AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Engineer’s Day 2021: ಇಂಜಿನಿಯರ್​ಗಳ ದಿನಾಚರಣೆ ಹಿಂದಿನ ಮಹತ್ವವೇನು?

Sir M Visvesvaraya Birth Anniversary: ವಿಶ್ವೇಶ್ವರಯ್ಯ ಅವರ ಸಾರ್ವಜನಿಕ ಸೇವೆಯನ್ನು ನೋಡಿ Knight Commander of the British Indian Empire ಎಂಬ ಬಿರುದನ್ನು ನೀಡಲಾಯಿತು. 1955ರಲ್ಲಿ ಸರ್​ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರು ಭಾರತದ ಅತ್ಯುನ್ನತ ಪ್ರಶಸ್ತಿಯಾದ ಭಾರತ ರತ್ನಕ್ಕೆ ಪಾತ್ರರಾದರು. 

Engineer's Day 2021: ಇಂಜಿನಿಯರ್​ಗಳ ದಿನಾಚರಣೆ ಹಿಂದಿನ ಮಹತ್ವವೇನು?
ಸರ್​​ ಎಂ.ವಿಶ್ವೇಶ್ವರಯ್ಯ ಅವರ ಜನ್ಮದಿನಾಚರಣೆ
TV9 Web
| Edited By: |

Updated on: Sep 15, 2021 | 8:32 AM

Share

ಇಂದು ಇಂಜಿನಯರ್​ಗಳ ದಿನಾಚರಣೆ. ಸರ್​ ಎಂ.ವಿಶ್ವೇಶ್ವರಯ್ಯ ಅವರ ಜನ್ಮ ದಿನದ ಪ್ರಯುಕ್ತ 1968ರಿಂದ ಪ್ರತಿ ವರ್ಷ ಸೆಪ್ಟೆಂಬರ್​ 15ನೇ ತಾರೀಖನ್ನು ಭಾರತದಲ್ಲಿ ಇಂಜಿನಯರ್​ಗಳ ದಿನಾಚರಣೆ ಎಂದು ಆಚರಿಸಲಾಗುತ್ತಿದ್ದು, ಆ ಮೂಲಕ ವಿಶ್ವೇಶ್ವರಯ್ಯ ಅವರ ಜೀವನವನ್ನು, ಅವರು ಮಾಡಿದ ಸಾಧನೆಯನ್ನು ಸ್ಮರಿಸಿಕೊಳ್ಳುವ ಕೆಲಸ ಆಗುತ್ತಿದೆ. ಈ ಸಂದರ್ಭದಲ್ಲಿ ಎಲ್ಲಾ ಇಂಜಿನಿಯರ್​ಗಳಿಗೂ ಶುಭ ಕೋರುತ್ತಾ ಸರ್​ ಎಂ.ವಿಶ್ವೇಶ್ವರಯ್ಯ ಅವರ ಬದುಕಿನ ಕುರಿತಾಗಿ ಅವರ 160ನೇ ಜನ್ಮ ದಿನಾಚರಣೆ ಹೊತ್ತಿನಲ್ಲಿ ಒಂದಷ್ಟು ಸಂಕ್ಷಿಪ್ತ ಮಾಹಿತಿಗಳನ್ನು ಇಲ್ಲಿ ಕಟ್ಟಿಕೊಡಲಾಗಿದೆ.

ಸರ್​ ಎಂ ವಿಶ್ವೇಶರಯ್ಯ ಅವರನ್ನು ಇಂದಿಗೂ ಸ್ಮರಿಸಿಕೊಳ್ಳಲು ಕಾರಣ ಅವರು ಮಾಡಿದ ಕೆಲಸಗಳು. ಜಲಾಶಯ ನಿರ್ಮಾಣ, ತೂಗು ಸೇತುವೆ ನಿರ್ಮಾಣದಿಂದ ಹಿಡಿದು ಸಮಾಜಕ್ಕೆ ನೆರವಾಗುವಂತಹ ಅದೆಷ್ಟೋ ಉತ್ತಮ ಕಾರ್ಯಗಳನ್ನು ತಮ್ಮ ಜೀವಿತಾವಧಿಯಲ್ಲಿ ಮಾಡಿದ್ದಾರೆ. ನೀರಿನಿಂದ ವಿದ್ಯುತ್​ ಪಡೆಯುವುದು ಇಂದು ಭಾರತದಲ್ಲಿ ಸರ್ವೇ ಸಾಮಾನ್ಯವಾಗಿದ್ದು, ಜಲ ವಿದ್ಯುತ್​ ಶಕ್ತಿ ಯೋಜನೆಯ ಹಿಂದೆಯೂ ಇವರ ಪಾತ್ರವಿದೆ ಎನ್ನುವುದು ಗಮನಾರ್ಹ. ಕರ್ನಾಟಕದಲ್ಲಿ ಕೃಷ್ಣ ರಾಜ ಸಾಗರ ಜಲಾಶಯ (ಕೆಆರ್​ಎಸ್​ ಡ್ಯಾಂ) ನಿರ್ಮಿಸುವುದರಿಂದ ಹಿಡಿದು ಹೈದರಾಬಾದ್​ನಲ್ಲಿ ಪ್ರಾವಾಹ ತಡೆಗಟ್ಟುವಿಕೆ ಯೋಜನೆ ರೂಪಿಸುವ ತನಕ ಸರ್​ ಎಂ.ವಿಶ್ವೇಶ್ವರಯ್ಯ ಹೆಸರು ಮಾಡಿದ್ದಾರೆ.

