AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tv9 Facebook Live | ಬಿಬಿಎಂಪಿ ವಾರ್ಡ್​ಗಳ ಸಂಖ್ಯೆ ಏರಿಕೆ ಎಷ್ಟರ ಮಟ್ಟಿಗೆ ಒಳಿತು..?

ಬಿಬಿಎಂಪಿ ವಾರ್ಡ್​ಗಳ ಸಂಖ್ಯೆಯನ್ನು 198ರಿಂದ 243ಕ್ಕೆ ಏರಿಕೆ ಮಾಡುವ ನಿಟ್ಟಿನಲ್ಲಿ ಸರ್ಕಾರ ವಿಧೆಯಕ ಮಂಡನೆ ಮಾಡಿದೆ. ಆದರೆ ಇದಕ್ಕೆ ವಿರೋಧ ಪಕ್ಷ ಹಾಗೂ ನಾಗರಿಕ ಹಿತರಕ್ಷಣಾ ಸಮಿತಿಗಳ ಸದಸ್ಯರು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ.

Tv9 Facebook Live | ಬಿಬಿಎಂಪಿ ವಾರ್ಡ್​ಗಳ ಸಂಖ್ಯೆ ಏರಿಕೆ ಎಷ್ಟರ ಮಟ್ಟಿಗೆ ಒಳಿತು..?
ಎಂಎಲ್​ಸಿ ರವಿಕುಮಾರ್, ಮಾಜಿ ಕಾರ್ಪೋರೇಟರ್ ಶಿವರಾಜ್ ಹಾಗೂ ಸಾಮಾಜಿಕ ಕಾರ್ಯಕರ್ತ ಮುರಳಿ
sandhya thejappa
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Dec 11, 2020 | 7:10 PM

Share

ಬೆಂಗಳೂರು: ಬಿಬಿಎಂಪಿ ವಿಧೇಯಕವು ವಿಧಾನಸಭೆಯಲ್ಲಿ ನಿನ್ನೆಯಷ್ಟೇ (ಡಿ.10) ಅಂಗೀಕಾರ ಪಡೆದುಕೊಂಡಿತು. ಬಿಬಿಎಂಪಿ ವಾರ್ಡ್​ಗಳ ಸಂಖ್ಯೆಯನ್ನು 198ರಿಂದ 243ಕ್ಕೆ ಏರಿಕೆ ಮಾಡುವ ನಿಟ್ಟಿನಲ್ಲಿ ಸರ್ಕಾರ ವಿಧೆಯಕ ಮಂಡನೆ ಮಾಡಿದೆ. ಆದರೆ ಇದಕ್ಕೆ ವಿರೋಧ ಪಕ್ಷ ಹಾಗೂ ನಾಗರಿಕ ಹಿತರಕ್ಷಣಾ ಸಮಿತಿಗಳ ಸದಸ್ಯರು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಈಗ ಇರುವ 198 ವಾರ್ಡ್​ಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಲು ಪೂರೈಸಲು ಆಗುತಿಲ್ಲ. ಅಂಥದ್ದರಲ್ಲಿ ವಾರ್ಡ್​ಗಳ ಸಂಖ್ಯೆ ಹೆಚ್ಚು ಮಾಡುವುದು ಎಷ್ಟರಮಟ್ಟಿಗೆ ಸರಿ? ಎನ್ನುವ ವಿಚಾರವನ್ನು ಕೇಂದ್ರವಾಗಿಸಿಕೊಂಡು ಶುಕ್ರವಾರ ಟಿವಿ9 ಫೇಸ್​ಬುಕ್ ಲೈವ್​ನಲ್ಲಿ ಬಿಜೆಪಿ ಎಂಎಲ್​ಸಿ ರವಿಕುಮಾರ್, ಮಾಜಿ ಕಾರ್ಪೋರೇಟರ್ ಶಿವರಾಜ್ ಹಾಗೂ ಸಾಮಾಜಿಕ ಕಾರ್ಯಕರ್ತ ಮುರಳಿ ಚರ್ಚಿಸಿದರು. ಆ್ಯಂಕರ್ ಆನಂದ್ ಬುರ್ಲಿ ಕಾರ್ಯಕ್ರಮ ನಡೆಸಿಕೊಟ್ಟರು.

