ರಾಯಗಢ್ ಬಳಿ ಕುಸಿದ ಕಟ್ಟಡ, ಅವಶೇಷಗಳಡಿ ಹಲವಾರು ಜನ ಸಿಲುಕಿರುವ ಶಂಕೆ

ಮಹಾರಾಷ್ಟ್ರದ ರಾಯಗಢ್ ಜಿಲ್ಲೆಯ ಮಹಾಡ್ಬ ಎಂಬಲ್ಲಿ ಐದಂಸ್ತಿನ ಕಟ್ಟಟವೊಂದು ಸೋಮವಾರ ಸಾಯಂಕಾಲ ಕುಸಿದಿದ್ದು ಸುಮಾರು 80 ಜನ ಅವಶೇಷಗಳಡಿ ಸಿಕ್ಕಿಕೊಂಡಿರಬಹುದೆಂದು ಶಂಕಿಸಲಾಗಿದೆ. ಮೂಲಗಳ ಪ್ರಕಾರ ಇದುವರೆಗೆ 15 ಜನರನ್ನು ರಕ್ಷಿಸಲಾಗಿದ್ದು, ಉಳಿದವರನ್ನು ರಕ್ಷಿಸುವ ಕಾರ್ಯ ಜಾರಿಯಲ್ಲಿದೆ. ಅಗ್ನಿ ಶಾಮಕ ದಳ, ಪೊಲೀಸರು, ಮತ್ತು ಪುಣೆಯ ರಾಷ್ಟ್ಟೀಯ ವಿಪತ್ತು ನಿರ್ವಹಣಾ ದಳದ ಸಿಬ್ಬಂದಿ ಈಗಾಗಲೇ ಘಟನೆ ನಡೆದಿರುವ ಸ್ಥಳವನ್ನು ತಲುಪಿದ್ದು ರಕ್ಷಣಾ ಕಾರ್ಯದಲ್ಲಿ ತೊಡಗಿವೆ. ಕುಸಿದಿರುವ ಕಟ್ಟಡವನ್ನು ಕೇವಲ ಆರು ವರ್ಷಗಳ ಹಿಂದೆ ಕಟ್ಟಲಾಗಿತ್ತೆಂದು ಮೂಲಗಳು ತಿಳಿಸಿವೆ.

ರಾಯಗಢ್ ಬಳಿ ಕುಸಿದ ಕಟ್ಟಡ, ಅವಶೇಷಗಳಡಿ ಹಲವಾರು ಜನ ಸಿಲುಕಿರುವ ಶಂಕೆ
ಅರುಣ್​ ಕುಮಾರ್​ ಬೆಳ್ಳಿ

Updated on: Aug 24, 2020 | 8:49 PM

ಮಹಾರಾಷ್ಟ್ರದ ರಾಯಗಢ್ ಜಿಲ್ಲೆಯ ಮಹಾಡ್ಬ ಎಂಬಲ್ಲಿ ಐದಂಸ್ತಿನ ಕಟ್ಟಟವೊಂದು ಸೋಮವಾರ ಸಾಯಂಕಾಲ ಕುಸಿದಿದ್ದು ಸುಮಾರು 80 ಜನ ಅವಶೇಷಗಳಡಿ ಸಿಕ್ಕಿಕೊಂಡಿರಬಹುದೆಂದು ಶಂಕಿಸಲಾಗಿದೆ.

ಮೂಲಗಳ ಪ್ರಕಾರ ಇದುವರೆಗೆ 15 ಜನರನ್ನು ರಕ್ಷಿಸಲಾಗಿದ್ದು, ಉಳಿದವರನ್ನು ರಕ್ಷಿಸುವ ಕಾರ್ಯ ಜಾರಿಯಲ್ಲಿದೆ. ಅಗ್ನಿ ಶಾಮಕ ದಳ, ಪೊಲೀಸರು, ಮತ್ತು ಪುಣೆಯ ರಾಷ್ಟ್ಟೀಯ ವಿಪತ್ತು ನಿರ್ವಹಣಾ ದಳದ ಸಿಬ್ಬಂದಿ ಈಗಾಗಲೇ ಘಟನೆ ನಡೆದಿರುವ ಸ್ಥಳವನ್ನು ತಲುಪಿದ್ದು ರಕ್ಷಣಾ ಕಾರ್ಯದಲ್ಲಿ ತೊಡಗಿವೆ.

ಕುಸಿದಿರುವ ಕಟ್ಟಡವನ್ನು ಕೇವಲ ಆರು ವರ್ಷಗಳ ಹಿಂದೆ ಕಟ್ಟಲಾಗಿತ್ತೆಂದು ಮೂಲಗಳು ತಿಳಿಸಿವೆ.

Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Follow Us