Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಶಾ ಕಾರ್ಯಕರ್ತೆಯರಿಗೆ ಸೌದಿ ಅರೇಬಿಯಾದ 500 ಮುಖಬೆಲೆಯ ನೋಟು ಹಂಚಿದ ಜಮೀರ್, ಭಾರತದಲ್ಲಿ ಅದರ ಮೌಲ್ಯ ಎಷ್ಟು ಗೊತ್ತಾ?

ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಖಾನ್ ಅವರು ಆಶಾ ಕಾರ್ಯಕರ್ತೆಯರಿಗೆ ಸೌದಿ ಅರೇಬಿಯಾದ 500 ಮುಖಬೆಲೆಯ ನೋಟು ಹಂಚಿ ಗಮನ ಸೆಳೆದಿದ್ದಾರೆ.

ಆಶಾ ಕಾರ್ಯಕರ್ತೆಯರಿಗೆ ಸೌದಿ ಅರೇಬಿಯಾದ 500 ಮುಖಬೆಲೆಯ ನೋಟು ಹಂಚಿದ ಜಮೀರ್,  ಭಾರತದಲ್ಲಿ ಅದರ ಮೌಲ್ಯ ಎಷ್ಟು ಗೊತ್ತಾ?
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Feb 26, 2023 | 3:27 PM

ಬೆಂಗಳೂರು: ಚಾಮರಾಜಪೇಟೆ ಶಾಸಕ ಜಮೀರ್ ಅಹಮ್ಮದ್ ಖಾನ್​  (BZ zameer ahmed khan) ಕಷ್ಟ ಅಂತ ಬಂದುವರಿಗೆ ಹಣ ಸಹಾಯ ಮಾಡಿ ಉದಾರತೆ ಮೆರೆಯುತ್ತಾರೆ. ಆದ್ರೆ, ಇದೀಗ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಬಿಬಿಎಂಪಿ ಆಶಾ ಕಾರ್ಯಕರ್ತೆಯರಿಗೆ ವಿದೇಶಿ ಹಣ ಹಂಚಿರುವುದು ಬಿಜೆಪಿ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಹೌದು…ಜಮೀರ್ ಅಹಮ್ಮದ್ ಖಾನ್ ಅವರು ಬೆಂಗಳೂರಿನ ಗೋರಿಪಾಳ್ಯದ ಪೋಸ್ಟ್ ಆಫೀಸ್ ಆವರಣದಲ್ಲಿ ಸೌದಿ ಅರೇಬಿಯಾದ 500 ಮುಖಬೆಲೆಯ ನೋಟು ನೀಡುವುದರ ಜೊತೆಗೆ ನ್ಯಾಷನಲ್ ಟ್ರಾವೆಲ್ಸ್​​ ಕಿಟ್ ವಿತರಣೆ ಮಾಡಿದ್ದಾರೆ.

ಬೆಂಗಳೂರಿನ ಗೋರಿಪಾಳ್ಯದ ಪೋಸ್ಟ್ ಆಫೀಸ್ ಆವರಣದಲ್ಲಿ ಸೌದಿ ಅರೇಬಿಯಾದ 500 ಮುಖಬೆಲೆಯ ನೋಟು ನೀಡಿ ಬಿಬಿಎಂಪಿಯ 46 ಆಶಾ ಕಾರ್ಯಕರ್ತೆಯರನ್ನು ಮೆಕ್ಕಾಗೆ ಕಳಿಸಿಕೊಟ್ಟರು. ಪಾದರಾಯನಪುರ ವಾರ್ಡ್​​​, ಜೆಜೆಆರ್ ನಗರದ ವಾರ್ಡ್ ಹಾಗೂ ರಾಯಪುರಂ ವಾರ್ಡ್ ಆಶಾ ಕಾರ್ಯಕರ್ತೆಯರಿಗೆ ವಿದೇಶಿ ನೋಟು ನೀಡಿದ್ದಾರೆ. ಜಮೀರ್ ಹಂಚಿದ ಸೌದಿ ಅರೇಬಿಯಾದ 5೦೦ ರೂ.ಗೆ ಭಾರತದಲ್ಲಿ 11ಸಾವಿರದ 34 ರೂಪಾಯಿ.

ಇನ್ನು ಹಣ ಹಂಚಿಕೆ ಮಾಡಿರುವ ಬಗ್ಗೆ ತಮ್ಮ ಅಧಿಕೃತ ಫೇಸ್​ಬುಕ್​ ಹಾಗೂ ಟ್ವಿಟ್ಟರ್​ನಲ್ಲಿ ಹಂಚಿಕೊಂಡಿದ್ದಾರೆ. ವಿದೇಶಿ ನೋಟು ಹಂಚಿಕೆಗೆ ಕ್ಷೇತ್ರದ ಬಿಜೆಪಿ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿದೆ. ಇವತ್ತು ವಿದೇಶಿ ನೋಟು ಹಂಚುತ್ತಾರೆ. ನಾಳೆ ಮತ್ತೊಂದು ಮಾಡುತ್ತಾರೆ. ಚುನಾವಣೆಯ ಸಮಯದಲ್ಲಿ ಮತದಾರರನ್ನ ಸೆಳೆಯುವ ಪ್ರಯತ್ನವಿದು. ಕೂಡಲೇ ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.

Published On - 3:12 pm, Sun, 26 February 23

ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