AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Stock Market: ಷೇರುಪೇಟೆ ವಹಿವಾಟಿಗೆ ಇಂದು ಬಿಡುವು; ಕಾರಣವೇನು?

ವಾರದ ಮೊದಲ ದಿನ ಉತ್ತಮ ವಹಿವಾಟು ನಡೆಸಿದ್ದ ಷೇರುಪೇಟೆಗೆ ಇಂದು ಬಿಡುವು. ಬಿಎಸ್​ಇ ಹಾಗೂ ಎನ್​ಎಸ್​ಇ ಮಾರುಕಟ್ಟೆಗಳಿಗೆ ಇಂದು ಗುರು ನಾನಕ್ ಜಯಂತಿ ಪ್ರಯುಕ್ತ ರಜೆ ಇದ್ದು, ವಹಿವಾಟು ನಡೆಯುವುದಿಲ್ಲ. ಮಲ್ಟಿ ಕಮಾಡಿಟಿ ಎಕ್ಸ್​ಚೇಂಜ್ ಮೊದಲ ಅವಧಿಗೆ ರಜೆ ಇರಲಿದ್ದು, ಸಂಜೆ 5 ಗಂಟೆಗೆ ಟ್ರೇಡಿಂಗ್ ನಡೆಯಲಿದೆ.

Stock Market: ಷೇರುಪೇಟೆ ವಹಿವಾಟಿಗೆ ಇಂದು ಬಿಡುವು; ಕಾರಣವೇನು?
ಬಿಎಸ್​ಇ (ಸಾಂದರ್ಭಿಕ ಚಿತ್ರ)
Follow us
TV9 Web
| Updated By: Ganapathi Sharma

Updated on: Nov 08, 2022 | 10:05 AM

ಮುಂಬೈ: ವಾರದ ಮೊದಲ ದಿನ ಉತ್ತಮ ವಹಿವಾಟು ನಡೆಸಿದ್ದ ಷೇರುಪೇಟೆಗೆ (Stock Market) ಇಂದು ಬಿಡುವು. ಬಿಎಸ್​ಇ ಹಾಗೂ ಎನ್​ಎಸ್​ಇ ಮಾರುಕಟ್ಟೆಗಳಿಗೆ ಇಂದು ಗುರು ನಾನಕ್ ಜಯಂತಿ (Guru Nanak Jayanti) ಪ್ರಯುಕ್ತ ರಜೆ ಇದೆ. ಹೀಗಾಗಿ ಮಂಗಳವಾರ ಪೂರ್ಣಾವಧಿಗೆ ಯಾವುದೇ ರೀತಿಯ ಷೇರು ವಹಿವಾಟು ನಡೆಯುವುದಿಲ್ಲ ಎಂದು ಉಭಯ ಮಾರುಕಟ್ಟೆಗಳ ವೆಬ್​ಸೈಟ್​ಗಳಲ್ಲಿ ಪ್ರಕಟಣೆ ನೀಡಲಾಗಿದೆ. ಕರೆನ್ಸಿ ವಹಿವಾಟಿಗೂ ಇಂದು ಬಿಡುವು ಇದೆ.

ಮಲ್ಟಿ ಕಮಾಡಿಟಿ ಎಕ್ಸ್​ಚೇಂಜ್ (MCX) ಮೊದಲ ಅವಧಿಗೆ ರಜೆ ಇರಲಿದ್ದು, ಸಂಜೆ 5 ಗಂಟೆಗೆ ಟ್ರೇಡಿಂಗ್ ಆರಂಭವಾಗಲಿದೆ. ನವೆಂಬರ್ 9ರಂದು, ಅಂದರೆ ಬುಧವಾರ ಎಲ್ಲ ರೀತಿಯ ವಹಿವಾಟುಗಳು ಎಂದಿನಂತೆ ನಡೆಯಲಿದೆ ಎಂದು ಬಿಎಸ್​ಇ ಹಾಗೂ ಎನ್​ಎಸ್​ಇ ವೆಬ್​ಸೈಟ್​ಗಳಲ್ಲಿ ತಿಳಿಸಲಾಗಿದೆ.

