AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajiv Gandhi Death Anniversary 2021: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಸ್ಮರಣಾರ್ಥ ನಾಳೆ ಸೇವಾ ಮತ್ತು ಸದ್ಭಾವನಾ ದಿನ ಆಚರಣೆಗೆ ಕಾಂಗ್ರೆಸ್ ಕರೆ

Anti Terrorism Day 2021: ಕೊವಿಡ್ ವಿಪರೀತವಾಗಿ ಹರಡುತ್ತಿರುವ ಈ ಸಂದರ್ಭದಲ್ಲಿ ಕಾಂಗ್ರೆಸ್​ನ ಎಲ್ಲಾ ಕಾರ್ಯಕರ್ತರು ಕೊವಿಡ್ ಸೋಂಕಿತರಿಗೆ ಅಗತ್ಯವಿರುವ ಸಹಾಯ ಮಾಡಬೇಕು. ಆಕ್ಸಿಜನ್ ಸಿಲಿಂಡರ್, ಮಾಸ್ಕ್, ಔಷಧ, ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡಬೇಕು. ರಾಜೀವ್ ಗಾಂಧಿಯವರ ಸ್ಮರಣಾರ್ಥ ಕೊವಿಡ್ ವಿರುದ್ಧ ಹೋರಾಡಬೇಕು. ಕೊವಿಡ್ ಲಸಿಕೆ ಪಡೆಯಲು ನೋಂದಣಿ ಮಾಡಿಸಲು ಬಡಜನರಿಗೆ ಸಹಾಯ ಮಾಡಬೇಕು ಎಂದು ಸಹ ಅವರು ಕರೆ ನೀಡಿದ್ದಾರೆ.

Rajiv Gandhi Death Anniversary 2021: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಸ್ಮರಣಾರ್ಥ ನಾಳೆ ಸೇವಾ ಮತ್ತು ಸದ್ಭಾವನಾ ದಿನ ಆಚರಣೆಗೆ ಕಾಂಗ್ರೆಸ್ ಕರೆ
ರಾಜೀವ್ ಗಾಂಧಿ
guruganesh bhat
|

Updated on: May 20, 2021 | 7:38 PM

Share

ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಶ್ರೀಲಂಕಾದ ಎಲ್​ಟಿಟಿಇ ಉಗ್ರರ ಮಾನವ ಬಾಂಬ್ ದಾಳಿಯಿಂದ ಮೃತಪಟ್ಟು ನಾಳೆಗೆ 30 ವರ್ಷ. ರಾಜೀವ್ ಗಾಂಧಿ ಪುಣ್ಯತಿಥಿಯ ಸ್ಮರಾಣಾರ್ಥ ದೇಶದ ಪ್ರಮುಖ ವಿರೋಧ ಪಕ್ಷ ಕಾಂಗ್ರೆಸ್ ನಾಳೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಕೊವಿಡ್ ಪಿಡುಗು ವ್ಯಾಪಕವಾಗಿ ಹಬ್ಬಿರುವ ಈ ದಿನದಲ್ಲಿ ರಾಜೀವ್ ಗಾಂಧಿಯವರನ್ನು ಹತ್ಯೆಗೈದ ದಿನವನ್ನು ಭಯೋತ್ಪಾದನಾ ವಿರೋಧಿ ದಿನವನ್ನಾಗಿ ಆಚರಿಸುವುದು ಇನ್ನಷ್ಟು ಮಹತ್ವ ಪಡೆದಿದೆ. ಅದರಲ್ಲೂ ಕಾಂಗ್ರೆಸ್ ನಾಳೆ ‘ಸೇವಾ ಮತ್ತು ಸದ್ಭಾವನಾ ದಿನ’ವನ್ನಾಗಿ ಆಚರಿಸಲು ತೀರ್ಮಾನಿಸಿದೆ. ಈ ಕುರಿತು ಕಾಂಗ್ರೆಸ್​ನ ಸಂಘಟನಾ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.

ರಾಜೀವ್ ಗಾಂಧಿಯವರ ಸ್ಮರಣಾರ್ಥ ಕಾಂಗ್ರೆಸ್​ನ ವಿಧಾನಸಭಾ ಮತ್ತು ವಿಧಾನಪರಿಷತ್ ಸದಸ್ಯರಿಗೆ ತಮ್ಮ ಕ್ಷೇತ್ರಕ್ಕೆ ಕನಿಷ್ಠ ಎರಡು ಆ್ಯಂಬುಲೆನ್ಸ್​ಗಳನ್ನು ಕೊಡುಗೆ ನೀಡಲು ಕೆ.ಸಿ.ವೇಣುಗೋಪಾಲ್ ಕರೆ ನೀಡಿದ್ದಾರೆ. ಅಲ್ಲದೇ, ರಾಜ್ಯ ಮತ್ತು ಜಿಲ್ಲಾಮಟ್ಟಗಳಲ್ಲಿ ಸಾಮೂಹಿಕ ಮಾಸ್ಕ್ ವಿತರಣೆ ಮಾಡಲು ಅವರು ಸೂಚನೆ ನೀಡಿದ್ದಾರೆ.

