AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬುಟ್ಟಿ ನೇಯ್ದು ಬದುಕು ಸಾಗಿಸುತ್ತಿದ್ದ ಕೊರವ ಸಮುದಾಯದ ಹಾಡು-ಪಾಡು

ಕೊರೊನಾ ಎಂಬ ಮಹಾಮಾರಿಯ ಜೊತೆಗೆ ಆಧುನಿಕತೆಯ ಭರಾಟೆ, ಬುಟ್ಟಿ ಹೆಣೆಯುವ ಕೊರವ ಸಮುದಾಯದ ಮೇಲೆ ಭಾರೀ ಹೊಡೆತ ಕೊಟ್ಟಿದೆ. ಇಂತಹ ಜನರನ್ನು ಸರಕಾರ ಗುರುತಿಸಿ ಸಹಾಯ ಮಾಡಬೇಕಿದೆ.

ಬುಟ್ಟಿ ನೇಯ್ದು ಬದುಕು ಸಾಗಿಸುತ್ತಿದ್ದ ಕೊರವ ಸಮುದಾಯದ ಹಾಡು-ಪಾಡು
ಬುಟ್ಟಿ ಹೆಣೆಯುತ್ತಿರುವ ಮಹಿಳೆಯರು
TV9 Web
| Edited By: |

Updated on:Apr 06, 2022 | 8:48 PM

Share

ಬೀದರ್: ಮಹಾರಾಷ್ಟ್ರ ಹಾಗೂ ತೆಲಂಗಾಣ ರಾಜ್ಯಗಳ ಗಡಿ ಹಂಚಿಕೊಂಡಿರುವ ಬೀದರ್ ಹಿಂದುಳಿದ ಜಿಲ್ಲೆಯಾಗಿದೆ. ಜಿಲ್ಲೆಯಲ್ಲಿ ದುಡಿಯುವ ಕೈಗಳಿಗೇನು ಕಡಿಮೆಯಿಲ್ಲ. ಆದರೆ ಕೊರೊನಾ ಎಂಬ ಮಹಾಮಾರಿಯ ಜೊತೆಗೆ ಆಧುನಿಕತೆಯ ಭರಾಟೆ, ಬುಟ್ಟಿ ಹೆಣೆಯುವ ಕೊರವ ಸಮುದಾಯಕ್ಕೆ ಭಾರೀ ಹೊಡೆತ ಕೊಟ್ಟಿದೆ. ಕೊರವ ಸಮುದಾಯದ ಬುಟ್ಟಿ ಹೆಣೆಯುವ ಕಸುಬಿಗೆ ಕುತ್ತು ತಂದಿದೆ.

ಬೀದರ್ ಜಿಲ್ಲೆಯ ವಿವಿಧ ಭಾಗದಲ್ಲಿ, ಕೊರವ ಸಮುದಾಯದವರು ಈಚಲು ಬರಲಿನಿಂದ ಬುಟ್ಟಿ ಹೆಣೆಯುವುದನ್ನೇ ಕಾಯಕವನ್ನಾಗಿ ಮಾಡಿಕೊಂಡಿದ್ದರು. ಅಂದಾಜು ಇನ್ನೂರಕ್ಕೂ ಹೆಚ್ಚು ಕೊರವ ಕುಟುಂಬಗಳು ಇದನ್ನೇ ನಂಬಿ ಜೀವನ ಸಾಗಿಸುತ್ತಿದ್ದವು. ಆದರೆ ಇದೀಗ, ಮಾರುಕಟ್ಟೆಯಲ್ಲಿ ಈಚಲು ಮರದ ಬರಲಿನಿಂದ ತಯಾರಿಸುವ ಬುಟ್ಟಿ, ಕಸಬರಿಗೆ, ಚಾಪೆ, ಜಲ್ಲಿಗಳಿಗೆ ಬೇಡಿಕೆ ಕುಸಿದಿದೆ. ಇವುಗಳ ಜಾಗದಲ್ಲಿ ಆಧುನಿಕ ತಂತ್ರಜ್ಞಾನದಿಂದ ತಯಾರಿಸಿದ ಪ್ಲಾಸ್ಟಿಕ್ ಸಾಮಾನುಗಳು ಕಂಗೊಳಿಸುತ್ತಿವೆ. ಕಣ್ಣು ಕುಕ್ಕುವ ಆಧುನಿಕ ವಸ್ತುಗಳ ಎದುರು ಕೊರವರು ಹೆಣೆಯುವ ಈಚಲು ಸಾಮಾನುಗಳು ಕಳೆಗುಂದುವಂತಾಗಿದೆ. ಆ ಮೂಲಕ, ಗುಡಿ ಕೈಗಾರಿಕೆಗೆ ಕುತ್ತು ಬಂದಿದೆ.

