AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನಭವಿಷ್ಯ | ಜನವರಿ 06, 2021

ಜನವರಿ 6, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನಭವಿಷ್ಯ.

ದಿನಭವಿಷ್ಯ | ಜನವರಿ 06, 2021
ದಿನ ಭವಿಷ್ಯ
Ghanashyam D M | ಡಿ.ಎಂ.ಘನಶ್ಯಾಮ
| Edited By: |

Updated on: Jan 06, 2021 | 6:33 AM

Share

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ದಕ್ಷಿಣಾಯನ, ಮಾರ್ಗಶಿರ ಮಾಸ, ಹೇಮಂತ ಋತು, ಕೃಷ್ಣಪಕ್ಷ, ಅಷ್ಟಮಿ, ಬುಧವಾರ, ಜನವರಿ 06, 2021. ಹಸ್ತ ನಕ್ಷತ್ರ, ರಾಹುಕಾಲ: ಮಧ್ಯಾಹ್ನ 12ರಿಂದ 1.30. ಬೆಂಗಳೂರಿನಲ್ಲಿ ಸೂರ್ಯೋದಯ: ಬೆಳಿಗ್ಗೆ 6.47. ಸೂರ್ಯಾಸ್ತ: ಸಂಜೆ 5.55

ರಾಶಿ ಭವಿಷ್ಯ

ಮೇಷ: ಗುರಿಸಾಧನೆಗೆ ಇದು ಸೂಕ್ತ ಸಮಯ. ಪ್ರಯತ್ನಿಸಿದ ಕಾರ್ಯಗಳು ಕೈಗೂಡುವವು. ವಿದ್ಯಾರ್ಥಿಗಳಿಗೆ ಉನ್ನತ ಪ್ರಶಸ್ತಿ ದೊರಕುವ ಸಾಧ್ಯತೆ ಇರುವುದು. ಶುಭ ಸಂಖ್ಯೆ 1

ವೃಷಭ: ವಿನಯಪೂರ್ವಕ ಕಾರ್ಯ ಸಾಧಿಸುವಿರಿ. ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗುವಿರಿ. ವಿವಿಧ ಮೂಲದಿಂದ ಧನಪ್ರಾಪ್ತಿ ಯೋಗವಿದೆ. ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಯೋಗವಿದೆ. ವಾಹನ ಖರೀದಿ ಯೋಗವಿರುವುದು. ಶುಭ ಸಂಖ್ಯೆ 8

ಮಿಥುನ: ಭಾವುಕತೆಯಿಂದ ಕಾರ್ಯಸಾಧಿಸಲು ಪ್ರಯತ್ನಿಸುವಿರಿ. ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಸಂಶಯಿತ ನಡೆಯಿಂದ ಮನಸ್ತಾಪ. ಸಣ್ಣಪುಟ್ಟ ಕೆಲಸಗಳೂ ವಿಳಂಬವಾಗುವ ಸಾಧ್ಯತೆ ಇದೆ. ಅಭದ್ರತೆ ಕಾಡುವುದು. ಶುಭ ಸಂಖ್ಯೆ 5

ಕಟಕ: ಅನಾವಶ್ಯಕ ತಿರುಗಾಟದಿಂದ ಆಲಸ್ಯ. ದುರ್ಜನರ ಸಹವಾಸ ದೋಷ ಕಂಡುಬರುವುದು. ಐಷಾರಾಮಿ ವಸ್ತುಗಳ ಖರೀದಿ ಸಂಭವ. ವ್ಯಾಪಾರ-ಉದ್ಯಮಗಳಲ್ಲಿ ತೃಪ್ತಿದಾಯಕ ಲಾಭವಿರುವುದು. ವಿದ್ಯಾರ್ಥಿಗಳಿಗೆ ಹಿನ್ನಡೆ ಇರುವುದು. ಶುಭ ಸಂಖ್ಯೆ 6

