AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ganga Saptami 2021: ಇಂದು ಗಂಗಾ ಸಪ್ತಮಿ.. ಇಲ್ಲಿದೆ ಈ ದಿನದ ಮಹತ್ವ

ಭೂಮಿಗಿಳಿದ ಗಂಗೆ ತಾನು ಮೋಕ್ಷದಾಯಕಳೆಂಬ ಅಹಂನಿದ ಭೋರ್ಗರೆದು ಹರಿಯಲಾರಂಭಿಸುತ್ತಾಳೆ. ಈ ವೇಳೆ ಜಹ್ನು ಮಹರ್ಷಿಯ ಆಶ್ರಮ ನೀರಿನಲ್ಲಿ ಕೊಚ್ಚಿ ಹೋಯಿತು. ಇದರಿಂದ ಕುಪಿತರಾದ ಜಹ್ನು ಮಹರ್ಷಿಗಳು ಗಂಗೆಯನ್ನು ಆಪೋಶಿಸಿದರು(ಕುಡಿದರು).

Ganga Saptami 2021: ಇಂದು ಗಂಗಾ ಸಪ್ತಮಿ.. ಇಲ್ಲಿದೆ ಈ ದಿನದ ಮಹತ್ವ
ಸಂಗ್ರಹ ಚಿತ್ರ
ಆಯೇಷಾ ಬಾನು
|

Updated on: May 19, 2021 | 11:23 AM

Share

ಗಂಗಾ ಸಪ್ತಮಿ.. ಹೆಸರೇ ಸೂಚಿಸುವಂತೆ ಗಂಗಾ ಸಪ್ತಮಿ, ಗಂಗಾ ಜಯಂತಿ ಅಥವಾ ಗಂಗಾ ಪೂಜೆಯನ್ನು ಗಂಗಾ ದೇವತೆ ಅಥವಾ ಮಾ ಗಂಗಾಗೆ ಅರ್ಪಿಸಲಾಗಿದೆ. ಗಂಗಾ ಸಪ್ತಮಿ ಹಿಂದೂ ಭಕ್ತರಿಗೆ ಪವಿತ್ರ ದಿನ. ಪುರಾಣಗಳ ಪ್ರಕಾರ, ಈ ದಿನ ಗಂಗಾ ದೇವಿಯು ಭೂಮಿಯ ಮೇಲೆ ಮರುಜನ್ಮ ಪಡೆದಳು. ಗಂಗಾ ನದಿ ಮತ್ತು ಅದರ ಉಪನದಿಗಳು ಹರಿಯುವ ಸ್ಥಳಗಳಲ್ಲಿ ಈ ಹಬ್ಬವು ವಿಶೇಷವಾಗಿ ಆಚರಿಸಲಾಗುತ್ತೆ. ಗಂಗಾ ನದಿಯನ್ನು ಭಾರತದಲ್ಲಿ ಪವಿತ್ರ ನದಿ ಎಂದು ಪರಿಗಣಿಸಲಾಗಿದೆ.

ಗಂಗಾ ಸಪ್ತಮಿಯ ಮಹತ್ವವನ್ನು ‘ಪದ್ಮ ಪುರಾಣ’, ‘ಬ್ರಹ್ಮ ಪುರಾಣ’ ಹಾಗೂ ‘ನಾರದ ಪುರಾಣ’ಗಳಲ್ಲಿ ನೋಡಬಹುದು. ಭಗೀರಥನ ಪೂರ್ವಜರು ಕಪಿಲ ಮುನಿಯ ಶಾಪಕ್ಕೆ ತುತ್ತಾಗಿದ್ದರು. ಇವರ ಮುಕ್ತಿಗಾಗಿ ಭಗೀರಥ ತಪಸ್ಸು ಮಾಡಿ ಗಂಗೆಯನ್ನು ಪ್ರಾರ್ಥಿಸಿ, ಜೇಷ್ಠಮಾಸ‌ ದಶಮಿಯಂದು ಭೂಲೋಕಕ್ಕೆ ಕರೆತಂದ. ಈ ದಿನವನ್ನು ಗಂಗಾವತರಣ ದಿನ ಎಂದು ಕರೆಯಲಾಗುತ್ತದೆ.

