AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಶಾ ಕಾರ್ಯಕರ್ತೆಯರಿಗೆ ಸೌದಿ ಅರೇಬಿಯಾದ 500 ಮುಖಬೆಲೆಯ ನೋಟು ಹಂಚಿದ ಜಮೀರ್, ಭಾರತದಲ್ಲಿ ಅದರ ಮೌಲ್ಯ ಎಷ್ಟು ಗೊತ್ತಾ?

ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಖಾನ್ ಅವರು ಆಶಾ ಕಾರ್ಯಕರ್ತೆಯರಿಗೆ ಸೌದಿ ಅರೇಬಿಯಾದ 500 ಮುಖಬೆಲೆಯ ನೋಟು ಹಂಚಿ ಗಮನ ಸೆಳೆದಿದ್ದಾರೆ.

ಆಶಾ ಕಾರ್ಯಕರ್ತೆಯರಿಗೆ ಸೌದಿ ಅರೇಬಿಯಾದ 500 ಮುಖಬೆಲೆಯ ನೋಟು ಹಂಚಿದ ಜಮೀರ್,  ಭಾರತದಲ್ಲಿ ಅದರ ಮೌಲ್ಯ ಎಷ್ಟು ಗೊತ್ತಾ?
TV9 Web
| Edited By: |

Updated on:Feb 26, 2023 | 3:27 PM

Share

ಬೆಂಗಳೂರು: ಚಾಮರಾಜಪೇಟೆ ಶಾಸಕ ಜಮೀರ್ ಅಹಮ್ಮದ್ ಖಾನ್​  (BZ zameer ahmed khan) ಕಷ್ಟ ಅಂತ ಬಂದುವರಿಗೆ ಹಣ ಸಹಾಯ ಮಾಡಿ ಉದಾರತೆ ಮೆರೆಯುತ್ತಾರೆ. ಆದ್ರೆ, ಇದೀಗ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಬಿಬಿಎಂಪಿ ಆಶಾ ಕಾರ್ಯಕರ್ತೆಯರಿಗೆ ವಿದೇಶಿ ಹಣ ಹಂಚಿರುವುದು ಬಿಜೆಪಿ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಹೌದು…ಜಮೀರ್ ಅಹಮ್ಮದ್ ಖಾನ್ ಅವರು ಬೆಂಗಳೂರಿನ ಗೋರಿಪಾಳ್ಯದ ಪೋಸ್ಟ್ ಆಫೀಸ್ ಆವರಣದಲ್ಲಿ ಸೌದಿ ಅರೇಬಿಯಾದ 500 ಮುಖಬೆಲೆಯ ನೋಟು ನೀಡುವುದರ ಜೊತೆಗೆ ನ್ಯಾಷನಲ್ ಟ್ರಾವೆಲ್ಸ್​​ ಕಿಟ್ ವಿತರಣೆ ಮಾಡಿದ್ದಾರೆ.

ಬೆಂಗಳೂರಿನ ಗೋರಿಪಾಳ್ಯದ ಪೋಸ್ಟ್ ಆಫೀಸ್ ಆವರಣದಲ್ಲಿ ಸೌದಿ ಅರೇಬಿಯಾದ 500 ಮುಖಬೆಲೆಯ ನೋಟು ನೀಡಿ ಬಿಬಿಎಂಪಿಯ 46 ಆಶಾ ಕಾರ್ಯಕರ್ತೆಯರನ್ನು ಮೆಕ್ಕಾಗೆ ಕಳಿಸಿಕೊಟ್ಟರು. ಪಾದರಾಯನಪುರ ವಾರ್ಡ್​​​, ಜೆಜೆಆರ್ ನಗರದ ವಾರ್ಡ್ ಹಾಗೂ ರಾಯಪುರಂ ವಾರ್ಡ್ ಆಶಾ ಕಾರ್ಯಕರ್ತೆಯರಿಗೆ ವಿದೇಶಿ ನೋಟು ನೀಡಿದ್ದಾರೆ. ಜಮೀರ್ ಹಂಚಿದ ಸೌದಿ ಅರೇಬಿಯಾದ 5೦೦ ರೂ.ಗೆ ಭಾರತದಲ್ಲಿ 11ಸಾವಿರದ 34 ರೂಪಾಯಿ.

ಇನ್ನು ಹಣ ಹಂಚಿಕೆ ಮಾಡಿರುವ ಬಗ್ಗೆ ತಮ್ಮ ಅಧಿಕೃತ ಫೇಸ್​ಬುಕ್​ ಹಾಗೂ ಟ್ವಿಟ್ಟರ್​ನಲ್ಲಿ ಹಂಚಿಕೊಂಡಿದ್ದಾರೆ. ವಿದೇಶಿ ನೋಟು ಹಂಚಿಕೆಗೆ ಕ್ಷೇತ್ರದ ಬಿಜೆಪಿ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿದೆ. ಇವತ್ತು ವಿದೇಶಿ ನೋಟು ಹಂಚುತ್ತಾರೆ. ನಾಳೆ ಮತ್ತೊಂದು ಮಾಡುತ್ತಾರೆ. ಚುನಾವಣೆಯ ಸಮಯದಲ್ಲಿ ಮತದಾರರನ್ನ ಸೆಳೆಯುವ ಪ್ರಯತ್ನವಿದು. ಕೂಡಲೇ ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.

Published On - 3:12 pm, Sun, 26 February 23

Follow Us
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