AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

YSV Datta: ಕಾಂಗ್ರೆಸ್ ಮುಖ ಮಾಡಿದ ಜೆಡಿಎಸ್ ನಾಯಕ ವೈಎಸ್​ವಿ ದತ್ತ; ರಾಜಕೀಯ ವಲಯದಲ್ಲಿ ಚರ್ಚೆ

ದತ್ತಾ ಅವರು ಕಾಂಗ್ರೆಸ್​ ಸೇರುವ ಕುರಿತು ಆಗಿರುವ ಮಾತುಕತೆಯ ಆಡಿಯೊ ತುಣುಕು ವೈರಲ್ ಆಗಿದೆ.

YSV Datta: ಕಾಂಗ್ರೆಸ್ ಮುಖ ಮಾಡಿದ ಜೆಡಿಎಸ್ ನಾಯಕ ವೈಎಸ್​ವಿ ದತ್ತ; ರಾಜಕೀಯ ವಲಯದಲ್ಲಿ ಚರ್ಚೆ
ವೈ.ಎಸ್.ವಿ.ದತ್ತ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: May 11, 2022 | 3:45 PM

Share

ಬೆಂಗಳೂರು: ಜೆಡಿಎಸ್​ನ ಪ್ರಮುಖ ನಾಯಕ ಮತ್ತು ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಅವರ ಆಪ್ತರಾದ ವೈ.ಎಸ್​.ವಿ.ದತ್ತಾ (YSV Datta) ಪಕ್ಷ ತೊರೆಯುತ್ತಾರೆ ಎನ್ನುವ ಮಾತುಗಳು ಕರ್ನಾಟಕದ ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. ಇತ್ತೀಚೆಗಷ್ಟೇ ಜೆಡಿಎಸ್​ನ ಹಿರಿಯ ನಾಯಕರಾದ ಬಸವರಾಜ ಹೊರಟ್ಟಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಆದರೆ ಸೈದ್ಧಾಂತಿಕ ಕಾರಣಗಳಿಂದಾಗಿ ದತ್ತ ಅವರು ಬಿಜೆಪಿಗೆ ಸೇರಲು ಒಲವು ತೋರುತ್ತಿಲ್ಲ ಎನ್ನಲಾಗಿದ್ದು, ಕಾಂಗ್ರೆಸ್​ಗೆ ಸೇರ್ಪಡೆಯಾಗಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ.

ದತ್ತ ಅವರು ಕಾಂಗ್ರೆಸ್​ ಸೇರುವ ಕುರಿತು ಆಗಿರುವ ಮಾತುಕತೆಯ ಆಡಿಯೊ ತುಣುಕು ವೈರಲ್ ಆಗಿದೆ. ಸಿದ್ದರಾಮಣ್ಣ ಕರೆಯುತ್ತಿದ್ದಾರೆ, ನಾನು ಕಾಂಗ್ರೆಸ್ ಸೇರುತ್ತಿದ್ದೇನೆ. ಮಂತ್ರಿ ಮಾಡುತ್ತೇನೆ, ಎಲ್ಲಾ ಅನುಕೂಲ ಮಾಡಿಕೊಡುತ್ತೇನೆ ಎಂದು ಸಿದ್ದರಾಮಯ್ಯ ಭರವಸೆ ಕೊಟ್ಟಿದ್ದಾರೆ ಎಂದು ದತ್ತ ಹೇಳಿದ್ದಾರೆ. ಕಳೆದ ಫೆಬ್ರುವರಿ ತಿಂಗಳಲ್ಲಿ ಕಡೂರು ಕ್ಷೇತ್ರದ ರಾಗಿ ಬೆಳೆಗಾರರ ಸಮಸ್ಯೆ ಕುರಿತು ವಿವರಿಸಲು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ದತ್ತ ಭೇಟಿಯಾಗಿದ್ದರು. ಈ ವೇಳೆ ದತ್ತ ಅವರನ್ನು ಕಾಂಗ್ರೆಸ್​ಗೆ ಸೇರಿಸಿಕೊಳ್ಳುವಂತೆ ಕಡೂರಿನಿಂದ ಬಂದಿದ್ದ ದತ್ತ ಬೆಂಬಲಿಗರು ಬಹಿರಂಗವಾಗಿಯೇ ಸಿದ್ದರಾಮಯ್ಯ ಅವರನ್ನು ಕೋರಿದರು. ಆದರೆ ಸಿದ್ದರಾಮಯ್ಯ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ.

