Sign In

By signing in or creating an account, you agree with Associated Broadcasting Company's Terms & Conditions and Privacy Policy.

Stock Market Updates: 7 ದಿನಗಳ ಷೇರುಪೇಟೆ ಓಟಕ್ಕೆ ತಡೆ; ಕುಸಿದ ಸೆನ್ಸೆಕ್ಸ್, ನಿಫ್ಟಿ

ಸತತ ಏಳು ದಿನಗಳಿಂದ ಗಳಿಕೆಯ ಓಟ ಮುಂದುವರಿಸಿದ್ದ ಷೇರುಪೇಟೆ ಮಂಗಳವಾರ ಮುಗ್ಗರಿಸಿದೆ.

Stock Market Updates: 7 ದಿನಗಳ ಷೇರುಪೇಟೆ ಓಟಕ್ಕೆ ತಡೆ; ಕುಸಿದ ಸೆನ್ಸೆಕ್ಸ್, ನಿಫ್ಟಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ganapathi Sharma

Updated on: Oct 25, 2022 | 5:19 PM

ಮುಂಬೈ: ಸತತ ಏಳು ದಿನಗಳಿಂದ ಗಳಿಕೆಯ ಓಟ ಮುಂದುವರಿಸಿದ್ದ ಷೇರುಪೇಟೆ (Stock Market) ಮಂಗಳವಾರ ಮುಗ್ಗರಿಸಿದೆ. ಏಷ್ಯಾದ ಮಾರುಕಟ್ಟೆಗಳಲ್ಲಿನ ವಹಿವಾಟು ಕುಸಿತ, ಯುರೋಪಿಯನ್ ಮಾರುಕಟ್ಟೆಗಳ ಮಿಶ್ರ ಫಲಿತಾಂಶಗಳು ಬಿಎಸ್​ಇ (BSE) ಮತ್ತು ನಿಫ್ಟಿ (NSE Nifty) ವಹಿವಾಟಿನ ಮೇಲೆ ಪರಿಣಾಮ ಬೀರಿವೆ. ದಿನದ ವಹಿವಾಟಿನ ಆರಂಭದಲ್ಲಿ ಗಳಿಕೆ ದಾಖಲಿಸಿದ್ದ ಬಿಎಸ್​ಇ 317.87 ಅಂಶ ಇಳಿಕೆಯೊಂದಿಗೆ 59,513.79 ರಲ್ಲಿ ವಹಿವಾಟು ಕೊನೆಗೊಳಿಸಿತು. ಎನ್​ಎಸ್​ಇ ನಿಫ್ಟಿ ಕೂಡ 74.40 ಇಳಿಕೆಯಾಗಿ 17,656.35 ರಲ್ಲಿ ವಹಿವಾಟು ಮುಕ್ತಾಯಗೊಳಿಸಿತು.

ಸೆನ್ಸೆಕ್ಸ್​ನಲ್ಲಿ ನೆಸ್ಲೆ ಇಂಡಿಯಾ, ಹಿಂದೂಸ್ತಾನ್ ಯೂನಿಲಿವರ್, ಬಜಾಜ್ ಫಿನ್​ಸರ್ವ್, ಕೋಟಕ್​ ಮಹೀಂದ್ರಾ ಬ್ಯಾಂಕ್, ಎಚ್​ಡಿಎಫ್​ಸಿ, ರಿಲಯನ್ಸ್ ಇಂಡಸ್ಟ್ರೀಸ್, ಬಜಾಜ್ ಫೈನಾನ್ಸ್ ಹಾಗೂ ಏಷ್ಯನ್ ಪೇಂಟ್ಸ್ ಷೇರುಗಳ ವಹಿವಾಟಿನಲ್ಲಿ ಕುಸಿತ ಕಂಡಿತು.

ಟೆಕ್ ಮಹೀಂದ್ರಾ, ಮಾರುತಿ, ಎಲ್​ ಆ್ಯಂಡ್ ಟಿ, ಡಾ. ರೆಡ್ಡೀಸ್, ಸ್ಟೇಟ್​ ಬ್ಯಾಂಕ್ ಆಫ್ ಇಂಡಿಯಾ ಹಾಗೂ ಎನ್​ಟಿಪಿಸಿ ಷೇರುಗಳು ಗಳಿಕೆ ದಾಖಲಿಸಿದವು.

ಇದನ್ನೂ ಓದಿ
Image
Rishi Sunak: ರಿಷಿ ಸುನಕ್​ರ​ ಸಿರಿವಂತ ಪತ್ನಿ ಮತ್ತು ಅತ್ತೆ-ಮಾವ ಬಗ್ಗೆ ಇಲ್ಲಿದೆ ವಿವರ
Image
Gold Price Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನ, ಬೆಳ್ಳಿ ದರ; ಪ್ರಮುಖ ನಗರಗಳಲ್ಲಿನ ದರ ವಿವರ ಇಲ್ಲಿದೆ
Image
Muhurat Trading: ಉತ್ತಮ ಗಳಿಕೆಯೊಂದಿಗೆ ಮುಹೂರ್ತ ಟ್ರೇಡಿಂಗ್ ಮುಗಿಸಿದ ನಿಫ್ಟಿ, ಸೆನ್ಸೆಕ್ಸ್, ಇಲ್ಲಿದೆ ಗಳಿಕೆ ವಿವರ
Image
Festive Season: ಹಬ್ಬದ ಅವಧಿಯಲ್ಲಿ ಮಿತಿಮೀರಿದ ಖರ್ಚಾಗುತ್ತಿದೆಯೇ? ತಡೆಯಲು ಇಲ್ಲಿದೆ 5 ಟಿಪ್ಸ್