ಬಿಜೆಪಿ ಸರ್ಕಾರ ಬಂದಾಗಲೆಲ್ಲ ಬಿಬಿಎಂಪಿ ಚುನಾವಣೆ ಮುಂದಕ್ಕೆ ಹೋಗುತ್ತೆ ಇದು ಕಾಕಾತಾಳಿಯಾ? ಅಥವಾ ಕಾರ್ಪೊರೇಟ್ ಅಧಿಕಾರಿಗಳನ್ನು ಮೊಟಕುಗೊಳಿಸಿ ಅಧಿಕಾರ ಮಾಡಬೇಕೆಂಬ ಇಚ್ಛೆ ಸರ್ಕಾರಕ್ಕೆ ಇದೆಯಾ? ಎಂದು ಕೇಳಿದ ಪ್ರಶ್ನೆಗೆ ಮೇಯರ್ ಹಾಗೂ ಉಪ ಮೇಯರ್ ಅಧಿಕಾರವನ್ನು ಕಸಿದುಕೊಳ್ಳುವ ದುರುದ್ದೇಶ ಸರ್ಕಾರಕ್ಕೆ ಇಲ್ಲ ಎಂದು ರವಿಕುಮಾರ್ ಉತ್ತರಿಸಿದರು.

ದೆಹಲಿ ಇದ್ದಿದ್ದು ನವದೆಹಲಿಯಾಗಿದೆ. ಇದರಂತೆ ಹಿಂದಿನ ಬೆಂಗಳೂರು ಮಹಾನಗರ ಪಾಲಿಕೆ ಈಗ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಾಗಿದೆ. ಈಗಾಗಲೇ ಬೆಂಗಳೂರು ಹಿಗ್ಗಿದೆ. ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳು ಬೆಂಗಳೂರಿಗೆ ಸೇರಿಕೊಂಡಿವೆ. ಉದ್ದೇಶಪೂರ್ವಕವಾಗಿ ವಾರ್ಡ್​ಗಳ ಸಂಖ್ಯೆ ಹೆಚ್ಚಿಸುತಿಲ್ಲ. ಎಲ್ಲರಿಗೂ ಸೌಲಭ್ಯಗಳು ಸಿಗಬೇಕೆಂಬ ಹಿನ್ನೆಲೆಯಲ್ಲಿ ಬೆಂಗಳೂರಿನ 1 ಕಿ.ಮೀ. ವ್ಯಾಪ್ತಿಯಲ್ಲಿರುವ ಹಳ್ಳಿಗಳನ್ನು ಸೇರಿಸುವ ಮೂಲಕ ವಾರ್ಡ್​ಗಳ ಸಂಖ್ಯೆ ಹೆಚ್ಚಿಸಲಾಗುತ್ತಿದೆ. ಒಟ್ಟಾರೆಯಾಗಿ ಈ ನಿರ್ಧಾರ ನಾಗರಿಕರ ಹಿತದೃಷ್ಟಿಯಿಂದ ಕೂಡಿದೆ ಎಂದರು.

ಮಾಜಿ ಕಾರ್ಪೋರೆಟ್ ಶಿವರಾಜ್ ಮಾತನಾಡಿ, ಚುನಾವಣೆಯನ್ನು ಮುಂದೂಡುವ ಮನಃಸ್ಥಿತಿಯಲ್ಲಿ ಉದ್ದೇಶಪೂರ್ವಕವಾಗಿ ಬೆಂಗಳೂರಿನ ಗಡಿ ವ್ಯಾಪ್ತಿ ವಿಸ್ತರಣೆಗೆ ಬಿಜೆಪಿ ಸರ್ಕಾರ ಮುಂದಾಗಿದೆ. ಬೆಂಗಳೂರು ವಿಸ್ತರಣೆಗೆ ಆಕ್ಷೇಪವಿಲ್ಲ. ಆದರೆ ಈಗಿರುವ ವಾರ್ಡ್​ಗಳ ಪರಿಸ್ಥಿತಿ ಕಡೆಗೆ ಗಮನ ಹರಿಸುತಿಲ್ಲ. ಹಲವು ಹಳ್ಳಿಗಳಲ್ಲಿ ಕುಡಿಯುವ ನೀರು ಹಾಗೂ ರಸ್ತೆಗಳ ವ್ಯವಸ್ಥೆಯಿಲ್ಲದೆ ಜನರ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಇಂತಹ ಸಂಕಷ್ಟದ ನಡುವೆ ಬೆಂಗಳೂರು ವಿಸ್ತರಣೆ ಅನಿವಾರ್ಯವಿರಲಿಲ್ಲ. ಪ್ರತಿ ವಾರ್ಡ್​ಗಳಲ್ಲಿ ಹಲವು ಸಮಸ್ಯೆಗಳಿವೆ. ಯಾವ ಯಾವ ವಾರ್ಡ್​ಗಳಲ್ಲಿ ಏನೇನು ಸಮಸ್ಯೆಗಳಿವೆ ಎಂದು ಪರಿಶೀಲನೆ ಮಾಡದೆ, ಜನರ ಕಷ್ಟಗಳನ್ನು ಆಲಿಸದೇ, ಚರ್ಚೆಮಾಡದೇ ನೆರವಾಗಿ ಈ ನಿರ್ಧಾರ ತೆಗೆದುಕೊಂಡಿರುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.