ಸೆಪ್ಟೆಂಬರ್​ 15, 1861ರಲ್ಲಿ ಕರ್ನಾಟಕದ ಮುದ್ದೇನಹಳ್ಳಿ ಎಂಬ ಪುಟ್ಟ ಹಳ್ಳಿಯೊಂದರಲ್ಲಿ ಜನಿಸಿದ ಸರ್​ ಎಂ.ವಿಶ್ವೇಶ್ವರಯ್ಯ ಅವರನ್ನು ಇನ್​ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ ಸಂಸ್ಥೆಯು​ ಭಾರತದ ಆರ್ಥಿಕ ಯೋಜನೆಯ ರೂವಾರಿ ಎಂಬರ್ಥದಲ್ಲಿ ಕರೆದಿದೆ. ಆ ಕಾಲದಲ್ಲಿಯೇ ಪುಣೆಯ ಇಂಜಿನಿಯರಿಂಗ್​ ಕಾಲೇಜಿನಿಂದ ಪದವಿ ಪಡೆದ ವಿಶ್ವೇಶ್ವರಯ್ಯ ಅವರು ತಮ್ಮ ಆಸಕ್ತಿಯ ಕ್ಷೇತ್ರಗಳಾದ ನೀರಾವರಿ ಹಾಗೂ ಪ್ರವಾಹ ತಡೆ ಯೋಜನೆಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ.

ಪುಣೆಯ ಖಡಕ್​ವಾಸ್ಲ ಜಲಾಶಯದಲ್ಲಿ 1903ರಲ್ಲಿ ನಿರ್ಮಿಸಿದ ಅಟೋಮ್ಯಾಟಿಕ್​ ಬ್ಯಾರಿಯರ್​ ವಾಟರ್​ ಫ್ಲಡ್​ಗೇಟ್​​ಗಳ ಹಿಂದೆ ವಿಶ್ವೇಶ್ವರಯ್ಯ ಇದ್ದರು. ನಂತರ 1917ರಲ್ಲಿ ಸರ್ಕಾರಿ ಇಂಜಿನಿಯರಿಂಗ್​ ಕಾಲೇಜ್​ ಸ್ಥಾಪನೆಗೂ ಅವರೇ ಮುಖ್ಯ ಕಾರಣರಾಗಿದ್ದು ಅದು ಯುನಿವರ್ಸಿಟಿ ವಿಶ್ವೇಶ್ವರಯ್ಯ ಕಾಲೇಜ್​ ಆಫ್​ ಇಂಜಿನಿಯರಿಂಗ್​ ಅಂತಲೂ ಹೆಸರು ಪಡೆಯಿತು.

ಕರ್ನಾಟಕದಲ್ಲಿ ಕೃಷ್ಣರಾಜ ಸಾಗರ ಜಲಾಶಯ ನಿರ್ಮಾಣ ಯೋಜನೆಗೆ ಸರ್​ ಎಂ.ವಿಶ್ವೇಶ್ವರಯ್ಯ ಮುಖ್ಯಸ್ಥರಾಗಿದ್ದರು. 1934ರಲ್ಲಿ ಭಾರತದ ಆರ್ಥಿಕತೆಗೆ ಸಂಬಂಧಿಸಿದಂತೆ ಅನೇಕ ಯೋಜನೆಗಳನ್ನು ರೂಪಿಸಿದ ಸಮಿತಿಯಲ್ಲೂ ಅವರ ಪಾತ್ರವಿತ್ತು. ವಿಶ್ವೇಶ್ವರಯ್ಯ ಅವರ ಸಾರ್ವಜನಿಕ ಸೇವೆಯನ್ನು ನೋಡಿ Knight Commander of the British Indian Empire ಎಂಬ ಬಿರುದನ್ನು ನೀಡಲಾಯಿತು. 1955ರಲ್ಲಿ ಸರ್​ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರು ಭಾರತದ ಅತ್ಯುನ್ನತ ಪ್ರಶಸ್ತಿಯಾದ ಭಾರತ ರತ್ನಕ್ಕೆ ಪಾತ್ರರಾದರು.

ಇದನ್ನೂ ಓದಿ: ಸರ್ ಎಂ ವಿಶ್ವೇಶ್ವರಯ್ಯ ನಿರ್ಮಿಸಿದ್ದ ಧಾರವಾಡದ ಕೆಲಗೇರಿ ಕೆರೆಗೆ ಹೈಟೆಕ್ ಟಚ್; ಕೆರೆ ದಂಡೆಯಲ್ಲೇ ಓಪನ್ ಜಿಮ್! 

ರಾಜ್ಯಕ್ಕೆ ಮತ್ತೊಬ್ಬ ವಿಶ್ವೇಶ್ವರಯ್ಯನವರ ಅವಶ್ಯಕತೆ ಇದೆ; ರಾಜ್ಯದ ಮುಖ್ಯಮಂತ್ರಿಯಾಗಿ ಇದನ್ನು ಹೇಳುತ್ತಿದ್ದೇನೆ: ಸಿಎಂ ಬೊಮ್ಮಾಯಿ

(Engineers Day 2021 Sir M Visvesvaraya Birth Anniversary special)

Follow Us
ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು
ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