ಮತ್ತೆ 61,000 ಗಡಿ ದಾಟಿದ ಸೆನ್ಸೆಕ್ಸ್

ಇದನ್ನೂ ಓದಿ
Image
Petrol Price on November 7: ಕಚ್ಚಾ ತೈಲದ ಬೆಲೆ ಇಳಿಕೆಯಾದರೂ ಕುಸಿತವಾಗಿಲ್ಲ ಪೆಟ್ರೋಲ್, ಡೀಸೆಲ್ ದರ
Image
ನೋಟು ಅಮಾನ್ಯೀಕರಣದ 6 ವರ್ಷಗಳ ನಂತರವೂ ಜನರಲ್ಲಿರುವ ನಗದು ₹ 30.88 ಲಕ್ಷ ಕೋಟಿ
Image
Personal Finance: ಮನಿ9 ಭಾರತದ ಮೊದಲ ಮತ್ತು ಅತಿದೊಡ್ಡ ಸ್ವತಂತ್ರ ಪರ್ಸನಲ್ ಫೈನಾನ್ಸ್​ ಸಮೀಕ್ಷೆಯ ಅವಲೋಕನ
Image
Bank Holidays: ಬ್ಯಾಂಕ್ ಗ್ರಾಹಕರೇ ಗಮನಿಸಿ; ನ. 7ರಿಂದ 1 ವಾರದೊಳಗೆ 5 ದಿನ ಬ್ಯಾಂಕ್​ಗಳಿಗೆ ರಜೆ

ಸೋಮವಾರದ ವಹಿವಾಟಿನಲ್ಲಿ ಉತ್ತಮ ಗಳಿಕೆ ದಾಖಲಿಸಿದ್ದ ಬಿಎಸ್​ಇ ಸೆನ್ಸೆಕ್ಸ್ ಮತ್ತೆ 61 ಸಾವಿರ ಗಡಿ ದಾಟಿತ್ತು. ನಿಫ್ಟಿ ಬಹು ನಿರೀಕ್ಷಿತ 18 ಸಾವಿರ ಗಡಿ ದಾಟಿತ್ತು. ವಹಿವಾಟಿನ ಕೊನೆಯಲ್ಲಿ ಬಿಎಸ್​ಇ 234.79 ಅಂಶ ಚೇತರಿಸಿ 61,185.15 ತಲುಪಿತು. ಎನ್​ಎಸ್​ಇ ನಿಫ್ಟಿ 85.65 ಅಂಶ ಚೇತರಿಸಿ 18,202.80 ಆಯಿತು. ಕಳೆದ ವಾರ ಮಧ್ಯದಲ್ಲಿ ಬಿಎಸ್​​ಇ 61,000 ಗಡಿ ದಾಟಿತ್ತು. ಆದರೆ, ನಂತರ ತುಸು ಕುಸಿದು ಮತ್ತೆ 60,000ಕ್ಕಿಂತ ಕೆಳಗೆ ವಹಿವಾಟು ದಾಖಲಿಸಿತ್ತು.

