AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ಆಕ್ರಮಿತ ಕಾಶ್ಮೀರವನ್ನು ಭಾರತದ ಭಾಗವಾಗಿ ಬಿಂಬಿಸಿದ ರಷ್ಯಾದ ನಕ್ಷೆ

ರಷ್ಯಾ ಬಿಡುಗಡೆ ಮಾಡಿರುವ ಈ ನಕ್ಷೆಯು ವಿಶ್ವ ವೇದಿಕೆ ಮತ್ತು ಶಾಂಘೈ ಸಹಕಾರ ಸಂಸ್ಥೆಯ ನಡುವೆ ಭಾರತದ ಸ್ಥಾನವನ್ನು ಮತ್ತಷ್ಟು ಬಲಪಡಿಸಿದೆ

ಪಾಕ್ ಆಕ್ರಮಿತ ಕಾಶ್ಮೀರವನ್ನು ಭಾರತದ ಭಾಗವಾಗಿ ಬಿಂಬಿಸಿದ ರಷ್ಯಾದ ನಕ್ಷೆ
ರಷ್ಯಾ ಬಿಡುಗಡೆ ಮಾಡಿರುವ ನಕಾಶೆ ಮತ್ತು ವ್ಲಾದಿಮಿರ್ ಪುಟಿನ್, ನರೇಂದ್ರ ಮೋದಿ
TV9 Web
| Edited By: |

Updated on: Oct 20, 2022 | 3:11 PM

Share

ರಷ್ಯಾ ಮತ್ತು ಭಾರತದ ನಡುವಿನ ಸ್ನೇಹ ಸಂಬಂಧ ಐತಿಹಾಸಿಕವಾದದ್ದು. ಎರಡು ರಾಷ್ಟ್ರಗಳ ಗಟ್ಟಿ ಗೆಳತನ ಅನೇಕ ಸಂದರ್ಭಗಳಲ್ಲಿ ನಿಜವಾಗಿದೆ. ಭಾರತದ ವಿರುದ್ಧ ಕತ್ತಿ ಮಸೆಯುತ್ತಿರುವ ಪಾಕಿಸ್ತಾನ ಮತ್ತು ಚೀನಾಗೆ ರಷ್ಯಾ ಅಘಾತ ನೀಡಿದೆ.‌ ಭಯೋತ್ಪಾದನೆ ಬಗ್ಗೆ ಒಂದೇ ಧ್ವನಿಯಲ್ಲಿ ಎರಡು ನೆರೆಯ ದೇಶಗಳು ಮಾತನಾಡುತ್ತಿರುವಾಗ ರಷ್ಯಾ ಭಾರತದ ನಕ್ಷೆಯನ್ನು ಬಿಡುಗಡೆ ಮಾಡಿದೆ. ಈ ನಕ್ಷೆ ಎರಡು ದೇಶಗಳು ಭಾರತದ ವಿರುದ್ಧ ಮಾತನಾಡುವುದನ್ನು ನಿಲ್ಲಿಸಲು ಪ್ರಯತ್ನಿಸಿದೆ.

ಇತ್ತೀಚೆಗೆ ರಷ್ಯಾದ ಸುದ್ದಿ ಸಂಸ್ಥೆ ಸ್ಪುಟ್ನಿಕ್ ಬಿಡುಗಡೆ ಮಾಡಿದ ನಕ್ಷೆಯು ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಮತ್ತು ಅಕ್ಸಯ್ ಚಿನ್ ಜೊತೆಗೆ ಅರುಣಾಚಲ ಪ್ರದೇಶವನ್ನು ಭಾರತದ ಭಾಗವೆಂದು ತೋರಿಸಿದೆ. ಇದಲ್ಲದೆ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಅನ್ನು ಸಹ ಭಾರತದ ಅವಿಭಾಜ್ಯ ಅಂಗವೆಂದು ತೋರಿಸಲಾಗಿದೆ. ಸ್ಪುಟ್ನಿಕ್ ಬಿಡುಗಡೆ ಮಾಡಿದ ನಕ್ಷೆಯಲ್ಲಿ ಬಹಿರಂಗವಾಗಿದೆ.