ಸಿಂಹ: ಸಹನೆಗೆ ತಕ್ಕ ಫಲ ದೊರೆಯುವುದು. ಬಹು ದಿನದ ಕನಸು ನನಸಾಗುವ ಕಾಲವಿದೆ. ಕೊರ್ಟಿನಲ್ಲಿದ್ದ ವ್ಯಾಜ್ಯಗಳಲ್ಲಿ ಜಯ ದೊರೆಯುವುದು. ಸಂತಾನಫಲದ ಅಪೇಕ್ಷೆ ಈಡೇರುವುದು. ಆರ್ಥಿಕ ವ್ಯವಹಾರಗಳ ಅದೃಷ್ಟ ಲಾಭತರುವವು. ಶುಭ ಸಂಖ್ಯೆ 7

ಕನ್ಯಾ: ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವುದು. ಎಚ್ಚರಿಕೆವಹಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವದು. ಗೊಂದಲಕ್ಕೆ ಒಳಗಾಗದೇ ಮುನ್ನುಗ್ಗಿರಿ. ಕೊಟ್ಟಸಾಲ ಪಾವತಿಯಾಗುವದು. ಶುಭ ಸಂಖ್ಯೆ 9

ತುಲಾ: ಹೊಸ ಯೋಜನೆಗೆ ಸಂಬಂಧಿಸಿದಂತೆ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ. ಶುಭ ಸಂಖ್ಯೆ 3

ವೃಶ್ಚಿಕ: ನಿಶ್ಚಿತ ಆರ್ಥಿಕ ಸ್ಥಿತಿ ಇರುವದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ಶುಭ ಸಂಖ್ಯೆ 4

ಧನು: ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ. ಶುಭ ಸಂಖ್ಯೆ 6

ಮಕರ: ಅನಿರೀಕ್ಷಿತ ಧನ ನಷ್ಟ. ತಿರುಗಾಟ ಒದಗಿಬಂದು, ದೇಹಾಲಸ್ಯವು ತಲೆ ದೋರುವುದು, ಅರ್ಥಾರ್ಜನೆಯ ಮಾರ್ಗವು ಸುಗಮವಿದ್ದು, ಸಾಂಸಾರಿಕ ದೃಷ್ಟಿಯಲ್ಲೂ ಉತ್ತಮವಿರುವುದರಿಂದ ಚಿಂತೆಯ ಅವಶ್ಯಕತೆ ಇಲ್ಲ. ಶುಭ ಸಂಖ್ಯೆ 2

ಕುಂಭ: ವ್ಯಥಾ ಚಿಂತೆ, ತಪ್ಪು ಕಲ್ಪನೆ, ನಿಷ್ಟುರ ಮಾತುಗಳನ್ನು ಕೇಳುವ ಸಂಭವ, ಜನ್ಮಸ್ಥ ಶುಕ್ರ ಇರುವದರಿಂದ ಆರ್ಥಿಕ ಸುಭದ್ರತೆ ಇರುವದು. ವಿದ್ಯಾರ್ಥಿಗಳಿಗೆ ಪರಿಶ್ರಮ ಅವಶ್ಯಕ. ಮನೆಯಲ್ಲಿ ಸಂತೋಷವಿರುವದು. ಗೋಸೇವೆಯಿಂದ ಕಷ್ಟಪರಿಹಾರ. ಶುಭ ಸಂಖ್ಯೆ 1

ಮೀನ ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮವಾಗಿರುವದು. ಉತ್ಸಾಹ ಮೂಡುವದು. ದೋಷ ಪರಿಹಾರಕ್ಕೆ ಜಲದಾನ ಮಾಡಿರಿ. ಶುಭ ಸಂಖ್ಯೆ 5.

ಡಾ.ಬಸವರಾಜ ಗುರೂಜಿ

(ಡಾ.ಬಸವರಾಜ ಗುರೂಜಿ ಸಂಪರ್ಕ ಸಂಖ್ಯೆ: 99728 48937)

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್