AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೂತ್ ಕಾಂಗ್ರೆಸ್ ಚುನಾವಣೆಯಲ್ಲಿ ಗೋಲ್​ಮಾಲ್: ಕರ್ನಾಟಕ ಯೂತ್ ಕಾಂಗ್ರೆಸ್ ನಾಯಕರಿಂದಲೇ ಹೈಕಮಾಂಡ್​ಗೆ ದೂರು

ಯೂತ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಅವರನ್ನ ಕೆಳಗಿಳಿಸಿ. ಇಲ್ಲದಿದ್ರೆ ರಾಜ್ಯದಲ್ಲಿ ಯೂತ್ ಕಾಂಗ್ರೆಸ್ ಮುಳುಗಲಿದೆ ಎಂದು ಹೈಕಮಾಂಡ್​​ಗೆ ಯೂತ್ ಕಾಂಗ್ರೆಸ್ ನಾಯಕರು ದೂರು ಕೊಟ್ಟಿದ್ದಾರೆ.

ಯೂತ್ ಕಾಂಗ್ರೆಸ್ ಚುನಾವಣೆಯಲ್ಲಿ ಗೋಲ್​ಮಾಲ್: ಕರ್ನಾಟಕ ಯೂತ್ ಕಾಂಗ್ರೆಸ್ ನಾಯಕರಿಂದಲೇ ಹೈಕಮಾಂಡ್​ಗೆ ದೂರು
ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್
TV9 Web
| Edited By: |

Updated on:Jan 30, 2022 | 7:10 PM

Share

ಬೆಂಗಳೂರು: ರಾಷ್ಟ್ರೀಯ ಯೂತ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ವಿರುದ್ಧ ಕಾಂಗ್ರೆಸ್ ಹೈಕಮಾಂಡ್​ಗೆ ದೂರು ನೀಡಲಾಗಿದೆ. ಕರ್ನಾಟಕ ರಾಜ್ಯ ಯೂತ್ ಕಾಂಗ್ರೆಸ್ ನಾಯಕರಿಂದ ದೂರು ಸಲ್ಲಿಕೆ ಮಾಡಲಾಗಿದೆ. ಪದಾಧಿಕಾರಿಗಳ ನೇಮಕದಲ್ಲಿ ಗೋಲ್​​ಮಾಲ್ ನಡೆದಿದೆ. ಯೂತ್ ಕಾಂಗ್ರೆಸ್ ಚುನಾವಣೆಯಲ್ಲಿ ಗೋಲ್​ಮಾಲ್ ಆಗಿದೆ. ರಕ್ಷಾರಾಮಯ್ಯ, ನಲಪಾಡ್ ಬಳಿ ಹಣ ಪಡೆಯಲಾಗಿದೆ. ಹಣ ಪಡೆದು ಚುನಾವಣೆಯಲ್ಲಿ ಅಕ್ರಮ ಎಸಗಲಾಗಿದೆ ಎಂದು ಆರೋಪಿಸಿ ರಾಷ್ಟ್ರೀಯ ಯೂತ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ವಿರುದ್ಧ ದೂರು ಸಲ್ಲಿಕೆ ಮಾಡಲಾಗಿದೆ.

ಈಗ ಪದಾಧಿಕಾರಿಗಳ ನೇಮಕದಲ್ಲೂ ಗೋಲ್​ಮಾಲ್ ನಡೆದಿದೆ. ಚುನಾವಣೆಯಲ್ಲಿ ಟಿಕೆಟ್ ಕೊಡಿಸೋದಾಗಿ ಹಣ ವಸೂಲಿ ಮಾಡಲಾಗಿದೆ. ಬಿ.ವಿ. ಶ್ರೀನಿವಾಸ್​ ಕೋಟಿಗಟ್ಟಲೇ ಆಸ್ತಿ ಸಂಪಾದಿಸಿದ್ದಾರೆ ಎಂದು ಶ್ರೀನಿವಾಸ್ ವಿರುದ್ಧ ಹೈಕಮಾಂಡ್​ಗೆ ಇ-ಮೇಲ್ ರವಾನೆ ಮಾಡಲಾಗಿದೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ರಾಜ್ಯ ಯೂತ್ ಕಾಂಗ್ರೆಸ್ ನಾಯಕರು ಇ-ಮೇಲ್ ಮೂಲಕ ದೂರು ಕೊಟ್ಟಿದ್ದಾರೆ.

ಯೂತ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಅವರನ್ನ ಕೆಳಗಿಳಿಸಿ. ಇಲ್ಲದಿದ್ರೆ ರಾಜ್ಯದಲ್ಲಿ ಯೂತ್ ಕಾಂಗ್ರೆಸ್ ಮುಳುಗಲಿದೆ ಎಂದು ಹೈಕಮಾಂಡ್​​ಗೆ ಯೂತ್ ಕಾಂಗ್ರೆಸ್ ನಾಯಕರು ದೂರು ಕೊಟ್ಟಿದ್ದಾರೆ.

