Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ಆಕ್ರಮಿತ ಕಾಶ್ಮೀರವನ್ನು ಭಾರತದ ಭಾಗವಾಗಿ ಬಿಂಬಿಸಿದ ರಷ್ಯಾದ ನಕ್ಷೆ

ರಷ್ಯಾ ಬಿಡುಗಡೆ ಮಾಡಿರುವ ಈ ನಕ್ಷೆಯು ವಿಶ್ವ ವೇದಿಕೆ ಮತ್ತು ಶಾಂಘೈ ಸಹಕಾರ ಸಂಸ್ಥೆಯ ನಡುವೆ ಭಾರತದ ಸ್ಥಾನವನ್ನು ಮತ್ತಷ್ಟು ಬಲಪಡಿಸಿದೆ

ಪಾಕ್ ಆಕ್ರಮಿತ ಕಾಶ್ಮೀರವನ್ನು ಭಾರತದ ಭಾಗವಾಗಿ ಬಿಂಬಿಸಿದ ರಷ್ಯಾದ ನಕ್ಷೆ
ರಷ್ಯಾ ಬಿಡುಗಡೆ ಮಾಡಿರುವ ನಕಾಶೆ ಮತ್ತು ವ್ಲಾದಿಮಿರ್ ಪುಟಿನ್, ನರೇಂದ್ರ ಮೋದಿ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Oct 20, 2022 | 3:11 PM

ರಷ್ಯಾ ಮತ್ತು ಭಾರತದ ನಡುವಿನ ಸ್ನೇಹ ಸಂಬಂಧ ಐತಿಹಾಸಿಕವಾದದ್ದು. ಎರಡು ರಾಷ್ಟ್ರಗಳ ಗಟ್ಟಿ ಗೆಳತನ ಅನೇಕ ಸಂದರ್ಭಗಳಲ್ಲಿ ನಿಜವಾಗಿದೆ. ಭಾರತದ ವಿರುದ್ಧ ಕತ್ತಿ ಮಸೆಯುತ್ತಿರುವ ಪಾಕಿಸ್ತಾನ ಮತ್ತು ಚೀನಾಗೆ ರಷ್ಯಾ ಅಘಾತ ನೀಡಿದೆ.‌ ಭಯೋತ್ಪಾದನೆ ಬಗ್ಗೆ ಒಂದೇ ಧ್ವನಿಯಲ್ಲಿ ಎರಡು ನೆರೆಯ ದೇಶಗಳು ಮಾತನಾಡುತ್ತಿರುವಾಗ ರಷ್ಯಾ ಭಾರತದ ನಕ್ಷೆಯನ್ನು ಬಿಡುಗಡೆ ಮಾಡಿದೆ. ಈ ನಕ್ಷೆ ಎರಡು ದೇಶಗಳು ಭಾರತದ ವಿರುದ್ಧ ಮಾತನಾಡುವುದನ್ನು ನಿಲ್ಲಿಸಲು ಪ್ರಯತ್ನಿಸಿದೆ.

ಇತ್ತೀಚೆಗೆ ರಷ್ಯಾದ ಸುದ್ದಿ ಸಂಸ್ಥೆ ಸ್ಪುಟ್ನಿಕ್ ಬಿಡುಗಡೆ ಮಾಡಿದ ನಕ್ಷೆಯು ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಮತ್ತು ಅಕ್ಸಯ್ ಚಿನ್ ಜೊತೆಗೆ ಅರುಣಾಚಲ ಪ್ರದೇಶವನ್ನು ಭಾರತದ ಭಾಗವೆಂದು ತೋರಿಸಿದೆ. ಇದಲ್ಲದೆ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಅನ್ನು ಸಹ ಭಾರತದ ಅವಿಭಾಜ್ಯ ಅಂಗವೆಂದು ತೋರಿಸಲಾಗಿದೆ. ಸ್ಪುಟ್ನಿಕ್ ಬಿಡುಗಡೆ ಮಾಡಿದ ನಕ್ಷೆಯಲ್ಲಿ ಬಹಿರಂಗವಾಗಿದೆ.