ಮೊದಲೇ ಹತ್ತಾರು ಸಮಸ್ಯೆಗಳನ್ನು ಎದುರಿಸುತ್ತಿದ್ದ ಕೊರವ ಸಮುದಾಯದವರು, ಕೊರೊನಾದಿಂದಲೂ ಭಾರೀ ಕಷ್ಟ ಅನುಭವಿಸಬೇಕಾಗಿದೆ. ಬುಟ್ಟಿ ನೇಯುವ ಕಾಯಕ ಬಿಟ್ಟರೆ ಇವರಿಗೆ ಬೇರೆ ಉದ್ಯೋಗ ಗೊತ್ತಿಲ್ಲ. ಕೊರವ ಸಮುದಾಯದ ಜನರು ಮೂಲ ಕಸುಬಿನಂತೆ ಬುಟ್ಟಿ ತಯಾರಿಸಿ, ಹಳ್ಳಿಹಳ್ಳಿಗೆ ಹೋಗಿ ಮಾರಾಟ ಮಾಡುವ ಕೆಲಸ ಮಾಡುತ್ತಿದ್ದರು. ಬಂದ ಹಣದಲ್ಲಿ ಕುಟುಂಬ ನಿರ್ವಹಣೆ ಮಾಡುತ್ತಿದ್ದರು. ಆದರೆ ಈಗ ಮೊದಲಿನಂತೆ ಹಳ್ಳಿಹಳ್ಳಿಗೆ ಹೋಗಿ ತಾವು ತಯಾರಿಸಿದ ವಸ್ತುಗಳನ್ನು ಮಾರಾಟ ಮಾಡಲಾಗುತ್ತಿಲ್ಲ. ಕೊರೊನಾ ಎಂಬ ಮಹಾಮಾರಿಯಿಂದ ಇಡೀ ಸಮುದಾಯ ಸಂಕಷ್ಟ ಎದುರಿಸುವಂತಾಗಿದೆ.

ಕೊರೊನಾ ಸೋಂಕು ಇಲ್ಲದ ದಿನಮಾನಗಳಲ್ಲಿ ಹಳ್ಳಿಹಳ್ಳಿಗೆ ಹೋಗಿ ತಾವು ತಯಾರಿಸಿದ ವಸ್ತುಗಳನ್ನು ಮಾರಾಟ ಮಾಡಿ ಬರುತ್ತಿದ್ದರು. ಜನರು ಕೂಡಾ ಇವರು ತಂದಿದ್ದ ವಸ್ತುಗಳನ್ನು ಖರೀದಿಸುತ್ತಿದ್ದರು. ಆದರೆ ಈಗ, ಇವರಿಂದ ತಂದಿರುವ ವಸ್ತುಗಳನ್ನ ಖರೀದಿಸಲು ಜನ ಹಿಂದೆ ಮುಂದೆ ಯೋಚಿಸುತ್ತಿದ್ದಾರೆ. ಹೀಗಾಗಿ, ಕೊರವರ ಬದುಕು ಸಂಕಷ್ಟಕ್ಕೆ ಸಿಲುಕಿದಂತಾಗಿದೆ. ಜೊತೆಗೆ, ಇವರು ಬುಟ್ಟಿ ತಯಾರಿಸಲು ಬಳಸುವ ಕಚ್ಚಾವಸ್ತುಗಳನ್ನು ಅಕ್ಕಪಕ್ಕದ ಜಿಲ್ಲೆಗಳಿಂದ ಖರೀದಿಸಿ ತರುತ್ತಿದ್ದರು. ಆದರೆ, ಮೊದಲಿಗಿಂತ ಈಗ ಕಚ್ಚಾ ವಸ್ತುವಿನ ಬೆಲೆ ದುಪ್ಪಟ್ಟಾಗಿದ್ದು ಬೇರೆ ಜಿಲ್ಲೆಗಳಿಂದ ಕಚ್ಚಾ ವಸ್ತುಗಳನ್ನು ತರುವುದು ಕೂಡಾ ಸಮಸ್ಯೆಯಾಗಿ ಪರಿಣಮಿಸಿದೆ.

ಕೊರೊನಾ ಎಂಬ ಮಾಹಾಮಾರಿ ಸಾವಿರಾರು ಜನರ ಹೊಟ್ಟೆಯ ಮೇಲೆ ಹೊಡೆತ ಕೊಟ್ಟಿದೆ. ದುಡಿದು ಯಾರ ಹಂಗಿಲ್ಲದೆ ಬದುಕುತ್ತಿದ್ದವರೂ ಇನ್ನೊಬ್ಬರಿಗೆ ಕೈಯ್ಯೊಡ್ಡುವ ಹಾಗಾಗಿದ್ದು ಶೋಚನಿಯ ಸಂಗತಿ. ಕೊರವ ಜನಾಂಗ ರಾಜ್ಯದ ಮೂಲೆಮೂಲೆಯಲ್ಲಿ, ಸಾವಿರಾರು ಸಂಖ್ಯೆಯಲ್ಲಿ ವಾಸಿಸುತ್ತಿದೆ. ಇಂತಹ ಜನರನ್ನು ಸರಕಾರ ಗುರುತಿಸಿ ಸಹಾಯ ಮಾಡಬೇಕಿದೆ.

Published On - 7:49 pm, Mon, 18 January 21

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