ಚರ್ಚೆಯಲ್ಲಿ ಪಾಲ್ಗೊಂಡಿದ್ದ ಸಾಮಾಜಿಕ ಕಾರ್ಯಕರ್ತ ಮುರಳಿ, ಅಭಿವೃದ್ಧಿಯಲ್ಲಿ ಹಿಂದುಳಿದಿರುವ ವಾರ್ಡ್​ಗಳಿಗೆ ಹೆಚ್ಚು ಅನುದಾನ ಒದಗಿಸಬೇಕು. ಆದರೆ ಎಲ್ಲ ವಾರ್ಡ್​ಗಳಿಗೂ ಸಮಾನವಾಗಿ ಅನುದಾನ ಹಂಚಿಕೆ ಮಾಡಲಾಗುತ್ತಿದೆ. ಇದರಿಂದ ಹೆಚ್ಚು ಪ್ರಯೋಜನವಾಗುತ್ತಿಲ್ಲ ಎಂದರು.

ಬೆಂಗಳೂರು ಆಡಳಿತಕ್ಕೆ ಹೊಸ ರೂಪ: ಬಿಬಿಎಂಪಿ ಮಸೂದೆಗೆ ಅಧಿವೇಶನದಲ್ಲಿ ಒಪ್ಪಿಗೆ

Published On - 7:06 pm, Fri, 11 December 20

ಮಾಲ್ಡೀವ್ಸ್ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ದುರಹಂಕಾರ ಸಿದ್ದರಾಮಯ್ಯ ವಂಶವಾಹಿನಿಯಲ್ಲಿ ಹರಿಯುತ್ತಿದೆ: ವಿಶ್ವನಾಥ್
ದುರಹಂಕಾರ ಸಿದ್ದರಾಮಯ್ಯ ವಂಶವಾಹಿನಿಯಲ್ಲಿ ಹರಿಯುತ್ತಿದೆ: ವಿಶ್ವನಾಥ್
ಜಪಾನ್​ನಲ್ಲಿ ಹೇಗಿವೆ ಬನ್ನೇರುಘಟ್ಟದ ಆನೆಗಳು: ಇಲ್ಲಿದೆ ವಿಡಿಯೋ
ಜಪಾನ್​ನಲ್ಲಿ ಹೇಗಿವೆ ಬನ್ನೇರುಘಟ್ಟದ ಆನೆಗಳು: ಇಲ್ಲಿದೆ ವಿಡಿಯೋ
‘ಒಡಲಾಳ’ ನಾಟಕ; 21ನೇ ವಯಸ್ಸಿಗೆ ಹಣ್ಣಣ್ಣು ಅಜ್ಜಿಯ ಪಾತ್ರ ಮಾಡಿದ್ದ ಉಮಾಶ್ರೀ
‘ಒಡಲಾಳ’ ನಾಟಕ; 21ನೇ ವಯಸ್ಸಿಗೆ ಹಣ್ಣಣ್ಣು ಅಜ್ಜಿಯ ಪಾತ್ರ ಮಾಡಿದ್ದ ಉಮಾಶ್ರೀ
ತುಂಗಭದ್ರಾ ಏತ ನೀರಾವರಿ ಕಾಮಗಾರಿ ಪೈಪ್ ಒಡೆದು ಆಕಾಶದೆತ್ತರ ಚಿಮ್ಮಿದ ನೀರು!
ತುಂಗಭದ್ರಾ ಏತ ನೀರಾವರಿ ಕಾಮಗಾರಿ ಪೈಪ್ ಒಡೆದು ಆಕಾಶದೆತ್ತರ ಚಿಮ್ಮಿದ ನೀರು!