ಈ ನಕ್ಷೆಯನ್ನು ಶಾಂಘೈ ಸಹಕಾರ ಸಂಸ್ಥೆಯ ಸದಸ್ಯ ರಾಷ್ಟ್ರ ರಷ್ಯಾದ ಸರ್ಕಾರವು ಬಿಡುಗಡೆ ಮಾಡಿದೆ. ಇಂಡೋ-ರಷ್ಯನ್ ಸ್ನೇಹದ ಆಳವಾದ ಬೇರುಗಳು ನಕ್ಷೆಯಿಂದ ಸ್ಪಷ್ಟವಾಗಿ ಗೋಚರಿಸುತ್ತವೆ. ಪಾಕಿಸ್ತಾನ ಮತ್ತು ಚೀನಾ ಸಹ ಶಾಂಘೈ ಸಹಕಾರ ಸದಸ್ಯರಾಗಿದ್ದಾರೆ ಎಂಬುದನ್ನು ಲೆಕ್ಕಿಸದೆ ರಷ್ಯಾ ಈ ನಕ್ಷೆಯನ್ನು ಬಿಡುಗಡೆ ಮಾಡಿದೆ. ರಷ್ಯಾ ಬಿಡುಗಡೆ ಮಾಡಿರುವ ಈ ನಕ್ಷೆಯು ವಿಶ್ವ ವೇದಿಕೆ ಮತ್ತು ಶಾಂಘೈ ಸಹಕಾರ ಸಂಸ್ಥೆಯ ನಡುವೆ ಭಾರತದ ಸ್ಥಾನವನ್ನು ಮತ್ತಷ್ಟು ಬಲಪಡಿಸಿದೆ. ಶಾಂಘೈ ಸಹಕಾರ ಸಂಸ್ಥಾಪಕ ಸದಸ್ಯರಲ್ಲಿ ಒಬ್ಬರಾದ ರಷ್ಯಾ ನಕ್ಷೆಯನ್ನು ಸರಿಯಾಗಿ ಚಿತ್ರಿಸುವ ಮೂಲಕ ದಾಖಲೆ ನಿರ್ಮಿಸಿದೆ ಎಂದು ಭಾರತದ ಸರ್ಕಾರಿ ಮೂಲಗಳು ತಿಳಿಸಿವೆ.

ಮತ್ತೊಂದೆಡೆ, ಸಮಾವೇಶಕ್ಕಾಗಿ ಬಿಡುಗಡೆ ಮಾಡಿದ ತನ್ನ ನಕ್ಷೆಯಲ್ಲಿ ಚೀನಾ ಕೂಡ ಭಾರತದ ಕೆಲವು ಪ್ರದೇಶಗಳನ್ನು ತನ್ನದೇ ಎಂದು ಘೋಷಿಸಿದೆ. ಇದು ಅವರ ವಿಸ್ತರಣಾ ನೀತಿಯ ಸಂಕೇತವಾಗಿತ್ತು. ಒಟ್ಟಾರೆ ರಷ್ಯಾ ಅಧಿಕೃತವಾಗಿ ಬಿಡುಗಡೆ ಮಾಡಿರುವ ನಕ್ಷೆ ಭಾರತಕ್ಕೆ‌ ವಿಶ್ವಮಟ್ಟದಲ್ಲಿ ಬಲ ಬಂದಿದೆ. ಭಾರತದ ಶತ್ರು ರಾಷ್ಟ್ರಗಳಿಗೂ ನಡುಕ ಶುರುವಾಗಿದೆ.‌

ಹರೀಶ್ ಜಿ.ಆರ್ . ಟಿವಿ9, ನವದೆಹಲಿ

25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್
4 ವರ್ಷದ ಪ್ರೀತಿಗೆ ಸಾಕ್ಷಿಯಾದ ಅಂಬೇಡ್ಕರ್ ಜಯಂತಿ: ಪ್ರತಿಮೆ ಎದುರೇ ವಿವಾಹ
4 ವರ್ಷದ ಪ್ರೀತಿಗೆ ಸಾಕ್ಷಿಯಾದ ಅಂಬೇಡ್ಕರ್ ಜಯಂತಿ: ಪ್ರತಿಮೆ ಎದುರೇ ವಿವಾಹ
ಜಾತಿಗಣತಿ ವರದಿ ಬಗ್ಗೆ ಕೇಳಿದರೆ ಸಿಡಿಮಿಡಿಗೊಳ್ಳುವ ಸಿಎಂ ಸಿದ್ದರಾಮಯ್ಯ
ಜಾತಿಗಣತಿ ವರದಿ ಬಗ್ಗೆ ಕೇಳಿದರೆ ಸಿಡಿಮಿಡಿಗೊಳ್ಳುವ ಸಿಎಂ ಸಿದ್ದರಾಮಯ್ಯ
ನಿರ್ಜನ ಪ್ರದೇಶದಲ್ಲಿ ತಪ್ಪಿಸಿಕೊಳ್ಳುವ ವ್ಯರ್ಥ ಪ್ರಯತ್ನ ನಡೆಸಿದ್ದ ಆರೋಪಿ
ನಿರ್ಜನ ಪ್ರದೇಶದಲ್ಲಿ ತಪ್ಪಿಸಿಕೊಳ್ಳುವ ವ್ಯರ್ಥ ಪ್ರಯತ್ನ ನಡೆಸಿದ್ದ ಆರೋಪಿ
ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್