AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Share Market Predictions: ಷೇರುಪೇಟೆ ಮೇಲೆ ಪರಿಣಾಮ ಬೀರಲಿವೆ ರಜೆ, ತ್ರೈಮಾಸಿಕ ಫಲಿತಾಂಶ, ಮಾಸಾಂತ್ಯ…

ದೀಪಾವಳಿ ರಜೆಗಳು, ಕಂಪನಿಗಳ ತ್ರೈಮಾಸಿಕ ಫಲಿತಾಂಶ, ತಿಂಗಳ ಕೊನೆಯ ದಿನಗಳು, ಈ ಎಲ್ಲ ಅಂಶಗಳು ಷೇರುಪೇಟೆಯ ಮುಂದಿನ ವಾರದ ವಹಿವಾಟಿನ ಮೇಲೆ ಪರಿಣಾಮ ಬೀರಬಹುದು ಎಂದು ಮಾರುಕಟ್ಟೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Share Market Predictions: ಷೇರುಪೇಟೆ ಮೇಲೆ ಪರಿಣಾಮ ಬೀರಲಿವೆ ರಜೆ, ತ್ರೈಮಾಸಿಕ ಫಲಿತಾಂಶ, ಮಾಸಾಂತ್ಯ...
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Oct 22, 2022 | 6:48 PM

Share

ಮುಂಬೈ: ದೀಪಾವಳಿ (Diwali) ರಜೆಗಳು, ಕಂಪನಿಗಳ ತ್ರೈಮಾಸಿಕ ಫಲಿತಾಂಶ (Quarter results), ತಿಂಗಳ ಕೊನೆಯ ದಿನಗಳು, ಈ ಎಲ್ಲ ಅಂಶಗಳು ಷೇರುಪೇಟೆ(Stock Market) ಮುಂದಿನ ವಾರದ ವಹಿವಾಟಿನ ಮೇಲೆ ಪರಿಣಾಮ ಬೀರಬಹುದು ಎಂದು ಮಾರುಕಟ್ಟೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಜತೆಗೆ ವಿದೇಶಿ ಮಾರುಕಟ್ಟೆಯಲ್ಲಿನ ಬೆಳವಣಿಗೆಗಳು, ರೂಪಾಯಿ ಮೌಲ್ಯದಲ್ಲಿನ ಏರಿಳಿ ಹಾಗೂ ಡಾಲರ್ ಮೌಲ್ಯ ವೃದ್ಧಿಯೂ ನಿರ್ಣಾಯಕವಾಗಬಹುದು ಎಂದು ಅವರು ಹೇಳಿದ್ದಾರೆ.

ರಜೆಗಳ ಕಾರಣದಿಂದಾಗಿ ಮುಂದಿನ ವಾರ ಹೆಚ್ಚಿನ ವಹಿವಾಟು ನಡೆಯುವುದಿಲ್ಲ. ಸೋಮವಾರ, ಅಕ್ಟೋಬರ್ 24ರಂದು ಸಂಜೆ ಒಂದು ಗಂಟೆಯ ಮುಹೂರ್ತ ಟ್ರೇಡಿಂಗ್ ನಡೆಯಲಿದೆ. ಈ ಅವಧಿಯಲ್ಲಿ ಉತ್ತಮ ವಹಿವಾಟು ನಡೆಯುವ ನಿರೀಕ್ಷೆ ಇದೆ ಎಂದು ರೆಲಿಗೇರ್ ಬ್ರೋಕಿಂಗ್​ನ ಉಪಾಧ್ಯಕ್ಷ ಅಜಿತ್ ಮಿಶ್ರಾ ಹೇಳಿರುವುದಾಗಿ ‘ಝೀ ಬ್ಯುಸಿನೆಸ್’ ವರದಿ ಮಾಡಿದೆ.

