AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Stock Market Updates: ಹಬ್ಬದ ಉತ್ಸಾಹದಲ್ಲಿ ಷೇರುಪೇಟೆ, ನಾಲ್ಕನೇ ದಿನವೂ ಗಳಿಕೆಯ ಓಟ

ಹಬ್ಬದ ಉತ್ಸಾಹದಲ್ಲಿರುವ ಭಾರತೀಯ ಷೇರುಪೇಟೆ ಸತತ ನಾಲ್ಕನೇ ದಿನವೂ ಗಳಿಕೆಯ ಓಟ ಮುಂದುವರಿಸಿದೆ. ಅಮೆರಿಕದ ಮಾರುಕಟ್ಟೆಯಲ್ಲಿನ ಬೆಳವಣಿಗೆಗಳು ಹಾಗೂ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಿಂದಾಗಿ ಷೇರುಪೇಟೆಯಲ್ಲಿ ಸಕಾರಾತ್ಮಕ ವಹಿವಾಟು ಕಂಡುಬಂದಿದೆ. ಬುಧವಾರ ಬೆಳಿಗ್ಗೆ 9.44ರ ವೇಳೆಗೆ ಸೆನ್ಸೆಕ್ಸ್ 313.17 ಅಂಶ ಚೇತರಿಸಿ 59,273.77 ರಲ್ಲಿ ವಹಿವಾಟು ನಡೆಸಿತು. ನಿಫ್ಟಿ 89.05 (ಶೇಕಡಾ 0.51) ರ ಏರಿಕೆ ಕಂಡು 17,576.00ರಲ್ಲಿ ವಹಿವಾಟು ನಡೆಸಿತು.

Stock Market Updates: ಹಬ್ಬದ ಉತ್ಸಾಹದಲ್ಲಿ ಷೇರುಪೇಟೆ, ನಾಲ್ಕನೇ ದಿನವೂ ಗಳಿಕೆಯ ಓಟ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
| Edited By: |

Updated on:Apr 03, 2026 | 2:21 PM

Share

ನವದೆಹಲಿ: ಹಬ್ಬದ (Festival) ಉತ್ಸಾಹದಲ್ಲಿರುವ (Diwali) ಭಾರತೀಯ ಷೇರುಪೇಟೆ (Stock Market) ಸತತ ನಾಲ್ಕನೇ ದಿನವೂ ಗಳಿಕೆಯ ಓಟ ಮುಂದುವರಿಸಿದೆ. ಅಮೆರಿಕದ ಮಾರುಕಟ್ಟೆಯಲ್ಲಿನ ಬೆಳವಣಿಗೆಗಳು ಹಾಗೂ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಿಂದಾಗಿ ಷೇರುಪೇಟೆಯಲ್ಲಿ ಸಕಾರಾತ್ಮಕ ವಹಿವಾಟು ಕಂಡುಬಂದಿದೆ. ಬುಧವಾರ ಬೆಳಿಗ್ಗೆ 9.44ರ ವೇಳೆಗೆ ಸೆನ್ಸೆಕ್ಸ್ 313.17 ಅಂಶ ಚೇತರಿಸಿ 59,273.77 ರಲ್ಲಿ ವಹಿವಾಟು ನಡೆಸಿತು. ನಿಫ್ಟಿ 89.05 (ಶೇಕಡಾ 0.51) ರ ಏರಿಕೆ ಕಂಡು 17,576.00ರಲ್ಲಿ ವಹಿವಾಟು ನಡೆಸಿತು.

‘ಅಮೆರಿಕದ ಮಾರುಕಟ್ಟೆಯಲ್ಲಿ ನಿನ್ನೆಯ ವಹಿವಾಟು ಸಕಾರಾತ್ಮಕವಾಗಿ ಕೊನೆಗೊಂಡಿತ್ತು. ಕಾರ್ಪೊರೇಟ್ ಗಳಿಕೆಯು ಈ ವಾರದ ವಹಿವಾಟಿಗೆ ಪೂರಕವಾಗಿ ಪರಿಣಮಿಸಿದೆ. ಏಷ್ಯಾದ ಮಾರುಕಟ್ಟೆಗಳಲ್ಲಿ ಸಕಾರಾತ್ಮಕ ವಹಿವಾಟು ನಡೆಯುತ್ತಿದೆ’ ಎಂದು ಹೆಮ್ ಸೆಕ್ಯೂರಿಟೀಸ್​ನ ಮುಖ್ಯಸ್ಥ, ಫಂಡ್ ಮ್ಯಾನೇಜರ್ ಮೋಹಿತ್ ನಿಗಮಗ ಹೇಳಿದ್ದಾರೆ.

