AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Stock Market Updates: 61000 ಗಡಿ ದಾಟಿದ ಸೆನ್ಸೆಕ್ಸ್, 9 ತಿಂಗಳ ಬಳಿಕ ಗರಿಷ್ಠ ಗಳಿಕೆ; ನಾಲ್ಕನೇ ದಿನವೂ ಮುಂದುವರಿದ ಓಟ

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಬಿಎಸ್​ಇ ಸೆನ್ಸೆಕ್ಸ್ ಸತತ ನಾಲ್ಕನೇ ದಿನವೂ ಗಳಿಕೆಯ ಓಟ ಮುಂದುವರಿಸಿದೆ. 61,000 ಗಡಿ ದಾಟುವ ಮೂಲಕ 9 ತಿಂಗಳ ಬಳಿಕ ಗರಿಷ್ಠ ವಹಿವಾಟು ದಾಖಲಿಸಿದೆ.

Stock Market Updates: 61000 ಗಡಿ ದಾಟಿದ ಸೆನ್ಸೆಕ್ಸ್, 9 ತಿಂಗಳ ಬಳಿಕ ಗರಿಷ್ಠ ಗಳಿಕೆ; ನಾಲ್ಕನೇ ದಿನವೂ ಮುಂದುವರಿದ ಓಟ
ಸಾಂದರ್ಭಿಕ ಚಿತ್ರImage Credit source: PTI
Follow us
TV9 Web
| Updated By: Ganapathi Sharma

Updated on:Nov 01, 2022 | 5:57 PM

ಮುಂಬೈ: ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಬಿಎಸ್​ಇ ಸೆನ್ಸೆಕ್ಸ್ (BSE Sensex) ಸತತ ನಾಲ್ಕನೇ ದಿನವೂ ಗಳಿಕೆಯ ಓಟ ಮುಂದುವರಿಸಿದೆ. 61,000 ಗಡಿ ದಾಟುವ ಮೂಲಕ 9 ತಿಂಗಳ ಬಳಿಕ ಗರಿಷ್ಠ ವಹಿವಾಟು ದಾಖಲಿಸಿದೆ. ಮಂಗಳವಾರದ ವಹಿವಾಟಿನ ಕೊನೆಯಲ್ಲಿ ಸೆನ್ಸೆಕ್ಸ್ 374.76 ಅಂಶ ಚೇತರಿಸಿ 61,121.35 ರಲ್ಲಿ ವಹಿವಾಟು ಮುಗಿಸಿತು. ರೂಪಾಯಿ ಮೌಲ್ಯದಲ್ಲಿ ಚೇತರಿಕೆ ಹಾಗೂ ವಿದೇಶಿ ನಿಧಿ ಒಳಹರಿವು ತಕ್ಷಣಕ್ಕೆ ಷೇರುಪೇಟೆಯಲ್ಲಿ (Stock Market) ಉತ್ತಮ ವಹಿವಾಟಿಗೆ ಕಾರಣವಾಯಿತು ಎಂದು ವಹಿವಾಟುದಾರರು ತಿಳಿಸಿದ್ದಾರೆ.

ಈ ವರ್ಷ ಜನರಿ 17ರಂದು ಸೆನ್ಸೆಕ್ಸ್ 61,000 ಗಡಿ ದಾಟಿತ್ತು. ಬಳಿಕ ವಹಿವಾಟಿನಲ್ಲಿ ಕುಸಿತವಾದದ್ದು, ವಿದೇಶಿ ಬಂಡವಾಳಗಾರರು ಹೂಡಿಕೆ ಹಿಂಪಡೆಯುತ್ತಾ ಸಾಗಿದ್ದು ಭಾರತೀಯ ಷೇರುಪೇಟೆ ವಹಿವಾಟಿನಲ್ಲಿ ಕುಸಿತಕ್ಕೆ ಕಾರಣವಾಗಿತ್ತು. ಇದೀಗ ಮತ್ತೆ ಚೇತರಿಸಿದೆ.

ಎನ್​ಎಸ್​ಇ ನಿಫ್ಟಿ ಕೂಡ 133.20 ಅಂಶ ಚೇತರಿಸಿಕೊಂಡು 18,145.40 ರಲ್ಲಿ ವಹಿವಾಟು ಮುಕ್ತಾಯಗೊಳಿಸಿತು.