ವಹಿವಾಟಿನಲ್ಲಿ ಚಂಚಲತೆ ಕಾಣಬಹುದು. ಹೊರತುಪಡಿಸಿದರೆ ಜಾಗತಿಕ ಮಾರುಕಟ್ಟೆಗಳ ವಹಿವಾಟಿನ ಮೇಲೆ ಗಮನ ಇರಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ
Image
Reliance Jio 5G: 5ಜಿ ಆಧಾರಿತ ಸಾರ್ವಜನಿಕ ವೈಫೈ ಸೇವೆ ಆರಂಭಿಸಿದ ರಿಲಯನ್ಸ್ ಜಿಯೋ
Image
Dhanteras 2022: ದೀಪಾವಳಿ ಸಂದರ್ಭದಲ್ಲಿ ಚಿನ್ನದ ಮೇಲಿನ ಹೂಡಿಕೆಗೆ ಐದು ಆಯ್ಕೆಗಳು
Image
Fixed Deposit: ಎಫ್​ಡಿ ಖಾತೆ ತೆರೆಯಲು ಉದ್ದೇಶಿಸಿದ್ದೀರಾ? ಇಲ್ಲಿದೆ ಎಸ್​ಬಿಐ, ಐಸಿಐಸಿಐ, ಎಚ್​ಡಿಎಫ್​ಸಿ ಬ್ಯಾಂಕ್ ಬಡ್ಡಿ ವಿವರ
Image
PM Rozgar Mela: ಪಿಎಂ ಉದ್ಯೋಗ ಮೇಳ; ಏನಿದು ಯೋಜನೆ, ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

ಇದನ್ನೂ ಓದಿ: Share Market Highlights: ಅಲ್ಪ ಗಳಿಕೆಯೊಂದಿಗೆ ವಾರದ ವಹಿವಾಟು ಮುಗಿಸಿದ ಷೇರುಪೇಟೆ

ಗಳಿಕೆಯ ದೃಷ್ಟಿಯಿಂದ ನೋಡಿದರೆ ರಿಲಯನ್ಸ್, ಐಸಿಐಸಿಐ ಬ್ಯಾಂಕ್, ಕೋಟಕ್ ಬ್ಯಾಂಕ್​ನಂಥ ಕಂಪನಿಗಳು ಹೆಚ್ಚು ವಹಿವಾಟು ನಡೆಸುವ ನಿರೀಕ್ಷೆ ಇದೆ. ಇವುಗಳನ್ನು ಹೊರತುಪಡಿಸಿ ಟಾಟಾ ಕೆಮಿಕಲ್ಸ್, ಡಾ. ರೆಡ್ಡೀಸ್ ಲ್ಯಾಬೋರೇಟರಿ, ಮಾರುತಿ, ವೇದಾಂತ ಹಾಗೂ ಟಾಟಾ ಪವರ್ ತಮ್ಮ ಗಳಿಕೆಯನ್ನು ಮುಂದಿನ ವಾರ ಘೋಷಿಸುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದ್ದಾರೆ.

ಐಸಿಐಸಿಐ ಬ್ಯಾಂಕ್, ಆರ್​ಬಿಎಲ್​ ಬ್ಯಾಂಕ್, ಕೋಟಕ್​ ಮಹೀಂದ್ರಾ ಬ್ಯಾಂಕ್ ಹಾಗೂ ಯೆಸ್ ಬ್ಯಾಂಕ್​ಗಳು ತ್ರೈಮಾಸಿಕ ಫಲಿತಾಂಶ ಪ್ರಕಟಿಸಿದ್ದು, ಯೆಸ್ ಬ್ಯಾಂಕ್ ಹೊರತುಪಡಿಸಿ ಉಳಿದವೆಲ್ಲ ನಿವ್ವಳ ಲಾಭದಲ್ಲಿ ಭಾರಿ ಗಳಿಕೆ ಕಂಡಿವೆ. ಇದು ಮುಂದಿನ ವಾರದ ಷೇರುಪೇಟೆ ವಹಿವಾಟಿನ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ಉಳಿದಂತೆ ಜಾಗತಿಕ ಅನಿಶ್ಚಿತತೆಗಳ ಹೊರತಾಗಿಯೂ ಶುಕ್ರವಾರ ಅಲ್ಪ ಗಳಿಕೆಯೊಂದಿಗೆ ಷೇರುಪೇಟೆಯು ವಾರದ ವಹಿವಾಟು ಕೊನೆಗೊಳಿಸಿತ್ತು. ಬಿಎಸ್​ಇ ಸೆನ್ಸೆಕ್ಸ್ ಶೇಕಡಾ 0.18ರಷ್ಟು ಅಥವಾ 104.25 ಅಂಕ ಏರಿಕೆ ಕಂಡು 59,307.15ರಲ್ಲಿ ವಹಿವಾಟು ಕೊನೆಗೊಳಿಸಿತ್ತು. ಎನ್​ಎಸ್​ಇ ನಿಫ್ಟಿ ಶೇಕಡಾ 0.07ರಷ್ಟು ಅಥವಾ 12.35 ಅಂಶ ಚೇತರಿಕೆ ಕಂಡು 17,576.30ರಲ್ಲಿ ವಹಿವಾಟು ಮುಕ್ತಾಯಗೊಳಿಸಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