ಭೇಟಿಯ ನಂತರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದ ಅವರು, ಬಹಿರಂಗವಾಗಿಯೇ ಜೆಡಿಎಸ್​ ನಿಲುವುಗಳನ್ನು ಟೀಕಿಸಿದ್ದರು. ಭಾರತೀಯ ಜನತಾ ಪಕ್ಷದ (ಬಿಜೆಪಿ) ವಿರುದ್ಧ ಜಾತ್ಯತೀತ ಜನತಾದಳದ (ಜೆಡಿಎಸ್) ಹೋರಾಟ ತೀವ್ರತೆ ಕಳೆದುಕೊಳ್ಳುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಬಿಜೆಪಿ ವಿರುದ್ಧ ಜೆಡಿಎಸ್ ಹೆಚ್ಚು ತೀವ್ರವಾಗಿ ಹೋರಾಟ ಮಾಡುತ್ತಿಲ್ಲ. ಪಕ್ಷದ ಜಾತ್ಯತೀತ ನಿಲುವು ಶಿಥಿಲವಾಗುತ್ತಿದೆ. ಪಕ್ಷದ ಸಿದ್ಧಾಂತ ಯಾವ ಕಾರಣಕ್ಕೂ ಬದಲಾಗಬಾರದು. ಎರಡೂ ರಾಷ್ಟ್ರೀಯ ಪಕ್ಷಗಳನ್ನು ಸಮಾನ ದೂರದಲ್ಲೇ ಇಡಬೇಕು. ಈ ಮೂಲಕ ಜಾತ್ಯತೀತ ನಿಲುವಿಗೆ ಬದ್ಧವಾಗಿರಬೇಕು. ಬಿಜೆಪಿ ವಿರುದ್ಧ ಜೆಡಿಎಸ್ ಸ್ಪಷ್ಟವಾಗಿ ಹೋರಾಟ ಮಾಡುತ್ತಿಲ್ಲ. ಇದನ್ನು ನಾನು ಪಕ್ಷದ ವೇದಿಕೆಯಲ್ಲಿಯೂ ಚರ್ಚಿಸಿದ್ದೇನೆ. ಜೆಡಿಎಸ್ ಪಕ್ಷಕ್ಕೆ ತನ್ನದೇ ಆದ ಸ್ಪಷ್ಟ ನಿಲುವು ಇರಬೇಕು ಎಂದು ಹೇಳಿದರು.

ವಿಧಾನಸೌಧದಲ್ಲಿ ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಪರೋಕ್ಷವಾಗಿ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಬಿಜೆಪಿಯನ್ನು ಜೆಡಿಎಸ್ ಸ್ಪಷ್ಟವಾಗಿ ವಿರೋಧಿಸುತ್ತಿಲ್ಲ ಎನ್ನುವ ಅಭಿಪ್ರಾಯ ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗಗಳಲ್ಲಿ ಇದೆ ಎಂದು ಹೇಳಿದ್ದರು. ಪಕ್ಷದ ನಿಲುವು ಒಂದೇ ರೀತಿಯಲ್ಲಿರಬೇಕು. ಅದು ಪದೇಪದೆ ಬದಲಾಗಬಾರದು. ಪಕ್ಷದ ನಿಲುವುಗಳಲ್ಲಿ ನಿರಂತರತೆ ಇರಬೇಕು. ನಮ್ಮ ನಿಲುವು ಸದಾ ಸಾಮಾಜಿಕ ನ್ಯಾಯದ ಪರವಾಗಿಯೇ ಇರಬೇಕು. ಹೀಗೆ ಇರುತ್ತದೆ ಎನ್ನುವ ಕಾರಣಕ್ಕೆ ನಾನು ಜೆಡಿಎಸ್​ನಲ್ಲಿ ಇಷ್ಟು ದೀರ್ಘ ಕಾಲ ಇದ್ದೇನೆ. ಆದರೆ ಇತ್ತೀಚೆಗೆ ಈ ನಿಲುವಿನಲ್ಲಿ ರಾಜಿ ಮಾಡಿಕೊಳ್ಳಲಾಗುತ್ತಿದೆ ಎಂಬ ಮನೋಭಾವ ಮತದಾರರಲ್ಲಿ ಮೂಡಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದರು.

ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ ಅವರು, ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಅವರ ವಿಚಾರ ಇಂದಿಗೂ ಸ್ಪಷ್ಟವಾಗಿಯೇ ಇದೆ. ಅವರ ನಿಲುವುಗಳ ಬಗ್ಗೆ ಯಾವುದೇ ಅನುಮಾನವಿಲ್ಲ. ಅವರು ಜಾತ್ಯತೀತರಾಗಿಯೇ ಎಲ್ಲ ಕಾಲದಲ್ಲಿಯೂ ತೀರ್ಮಾನಗಳನ್ನು ತೆಗೆದುಕೊಂಡಿದ್ದಾರೆ ಎಂದರು. ಎಚ್.ಡಿ.ಕುಮಾರಸ್ವಾಮಿ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನನಗೆ 20 ವರ್ಷವಿದ್ದಾಗ ದೇವೇಗೌಡರ ಅನುಯಾಯಿಯಾದೆ. ಈಗ ನನಗೆ 69 ವರ್ಷ ವಯಸ್ಸು. ಇಂದಿಗೂ ನಾನು ದೇವೇಗೌಡರ ಜೊತೆಗೆ ಹೆಚ್ಚು ಸಂಪರ್ಕದಲ್ಲಿದ್ದೇನೆ. ಅವರು ಏನು ಎಂಬುದು ನನಗೆ ಗೊತ್ತು ಎಂದಿದ್ದರು.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