AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adani Enterprises: ಅಪ್ಪರ್​ ಸರ್ಕ್ಯೂಟ್​​ನಲ್ಲಿ ಅದಾನಿ ಎಂಟರ್​ಪ್ರೈಸಸ್ ಷೇರು; ಮೌಲ್ಯದಲ್ಲಿ ಭಾರೀ ಜಿಗಿತ

ಅದಾನಿ ಎಂಟರ್​ಪ್ರೈಸಸ್ ಷೇರು ಮೌಲ್ಯ ಬುಧವಾರ ಮಧ್ಯಾಹ್ನದ ವಹಿವಾಟಿನಲ್ಲಿ ಶೇ 102ರಷ್ಟು ಹೆಚ್ಚಾಗಿ 2,049.60 ರೂ.ನಂತೆ ವಹಿವಾಟು ನಡೆಸುತ್ತಿದೆ.

Adani Enterprises: ಅಪ್ಪರ್​ ಸರ್ಕ್ಯೂಟ್​​ನಲ್ಲಿ ಅದಾನಿ ಎಂಟರ್​ಪ್ರೈಸಸ್ ಷೇರು; ಮೌಲ್ಯದಲ್ಲಿ ಭಾರೀ ಜಿಗಿತ
ಅದಾನಿ ಗ್ರೂಪ್ ಮತ್ತು ಗೌತಮ್ ಅದಾನಿ (ಸಂಗ್ರಹ ಚಿತ್ರ)
ಗಣಪತಿ ಶರ್ಮಾ
|

Updated on: Feb 08, 2023 | 2:30 PM

Share

ಮುಂಬೈ: ಅಮೆರಿಕದ ಹಿಂಡನ್​​​ಬರ್ಗ್​ ರಿಸರ್ಚ್ ಆರೋಪ ಮಾಡಿದ ಬಳಿಕ ಪಾತಾಳಕ್ಕೆ ಕುಸಿದಿದ್ದ ಅದಾನಿ ಸಮೂಹದ (Adani Group) ಪ್ರಮುಖ ಕಂಪನಿ ಅದಾನಿ ಎಂಟರ್​ಪ್ರೈಸಸ್ (Adani Enterprises) ಷೇರುಗಳು ಈಗ ಮತ್ತೆ ಅಪ್ಪರ್​​​​ ಸರ್ಕ್ಯೂಟ್​​ನಲ್ಲಿ ವಹಿವಾಟು ನಡೆಸುತ್ತಿವೆ. 52 ವಾರಗಳ ಕನಿಷ್ಠಕ್ಕೆ ಕುಸಿದಿದ್ದ ಕಂಪನಿಯ ಷೇರುಗಳು ಮತ್ತೆ ಪುಟಿದೆದ್ದು ಕೇವಲ ನಾಲ್ಕು ದಿನಗಳ ಟ್ರೇಡಿಂಗ್​​​ನಲ್ಲಿ ಮಲ್ಟಿ ಬ್ಯಾಗರ್ (multibagger) ಆಗಿ ಪರಿಣಮಿಸಿದೆ. ಇದರಿಂದ ಉದ್ಯಮಿ ಗೌತಮ್ ಅದಾನಿ (Gautam Adani) ನೇತೃತ್ವದ ಕಂಪನಿಗಳು ಮತ್ತೆ ಮಾರುಕಟ್ಟೆಯಲ್ಲಿ ಪುಟಿದೇಳುವ ಸೂಚನೆ ನೀಡಿವೆ. ಅದಾನಿ ಎಂಟರ್​ಪ್ರೈಸಸ್ ಷೇರು ಮೌಲ್ಯ ಬುಧವಾರ ಮಧ್ಯಾಹ್ನದ ವಹಿವಾಟಿನಲ್ಲಿ ಶೇ 102ರಷ್ಟು ಹೆಚ್ಚಾಗಿ 2,049.60 ರೂ.ನಂತೆ ವಹಿವಾಟು ನಡೆಸುತ್ತಿದೆ. ಫೆಬ್ರವರಿ 3ರಂದು ಕಂಪನಿಯ ಷೇರು 52 ವಾರಗಳ ಕನಿಷ್ಠಕ್ಕೆ ಕುಸಿದು 1,017.10 ರೂ.ನಲ್ಲಿ ವಹಿವಾಟು ನಡೆಸಿತ್ತು. ಮಂಗಳವಾರದ ವಹಿವಾಟಿನ ಅಂತ್ಯದ ವೇಳೆಗೆ ಕಂಪನಿಯ ಷೇರು ಮುಖಬೆಲೆ 1,802.50 ಆಗಿತ್ತು. ಇದಕ್ಕೆ ಹೋಲಿಸಿದರೆ ಬುಧವಾರ ಮಧ್ಯಾಹ್ನದ ವೇಳೆಗೆ ಶೇ 14ರಷ್ಟು ಏರಿಕೆ ದಾಖಲಿಸಿದೆ.