ಇದನ್ನೂ ಓದಿ: Muhurat Trading: ಉತ್ತಮ ಗಳಿಕೆಯೊಂದಿಗೆ ಮುಹೂರ್ತ ಟ್ರೇಡಿಂಗ್ ಮುಗಿಸಿದ ನಿಫ್ಟಿ, ಸೆನ್ಸೆಕ್ಸ್, ಇಲ್ಲಿದೆ ಗಳಿಕೆ ವಿವರ

ಸಿಯೋಲ್, ಶಾಂಘೈ, ಹಾಂಗ್​ಕಾಂಗ್ ನಗರಗಳಲ್ಲಿ ಮಾರುಕಟ್ಟೆ ವಹಿವಾಟು ಕುಸಿತ ಕಂಡರೆ, ಟೋಕಿಯೊದಲ್ಲಿ ಮಾತ್ರ ವಹಿವಾಟು ವೃದ್ಧಿ ದಾಖಲಿಸಿತು. ಯುರೋಪ್​ನಲ್ಲಿ ಷೇರುಮಾರುಕಟ್ಟೆ ಮಿಶ್ರ ವಹಿವಾಟು ದಾಖಲಿಸಿತು.

ಕಳೆದ 7 ದಿನಗಳಲ್ಲಿ ಸೆನ್ಸೆಕ್ಸ್ ಹಾಗೂ ನಿಫ್ಟಿ ಉತ್ತಮ ವಹಿವಾಟು ನಡೆಸಿದ್ದವು. ಪ್ರತಿ ದಿನ ಗಳಿಕೆಯೊಂದಿಗೆ ವಹಿವಾಟು ಮುಗಿಯುತ್ತಿತ್ತು. ಸೋಮವಾರ ಸಂಜೆ ದೀಪಾವಳಿ ಪ್ರಯುಕ್ತ ನಡೆದ ಮುಹೂರ್ತ ಟ್ರೇಡಿಂಗ್​ನಲ್ಲಿಯೂ ಮಾರುಕಟ್ಟೆ ವಹಿವಾಟು ಚೆನ್ನಾಗಿಯೇ ನಡೆದಿತ್ತು. ಸೋಮವಾರ ಸಂಜೆ 6.15ರಿಂದ 7.15ರ ವರೆಗೆ ನಡೆದ ವಹಿವಾಟಿನಲ್ಲಿ ಬಿಎಸ್​ಇ ಸೆನ್ಸೆಕ್ಸ್ 524.51 ಅಂಶ ಏರಿಕೆ ಕಂಡು 89,831.66ರಲ್ಲಿ ವಹಿವಾಟು ಕೊನೆಗೊಳಿಸಿತ್ತು. ನಿಫ್ಟಿ 154.45 ಅಂಶ ಚೇತರಿಕೆ ಕಂಡು 17,730.75ರಲ್ಲಿ ವಹಿವಾಟು ಕೊನೆಗೊಳಿಸಿತ್ತು.

ರೂಪಾಯಿ ಮೌಲ್ಯ ತುಸು ವೃದ್ಧಿ

ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಮಂಗಳವಾರ ಸಂಜೆ 4 ಗಂಟೆ ವೇಳೆಗೆ ಅಮೆರಿಕನ್ ಡಾಲರ್ ವಿರುದ್ಧ ರೂಪಾಯಿ ಮೌಲ್ಯ 7 ಪೈಸೆ ಚೇತರಿಕೆ ದಾಖಲಿಸಿ 82.81 ಆಯಿತು. ಕಚ್ಚಾ ತೈಲ ಬೆಲೆ ಇಳಿಕೆ ಮತ್ತು ಖರೀದಿ ಪ್ರಕ್ರಿಯೆಯು ರೂಪಾಯಿ ಮೌಲ್ಯದ ಮೇಲೆ ಪರಿಣಾಮ ಬೀರಿತು.

ವಹಿವಾಟಿನ ಆರಂಭದ ಕೆಲವು ಗಂಟೆಗಳಲ್ಲಿ ಉತ್ತಮ ಚೇತರಿಕೆ ಕಂಡಿದ್ದ ರೂಪಾಯಿ ಒಂದು ಹಂತದಲ್ಲಿ 26 ಪೈಸೆ ವೃದ್ಧಿಯಾಗಿ 82.62 ರಲ್ಲಿ ವಹಿವಾಟು ನಡೆಸಿತ್ತು. ಈ ಮೂಲಕ ಭರವಸೆ ಮೂಡಿಸಿತ್ತು. ಆದರೆ ನಂತರದ ಟ್ರೆಂಡ್​ಗಳಲ್ಲಿ ಮೌಲ್ಯ ಇಳಿಕೆಯಾಯಿತು. ಅಂತಿಮವಾಗಿ 82.81ರಲ್ಲಿ ವಹಿವಾಟು ಕೊನೆಗೊಳಿಸಿತು. ಸೋಮವಾರ ದೀಪಾವಳಿ ಪ್ರಯುಕ್ತ ವಿನಿಮಯ ಮಾರುಕಟ್ಟೆ ಕಾರ್ಯ ನಿರ್ವಹಿಸಿರಲಿಲ್ಲ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್