ಭೂಮಿಗಿಳಿದ ಗಂಗೆ ತಾನು ಮೋಕ್ಷದಾಯಕಳೆಂಬ ಅಹಂನಿದ ಭೋರ್ಗರೆದು ಹರಿಯಲಾರಂಭಿಸುತ್ತಾಳೆ. ಈ ವೇಳೆ ಜಹ್ನು ಮಹರ್ಷಿಯ ಆಶ್ರಮ ನೀರಿನಲ್ಲಿ ಕೊಚ್ಚಿ ಹೋಯಿತು. ಇದರಿಂದ ಕುಪಿತರಾದ ಜಹ್ನು ಮಹರ್ಷಿಗಳು ಗಂಗೆಯನ್ನು ಆಪೋಶಿಸಿದರು(ಕುಡಿದರು).

ಇದರಿಂದ ಗಾಭರಿಗೊಂಡ ದೇವತೆಗಳು ಹಾಗೂ ಗಂಗೆಯನ್ನು ಭುವಿಗೆ ಕರೆ ತಂದಿದ್ದ ಭಗೀರಥ, ಜಹ್ನು ಮಹರ್ಷಿಯನ್ನು ಪರಿಪರಿಯಾಗಿ ಪ್ರಾರ್ಥಿಸಿದರು. ಕೋಪದಿಂದ ಇದ್ದ ಜಹ್ನು ಮಹರ್ಷಿ, ಇವರ ಮನವಿಗೆ ಮನಸೋತು ಹನ್ನೊಂದು ತಿಂಗಳ ನಂತರ ಗಂಗೆಯನ್ನು ಹೊರಹಾಕುವುದಾಗಿ ಹೇಳಿದರು. ಅದರಂತೆ ತನ್ನ ಬಲ ಕಿವಿಯಿಂದ ವೈಶಾಖ ಶುಕ್ಲ ಪಕ್ಷ ಸಪ್ತಮಿಯಂದು ಹೊರಗೆ ಹರಿಯ ಬಿಟ್ಟರು. ಈ ದಿನ ಗಂಗೆಯು ಪುನರ್ಜನ್ಮವನ್ನು ಪಡೆದದ್ದರಿಂದ ಗಂಗೋತ್ಪತ್ತಿ ದಿನ ಎನ್ನಲಾಗುತ್ತದೆ.

ಗಂಗೆಯು ಜಗ್ನು ಋಷಿಯ ಕಿವಿಯಿಂದ ಹೊರಬಂದ ಕಾರಣ, ಋಷಿಯ ಮಗಳೆಂದು ಭಾವಿಸಿ ಜಾಹ್ನವಿ ಎಂದು ಕರೆಯಲಾಗುತ್ತದೆ. ಗಂಗೆ ಪವಿತ್ರ ನದಿಯಾಗಿರುವುದರಿಂದ ದೇಶದಲ್ಲಿನ ಎಲ್ಲ ಸರೋವರ, ನದಿ, ಕೆರೆ, ಕಲ್ಯಾಣಿ, ಕುಂಟೆ, ಬಾವಿಗಳಲ್ಲಿನ ನೀರನ್ನು ಗಂಗಾಜಲ ವೆಂದೇ ಭಾವಿಸಲಾಗುತ್ತದೆ. ನಾವು ಸ್ನಾನ ಮಾಡುವ, ಪೂಜೆಗೆ ಬಳಸುವ ಹಾಗೂ ಕುಡಿಯುವ ನೀರನ್ನು ಗಂಗೆಯೆಂದೇ ಪೂಜ್ಯ ಭಾವನೆಯಿಂದ ಬಳಸುತ್ತೇವೆ.

ಇಂದು ಇಂತಹ ಪವಿತ್ರ ನದಿ ಎರಡನೇ ಬಾರಿ ಮರುಹುಟ್ಟು ಪಡೆದ ದಿನ. ಆ ಗಂಗಾದೇವಿ ಯನ್ನು ಸ್ಮರಿಸೋಣ, ಪೂಜಿಸೋಣ.

ಇದನ್ನೂ ಓದಿ: ಪವಿತ್ರ ಗಂಗಾ ನದಿಯಲ್ಲಿ 2000 ಕೊರೊನಾ ಮೃತದೇಹಗಳು.?

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