AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೂತ್ ಕಾಂಗ್ರೆಸ್ ಚುನಾವಣೆಯಲ್ಲಿ ಗೋಲ್​ಮಾಲ್: ಕರ್ನಾಟಕ ಯೂತ್ ಕಾಂಗ್ರೆಸ್ ನಾಯಕರಿಂದಲೇ ಹೈಕಮಾಂಡ್​ಗೆ ದೂರು

ಯೂತ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಅವರನ್ನ ಕೆಳಗಿಳಿಸಿ. ಇಲ್ಲದಿದ್ರೆ ರಾಜ್ಯದಲ್ಲಿ ಯೂತ್ ಕಾಂಗ್ರೆಸ್ ಮುಳುಗಲಿದೆ ಎಂದು ಹೈಕಮಾಂಡ್​​ಗೆ ಯೂತ್ ಕಾಂಗ್ರೆಸ್ ನಾಯಕರು ದೂರು ಕೊಟ್ಟಿದ್ದಾರೆ.

ಯೂತ್ ಕಾಂಗ್ರೆಸ್ ಚುನಾವಣೆಯಲ್ಲಿ ಗೋಲ್​ಮಾಲ್: ಕರ್ನಾಟಕ ಯೂತ್ ಕಾಂಗ್ರೆಸ್ ನಾಯಕರಿಂದಲೇ ಹೈಕಮಾಂಡ್​ಗೆ ದೂರು
ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್
TV9 Web
| Edited By: |

Updated on:Jan 30, 2022 | 7:10 PM

Share

ಬೆಂಗಳೂರು: ರಾಷ್ಟ್ರೀಯ ಯೂತ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ವಿರುದ್ಧ ಕಾಂಗ್ರೆಸ್ ಹೈಕಮಾಂಡ್​ಗೆ ದೂರು ನೀಡಲಾಗಿದೆ. ಕರ್ನಾಟಕ ರಾಜ್ಯ ಯೂತ್ ಕಾಂಗ್ರೆಸ್ ನಾಯಕರಿಂದ ದೂರು ಸಲ್ಲಿಕೆ ಮಾಡಲಾಗಿದೆ. ಪದಾಧಿಕಾರಿಗಳ ನೇಮಕದಲ್ಲಿ ಗೋಲ್​​ಮಾಲ್ ನಡೆದಿದೆ. ಯೂತ್ ಕಾಂಗ್ರೆಸ್ ಚುನಾವಣೆಯಲ್ಲಿ ಗೋಲ್​ಮಾಲ್ ಆಗಿದೆ. ರಕ್ಷಾರಾಮಯ್ಯ, ನಲಪಾಡ್ ಬಳಿ ಹಣ ಪಡೆಯಲಾಗಿದೆ. ಹಣ ಪಡೆದು ಚುನಾವಣೆಯಲ್ಲಿ ಅಕ್ರಮ ಎಸಗಲಾಗಿದೆ ಎಂದು ಆರೋಪಿಸಿ ರಾಷ್ಟ್ರೀಯ ಯೂತ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ವಿರುದ್ಧ ದೂರು ಸಲ್ಲಿಕೆ ಮಾಡಲಾಗಿದೆ.

ಈಗ ಪದಾಧಿಕಾರಿಗಳ ನೇಮಕದಲ್ಲೂ ಗೋಲ್​ಮಾಲ್ ನಡೆದಿದೆ. ಚುನಾವಣೆಯಲ್ಲಿ ಟಿಕೆಟ್ ಕೊಡಿಸೋದಾಗಿ ಹಣ ವಸೂಲಿ ಮಾಡಲಾಗಿದೆ. ಬಿ.ವಿ. ಶ್ರೀನಿವಾಸ್​ ಕೋಟಿಗಟ್ಟಲೇ ಆಸ್ತಿ ಸಂಪಾದಿಸಿದ್ದಾರೆ ಎಂದು ಶ್ರೀನಿವಾಸ್ ವಿರುದ್ಧ ಹೈಕಮಾಂಡ್​ಗೆ ಇ-ಮೇಲ್ ರವಾನೆ ಮಾಡಲಾಗಿದೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ರಾಜ್ಯ ಯೂತ್ ಕಾಂಗ್ರೆಸ್ ನಾಯಕರು ಇ-ಮೇಲ್ ಮೂಲಕ ದೂರು ಕೊಟ್ಟಿದ್ದಾರೆ.

ಯೂತ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಅವರನ್ನ ಕೆಳಗಿಳಿಸಿ. ಇಲ್ಲದಿದ್ರೆ ರಾಜ್ಯದಲ್ಲಿ ಯೂತ್ ಕಾಂಗ್ರೆಸ್ ಮುಳುಗಲಿದೆ ಎಂದು ಹೈಕಮಾಂಡ್​​ಗೆ ಯೂತ್ ಕಾಂಗ್ರೆಸ್ ನಾಯಕರು ದೂರು ಕೊಟ್ಟಿದ್ದಾರೆ.

