AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಾದಲ್ಲಿ ಜರ್ಮನ್ ಮಹಿಳೆಯೊಬ್ಬಳ ಮೃತದೇಹ ಪತ್ತೆ

53 ವರ್ಷ ವಯಸ್ಸಿನ ಜರ್ಮನ್ ಮಹಿಳೆಯೊಬ್ಬರ ಮೃತದೇಹ ಅವರು ವಾಸವಾಗಿದ್ದ ದಕ್ಷಿಣ ಗೋವಾದ ಕಾನಾಕೊನಾ ಫ್ಯಾಟ್​ನಲ್ಲಿ ದೊರಕಿದೆ. ಮೃತ ಮಹಿಳೆಯನ್ನು ಸ್ಟಿಫಾನಿ ಹಿಸ್ಸರ್ ಎಂದು ಗುರುತಿಸಲಾಗಿದ್ದು ಆಕೆಯ ಮಗಳು ಜರ್ಮನಿಯಿಂದ ಗೋವಾಗೆ ಬಂದಾಗಲೇ ಆಕೆ ಸತ್ತಿರುವುದು ಬೆಳಕಿಗೆ ಬಂದಿದೆ. ಹಿಸ್ಸರ್ ತಮ್ಮ ಪ್ಲ್ಯಾಟ್​ನಲ್ಲಿ ಒಬ್ಬರೇ ತಂಗಿದ್ದರಂತೆ. ಸ್ಟಿಫಾನಿಯೊಂದಿಗೆ ಕಳೆದ ಕೆಲವು ವಾರಗಳಿಂದ ನಿರಂತರವಾಗಿ ಸಂಪರ್ಕದಲ್ಲಿದ್ದ ಮಗಳು ಹಿಮಾನಿ ಹಿಸ್ಸರ್​ಗೆ ತನ್ನ ತಾಯಿ ಫೋನ್ ಕೆಲ ದಿನಗಳಿಂದ ಕರೆಗಳನ್ನು ರಿಸೀವ್ ಮಾಡದೇ ಹೋಗಿದ್ದರಿಂದ ಗೋವಾಗೆ ಆಗಮಿಸಿದ್ದರು. ಆಕೆ ಮನೆ […]

ಗೋವಾದಲ್ಲಿ ಜರ್ಮನ್ ಮಹಿಳೆಯೊಬ್ಬಳ ಮೃತದೇಹ ಪತ್ತೆ
ಸಾಂದರ್ಭಿಕ ಚಿತ್ರ
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Sep 18, 2020 | 7:53 PM

Share

53 ವರ್ಷ ವಯಸ್ಸಿನ ಜರ್ಮನ್ ಮಹಿಳೆಯೊಬ್ಬರ ಮೃತದೇಹ ಅವರು ವಾಸವಾಗಿದ್ದ ದಕ್ಷಿಣ ಗೋವಾದ ಕಾನಾಕೊನಾ ಫ್ಯಾಟ್​ನಲ್ಲಿ ದೊರಕಿದೆ. ಮೃತ ಮಹಿಳೆಯನ್ನು ಸ್ಟಿಫಾನಿ ಹಿಸ್ಸರ್ ಎಂದು ಗುರುತಿಸಲಾಗಿದ್ದು ಆಕೆಯ ಮಗಳು ಜರ್ಮನಿಯಿಂದ ಗೋವಾಗೆ ಬಂದಾಗಲೇ ಆಕೆ ಸತ್ತಿರುವುದು ಬೆಳಕಿಗೆ ಬಂದಿದೆ.

ಹಿಸ್ಸರ್ ತಮ್ಮ ಪ್ಲ್ಯಾಟ್​ನಲ್ಲಿ ಒಬ್ಬರೇ ತಂಗಿದ್ದರಂತೆ. ಸ್ಟಿಫಾನಿಯೊಂದಿಗೆ ಕಳೆದ ಕೆಲವು ವಾರಗಳಿಂದ ನಿರಂತರವಾಗಿ ಸಂಪರ್ಕದಲ್ಲಿದ್ದ ಮಗಳು ಹಿಮಾನಿ ಹಿಸ್ಸರ್​ಗೆ ತನ್ನ ತಾಯಿ ಫೋನ್ ಕೆಲ ದಿನಗಳಿಂದ ಕರೆಗಳನ್ನು ರಿಸೀವ್ ಮಾಡದೇ ಹೋಗಿದ್ದರಿಂದ ಗೋವಾಗೆ ಆಗಮಿಸಿದ್ದರು. ಆಕೆ ಮನೆ ತಲುಪಿದಾಗ ಅದು ಒಳಗಿನಿಂದ ಲಾಕ್ ಆಗಿರುವುದನ್ನು ಕಂಡುಕೊಂಡಿದ್ದಾಳೆ.

20 ವರ್ಷ ವಯಸ್ಸಿನ ಹಿಮಾನಿ, ತನ್ನ ಒಬ್ಬ ಸ್ನೇಹಿತನ ಸಹಾಯದಿಂದ ಸ್ಟಿಫಾನಿಯ ಮನೆ ಬಾಗಿಲನ್ನು ಒಡೆದು ಒಳಪ್ರವೇಶಿಸಿದಾಗ ಆಕೆ ಸತ್ತು ಬಿದ್ದಿರುವುದು ಪತ್ತೆಯಾಗಿದೆ. ಪೊಲೀಸರಿಗೆ ವಿಷಯ ಗೊತ್ತಾಗಿ ಅವರು ಸ್ಥಳಕ್ಕೆ ಬಂದು ಮಹಜರ್ ನಡೆಸಿದ್ದಾರೆ.

ಹಿಮಾನಿ ಪೊಲೀಸರಿಗೆ ತಿಳಿಸಿರುವ ಮಾಹಿತಿಯ ಪ್ರಕಾರ, ಸ್ಟಿಫಾನಿ ಖಿನ್ನತೆ ಮತ್ತು ಅಸ್ತಮಾ ಸಮಸ್ಯೆಗಳಿಂದ ಬಳಲುತ್ತಿದ್ದಳು ಮತ್ತು ಈ ಅನಾರೋಗ್ಯಗಳಿಗೆ ಔಷಧಿಯನ್ನು ಸಹ ತೆಗೆದುಕೊಳ್ಳುತ್ತಿದ್ದಳು. ಪೊಲೀಸರು ಅಸಹಜ ಸಾವು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

 

Follow Us
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್