AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Stock Market Update: ಷೇರುಪೇಟೆಯಲ್ಲಿ ಭರ್ಜರಿ ವಹಿವಾಟು; ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿ ಸೆನ್ಸೆಕ್ಸ್, ನಿಫ್ಟಿ

ಸೆನ್ಸೆಕ್ಸ್​ನಲ್ಲಿ ಹಿಂದೂಸ್ತಾನ್ ಯುನಿಲೀವರ್, ಸನ್ ಫಾರ್ಮಾ, ನೆಸ್ಲೆ, ಡಾ. ರೆಡ್ಡೀಸ್, ಟಾಟಾ ಸ್ಟೀಲ್, ಐಸಿಐಸಿಐ ಬ್ಯಾಂಕ್, ಟೈಟಾನ್ ಹಾಗೂ ಎಚ್​ಸಿಎಲ್ ಟೆಕ್ನಾಲಜೀಸ್ ಗಳಿಕೆಯ ಓಟ ಮುಂದುವರಿಸಿವೆ. ಇಂಡಸ್​ಇಂಡ್ ಬ್ಯಾಂಕ್, ಬಜಾಜ್ ಫಿನ್​ಸರ್ವ್, ಮಾರುತಿ, ಪವರ್ ಗ್ರಿಡ್, ಎಲ್​ಆ್ಯಂಡ್​ಟಿ ಷೇರು ಮೌಲ್ಯದಲ್ಲಿ ಕುಸಿತವಾಗಿದೆ.

Stock Market Update: ಷೇರುಪೇಟೆಯಲ್ಲಿ ಭರ್ಜರಿ ವಹಿವಾಟು; ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿ ಸೆನ್ಸೆಕ್ಸ್, ನಿಫ್ಟಿ
ಬಿಎಸ್​ಇ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Nov 29, 2022 | 6:00 PM

Share

ಮುಂಬೈ: ದೇಶೀಯ ಷೇರುಪೇಟೆಗಳು (Stock Markets) ಸತತ ಆರನೇ ದಿನ ಗಳಿಕೆಯ ಓಟ ಮುಂದುವರಿಸಿವೆ. ಬಿಎಸ್​ಇ ಸೆನ್ಸೆಕ್ಸ್ (BSE Sensex) ಹಾಗೂ ಎನ್​ಎಸ್​ಇ ನಿಫ್ಟಿ (NSE Nifty) ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿ ಮಂಗಳವಾರ ದಿನದ ವಹಿವಾಟು ಕೊನೆಗೊಳಿಸಿವೆ. ವಿದೇಶಿ ಹೂಡಿಕೆ ಒಳಹರಿವು, ಏಷ್ಯಾದ ಮಾರುಕಟ್ಟೆಗಳ ವಹಿವಾಟಿನ ಪರಿಣಾಮ ದೇಶೀಯ ಷೇರುಪೇಟೆಗಳ ಮೇಲೆ ಉಂಟಾಗಿದ್ದು, ಹೂಡಿಕೆದಾರರಲ್ಲಿ ಸಂತಸ ಮೂಡಿಸಿದೆ. ಬಿಎಸ್​ಇ ಸೆನ್ಸೆಕ್ಸ್ 177.04 ಅಂಶ ಚೇತರಿಸಿ 62,681.84ರಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿ ದಿನದ ವಹಿವಾಟು ಮುಗಿಸಿದೆ. ಒಂದು ಹಂತದಲ್ಲಿ ಸೆನ್ಸೆಕ್ಸ್ 62,887.40ರಲ್ಲಿ ವಹಿವಾಟು ನಡೆಸಿತ್ತು. ಎನ್​ಎಸ್​ಇ ನಿಫ್ಟಿ 55.30 ಅಂಶ ಚೇತರಿಸಿ 18,618.05ರಲ್ಲಿ, ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿ ವಹಿವಾಟು ಕೊನೆಗೊಳಿಸಿದೆ.

‘ಗಳಿಕೆಯ ಓಟ ಸತತ ಆರನೇ ದಿನವೂ ಮುಂದುವರಿದಿರುವುದರಿಂದ, ಮಾರುಕಟ್ಟೆಗಳು ಗರಿಷ್ಠ ಮಟ್ಟ ತಲುಪಿರುವ ಸಂದರ್ಭದಲ್ಲಿ ಹೂಡಿಕೆದಾರರು ಎಚ್ಚರಿಕೆಯ ನಡೆ ಅನುಸರಿಸಿದ್ದಾರೆ. ಸದ್ಯ ಮಾರುಕಟ್ಟೆ ಉತ್ತಮ ವಹಿವಾಟು ನಡೆಸುತ್ತಿದ್ದರೂ ಕಟ್ಟುನಿಟ್ಟಾದ ಲಾಕ್‌ಡೌನ್‌ ವಿರುದ್ಧ ಚೀನಾದಲ್ಲಿ ಹೆಚ್ಚುತ್ತಿರುವ ಪ್ರತಿಭಟನೆಗಳು ಹೂಡಿಕೆದಾರರಲ್ಲಿ ಸಣ್ಣ ಮಟ್ಟಿನ ಆತಂಕಕ್ಕೆ ಕಾರಣವಾಗಿದೆ ಎಂದು ಮಾರುಕಟ್ಟೆ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: Stock Markets: ಸಾರ್ವಕಾಲಿಕ ಗರಿಷ್ಠ ಮಟ್ಟದತ್ತ ನಿಫ್ಟಿ ನಾಗಾಲೋಟ; ಮುಂದುವರಿದ ಸೆನ್ಸೆಕ್ಸ್ ಓಟ