ನಾನು, ರಕ್ಷಾರಾಮಯ್ಯ ಯಾರೂ ಕೂಡ ದುಡ್ಡು ಕೊಟ್ಟಿಲ್ಲ: ಮೊಹ್ಮದ್​ ನಲಪಾಡ್​​ ಪ್ರತಿಕ್ರಿಯೆ

ಬಿ.ವಿ. ಶ್ರೀನಿವಾಸ್ ವಿರುದ್ಧ ಕಾಂಗ್ರೆಸ್ ವರಿಷ್ಠರಿಗೆ ದೂರು ವಿಚಾರವಾಗಿ ಬೆಂಗಳೂರಿನಲ್ಲಿ ಮೊಹ್ಮದ್​ ನಲಪಾಡ್​​ ಪ್ರತಿಕ್ರಿಯೆ ನೀಡಿದ್ದಾರೆ. ನಾನು, ರಕ್ಷಾರಾಮಯ್ಯ ಯಾರೂ ಕೂಡ ದುಡ್ಡು ಕೊಟ್ಟಿಲ್ಲ. ಶ್ರೀನಿವಾಸ್​​ ಮೇಲೆ ಸುಮ್ಮನೆ ಆರೋಪ ಮಾಡಲಾಗುತ್ತಿದೆ. ಬಿ.ವಿ.ಶ್ರೀನಿವಾಸ್ ಮೇಲಿನ ಆರೋಪ ನೂರಕ್ಕೆ ನೂರು ಸುಳ್ಳು ಎಂದು ನಲಪಾಡ್ ಹೇಳಿದ್ದಾರೆ. ಅವರು ನಮ್ಮಿಂದ ಒಂದು ಗ್ಲಾಸ್ ಟೀ ಕೂಡ ಕುಡಿದವರಲ್ಲ. ನಮಗೆ ನಾಯಕರಾಗಿ ಸಹಾಯ ಮಾಡುತ್ತಿದ್ದಾರೆ. ರಾಜಕೀಯವಾಗಿ ಹೆಸರು ಕೆಡಿಸಲು ಮಾಡ್ತಿರುವ ಕೃತ್ಯ ಇದು. ಈ ಕುರಿತು ಸೂಕ್ತ ತನಿಖೆಯಾಗಬೇಕು ಎಂದು ನಲಪಾಡ್​​ ಆಗ್ರಹಿಸಿದ್ದಾರೆ.

ಶ್ರೀನಿವಾಸ್ ಕೊರೊನಾ ಕಾಲದಲ್ಲಿ ಇಡಿ ದೇಶದ ಬೇರೆ-ಬೇರೆ ಭಾಗಕ್ಕೆ ಆಕ್ಸಿಜನ್ ತಲುಪಿಸಿದ್ದಾರೆ. ಈ ಮೂಲಕ ಆಕ್ಸಿಜನ್ ಮ್ಯಾನ್ ಅಂತಾ ಖ್ಯಾತಿ ಪಡೆದಿದ್ದಾರೆ. ಅವರ ಮೇಲೆ ಸುಖಾ ಸುಮ್ಮನೆ ಆರೋಪ ಮಾಡಲಾಗ್ತಿದೆ. ಈ ಲೆಟರ್​ನಲ್ಲಿ ಸೈನ್ ಮಾಡಿದ ಯಾರೂ ಕೂಡ ಯೂತ್ ಕಾಂಗ್ರೆಸ್ ಸದಸ್ಯರಲ್ಲ. ನಾನು, ರಕ್ಷಾರಾಮಯ್ಯ ಯಾರೂ ಕೂಡ ಅವರಿಗೆ ದುಡ್ಡು ಕೊಟ್ಟಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮೊಹಮ್ಮದ್ ನಲಪಾಡ್ ಬೆಂಬಲಿಗರಿಂದ ಕ್ಲಬ್​ನಲ್ಲಿ ಪಾರ್ಟಿ ವೇಳೆ ಹಲ್ಲೆ ಆರೋಪ; ಅಂತಹ ಘಟನೆ ನಡೆದಿಲ್ಲ ಎಂದ ನಲಪಾಡ್

ಇದನ್ನೂ ಓದಿ: ವಿಧಾನಸಭೆ ವಿಪಕ್ಷ ಉಪನಾಯಕನಾಗಿ ಯುಟಿ ಖಾದರ್ ನೇಮಕ; ಕಾಂಗ್ರೆಸ್ ಹೈಕಮಾಂಡ್ ಅಧಿಕೃತ ಘೋಷಣೆ

Published On - 3:02 pm, Sun, 30 January 22

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