ಈ ನಕ್ಷೆಯನ್ನು ಶಾಂಘೈ ಸಹಕಾರ ಸಂಸ್ಥೆಯ ಸದಸ್ಯ ರಾಷ್ಟ್ರ ರಷ್ಯಾದ ಸರ್ಕಾರವು ಬಿಡುಗಡೆ ಮಾಡಿದೆ. ಇಂಡೋ-ರಷ್ಯನ್ ಸ್ನೇಹದ ಆಳವಾದ ಬೇರುಗಳು ನಕ್ಷೆಯಿಂದ ಸ್ಪಷ್ಟವಾಗಿ ಗೋಚರಿಸುತ್ತವೆ. ಪಾಕಿಸ್ತಾನ ಮತ್ತು ಚೀನಾ ಸಹ ಶಾಂಘೈ ಸಹಕಾರ ಸದಸ್ಯರಾಗಿದ್ದಾರೆ ಎಂಬುದನ್ನು ಲೆಕ್ಕಿಸದೆ ರಷ್ಯಾ ಈ ನಕ್ಷೆಯನ್ನು ಬಿಡುಗಡೆ ಮಾಡಿದೆ. ರಷ್ಯಾ ಬಿಡುಗಡೆ ಮಾಡಿರುವ ಈ ನಕ್ಷೆಯು ವಿಶ್ವ ವೇದಿಕೆ ಮತ್ತು ಶಾಂಘೈ ಸಹಕಾರ ಸಂಸ್ಥೆಯ ನಡುವೆ ಭಾರತದ ಸ್ಥಾನವನ್ನು ಮತ್ತಷ್ಟು ಬಲಪಡಿಸಿದೆ. ಶಾಂಘೈ ಸಹಕಾರ ಸಂಸ್ಥಾಪಕ ಸದಸ್ಯರಲ್ಲಿ ಒಬ್ಬರಾದ ರಷ್ಯಾ ನಕ್ಷೆಯನ್ನು ಸರಿಯಾಗಿ ಚಿತ್ರಿಸುವ ಮೂಲಕ ದಾಖಲೆ ನಿರ್ಮಿಸಿದೆ ಎಂದು ಭಾರತದ ಸರ್ಕಾರಿ ಮೂಲಗಳು ತಿಳಿಸಿವೆ.

ಮತ್ತೊಂದೆಡೆ, ಸಮಾವೇಶಕ್ಕಾಗಿ ಬಿಡುಗಡೆ ಮಾಡಿದ ತನ್ನ ನಕ್ಷೆಯಲ್ಲಿ ಚೀನಾ ಕೂಡ ಭಾರತದ ಕೆಲವು ಪ್ರದೇಶಗಳನ್ನು ತನ್ನದೇ ಎಂದು ಘೋಷಿಸಿದೆ. ಇದು ಅವರ ವಿಸ್ತರಣಾ ನೀತಿಯ ಸಂಕೇತವಾಗಿತ್ತು. ಒಟ್ಟಾರೆ ರಷ್ಯಾ ಅಧಿಕೃತವಾಗಿ ಬಿಡುಗಡೆ ಮಾಡಿರುವ ನಕ್ಷೆ ಭಾರತಕ್ಕೆ‌ ವಿಶ್ವಮಟ್ಟದಲ್ಲಿ ಬಲ ಬಂದಿದೆ. ಭಾರತದ ಶತ್ರು ರಾಷ್ಟ್ರಗಳಿಗೂ ನಡುಕ ಶುರುವಾಗಿದೆ.‌

ಹರೀಶ್ ಜಿ.ಆರ್ . ಟಿವಿ9, ನವದೆಹಲಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು