ್ವತಃ ಶಾಸಕ ಬಿಆರ್ ಪಾಟೀಲ್ ಸತ್ಯ ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ರಾಜೀನಾಮೆ ವಿಚಾರ ಎತ್ತಿದ್ರಾ ಶಾಸಕರು? ಇಲ್ಲಿದೆ ಸಭೆಯ ಇನ್​ಸೈಡ್​ ಮಾಹಿತಿ

ಈ ಬಗ್ಗೆ ಇಂದು ಕಲಬುರಗಿ ನಗರದಲ್ಲಿ ಸುದ್ದಿಗಾರರೊಂದಿಗೆ (ಜುಲೈ 30) ಮಾತಾಡಿದ ಬಿ. ಆರ್ ಪಾಟೀಲ್, ನಾನು ನನ್ನ ಆತ್ಮಗೌರವಕ್ಕೆ ಧಕ್ಕೆ ಬಂದ್ರೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದು ಸತ್ಯ. ಆದ್ರೆ ಯಾವ ಕಾರಣಕ್ಕೆ ಎನ್ನುವುದು ಸೇರಿದಂತೆ ಎಲ್ಲಾ ವಿಚಾರಗಳನ್ನು ಬಹಿರಂಗವಾಗಿ ಹೇಳಲು ಆಗಲ್ಲ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ನಿಮ್ಮ ಟಿವಿ9 ಮಾಡಿದ್ದ ಸುದ್ದಿ ನಿಖರವಾಗಿದೆ ಮತ್ತೊಮೆ ಸಾಬೀತಾಗಿದೆ.

ಇನ್ನು ಮೊನ್ನೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ, ನಾನು ಕ್ಷಮೆ ಕೇಳಿಲ್ಲ, ಕ್ಷಮೆ ಕೇಳುವಂತಹ ತಪ್ಪು ಕೂಡಾ ನಾನು ಮಾಡಿಲ್ಲ, ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಕೇಳುವದು ನಮ್ಮ ಹಕ್ಕು. ಶಾಸಕಾಂಗ ಪಕ್ಷದ ಸಬೆಯಲ್ಲಿ ನಮ್ಮ ಎಲ್ಲಾ ವಿಚಾರ ಹೇಳಿದ್ದೇವೆ. ಅದಕ್ಕೆ ಪರಿಹಾರ ಕೂಡಾ ಸಿಕ್ಕಿದೆ. ಕೆಲ ಸಚಿವರ ವರ್ತನೆ ಸರಿಯಿರಲಿಲ್ಲ. ಹೀಗಾಗಿ ಅದನ್ನು ಸರಿಪಡಿಸಿಕೊಳ್ಳಬೇಕು ಎನ್ನುವುದು ನಮ್ಮ ಆಗ್ರಹವಾಗಿತ್ತು. ಆದ್ರೆ ಸಚಿವರಿಗೆ ಸಿಎಂ ಏನು ಹೇಳಿದ್ದಾರೆ ಎನ್ನುವುದು ಅವರಿಗೆ ಗೊತ್ತು. ಆದ್ರೆ ಸದ್ಯ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದರು.

ರಾಜೀನಾಮೆ ವಿಚಾರ ಎತ್ತಿದ್ದ ಶಾಸಕರು

ಬಹಿರಂಗವಾಗಿ ಪತ್ರ ಬರೆದಿದ್ದಕ್ಕೆ ಸಿದ್ದರಾಮಯ್ಯ ತೀವ್ರ ಅಸಮಾಧಾನಗೊಂಡು, ನನಗೆ ವೈಯಕ್ತಿಕವಾಗಿ ಬಂದು ಭೇಟಿ ಮಾಡಿ ಸಮಸ್ಯೆ ಬಗೆ ಹರಿಸಿಕೊಳ್ಳಬಹುದಿತ್ತು. ಪತ್ರ ಬರೆಯುವ ಅವಶ್ಯಕತೆ ಏನಿತ್ತು ಎಂದು ಸಭೆಯಲ್ಲಿ ಪ್ರಶ್ನಿಸಿದ್ದರು. ಬಳಿಕ ಸಿಎಂ ಮಾತಿನಿಂದ ಬೇಸರಗೊಂಡ ಬಿ ಆರ್ ಪಾಟೀಲ್, ಆಯ್ತು ಬಿಡಿ ನಾನು ರಾಜೀನಾಮೆ ಕೊಟ್ಟು ಬಿಡಡುತ್ತೇನೆ. ನನಗೆ ಏನು ಹೇಳುವುದಿಲ್ಲ. ನನ್ನನ್ನ ಅಪರಾಧಿ ಸ್ಥಾನದಲ್ಲಿ ನಿಲ್ಲಿಸಬೇಡಿ. ನನ್ನ ಮಾತಿಗೆ ನಾನು ಬದ್ದ. ನಾನು ಸಂಪೂರ್ಣವಾಗಿ ಪತ್ರವನ್ನ ನೋಡಿ ಅರ್ಥೈಸಿಕೊಂಡು ಸಹಿ ಹಾಕಿದ್ದೇನೆ ಎಂದಿದ್ದರು. ಇನ್ನು ಬಿ.ಆರ್.ಪಾಟೀಲ್‌ಗೆ ಸಾಥ್ ನೀಡಿದ್ದ ಇಂಡಿ ಶಾಸಕ‌ ಯಶವಂತ ರಾಯಗೌಡ, ಬಿ.ಆರ್. ಪಾಟೀಲ್ ಅವರು ಹೇಳಿರುವುದರಲ್ಲಿ ಸತ್ಯ ಇದೆ. ಸಚಿವರ ಕಚೇರಿ ಮೊದಲು ಸರಿ ಇರಲಿ. ಮೊದಲು ಗೌರವ ಕೊಡುವುದನ್ನ ಕಲಿಯಲಿ. ನಾವ್ಯಾರು ಸುಮ್ಮನೆ ಶಾಸಕರಾಗಿಲ್ಲ. ಸರಿಯಾಗಿ ನೋಡಿಯೇ ಪತ್ರಕ್ಕೆ ನಾನೂ ಸಹಿ ಹಾಕಿದ್ದೇನೆ. ನಮಗೆ ಸ್ವಾಭಿಮಾನ ಗೌರವ ಇಲ್ಲವಾದಲ್ಲಿ ಶಾಸಕ ಸ್ಥಾನವೇ ಬೇಡ. ನಾವು ರಾಜೀನಾಮೆ ಕೊಡಲು ಸಿದ್ಧ ಎಂದು ಅತೃಪ್ತಿ ಹೊರಹಾಕಿದ್ದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್