ನಾನು, ರಕ್ಷಾರಾಮಯ್ಯ ಯಾರೂ ಕೂಡ ದುಡ್ಡು ಕೊಟ್ಟಿಲ್ಲ: ಮೊಹ್ಮದ್​ ನಲಪಾಡ್​​ ಪ್ರತಿಕ್ರಿಯೆ

ಬಿ.ವಿ. ಶ್ರೀನಿವಾಸ್ ವಿರುದ್ಧ ಕಾಂಗ್ರೆಸ್ ವರಿಷ್ಠರಿಗೆ ದೂರು ವಿಚಾರವಾಗಿ ಬೆಂಗಳೂರಿನಲ್ಲಿ ಮೊಹ್ಮದ್​ ನಲಪಾಡ್​​ ಪ್ರತಿಕ್ರಿಯೆ ನೀಡಿದ್ದಾರೆ. ನಾನು, ರಕ್ಷಾರಾಮಯ್ಯ ಯಾರೂ ಕೂಡ ದುಡ್ಡು ಕೊಟ್ಟಿಲ್ಲ. ಶ್ರೀನಿವಾಸ್​​ ಮೇಲೆ ಸುಮ್ಮನೆ ಆರೋಪ ಮಾಡಲಾಗುತ್ತಿದೆ. ಬಿ.ವಿ.ಶ್ರೀನಿವಾಸ್ ಮೇಲಿನ ಆರೋಪ ನೂರಕ್ಕೆ ನೂರು ಸುಳ್ಳು ಎಂದು ನಲಪಾಡ್ ಹೇಳಿದ್ದಾರೆ. ಅವರು ನಮ್ಮಿಂದ ಒಂದು ಗ್ಲಾಸ್ ಟೀ ಕೂಡ ಕುಡಿದವರಲ್ಲ. ನಮಗೆ ನಾಯಕರಾಗಿ ಸಹಾಯ ಮಾಡುತ್ತಿದ್ದಾರೆ. ರಾಜಕೀಯವಾಗಿ ಹೆಸರು ಕೆಡಿಸಲು ಮಾಡ್ತಿರುವ ಕೃತ್ಯ ಇದು. ಈ ಕುರಿತು ಸೂಕ್ತ ತನಿಖೆಯಾಗಬೇಕು ಎಂದು ನಲಪಾಡ್​​ ಆಗ್ರಹಿಸಿದ್ದಾರೆ.

ಶ್ರೀನಿವಾಸ್ ಕೊರೊನಾ ಕಾಲದಲ್ಲಿ ಇಡಿ ದೇಶದ ಬೇರೆ-ಬೇರೆ ಭಾಗಕ್ಕೆ ಆಕ್ಸಿಜನ್ ತಲುಪಿಸಿದ್ದಾರೆ. ಈ ಮೂಲಕ ಆಕ್ಸಿಜನ್ ಮ್ಯಾನ್ ಅಂತಾ ಖ್ಯಾತಿ ಪಡೆದಿದ್ದಾರೆ. ಅವರ ಮೇಲೆ ಸುಖಾ ಸುಮ್ಮನೆ ಆರೋಪ ಮಾಡಲಾಗ್ತಿದೆ. ಈ ಲೆಟರ್​ನಲ್ಲಿ ಸೈನ್ ಮಾಡಿದ ಯಾರೂ ಕೂಡ ಯೂತ್ ಕಾಂಗ್ರೆಸ್ ಸದಸ್ಯರಲ್ಲ. ನಾನು, ರಕ್ಷಾರಾಮಯ್ಯ ಯಾರೂ ಕೂಡ ಅವರಿಗೆ ದುಡ್ಡು ಕೊಟ್ಟಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮೊಹಮ್ಮದ್ ನಲಪಾಡ್ ಬೆಂಬಲಿಗರಿಂದ ಕ್ಲಬ್​ನಲ್ಲಿ ಪಾರ್ಟಿ ವೇಳೆ ಹಲ್ಲೆ ಆರೋಪ; ಅಂತಹ ಘಟನೆ ನಡೆದಿಲ್ಲ ಎಂದ ನಲಪಾಡ್

ಇದನ್ನೂ ಓದಿ: ವಿಧಾನಸಭೆ ವಿಪಕ್ಷ ಉಪನಾಯಕನಾಗಿ ಯುಟಿ ಖಾದರ್ ನೇಮಕ; ಕಾಂಗ್ರೆಸ್ ಹೈಕಮಾಂಡ್ ಅಧಿಕೃತ ಘೋಷಣೆ

Published On - 3:02 pm, Sun, 30 January 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