ಕೊವಿಡ್ ವಿಪರೀತವಾಗಿ ಹರಡುತ್ತಿರುವ ಈ ಸಂದರ್ಭದಲ್ಲಿ ಕಾಂಗ್ರೆಸ್​ನ ಎಲ್ಲಾ ಕಾರ್ಯಕರ್ತರು ಕೊವಿಡ್ ಸೋಂಕಿತರಿಗೆ ಅಗತ್ಯವಿರುವ ಸಹಾಯ ಮಾಡಬೇಕು. ಆಕ್ಸಿಜನ್ ಸಿಲಿಂಡರ್, ಮಾಸ್ಕ್, ಔಷಧ, ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡಬೇಕು. ರಾಜೀವ್ ಗಾಂಧಿಯವರ ಸ್ಮರಣಾರ್ಥ ಕೊವಿಡ್ ವಿರುದ್ಧ ಹೋರಾಡಬೇಕು. ಕೊವಿಡ್ ಲಸಿಕೆ ಪಡೆಯಲು ನೋಂದಣಿ ಮಾಡಿಸಲು ಬಡಜನರಿಗೆ ಸಹಾಯ ಮಾಡಬೇಕು ಎಂದು ಸಹ ಅವರು ಕರೆ ನೀಡಿದ್ದಾರೆ.

ದೇಶ ಕಂಡ ಅತಿ ಕಿರಿಯ ಪ್ರಧಾನಿ ರಾಜೀವ್ ಗಾಂಧಿ ದೇಶ ಕಂಡ ಅತ್ಯಂತ ಕಿರಿಯ ಪ್ರಧಾನಿ. ತಮ್ಮ 40ನೇ ವಯಸ್ಸಿನಲ್ಲೇ ಪ್ರಧಾನಿ ಪಟ್ಟ ಏರಿದ್ದ ಅವರದ್ದು ಮಹತ್ವಾಕಾಂಕ್ಷೆಯ ವ್ಯಕ್ತಿತ್ವ. ತಾಯಿ, ದಿವಂಗತ ಇಂದಿರಾ ಗಾಂಧಿ ತಮ್ಮ ಅಂಗರಕ್ಷಕರ ಗುಂಡಿಗೇ ಆಹುತಿಯಾದ ನಂತರ ದೇಶದ ರಾಜಕೀಯದಲ್ಲಿ ದೇಶದ ಸಾರ್ಥ್ಯ ವಹಿಸುವವರು ಯಾರು ಎಂಬ ಪ್ರಶ್ನೆ ಎದುರಾಯಿತು. ಒಮ್ಮೆಲೆ ಸಾರ್ವತ್ರಿಕ ಚುನಾವಣೆ ಎದುರಾಯಿತು. ಕಾಂಗ್ರೆಸ್ ರಾಜೀವ್ ಗಾಂಧಿಯವರ ನಾಯಕತ್ವದಲ್ಲಿ ಹಿಂದೆಂದಿಗಿಂತಲೂ ಹೆಚ್ಚು ಸ್ಥಾನಗಳನ್ನು ಪಡೆದು ಅಭೂತಪೂರ್ವ ವಿಜಯ ಸಾಧಿಸಿತು. ಅಂದಿನ 508 ಲೋಕಸಭಾ ಕ್ಷೇತ್ರಗಳಲ್ಲಿ 401 ಕ್ಷೇತ್ರಗಳನ್ನು ಮೊಗೆದು ಬಾಚಿಕೊಂಡಿತು. ಇಂದಿರಾ ಗಾಂಧಿಯವರ ಮಗ ರಾಜೀವ್ ಗಾಂಧಿ ಪ್ರಧಾನಿಯಾದರು.

ಇದನ್ನೂ ಓದಿ: Bigg Boss: ಕೊವಿಡ್​ ನಿಯಮ ಉಲ್ಲಂಘನೆ; ಬಿಗ್​ ಬಾಸ್​ ಮನೆ ಸೀಜ್​, 1 ಲಕ್ಷ ರೂಪಾಯಿ ದಂಡ

ದೇಶದಲ್ಲಿ ಈಗಲೂ ಶೇ.50ರಷ್ಟು ಜನರು ಮಾಸ್ಕ್ ಧರಿಸುತ್ತಿಲ್ಲ, ಜೂನ್ ಅಂತ್ಯದೊಳಗೆ ಪ್ರತಿದಿನ 45 ಲಕ್ಷ ಕೊವಿಡ್ ಟೆಸ್ಟ್ (Congress plans to step up relief activities to mark Rajiv Gandhis death anniversary)

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