AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ಆಕ್ರಮಿತ ಕಾಶ್ಮೀರವನ್ನು ಭಾರತದ ಭಾಗವಾಗಿ ಬಿಂಬಿಸಿದ ರಷ್ಯಾದ ನಕ್ಷೆ

ರಷ್ಯಾ ಬಿಡುಗಡೆ ಮಾಡಿರುವ ಈ ನಕ್ಷೆಯು ವಿಶ್ವ ವೇದಿಕೆ ಮತ್ತು ಶಾಂಘೈ ಸಹಕಾರ ಸಂಸ್ಥೆಯ ನಡುವೆ ಭಾರತದ ಸ್ಥಾನವನ್ನು ಮತ್ತಷ್ಟು ಬಲಪಡಿಸಿದೆ

ಪಾಕ್ ಆಕ್ರಮಿತ ಕಾಶ್ಮೀರವನ್ನು ಭಾರತದ ಭಾಗವಾಗಿ ಬಿಂಬಿಸಿದ ರಷ್ಯಾದ ನಕ್ಷೆ
ರಷ್ಯಾ ಬಿಡುಗಡೆ ಮಾಡಿರುವ ನಕಾಶೆ ಮತ್ತು ವ್ಲಾದಿಮಿರ್ ಪುಟಿನ್, ನರೇಂದ್ರ ಮೋದಿ
TV9 Web
| Edited By: |

Updated on: Oct 20, 2022 | 3:11 PM

Share

ರಷ್ಯಾ ಮತ್ತು ಭಾರತದ ನಡುವಿನ ಸ್ನೇಹ ಸಂಬಂಧ ಐತಿಹಾಸಿಕವಾದದ್ದು. ಎರಡು ರಾಷ್ಟ್ರಗಳ ಗಟ್ಟಿ ಗೆಳತನ ಅನೇಕ ಸಂದರ್ಭಗಳಲ್ಲಿ ನಿಜವಾಗಿದೆ. ಭಾರತದ ವಿರುದ್ಧ ಕತ್ತಿ ಮಸೆಯುತ್ತಿರುವ ಪಾಕಿಸ್ತಾನ ಮತ್ತು ಚೀನಾಗೆ ರಷ್ಯಾ ಅಘಾತ ನೀಡಿದೆ.‌ ಭಯೋತ್ಪಾದನೆ ಬಗ್ಗೆ ಒಂದೇ ಧ್ವನಿಯಲ್ಲಿ ಎರಡು ನೆರೆಯ ದೇಶಗಳು ಮಾತನಾಡುತ್ತಿರುವಾಗ ರಷ್ಯಾ ಭಾರತದ ನಕ್ಷೆಯನ್ನು ಬಿಡುಗಡೆ ಮಾಡಿದೆ. ಈ ನಕ್ಷೆ ಎರಡು ದೇಶಗಳು ಭಾರತದ ವಿರುದ್ಧ ಮಾತನಾಡುವುದನ್ನು ನಿಲ್ಲಿಸಲು ಪ್ರಯತ್ನಿಸಿದೆ.

ಇತ್ತೀಚೆಗೆ ರಷ್ಯಾದ ಸುದ್ದಿ ಸಂಸ್ಥೆ ಸ್ಪುಟ್ನಿಕ್ ಬಿಡುಗಡೆ ಮಾಡಿದ ನಕ್ಷೆಯು ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಮತ್ತು ಅಕ್ಸಯ್ ಚಿನ್ ಜೊತೆಗೆ ಅರುಣಾಚಲ ಪ್ರದೇಶವನ್ನು ಭಾರತದ ಭಾಗವೆಂದು ತೋರಿಸಿದೆ. ಇದಲ್ಲದೆ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಅನ್ನು ಸಹ ಭಾರತದ ಅವಿಭಾಜ್ಯ ಅಂಗವೆಂದು ತೋರಿಸಲಾಗಿದೆ. ಸ್ಪುಟ್ನಿಕ್ ಬಿಡುಗಡೆ ಮಾಡಿದ ನಕ್ಷೆಯಲ್ಲಿ ಬಹಿರಂಗವಾಗಿದೆ.

