AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಾದಲ್ಲಿ ಜರ್ಮನ್ ಮಹಿಳೆಯೊಬ್ಬಳ ಮೃತದೇಹ ಪತ್ತೆ

53 ವರ್ಷ ವಯಸ್ಸಿನ ಜರ್ಮನ್ ಮಹಿಳೆಯೊಬ್ಬರ ಮೃತದೇಹ ಅವರು ವಾಸವಾಗಿದ್ದ ದಕ್ಷಿಣ ಗೋವಾದ ಕಾನಾಕೊನಾ ಫ್ಯಾಟ್​ನಲ್ಲಿ ದೊರಕಿದೆ. ಮೃತ ಮಹಿಳೆಯನ್ನು ಸ್ಟಿಫಾನಿ ಹಿಸ್ಸರ್ ಎಂದು ಗುರುತಿಸಲಾಗಿದ್ದು ಆಕೆಯ ಮಗಳು ಜರ್ಮನಿಯಿಂದ ಗೋವಾಗೆ ಬಂದಾಗಲೇ ಆಕೆ ಸತ್ತಿರುವುದು ಬೆಳಕಿಗೆ ಬಂದಿದೆ. ಹಿಸ್ಸರ್ ತಮ್ಮ ಪ್ಲ್ಯಾಟ್​ನಲ್ಲಿ ಒಬ್ಬರೇ ತಂಗಿದ್ದರಂತೆ. ಸ್ಟಿಫಾನಿಯೊಂದಿಗೆ ಕಳೆದ ಕೆಲವು ವಾರಗಳಿಂದ ನಿರಂತರವಾಗಿ ಸಂಪರ್ಕದಲ್ಲಿದ್ದ ಮಗಳು ಹಿಮಾನಿ ಹಿಸ್ಸರ್​ಗೆ ತನ್ನ ತಾಯಿ ಫೋನ್ ಕೆಲ ದಿನಗಳಿಂದ ಕರೆಗಳನ್ನು ರಿಸೀವ್ ಮಾಡದೇ ಹೋಗಿದ್ದರಿಂದ ಗೋವಾಗೆ ಆಗಮಿಸಿದ್ದರು. ಆಕೆ ಮನೆ […]

ಗೋವಾದಲ್ಲಿ ಜರ್ಮನ್ ಮಹಿಳೆಯೊಬ್ಬಳ ಮೃತದೇಹ ಪತ್ತೆ
ಸಾಂದರ್ಭಿಕ ಚಿತ್ರ
ಅರುಣ್​ ಕುಮಾರ್​ ಬೆಳ್ಳಿ
|

Updated on: Sep 18, 2020 | 7:53 PM

Share

53 ವರ್ಷ ವಯಸ್ಸಿನ ಜರ್ಮನ್ ಮಹಿಳೆಯೊಬ್ಬರ ಮೃತದೇಹ ಅವರು ವಾಸವಾಗಿದ್ದ ದಕ್ಷಿಣ ಗೋವಾದ ಕಾನಾಕೊನಾ ಫ್ಯಾಟ್​ನಲ್ಲಿ ದೊರಕಿದೆ. ಮೃತ ಮಹಿಳೆಯನ್ನು ಸ್ಟಿಫಾನಿ ಹಿಸ್ಸರ್ ಎಂದು ಗುರುತಿಸಲಾಗಿದ್ದು ಆಕೆಯ ಮಗಳು ಜರ್ಮನಿಯಿಂದ ಗೋವಾಗೆ ಬಂದಾಗಲೇ ಆಕೆ ಸತ್ತಿರುವುದು ಬೆಳಕಿಗೆ ಬಂದಿದೆ.

ಹಿಸ್ಸರ್ ತಮ್ಮ ಪ್ಲ್ಯಾಟ್​ನಲ್ಲಿ ಒಬ್ಬರೇ ತಂಗಿದ್ದರಂತೆ. ಸ್ಟಿಫಾನಿಯೊಂದಿಗೆ ಕಳೆದ ಕೆಲವು ವಾರಗಳಿಂದ ನಿರಂತರವಾಗಿ ಸಂಪರ್ಕದಲ್ಲಿದ್ದ ಮಗಳು ಹಿಮಾನಿ ಹಿಸ್ಸರ್​ಗೆ ತನ್ನ ತಾಯಿ ಫೋನ್ ಕೆಲ ದಿನಗಳಿಂದ ಕರೆಗಳನ್ನು ರಿಸೀವ್ ಮಾಡದೇ ಹೋಗಿದ್ದರಿಂದ ಗೋವಾಗೆ ಆಗಮಿಸಿದ್ದರು. ಆಕೆ ಮನೆ ತಲುಪಿದಾಗ ಅದು ಒಳಗಿನಿಂದ ಲಾಕ್ ಆಗಿರುವುದನ್ನು ಕಂಡುಕೊಂಡಿದ್ದಾಳೆ.

20 ವರ್ಷ ವಯಸ್ಸಿನ ಹಿಮಾನಿ, ತನ್ನ ಒಬ್ಬ ಸ್ನೇಹಿತನ ಸಹಾಯದಿಂದ ಸ್ಟಿಫಾನಿಯ ಮನೆ ಬಾಗಿಲನ್ನು ಒಡೆದು ಒಳಪ್ರವೇಶಿಸಿದಾಗ ಆಕೆ ಸತ್ತು ಬಿದ್ದಿರುವುದು ಪತ್ತೆಯಾಗಿದೆ. ಪೊಲೀಸರಿಗೆ ವಿಷಯ ಗೊತ್ತಾಗಿ ಅವರು ಸ್ಥಳಕ್ಕೆ ಬಂದು ಮಹಜರ್ ನಡೆಸಿದ್ದಾರೆ.

ಹಿಮಾನಿ ಪೊಲೀಸರಿಗೆ ತಿಳಿಸಿರುವ ಮಾಹಿತಿಯ ಪ್ರಕಾರ, ಸ್ಟಿಫಾನಿ ಖಿನ್ನತೆ ಮತ್ತು ಅಸ್ತಮಾ ಸಮಸ್ಯೆಗಳಿಂದ ಬಳಲುತ್ತಿದ್ದಳು ಮತ್ತು ಈ ಅನಾರೋಗ್ಯಗಳಿಗೆ ಔಷಧಿಯನ್ನು ಸಹ ತೆಗೆದುಕೊಳ್ಳುತ್ತಿದ್ದಳು. ಪೊಲೀಸರು ಅಸಹಜ ಸಾವು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

 

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್