AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Stock Market Updates: ಕುಸಿದ ಸೆನ್ಸೆಕ್ಸ್, ನಿಫ್ಟಿ; ಟಾಟಾ ಮೋಟರ್ಸ್ ಷೇರು ಮೌಲ್ಯದಲ್ಲಿ ಭಾರಿ ಇಳಿಕೆ

ಕಳೆದ ವಾರ ಉತ್ತಮ ಗಳಿಕೆ ದಾಖಲಿಸಿದ್ದ ದೇಶೀಯ ಷೇರುಪೇಟೆಗಳಲ್ಲಿ ವಹಿವಾಟು ಮತ್ತೆ ಕುಸಿದಿದೆ. ಇದರೊಂದಿಗೆ, ದೇಶೀಯ ಷೇರುಪೇಟೆಗಳಲ್ಲಿ ಸತತ ಎರಡನೇ ದಿನ ಕುಸಿತ ದಾಖಲಾಗಿದೆ.

Stock Market Updates: ಕುಸಿದ ಸೆನ್ಸೆಕ್ಸ್, ನಿಫ್ಟಿ; ಟಾಟಾ ಮೋಟರ್ಸ್ ಷೇರು ಮೌಲ್ಯದಲ್ಲಿ ಭಾರಿ ಇಳಿಕೆ
ಸಾಂದರ್ಭಿಕ ಚಿತ್ರImage Credit source: PTI
Follow us
TV9 Web
| Updated By: Ganapathi Sharma

Updated on: Nov 10, 2022 | 6:32 PM

ಮುಂಬೈ: ಕಳೆದ ವಾರ ಉತ್ತಮ ಗಳಿಕೆ ದಾಖಲಿಸಿದ್ದ ದೇಶೀಯ ಷೇರುಪೇಟೆಗಳಲ್ಲಿ (Stock Market) ವಹಿವಾಟು ಮತ್ತೆ ಕುಸಿದಿದೆ. ಗುರುವಾರದ ವಹಿವಾಟಿನ ಕೊನೆಯಲ್ಲಿ ಬಿಎಸ್​ಇ ಸೆನ್ಸೆಕ್ಸ್ (BSE Sensex) 419.85 ಅಂಶ ಕುಸಿದು 60,613.70ರಲ್ಲಿ ವಹಿವಾಟು ಮುಗಿಸಿತು. ಎನ್​ಎಸ್​ಇ ನಿಫ್ಟಿ (NSE Nifty) 121 ಅಂಶ ಕುಸಿದು 18,036 ರಲ್ಲಿ ವಹಿವಾಟು ಕೊನೆಗೊಳಿಸಿತು. ಇದರೊಂದಿಗೆ, ದೇಶೀಯ ಷೇರುಪೇಟೆಗಳಲ್ಲಿ ಸತತ ಎರಡನೇ ದಿನ ಕುಸಿತವಾಗಿದೆ.

ಶೇಕಡಾ 5ರಷ್ಟು ಕುಸಿದ ಟಾಟಾ ಮೋಟರ್ಸ್ ಷೇರು ಮೌಲ್ಯ

ಟಾಟಾ ಮೋಟರ್ಸ್ ಷೇರು ಮೌಲ್ಯವು ಗುರುವಾರದ ವಹಿವಾಟಿನ ಕೊನೆಯಲ್ಲಿ ಶೇಕಡಾ 4.80 ರಷ್ಟು ಕುಸಿಯಿತು. ಬಿಎಸ್​ಇಯಲ್ಲಿ ಕಂಪನಿಯ ಷೇರುಗಳು ತಲಾ 412.20 ರೂ. ನಂತೆ ವಹಿವಾಟು ನಡೆಸಿದವು. ಎನ್​ಎಸ್​ಇಯಲ್ಲಿ ಶೇಕಡಾ 4.61ರ ಕುಸಿತ ಕಂಡು ಪ್ರತಿ ಷೇರಿಗೆ 413.20 ರೂ.ನಂತೆ ವಹಿವಾಟು ನಡೆಸಿತು.

ಇದನ್ನೂ ಓದಿ: Mutual Funds: ಉತ್ತಮ ರಿಟರ್ನ್ಸ್ ತಂದುಕೊಡುತ್ತಿರುವ ಮಿಡ್​ಕ್ಯಾಪ್ ಮ್ಯೂಚುವಲ್ ಫಂಡ್​ಗಳಿವು

ಸೆಪ್ಟೆಂಬರ್​ಗೆ ಕೊನೆಗೊಂಡ ತ್ರೈಮಾಸಿಕ ಅವಧಿಯ ಟಾಟಾ ಮೋಟರ್ಸ್ ಫಲಿತಾಂಶ ಬುಧವಾರ ಪ್ರಕಟಗೊಂಡಿತ್ತು. ಕಂಪನಿಯು 898 ಕೋಟಿ ನಿವ್ವಳ ನಷ್ಟ ಅನುಭವಿಸಿತ್ತು. ತ್ರೈಮಾಸಿಕ ಫಲಿತಾಂಶದ ಬೆನ್ನಲ್ಲೇ ಷೇರುಪೇಟೆಯಲ್ಲಿಯೂ ಕಂಪನಿಯ ವಹಿವಾಟು ಮುಗ್ಗರಿಸಿದೆ.

ಉಳಿದಂತೆ ಆ್ಯಕ್ಸಿಸ್ ಬ್ಯಾಂಕ್, ಬಜಾಜ್ ಫಿನ್​ಸರ್ವ್, M&M, ಟೈಟಾನ್ ಆ್ಯಂಡ್ ಕಂಪನಿ ಷೇರುಗಳು ಕುಸಿತ ದಾಖಲಿಸಿದರೆ, ಹೀರೊ ಮೋಟರ್​ಕಾರ್ಪ್, ಎಚ್​ಡಿಎಫ್​ಸಿ ಬ್ಯಾಂಕ್, ಕೋಟಕ್ ಮಹೀಂದ್ರಾ ಷೇರುಗಳು ಗಳಿಕೆ ದಾಖಲಿಸಿದವು.

ಮತ್ತೆ ಕುಸಿದ ರೂಪಾಯಿ

ಕಳೆದ ಕೆಲವು ದಿನಗಳಿಂದ ಚೇತರಿಕೆ ದಾಖಲಿಸಿ ಭರವಸೆ ಮೂಡಿಸಿದ್ದ ರೂಪಾಯಿ ಮೌಲ್ಯ ಗುರುವಾರ ಕುಸಿದಿದೆ. ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕನ್ ಡಾಲರ್ ವಿರುದ್ಧ ರೂಪಾಯಿ ಮೌಲ್ಯ 30 ಪೈಸೆ ಇಳಿಕೆಯಾಗಿ 81.77ರಲ್ಲಿ ವಹಿವಾಟು ಮುಗಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