AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೂತ್ ಕಾಂಗ್ರೆಸ್ ಚುನಾವಣೆಯಲ್ಲಿ ಗೋಲ್​ಮಾಲ್: ಕರ್ನಾಟಕ ಯೂತ್ ಕಾಂಗ್ರೆಸ್ ನಾಯಕರಿಂದಲೇ ಹೈಕಮಾಂಡ್​ಗೆ ದೂರು

ಯೂತ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಅವರನ್ನ ಕೆಳಗಿಳಿಸಿ. ಇಲ್ಲದಿದ್ರೆ ರಾಜ್ಯದಲ್ಲಿ ಯೂತ್ ಕಾಂಗ್ರೆಸ್ ಮುಳುಗಲಿದೆ ಎಂದು ಹೈಕಮಾಂಡ್​​ಗೆ ಯೂತ್ ಕಾಂಗ್ರೆಸ್ ನಾಯಕರು ದೂರು ಕೊಟ್ಟಿದ್ದಾರೆ.

ಯೂತ್ ಕಾಂಗ್ರೆಸ್ ಚುನಾವಣೆಯಲ್ಲಿ ಗೋಲ್​ಮಾಲ್: ಕರ್ನಾಟಕ ಯೂತ್ ಕಾಂಗ್ರೆಸ್ ನಾಯಕರಿಂದಲೇ ಹೈಕಮಾಂಡ್​ಗೆ ದೂರು
ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್
TV9 Web
| Edited By: |

Updated on:Jan 30, 2022 | 7:10 PM

Share

ಬೆಂಗಳೂರು: ರಾಷ್ಟ್ರೀಯ ಯೂತ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ವಿರುದ್ಧ ಕಾಂಗ್ರೆಸ್ ಹೈಕಮಾಂಡ್​ಗೆ ದೂರು ನೀಡಲಾಗಿದೆ. ಕರ್ನಾಟಕ ರಾಜ್ಯ ಯೂತ್ ಕಾಂಗ್ರೆಸ್ ನಾಯಕರಿಂದ ದೂರು ಸಲ್ಲಿಕೆ ಮಾಡಲಾಗಿದೆ. ಪದಾಧಿಕಾರಿಗಳ ನೇಮಕದಲ್ಲಿ ಗೋಲ್​​ಮಾಲ್ ನಡೆದಿದೆ. ಯೂತ್ ಕಾಂಗ್ರೆಸ್ ಚುನಾವಣೆಯಲ್ಲಿ ಗೋಲ್​ಮಾಲ್ ಆಗಿದೆ. ರಕ್ಷಾರಾಮಯ್ಯ, ನಲಪಾಡ್ ಬಳಿ ಹಣ ಪಡೆಯಲಾಗಿದೆ. ಹಣ ಪಡೆದು ಚುನಾವಣೆಯಲ್ಲಿ ಅಕ್ರಮ ಎಸಗಲಾಗಿದೆ ಎಂದು ಆರೋಪಿಸಿ ರಾಷ್ಟ್ರೀಯ ಯೂತ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ವಿರುದ್ಧ ದೂರು ಸಲ್ಲಿಕೆ ಮಾಡಲಾಗಿದೆ.

ಈಗ ಪದಾಧಿಕಾರಿಗಳ ನೇಮಕದಲ್ಲೂ ಗೋಲ್​ಮಾಲ್ ನಡೆದಿದೆ. ಚುನಾವಣೆಯಲ್ಲಿ ಟಿಕೆಟ್ ಕೊಡಿಸೋದಾಗಿ ಹಣ ವಸೂಲಿ ಮಾಡಲಾಗಿದೆ. ಬಿ.ವಿ. ಶ್ರೀನಿವಾಸ್​ ಕೋಟಿಗಟ್ಟಲೇ ಆಸ್ತಿ ಸಂಪಾದಿಸಿದ್ದಾರೆ ಎಂದು ಶ್ರೀನಿವಾಸ್ ವಿರುದ್ಧ ಹೈಕಮಾಂಡ್​ಗೆ ಇ-ಮೇಲ್ ರವಾನೆ ಮಾಡಲಾಗಿದೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ರಾಜ್ಯ ಯೂತ್ ಕಾಂಗ್ರೆಸ್ ನಾಯಕರು ಇ-ಮೇಲ್ ಮೂಲಕ ದೂರು ಕೊಟ್ಟಿದ್ದಾರೆ.

ಯೂತ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಅವರನ್ನ ಕೆಳಗಿಳಿಸಿ. ಇಲ್ಲದಿದ್ರೆ ರಾಜ್ಯದಲ್ಲಿ ಯೂತ್ ಕಾಂಗ್ರೆಸ್ ಮುಳುಗಲಿದೆ ಎಂದು ಹೈಕಮಾಂಡ್​​ಗೆ ಯೂತ್ ಕಾಂಗ್ರೆಸ್ ನಾಯಕರು ದೂರು ಕೊಟ್ಟಿದ್ದಾರೆ.