ಇದನ್ನೂ ಓದಿ: Stock Market Today: ಸೆನ್ಸೆಕ್ಸ್ 550 ಅಂಶ ಚೇತರಿಕೆ, 17,486ರಲ್ಲಿ ವಹಿವಾಟು ಮುಗಿಸಿದ ನಿಫ್ಟಿ

ಇದನ್ನೂ ಓದಿ
Image
Gold Price Today: ಚಿನ್ನದ ದರ 40 ರೂಪಾಯಿ ಇಳಿಕೆ, ಬೆಳ್ಳಿ ದರವೂ ಕುಸಿತ
Image
Stock Market Today: ಸೆನ್ಸೆಕ್ಸ್ 550 ಅಂಶ ಚೇತರಿಕೆ, 17,486ರಲ್ಲಿ ವಹಿವಾಟು ಮುಗಿಸಿದ ನಿಫ್ಟಿ
Image
SBI Interest Rate Hike: ಉಳಿತಾಯ ಖಾತೆ ಬಡ್ಡಿ ದರ ಹೆಚ್ಚಿಸಿದ ಎಸ್​ಬಿಐ

ಗೋಧಿ ಸೇರಿದಂತೆ ಆರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರದ ನಿರ್ಧಾರದಿಂದ ಕೃಷಿ ಕ್ಷೇತ್ರಕ್ಕೆ ಉತ್ತೇಜನ ದೊರೆಯಲಿದೆ. ಇದೂ ಸಹ ಮಾರುಕಟ್ಟೆ ಮೇಲೆ ಪರಿಣಾಮ ಬೀರಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

2023-24 ರ ಹಣಕಾಸು ವರ್ಷದಲ್ಲಿ ಎಲ್ಲಾ ರಾಬಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳನ್ನು ಹೆಚ್ಚಿಸುವ ಪ್ರಸ್ತಾವನೆಗೆ ಕೇಂದ್ರ ಸಂಪುಟ ಮಂಗಳವಾರ ಅನುಮೋದನೆ ನೀಡಿತ್ತು. ಪ್ರತಿ ಕ್ವಿಂಟಾಲ್‌ಗೆ 500 ರೂ.ವರೆಗೆ ಗರಿಷ್ಠ ಹೆಚ್ಚಳವನ್ನು ಅನುಮೋದಿಸಲಾಗಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಮಾಹಿತಿ ನೀಡಿದ್ದರು.

ದೀಪಾವಳಿ ಸೀಸನ್​ನಲ್ಲಿ ಅಪೋಲೊ ಹಾಸ್ಪಿಟಲ್, ಅವೆನ್ಯೂ ಸೂಪರ್​ಮಾರ್ಟ್, ಭಾರ್ತಿ ಏರ್​ಟೆಲ್, ಐಸಿಐಸಿಐ ಬ್ಯಾಂಕ್, ಮಹೀಂದ್ರಾ & ಮಹೀಂದ್ರಾ ಲಾರ್ಜ್ ಕ್ಯಾಪ್ ಷೇರುಗಳನ್ನು ಖರೀದಿಸಬಹುದು ಎಂದು ಪ್ರಭುದಾಸ್ ಲಿಲ್ಲಾಧರ್ ಬ್ರೋಕರೇಜ್ ಸಂಸ್ಥೆ ಶಿಫಾರಸು ಮಾಡಿದೆ. ಮಿಡ್​​ಕ್ಯಾಪ್ ಮತ್ತು ಸ್ಮಾಲ್​ಕ್ಯಾಪ್ ವಿಭಾಗದಲ್ಲಿ ಅಶೋಕ್ ಲೇಲ್ಯಾಂಡ್, ಚಂಬಲ್ ಫರ್ಟಿಲೈಸರ್ಸ್ ಆ್ಯಂಡ್ ಕೆಮಿಕಲ್ಸ್, ಫೆಡರಲ್ ಬ್ಯಾಂಕ್, ಜುಬಿಲಿಯೆಂಟ್ ಇನ್​ಗ್ರೇವಿಯಾ, ವಿಐಪಿ ಇಂಡಸ್ಟ್ರೀಸ್, ವೆಸ್ಟ್​ಲೈಫ್ ಡೆವಲಪ್​ಮೆಂಟ್ ಷೇರುಗಳನ್ನು ಸಂಸ್ಥೆ ಶಿಫಾರಸು ಮಾಡಿದೆ.

ಮಂಗಳವಾರದ ವಹಿವಾಟಿನ ಅಂತ್ಯದಲ್ಲಿ ಬಿಎಸ್​ಇ 549.62 ಅಂಶ ಚೇತರಿಕೆಯೊಂದಿಗೆ 58,960.60ರಲ್ಲಿ ವಹಿವಾಟು ಮುಕ್ತಾಯಗೊಳಿಸಿತ್ತು. ನಿಫ್ಟಿ ಸತತ ಮೂರನೇ ದಿನ ಉತ್ತಮ ವಹಿವಾಟು ದಾಖಲಿಸಿ ಶೇಕಡಾ 1ರ ಚೇತರಿಕೆ ಕಂಡಿತ್ತು. 175.15 ಅಂಶ ಚೇತರಿಕೆಯೊಂದಿಗೆ 17,486.95ರಲ್ಲಿ ದಿನದ ವಹಿವಾಟು ಅಂತ್ಯಗೊಳಿಸಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:08 am, Wed, 19 October 22

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್