ಆದಾಗ್ಯೂ 52 ವಾರಗಳ ಗರಿಷ್ಠ ಮಟ್ಟದಲ್ಲಿ, ಅಂದರೆ 2022ರ ಡಿಸೆಂಬರ್​​ನಲ್ಲಿ 4,189.55 ರೂ.ನಲ್ಲಿ ವಹಿವಾಟು ನಡೆಸಿದ್ದಕ್ಕೆ ಹೋಲಿಸಿದರೆ ಈಗ ಷೇರು ಮೌಲ್ಯ ಶೇ 51ರಷ್ಟು ಕುಸಿತದಲ್ಲಿದೆ. ತಿಂಗಳ ಅವಧಿಯಲ್ಲಿ ಷೇರು ಮೌಲ್ಯ ಶೇ 46ರಷ್ಟು ಕುಸಿತ ಕಂಡಿದೆ.

ಇದನ್ನೂ ಓದಿ: Repo Rate: ಆರ್​ಬಿಐ ಹಣಕಾಸು ನೀತಿ, ರೆಪೊ ದರ, ರಿವರ್ಸ್ ರೆಪೊ ದರ ಎಂದರೇನು? ಇಲ್ಲಿದೆ ಪೂರ್ತಿ ವಿವರ

ಅದಾನಿ ಎಂಟರ್​ಪ್ರೈಸಸ್ ಮಾರುಕಟ್ಟೆ ಬಂಡವಾಳ ಹೊಂದಿದ್ದ ಒಟ್ಟು 2.35 ಲಕ್ಷ ಕೋಟಿ ರೂ. ಇದ್ದದ್ದು ಈಗ ಮೌಲ್ಯ ಕುಸಿತದ ಪರಿಣಾಮ 1.16 ಲಕ್ಷ ಕೋಟಿ ರೂ. ಆಗಿದೆ. ಅದಾನಿ ಸಮೂಹದ ಕಂಪನಿಗಳ ಪೈಕಿ 9ರ ಷೇರು ಮೌಲ್ಯದಲ್ಲಿ ಬುಧವಾರ ಚೇತರಿಕೆ ಕಂಡಿದೆ. ಕೇವಲ ಅದಾನಿ ಟೋಟಲ್ ಗ್ಯಾಸ್ ಷೇರುಗಳು ಮಾತ್ರ ಶೇ 5ರ ಮೌಲ್ಯ ಕುಸಿತದೊಂದಿಗೆ ವಹಿವಾಟು ನಡೆಸುತ್ತಿವೆ.

ಹಿಂಡನ್​​ಬರ್ಗ್ ಆರೋಪದಿಂದ ತತ್ತರಿಸಿದ್ದ ಅದಾನಿ ಸಮೂಹ ಆ ವ್ಯೂಹದಿಂದ ಹೊರಬಂದು ಮತ್ತೆ ಲಾಭದ ಹಾದಿಗೆ ಮರಳಲು ಶತಾಯಗತಾಯ ಯತ್ನಿಸುತ್ತಿದೆ. ಈ ಪ್ರಯತ್ನದ ಭಾಗವಾಗಿ ಅವಧಿಪೂರ್ವ ಸಾಲ ಮರು ಪಾವತಿ ಬಗ್ಗೆ ಕೆಲವು ದಿನಗಳ ಹಿಂದಷ್ಟೇ ಅದಾನಿ ಸಮೂಹ ಘೋಷಿಸಿತ್ತು. ಹೂಡಿಕೆದಾರರಲ್ಲಿ ಮತ್ತೆ ಭರವಸೆ ಮೂಡಿಸುವ ಸಲುವಾಗಿ ಕಂಪನಿ ಈ ಕ್ರಮ ಕೈಗೊಂಡಿತ್ತು. ಇದರ ಬೆನ್ನಲ್ಲೇ ಅದಾನಿ ಸಮೂಹದ ಹೆಚ್ಚಿನ ಕಂಪನಿಗಳ ಷೇರು ಮೌಲ್ಯದಲ್ಲಿ ಚೇತರಿಕೆ ಕಾಣಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!