ಈ ನಕ್ಷೆಯನ್ನು ಶಾಂಘೈ ಸಹಕಾರ ಸಂಸ್ಥೆಯ ಸದಸ್ಯ ರಾಷ್ಟ್ರ ರಷ್ಯಾದ ಸರ್ಕಾರವು ಬಿಡುಗಡೆ ಮಾಡಿದೆ. ಇಂಡೋ-ರಷ್ಯನ್ ಸ್ನೇಹದ ಆಳವಾದ ಬೇರುಗಳು ನಕ್ಷೆಯಿಂದ ಸ್ಪಷ್ಟವಾಗಿ ಗೋಚರಿಸುತ್ತವೆ. ಪಾಕಿಸ್ತಾನ ಮತ್ತು ಚೀನಾ ಸಹ ಶಾಂಘೈ ಸಹಕಾರ ಸದಸ್ಯರಾಗಿದ್ದಾರೆ ಎಂಬುದನ್ನು ಲೆಕ್ಕಿಸದೆ ರಷ್ಯಾ ಈ ನಕ್ಷೆಯನ್ನು ಬಿಡುಗಡೆ ಮಾಡಿದೆ. ರಷ್ಯಾ ಬಿಡುಗಡೆ ಮಾಡಿರುವ ಈ ನಕ್ಷೆಯು ವಿಶ್ವ ವೇದಿಕೆ ಮತ್ತು ಶಾಂಘೈ ಸಹಕಾರ ಸಂಸ್ಥೆಯ ನಡುವೆ ಭಾರತದ ಸ್ಥಾನವನ್ನು ಮತ್ತಷ್ಟು ಬಲಪಡಿಸಿದೆ. ಶಾಂಘೈ ಸಹಕಾರ ಸಂಸ್ಥಾಪಕ ಸದಸ್ಯರಲ್ಲಿ ಒಬ್ಬರಾದ ರಷ್ಯಾ ನಕ್ಷೆಯನ್ನು ಸರಿಯಾಗಿ ಚಿತ್ರಿಸುವ ಮೂಲಕ ದಾಖಲೆ ನಿರ್ಮಿಸಿದೆ ಎಂದು ಭಾರತದ ಸರ್ಕಾರಿ ಮೂಲಗಳು ತಿಳಿಸಿವೆ.

ಮತ್ತೊಂದೆಡೆ, ಸಮಾವೇಶಕ್ಕಾಗಿ ಬಿಡುಗಡೆ ಮಾಡಿದ ತನ್ನ ನಕ್ಷೆಯಲ್ಲಿ ಚೀನಾ ಕೂಡ ಭಾರತದ ಕೆಲವು ಪ್ರದೇಶಗಳನ್ನು ತನ್ನದೇ ಎಂದು ಘೋಷಿಸಿದೆ. ಇದು ಅವರ ವಿಸ್ತರಣಾ ನೀತಿಯ ಸಂಕೇತವಾಗಿತ್ತು. ಒಟ್ಟಾರೆ ರಷ್ಯಾ ಅಧಿಕೃತವಾಗಿ ಬಿಡುಗಡೆ ಮಾಡಿರುವ ನಕ್ಷೆ ಭಾರತಕ್ಕೆ‌ ವಿಶ್ವಮಟ್ಟದಲ್ಲಿ ಬಲ ಬಂದಿದೆ. ಭಾರತದ ಶತ್ರು ರಾಷ್ಟ್ರಗಳಿಗೂ ನಡುಕ ಶುರುವಾಗಿದೆ.‌

ಹರೀಶ್ ಜಿ.ಆರ್ . ಟಿವಿ9, ನವದೆಹಲಿ

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