ಇದನ್ನೂ ಓದಿ
Image
GST collection: ಜಿಎಸ್​ಟಿ ಸಂಗ್ರಹದಲ್ಲಿ ಭಾರಿ ಹೆಚ್ಚಳ, ಅಕ್ಟೋಬರ್​ನಲ್ಲಿ ಸಂಗ್ರಹವಾಯ್ತು 1.51 ಲಕ್ಷ ಕೋಟಿ ರೂ.
Image
World Savings Day 2022: ವಿಶ್ವ ಉಳಿತಾಯ ದಿನ; ಮಹತ್ವ, ಇತಿಹಾಸ, ಧ್ಯೇಯದ ಬಗ್ಗೆ ಇಲ್ಲಿದೆ ವಿವರ
Image
ವೈರಸ್ ದಾಳಿ; ಎಸ್​​ಬಿಐ ಸೇರಿ 18 ಬ್ಯಾಂಕ್​ಗಳ ಗ್ರಾಹಕರ ದತ್ತಾಂಶ ಅಪಾಯದಲ್ಲಿ
Image
FD Rates: ಎಫ್​ಡಿ ಬಡ್ಡಿ ದರ ಹೆಚ್ಚಳ; ವಿವಿಧ ಬ್ಯಾಂಕ್​ಗಳ ಎಫ್​ಡಿ ದರ ವಿವರ ಇಲ್ಲಿದೆ

ಟಾಪ್​ ಗಳಿಕೆ; ಮುಂಚೂಣಿಯಲ್ಲಿ ಎನ್​ಟಿಪಿಸಿ

ಸೆನ್ಸೆಕ್ಸ್​ನಲ್ಲಿ ಎನ್​ಟಿಪಿಸಿ ಷೇರುಗಳ ಮೌಲ್ಯದಲ್ಲಿ ಶೇಕಡಾ 5ರಷ್ಟು ವೃದ್ಧಿಯಾಗಿದೆ. ನಂತರ ಕ್ರಮವಾಗಿ ಪವರ್​ಗ್ರಿಡ್, ಡಾ.ರೆಡ್ಡೀಸ್, ಇನ್ಫೋಸಿಸ್, ಟಿಸಿಎಸ್, ಅಲ್ಟ್ರಾಟೆಕ್ ಸಿಮೆಂಟ್, ಎಚ್​ಸಿಎಲ್ ಟೆಕ್ನೋಲಜೀಸ್, ಸನ್ ಫಾರ್ಮಾ ಹಾಗೂ ಏಷ್ಯನ್ ಪೇಂಟ್ಸ್ ಉತ್ತಮ ಗಳಿಕೆ ದಾಖಲಿಸಿದವು.

ಕೇವಲ ನಾಲ್ಕು ಕಂಪನಿಗಳ ಷೇರುಗಳು ನಷ್ಟ ಅನುಭವಿಸಿದವು. ಆ್ಯಕ್ಸಿಸ್ ಬ್ಯಾಂಕ್, ರಿಲಯನ್ಸ್ ಇಂಡಸ್ಟ್ರೀಸ್ ಹಾಗೂ ಟಾಟಾ ಸ್ಟೀಲ್ ಷೇರುಗಳ ಮೌಲ್ಯದಲ್ಲಿ ಶೇಕಡಾ 3.76ರಷ್ಟು ಕುಸಿತವಾಯಿತು.

ಮತ್ತೆ ಬರುತ್ತಿದೆ ವಿದೇಶಿ ಹೂಡಿಕೆ

ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಮತ್ತೆ ದೇಶೀಯ ಮಾರುಕಟ್ಟೆಯತ್ತ ಮುಖಮಾಡುತ್ತಿದ್ದಾರೆ. ಉತ್ಪಾದನಾ ಚಟುವಟಿಕೆಗಳು ಅಕ್ಟೋಬರ್​​ನಲ್ಲಿ ಬಹಳ ಉತ್ತಮವಾಗಿರುವುದು ಪಿಎಂಐ (Manufacturing Purchasing Managers’ Index) ತಿಂಗಳ ಸಮೀಕ್ಷಾ ವರದಿಯಿಂದ ತಿಳಿದುಬಂದಿದೆ. ಉತ್ಪಾದನೆ ಚೇತರಿಸಿರುವುದೂ ಮಾರುಕಟ್ಟೆ ಓಟಕ್ಕೆ ಸಾಥ್ ನೀಡಿದೆ ಎಂದು ಮಾರುಕಟ್ಟೆ ಮೂಲಗಳು ಹೇಳಿವೆ.