ಹರಿದು ಬರುತ್ತಿದೆ ವಿದೇಶಿ ಹೂಡಿಕೆ

ಕಳೆದ ಕೆಲವು ತಿಂಗಳುಗಳಿಂದಲೂ ದೇಶೀಯ ಷೇರುಪೇಟೆಗಳಲ್ಲಿ ಷೇರುಗಳ ಮಾರಾಟ ಮಾಡಿ ಬಂಡವಾಳ ಹಿಂಪಡೆಯುತ್ತಿದ್ದ ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಜಾಗತಿಕ ಮಾರುಕಟ್ಟೆಗಳ ತಲ್ಲಣದಿಂದಾಗಿ ಮತ್ತೆ ಹೂಡಿಕೆ ಆರಂಭಿಸಿದ್ದಾರೆ. ಅಮೆರಿಕದ ಫೆಡರಲ್ ಬ್ಯಾಂಕ್ ಬಡ್ಡಿ ದರ ಹೆಚ್ಚಿಸಿರುವುದು, ಇತರ ದೇಶಗಳ ಕೇಂದ್ರೀಯ ಬ್ಯಾಂಕ್​ಗಳು ಬಡ್ಡಿ ದರ ಹೆಚ್ಚಿಸುತ್ತಿರುವುದು, ಯುರೋಪ್​ನಲ್ಲಿ ಕೈಗೊಳ್ಳಲಾಗುತ್ತಿರುವ ಕಠಿಣ ಕ್ರಮ, ರೂಪಾಯಿ ಮೌಲ್ಯದಲ್ಲಿ ಗಣನೀಯ ಚೇತರಿಕೆ ಇತ್ಯಾದಿ ಕಾರಣಗಳಿಂದಾಗಿ ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಮತ್ತೆ ಭಾರತದ ಮಾರುಕಟ್ಟೆಗಳತ್ತ ಮುಖಮಾಡಿದ್ದಾರೆ.

ಇದನ್ನೂ ಓದಿ: Credit Card Closure: ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುವುದು ಹೇಗೆ? ಇಲ್ಲಿದೆ ಪೂರ್ತಿ ವಿವರ

ಸೋಮವಾರ ಬೆಳಿಗ್ಗಿನ ವಹಿಟು ಸೇರಿದಂತೆ ಅದಕ್ಕೂ ಮೊದಲಿನ ಒಟ್ಟು 10 ಸೆಷನ್​​ಗಳಲ್ಲಿ ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಭಾರತೀಯ ಮಾರುಕಟ್ಟೆಗಳಲ್ಲಿ ಸುಮಾರು 3 ಶತಕೋಟಿ ಡಾಲರ್ ಹೂಡಿಕೆ ಮಾಡಿದ್ದಾರೆ. ಅಕ್ಟೋಬರ್ 20ರಿಂದ ನವೆಂಬರ್ 2ರ ಅವಧಿಯಲ್ಲಿ ವಿದೇಶಿ ಸಾಂಸ್ಥಿಕ ಹೂಡಿಕೆದಾರರು 2.74 ಶತಕೋಟಿ ಡಾಲರ್ ಹೂಡಿಕೆ ಮಾಡಿದ್ದಾರೆ. ನವೆಂಬರ್​ 3ರಂದು ಒಂದೇ ದಿನ 677 ಕೋಟಿ ಮೌಲ್ಯದ ಭಾರತೀಯ ಷೇರುಗಳನ್ನು ಖರೀದಿಸಿದ್ದರು. ಇದು ಭಾರತೀಯ ಮಾರುಕಟ್ಟೆಗಳಲ್ಲಿ ಆಶಾವಾದ ಮೂಡಿಸಿದೆ.

ಇನ್ನು ಕಳೆದ ವಾರದ ಒಟ್ಟು ವಹಿವಾಟಿನ ಬಗ್ಗೆ ಹೇಳುವುದಾದರೆ, ವಾರದ ಅವಧಿಯಲ್ಲಿ ಸೆನ್ಸೆಕ್ಸ್ 990.51ರ ಚೇತರಿಕೆ ದಾಖಲಿಸಿದ್ದು, ಶೇಕಡಾ 1.65ರ ಬೆಳವಣಿಗೆ ಸಾಧಿಸಿತ್ತು. ನಿಫ್ಟಿ 330.35 ಅಂಶ ಚೇತರಿಸಿ ಶೇಕಡಾ 1.85ರ ವೃದ್ಧಿ ದಾಖಲಿಸಿತ್ತು. ಆರೋಗ್ಯ, ಐಟಿ, ಟೆಕ್ ಕ್ಷೇತ್ರದ ಷೇರುಗಳ ಮೌಲ್ಯದಲ್ಲಿ ಕುಸಿತವಾಗಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?