AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಭಟನೆ ವೇಳೆ ಯೂತ್ ಕಾಂಗ್ರೆಸ್ ನಾಯಕ ಬಿವಿ ಶ್ರೀನಿವಾಸ್ ಕೂದಲು ಹಿಡಿದು ಎಳೆದಾಡಿದ ದೆಹಲಿ ಪೊಲೀಸ್; ವಿಡಿಯೊ ನೋಡಿ

Congress Leader BV Srinivas ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದೆಹಲಿ ಪೊಲೀಸರ ದಬ್ಬಾಳಿಕೆ. ಯೂತ್ ಕಾಂಗ್ರೆಸ್ ಅಧ್ಯಕ್ಷ ಬಿವಿ ಶ್ರೀನಿವಾಸ್ ಕೂದಲು ಹಿಡಿದೆಳೆದು ವಾಹನದೊಳಗೆ ತಳ್ಳಿದ ಪೊಲೀಸ್.

ಪ್ರತಿಭಟನೆ ವೇಳೆ ಯೂತ್ ಕಾಂಗ್ರೆಸ್ ನಾಯಕ ಬಿವಿ ಶ್ರೀನಿವಾಸ್ ಕೂದಲು ಹಿಡಿದು ಎಳೆದಾಡಿದ ದೆಹಲಿ ಪೊಲೀಸ್; ವಿಡಿಯೊ ನೋಡಿ
ಯುವ ಕಾಂಗ್ರೆಸ್ ಮುಖ್ಯಸ್ಥ ಬಿವಿ ಶ್ರೀನಿವಾಸ್ ಕೂದಲು ಹಿಡಿದೆಳೆದ ಪೊಲೀಸ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jul 26, 2022 | 9:22 PM

Share

ದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರನ್ನು ಜಾರಿ ನಿರ್ದೇಶನಾಲಯ ಪ್ರಶ್ನಿಸಿದ್ದನ್ನು ವಿರೋಧಿಸಿ ಮತ್ತು ದೇಶದಲ್ಲಿನ ಬೆಲೆ ಏರಿಕೆ, ಜಿಎಸ್‌ಟಿ ಮತ್ತು ನಿರುದ್ಯೋಗ ಸಮಸ್ಯೆಗಳ ಬಗ್ಗೆ ದೆಹಲಿಯಲ್ಲಿ ಮಂಗಳವಾರ ಪ್ರತಿಭಟನೆ ನಡೆಸುತ್ತಿದ್ದ ರಾಹುಲ್ ಗಾಂಧಿ (Rahul Gandhi) ಸೇರಿದಂತೆ ಹಲವು ಕಾಂಗ್ರೆಸ್ ನಾಯಕರನ್ನು ದೆಹಲಿಯಲ್ಲಿ ಬಂಧಿಸಲಾಗಿದೆ. ಈ ವೇಳೆ ಯೂತ್ ಕಾಂಗ್ರೆಸ್ ಮುಖ್ಯಸ್ಥ ಬಿವಿ ಶ್ರೀನಿವಾಸ್ (BV Srinivas) ಅವರ ಕೂದಲನ್ನು ಪೊಲೀಸರು ಎಳೆದಾಡುತ್ತಿರುವ ವಿಡಿಯೊವೊಂದನ್ನು ಎಎನ್ಐ ಸುದ್ದಿಸಂಸ್ಥೆ ಟ್ವೀಟಿಸಿದೆ.

“ಅವರು ನನಗೆ ಹೊಡೆದರು. ಅವರು ನನ್ನ ಕೂದಲನ್ನು ಎಳೆದರು ಎಂದು ಶ್ರೀನಿವಾಸ್ ಕೂಗಿದ್ದಾರೆ. ಇದಕ್ಕೂ ಮುನ್ನ ಪೊಲೀಸರೊಬ್ಬರು ಅವರ ತಲೆಗೂದಲು ಹಿಡಿದು ಎಳೆದಾಡಿದ್ದರು. ಮತ್ತೊಬ್ಬ ಪೊಲೀಸ್, ಅವರನ್ನು ಬಲವಂತವಾಗಿ ಕಾರಿನೊಳಗೆ ತಳ್ಳುತ್ತಿರುವುದು ಕಂಡುಬಂದಿತು. ಈ ವಿಡಿಯೊವನ್ನು ಹಲವು ಕಾಂಗ್ರೆಸ್ ನಾಯಕರು ಶೇರ್ ಮಾಡಿದ್ದು, ಪ್ರತಿಭಟನಾಕಾರರ ಮೇಲೆ ಕ್ರೂರ ದಬ್ಬಾಳಿಕೆ ಎಂದು ಖಂಡಿಸಿದ್ದಾರೆ.

ನಾವು ಭಯಪಡುವುದಿಲ್ಲ, ತಲೆಬಾಗುವುದಿಲ್ಲ ಎಂಬ ಭಿತ್ತಿಪತ್ರಗಳನ್ನು ಹಿಡಿದುಕೊಂಡಿದ್ದ ಯುವ ಕಾಂಗ್ರೆಸ್ ಸದಸ್ಯರು, ಸತ್ಯಕ್ಕೆ ಸಾವಿಲ್ಲ ಎಂದು ನೆನಪಿಸಿಕೊಳ್ಳಿ ಎಂದು ರಸ್ತೆಯಲ್ಲೇ ಕುಳಿತು ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ.. ನಮ್ಮ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಬಿಜೆಪಿ ಸೇಡಿನ ರಾಜಕಾರಣದ ವಿರುದ್ಧ ನಾವು ಪ್ರತಿಭಟಿಸುತ್ತಿದ್ದೇವೆ ಎಂದು ಯುವ ಕಾಂಗ್ರೆಸ್ ಸದಸ್ಯರು ಹೇಳಿದ್ದಾರೆ. ಬಿಜೆಪಿಯು ಸತ್ಯ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಹೆದರುತ್ತದೆ ಎಂದಿದ್ದಾರೆ ಕಾರ್ಯಕರ್ತರು.

ಇದಕ್ಕೂ ಮೊದಲು ದೆಹಲಿ ಪೊಲೀಸರು ಸಂಸತ್ ಬಳಿ ಮತ್ತು 24, ಅಕ್ಬರ್ ರಸ್ತೆಯಲ್ಲಿರುವ ಕಾಂಗ್ರೆಸ್ ಪಕ್ಷದ ಪ್ರಧಾನ ಕಚೇರಿಯ ಹೊರಗೆ ಪ್ರತಿಭಟನೆ ನಡೆಸುತ್ತಿದ್ದ ಪಕ್ಷದ ಕಾರ್ಯಕರ್ತರು ಮತ್ತು ಸಂಸದರನ್ನು ಬಂಧಿಸಿದ್ದಾರೆ. ರಾಹುಲ್ ಗಾಂಧಿ ಕೂಡ ಕೆಲಕಾಲ ರಸ್ತೆಯಲ್ಲೇ ಕುಳಿತಾಗ ಪೊಲೀಸರು ಸುತ್ತುವರಿದಿದ್ದರು. ಆಮೇಲೆ ಅವರನ್ನು ಬಂಧಿಸಲಾಯಿತು.

Published On - 9:09 pm, Tue, 26 July 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