ಸೋಮವಾರದಿಂದ ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಖರೀದಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಒಟ್ಟು 4,178.61 ಕೋಟಿ ಮೌಲ್ಯದ ಷೇರುಗಳನ್ನು ಖರೀದಿಸಿದ್ದಾರೆ ಎಂಬುದು ವಿನಿಯಮ ದತ್ತಾಂಶಗಳಿಂದ ತಿಳಿದುಬಂದಿದೆ.

ಇದನ್ನೂ ಓದಿ: GST collection: ಜಿಎಸ್​ಟಿ ಸಂಗ್ರಹದಲ್ಲಿ ಭಾರಿ ಹೆಚ್ಚಳ, ಅಕ್ಟೋಬರ್​ನಲ್ಲಿ ಸಂಗ್ರಹವಾಯ್ತು 1.51 ಲಕ್ಷ ಕೋಟಿ ರೂ.

‘ಹೂಡಿಕೆದಾರರು ಸದ್ಯ ಕೇಂದ್ರೀಯ ಬ್ಯಾಂಕ್​ಗಳ ನಡೆಯ ಮೇಲೆ ಕಣ್ಣಿಟ್ಟಿದ್ದಾರೆ. ದರ ಹೆಚ್ಚಳ ಸದ್ಯಕ್ಕೆ ಸ್ಥಗಿತಗೊಳ್ಳುವ ಹಾಗೂ ಹಣಕಾಸು ನೀತಿ ಸಭೆಗಳ ಮೇಲೆ ಗಮನ ಕೇಂದ್ರೀಕರಿಸಿದ್ದಾರೆ’ ಎಂದು ಜಿಯೋಜಿತ್ ಫೈನಾನ್ಶಿಯಲ್ ಸರ್ವೀಸಸ್​ನ ಮುಖ್ಯ ಸಂಶೋಧಕ ವಿನೋದ್ ನಾಯರ್ ಹೇಳಿದ್ದಾರೆ.

ಸರಕು ಮತ್ತು ಸೇವಾ ತೆರಿಗೆ ಸಂಗ್ರಹದಲ್ಲಿ ಅಕ್ಟೋಬರ್​ ತಿಂಗಳಲ್ಲಿ ಶೇಕಡಾ 16.6ರಷ್ಟು ಹೆಚ್ಚಳವಾಗಿದ್ದು, 1.51 ಲಕ್ಷ ಕೋಟಿ ರೂ. ಸಂಗ್ರಹವಾಗಿದೆ. ಇದು ಆರ್ಥಿಕ ಚಟುವಟಿಕೆಗಳು ಉತ್ತಮಗೊಳ್ಳುತ್ತಿರುವುದರ ಸೂಚಕವಾಗಿದೆ. ಇದೂ ಸಹ ವಹಿವಾಟಿನ ಮೇಲೆ ಪರಿಣಾಮ ಬೀರಿದೆ ಎಂದು ಮಾರುಕಟ್ಟೆ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:56 pm, Tue, 1 November 22

ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಕಾಶಿ ವಿಶ್ವನಾಥ ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ತೇಜ್​ಪ್ರತಾಪ್ ಯಾದವ್
ಕಾಶಿ ವಿಶ್ವನಾಥ ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ತೇಜ್​ಪ್ರತಾಪ್ ಯಾದವ್
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ:ಕುಮಟಾ-ಶಿರಸಿ ಸಂಪರ್ಕ ಕಡಿತ!
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ:ಕುಮಟಾ-ಶಿರಸಿ ಸಂಪರ್ಕ ಕಡಿತ!
ಬರೋಬ್ಬರಿ 11 ಸಿಕ್ಸ್​: IPLನಲ್ಲಿ ಅಟ್ಟರ್ ಫ್ಲಾಸ್, MLCಯಲ್ಲಿ ಸಿಡಿಲಬ್ಬರ
ಬರೋಬ್ಬರಿ 11 ಸಿಕ್ಸ್​: IPLನಲ್ಲಿ ಅಟ್ಟರ್ ಫ್ಲಾಸ್, MLCಯಲ್ಲಿ ಸಿಡಿಲಬ್ಬರ