ನಾನು, ರಕ್ಷಾರಾಮಯ್ಯ ಯಾರೂ ಕೂಡ ದುಡ್ಡು ಕೊಟ್ಟಿಲ್ಲ: ಮೊಹ್ಮದ್​ ನಲಪಾಡ್​​ ಪ್ರತಿಕ್ರಿಯೆ

ಬಿ.ವಿ. ಶ್ರೀನಿವಾಸ್ ವಿರುದ್ಧ ಕಾಂಗ್ರೆಸ್ ವರಿಷ್ಠರಿಗೆ ದೂರು ವಿಚಾರವಾಗಿ ಬೆಂಗಳೂರಿನಲ್ಲಿ ಮೊಹ್ಮದ್​ ನಲಪಾಡ್​​ ಪ್ರತಿಕ್ರಿಯೆ ನೀಡಿದ್ದಾರೆ. ನಾನು, ರಕ್ಷಾರಾಮಯ್ಯ ಯಾರೂ ಕೂಡ ದುಡ್ಡು ಕೊಟ್ಟಿಲ್ಲ. ಶ್ರೀನಿವಾಸ್​​ ಮೇಲೆ ಸುಮ್ಮನೆ ಆರೋಪ ಮಾಡಲಾಗುತ್ತಿದೆ. ಬಿ.ವಿ.ಶ್ರೀನಿವಾಸ್ ಮೇಲಿನ ಆರೋಪ ನೂರಕ್ಕೆ ನೂರು ಸುಳ್ಳು ಎಂದು ನಲಪಾಡ್ ಹೇಳಿದ್ದಾರೆ. ಅವರು ನಮ್ಮಿಂದ ಒಂದು ಗ್ಲಾಸ್ ಟೀ ಕೂಡ ಕುಡಿದವರಲ್ಲ. ನಮಗೆ ನಾಯಕರಾಗಿ ಸಹಾಯ ಮಾಡುತ್ತಿದ್ದಾರೆ. ರಾಜಕೀಯವಾಗಿ ಹೆಸರು ಕೆಡಿಸಲು ಮಾಡ್ತಿರುವ ಕೃತ್ಯ ಇದು. ಈ ಕುರಿತು ಸೂಕ್ತ ತನಿಖೆಯಾಗಬೇಕು ಎಂದು ನಲಪಾಡ್​​ ಆಗ್ರಹಿಸಿದ್ದಾರೆ.

ಶ್ರೀನಿವಾಸ್ ಕೊರೊನಾ ಕಾಲದಲ್ಲಿ ಇಡಿ ದೇಶದ ಬೇರೆ-ಬೇರೆ ಭಾಗಕ್ಕೆ ಆಕ್ಸಿಜನ್ ತಲುಪಿಸಿದ್ದಾರೆ. ಈ ಮೂಲಕ ಆಕ್ಸಿಜನ್ ಮ್ಯಾನ್ ಅಂತಾ ಖ್ಯಾತಿ ಪಡೆದಿದ್ದಾರೆ. ಅವರ ಮೇಲೆ ಸುಖಾ ಸುಮ್ಮನೆ ಆರೋಪ ಮಾಡಲಾಗ್ತಿದೆ. ಈ ಲೆಟರ್​ನಲ್ಲಿ ಸೈನ್ ಮಾಡಿದ ಯಾರೂ ಕೂಡ ಯೂತ್ ಕಾಂಗ್ರೆಸ್ ಸದಸ್ಯರಲ್ಲ. ನಾನು, ರಕ್ಷಾರಾಮಯ್ಯ ಯಾರೂ ಕೂಡ ಅವರಿಗೆ ದುಡ್ಡು ಕೊಟ್ಟಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮೊಹಮ್ಮದ್ ನಲಪಾಡ್ ಬೆಂಬಲಿಗರಿಂದ ಕ್ಲಬ್​ನಲ್ಲಿ ಪಾರ್ಟಿ ವೇಳೆ ಹಲ್ಲೆ ಆರೋಪ; ಅಂತಹ ಘಟನೆ ನಡೆದಿಲ್ಲ ಎಂದ ನಲಪಾಡ್

ಇದನ್ನೂ ಓದಿ: ವಿಧಾನಸಭೆ ವಿಪಕ್ಷ ಉಪನಾಯಕನಾಗಿ ಯುಟಿ ಖಾದರ್ ನೇಮಕ; ಕಾಂಗ್ರೆಸ್ ಹೈಕಮಾಂಡ್ ಅಧಿಕೃತ ಘೋಷಣೆ

Published On - 3:02 pm, Sun, 30 January 22

Follow Us
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!