‘ಪರಿಸ್ಥಿತಿ ಸುಧಾರಿಸದಿದ್ದರೆ, ಮಾರುಕಟ್ಟೆಯ ಮೇಲೆ ಪರಿಣಾಮ ಉಂಟಾಗಬಹುದು. ಆದರೆ ಇತರ ಪ್ರಮುಖ ಆರ್ಥಿಕತೆಗಳಿಗೆ ಹೋಲಿಸಿದರೆ ಭಾರತ ತುಸು ಉತ್ತಮ ಸ್ಥಿತಿಯಲ್ಲಿರುವುದರಿಂದ ಹೂಡಿಕೆದಾರರು ದೇಶಿ ಮಾರುಕಟ್ಟೆಗಳಲ್ಲಿ ಹೆಚ್ಚಿನ ಹೂಡಿಕೆಗೆ ಸಿದ್ಧರಾಗಿದ್ದಾರೆ’ ಎಂದು ಕೋಟಕ್ ಸೆಕ್ಯುರಿಟೀಸ್​​ನ ಈಕ್ವಿಟಿ ಸಂಶೋಧನಾ ಮುಖ್ಯಸ್ಥ ಶ್ರೀಕಾಂತ್ ಚೌಹಾಣ್ ತಿಳಿಸಿದ್ದಾರೆ.

ಇಲ್ಲಿದೆ ಲಾಭ, ನಷ್ಟದ ಲೆಕ್ಕಾಚಾರ

ಸೆನ್ಸೆಕ್ಸ್​ನಲ್ಲಿ ಹಿಂದೂಸ್ತಾನ್ ಯುನಿಲೀವರ್, ಸನ್ ಫಾರ್ಮಾ, ನೆಸ್ಲೆ, ಡಾ. ರೆಡ್ಡೀಸ್, ಟಾಟಾ ಸ್ಟೀಲ್, ಐಸಿಐಸಿಐ ಬ್ಯಾಂಕ್, ಟೈಟಾನ್ ಹಾಗೂ ಎಚ್​ಸಿಎಲ್ ಟೆಕ್ನಾಲಜೀಸ್ ಗಳಿಕೆಯ ಓಟ ಮುಂದುವರಿಸಿವೆ. ಇಂಡಸ್​ಇಂಡ್ ಬ್ಯಾಂಕ್, ಬಜಾಜ್ ಫಿನ್​ಸರ್ವ್, ಮಾರುತಿ, ಪವರ್ ಗ್ರಿಡ್, ಎಲ್​ಆ್ಯಂಡ್​ಟಿ ಷೇರು ಮೌಲ್ಯದಲ್ಲಿ ಕುಸಿತವಾಗಿದೆ.

ಬಿಎಸ್​ಇ ಮಿಡ್​ಕ್ಯಾಪ್ ಶೇಕಡಾ 0.39ರಷ್ಟು ಕುಸಿದಿದ್ದರೆ, ಸ್ಮಾಲ್​ಕ್ಯಾಪ್ ಇಂಡೆಕ್ಸ್ ಕೂಡ ಶೇಕಡಾ 0.29ರಷ್ಟು ಕುಸಿತ ದಾಖಲಿಸಿದೆ. ಗ್ರಾಹಕ ಸೇವೆ, ಇಂಧನ, ಕೈಗಾರಿಕೆ, ಟೆಲಿಕಮ್ಯುನಿಕೇಷನ್, ಆಟೊ ಹಾಗೂ ಸೇವಾ ಕ್ಷೇತ್ರದ ಕಂಪನಿಗಳ ಷೇರು ಮೌಲ್ಯದಲ್ಲಿ ಕುಸಿತ ಕಂಡುಬಂತು.

ಏಷ್ಯಾದಾದ್ಯಂತ ಷೇರು ಮಾರುಕಟ್ಟೆಗಳಲ್ಲಿ ಮಂಗಳವಾರ ಉತ್ತಮ ವಹಿವಾಟು ನಡೆದಿದೆ. ಸಿಯೋಲ್, ಶಾಂಘೈ, ಹಾಂಗ್​ಕಾಂಗ್ ಷೇರುಪೇಟೆಗಳು ಚೇತರಿಕೆಯೊಂದಿಗೆ ವಹಿವಾಟು ಮುಗಿಸಿವೆ. ಟೋಕಿಯೊದಲ್ಲಿ ಮಾತ್ರ ತುಸು ನಷ್ಟ ಕಂಡುಬಂದಿದೆ. ವಾಲ್​ಸ್ಟ್ರೀಟ್​ನಲ್ಲಿ ನಕಾರಾತ್ಮಕವಾಗಿ ಸೋಮವಾರದ ವಹಿವಾಟು ಅಂತ್ಯಗೊಂಡಿತ್ತು.

ಕಚ್ಚಾ ತೈಲ ಬೆಲೆ ಹೆಚ್ಚಳ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಶೇಕಡಾ 2.45ರಷ್ಟು ಹೆಚ್ಚಾಗಿ ಪ್ರತಿ ಬ್ಯಾರೆಲ್​ಗೆ 85.23 ಡಾಲರ್​ಗೆ ಮಾರಾಟವಾಗಿದೆ. ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕನ್ ಡಾಲರ್ ವಿರುದ್ಧ ರೂಪಾಯಿ ಮೌಲ್ಯ 3 ಪೈಸೆ ಕುಸಿದು 81.71ರಲ್ಲಿ ದಿನದ ವಹಿವಾಟು ಮುಗಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು