Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾದಿಯೇ ತೋರಿದ ಹಾದಿ: ಈ ‘ಅರಸು’ ಆಳಾಗಿ ದುಡಿಯಲು ಸಿದ್ಧನಿದ್ದಾನೆ

Handicapped : ಕೊರೊನಾ ಸಮಯದಲ್ಲಿ ಗಸಗಸೆಮರದಡಿ ಆರು ತಿಂಗಳು ವಾಸ. ಪುಟ್ಟಮಗುವಿನೊಂದಿಗೆ ಬಿಸಿಲು, ಮಳೆ, ಗಾಳಿ, ಚಳಿ ಎನ್ನದೆ ಅವರಿವರು ಕೊಟ್ಟ ದಿನಸಿಯಿಂದ, ಅಲ್ಲಿ ಇಲ್ಲಿ ಬಿದ್ದ ಪುಡಿಸೌದೆ ಆಯ್ದು ತಂದು ಅಡುಗೆ. ಶೌಚಕ್ಕೆ, ಸ್ನಾನಕ್ಕೆ ಹಮಾಮ್.

ಹಾದಿಯೇ ತೋರಿದ ಹಾದಿ: ಈ ‘ಅರಸು’ ಆಳಾಗಿ ದುಡಿಯಲು ಸಿದ್ಧನಿದ್ದಾನೆ
ಅರಸು ಮತ್ತವನ ಕುಟುಂಬ
Follow us
ಶ್ರೀದೇವಿ ಕಳಸದ
|

Updated on:Apr 21, 2022 | 8:59 AM

ಹಾದಿಯೇ ತೋರಿದ ಹಾದಿ | Haadiye Torida Haadi : ಪ್ರಯತ್ನ ಮಾಡಿದರೆ ಯಾವುದೂ ಅಸಾಧ್ಯವಲ್ಲ ಎನ್ನುವ ಅರಸು ಈಗ ವಾಸವಿರುವುದು ಬೆಂಗಳೂರಿನ ಬಾಗಲೂರು ಕ್ರಾಸ್, ದ್ವಾರಕಾನಗರದ ಹತ್ತಿರ. ವಾಸುದೇವ ಮತ್ತು ಮೇರಿಯಮ್ಮ ದಂಪತಿಯ ಆರು ಜನರು ಮಕ್ಕಳಲ್ಲಿ ಮೊದಲನೇ ಮಗುವಾಗಿ ಹುಟ್ಟಿದ್ದು ಅರಸು. ‘ನಾನು ಕಷ್ಟಪಟ್ಟು ಕೆಲಸ ಮಾಡುತ್ತೇನೆ ಎಂದರೂ ಯಾರೂ ಕೆಲಸ ಕೊಡುತ್ತಿಲ್ಲ. ತರಕಾರಿ ಹೆಚ್ಚುವುದು, ಹೋಟೆಲಿನಲ್ಲಿ ಸರ್ವಿಸ್ ಮಾಡುವುದು, ಪಾತ್ರೆ ತೊಳೆಯುವುದು ಮಾಡುತ್ತೇನೆ. ಜೊತೆಗೆ ರೋಟಿ, ಪೂರಿ, ದೋಸೆ, ವಡೆ, ಭಜ್ಜಿ ಮತ್ತು ಆಮ್ಲೆಟ್, ಕಬಾಬ್ ಹಾಕುವುದು, ಬಿರಿಯಾನಿ ಈ ತರಹದ ಎಲ್ಲಾ ಅಡುಗೆ ಕೆಲಸವನ್ನು ಕಲಿತಿದ್ದೇನೆ. ನಮ್ಮಮ್ಮ ಹೇಳ್ತಿದ್ರು ನಾನು ಹುಟ್ಟಿ ಮೂರು ತಿಂಗಳ ಮಗು ಇರುವಾಗ ಯಾವುದೊ ಜ್ವರ ಬಂದು ಕಾಲಿನ ನರ ಹಾಗೂ ಸೊಂಟ ದುರ್ಬಲವಾದವು. ಸ್ವಲ್ಪ ದೂರ ನಡೆದುಕೊಂಡು ಹೋಗುವಾಗ ಒಂದು ಸಣ್ಣ ಕಲ್ಲನ್ನು ಎಡವಿದರೂ ಬಿದ್ದುಬಿಡುತ್ತೇನೆ. ದೇಹವನ್ನು ಬ್ಯಾಲೆನ್ಸ್ ಮಾಡಲು ಸಾಧ್ಯವಾಗುವುದಿಲ್ಲ. ಆಗ ಬೆಲೆ ಕಡಿಮೆ ಇತ್ತು. ಹೊಟ್ಟೆ ತುಂಬ ಊಟ ಸಿಕ್ತಿತ್ತು. ಈಗ ನಾನು ಕೆಲಸ ಮಾಡ್ತೇನೆ ಅಂದರೂ ಯಾರೂ ಕೆಲಸ ಕೊಡುತ್ತಿಲ್ಲ. ಭಿಕ್ಷೆ ಬೇಡಿ ತಿನ್ನಲು ಮನಸ್ಸು ಒಪ್ಪುವುದಿಲ್ಲ. ಭಿಕ್ಷೆ ಬೇಡಿ ಮೂರು ಹೊತ್ತು ತಿನ್ನುವುದಕ್ಕಿಂತ ಕಷ್ಟಪಟ್ಟು ದುಡಿದು ಒಂದು ಹೊತ್ತು ತಿನ್ನೋಣ’ ಎನ್ನುತ್ತಾರೆ ಅರಸು. ಜ್ಯೋತಿ. ಎಸ್, ಸಿಟೆಝೆನ್ ಜರ್ನಲಿಸ್ಟ್​, (Jyothi S)

(ಹಾದಿ 15)

ನಾನು ಓದಿಲ್ಲ. ನಾನು ನನ್ನ ಎಂಟನೇ ವಯಸ್ಸಿನಿಂದ ಹೋಟೆಲ್​ಗಳಲ್ಲಿ ಪಾತ್ರೆ ತೊಳೆಯುವ ಕೆಲಸ ಮಾಡಿಕೊಂಡು ಬದುಕು ಸಾಗಿಸಿಕೊಂಡು ಬಂದವನು. ರಜೆ ಇದ್ದಾಗ ಮನೆಯಿಂದ ಹೊರಗೆ ಬರುತ್ತಿದ್ದೆ. ಕೆಲವರು ಚೆನ್ನಾಗಿ ಮಾತನಾಡಿಸುತ್ತಿದ್ದರು, ಊಟ ಕೊಡುತ್ತಿದ್ದರು. ಕೆಲವರು ನಮ್ಮನೆ ಹತ್ತಿರ ಕುಂಟ್ಕೊಂಡ್ ಕುಂಟ್ಕೊಂಡ್ ಬರ್ತಾನೆ ಅಂತ ಬೇಜಾರ್ ಮಾಡಿಕೊಳ್ಳುತ್ತಿದ್ದರು. ನಾನು ಬರುತ್ತಿದ್ದೇನೆ ಅಂತ ಗೊತ್ತಾಗುವಷ್ಟರಲ್ಲಿ ಮನೆ ಬಾಗಿಲು ಹಾಕುತ್ತಿದ್ದರು. ಕುಂಟ ಅಂತ ರೇಗಿಸುತ್ತಿದ್ದರು. ನನ್ನ ನೋಡಿ ನಗುತ್ತಿದ್ದರು. ನಾನೇನಾದರೂ ಅವರ ವಿರುದ್ಧ ಪ್ರಶ್ನೆ ಮಾಡಿದರೆ ಏನಾದರೂ ಕೇಳಿದರೆ ನೋಡು ಕುಂಟ ಆದರೂ ಎಷ್ಟು ಜಂಬ ಅಂತ ಅಣಕಿಸುತ್ತಿದ್ದರು. ಹಾಗಾಗಿ ಮರು ಪ್ರಶ್ನಿಸದೆ ನನ್ನ ಪಾಡಿಗೆ ನಾನು ಇರುತ್ತಿದ್ದೆ.

ಹೋಟೆಲ್ ಒಂದರಲ್ಲಿ ತಟ್ಟೆ ತೊಳೆಯುವುದು, ಸರ್ವಿಸ್ ಮಾಡುವುದು, ಟೇಬಲ್ ಸ್ವಚ್ಛ ಮಾಡುವುದು, ತರಕಾರಿ ಕತ್ತರಿಸುವುದು ಮಾಡುತ್ತಿದ್ದೆ. ಹೀಗೆ ಒಂದೇ ಕೆಲಸ ಅಂತ ಇಲ್ಲ. ಎಲ್ಲಾ ಕೆಲಸ ಮಾಡಿಸುತ್ತಿದ್ದರು. ನೀರಿನಲ್ಲಿ ಹೆಚ್ಚು ಕೆಲಸ ಮಾಡುತ್ತಿದ್ದರಿಂದ ಕಾಲು ಕೊಳೆಯಲು ಪ್ರಾರಂಭವಾಯ್ತು. ಆಗ ಅಲ್ಲಿದ್ದವರೆಲ್ಲ ಔಷಧಿ ಕೊಡಿಸಿ ಇಲ್ಲಿ ಕೆಲಸ ಬಿಟ್ಟು ಬೇರೆ ಕಡೆಗೆ ಹೋಗು ಎನ್ನುತ್ತಿದ್ದರು. ಅಷ್ಟು ಹೊತ್ತಿಗೆ ನಾನು ಚಪಾತಿ, ಪೂರಿ, ರೋಟಿ, ಬಜ್ಜಿ, ವಡೆ, ಕಬಾಬ್, ಆಮ್ಲೆಟ್, ಬಿರಿಯಾನಿ ಮಾಡುವ ಅಡುಗೆ ಕೆಲಸವನ್ನು ಕಲಿತಿದ್ದೆ. ಆಗ ಸ್ವಲ್ಪ ಧೈರ್ಯ ಇಲ್ಲಿ ಕೆಲಸ ಬಿಟ್ಟು ಹೋದರೂ ಬೇರೆ ಕಡೆ ಕೆಲಸ ಮಾಡಿ ಜೀವನ ಸಾಗಿಸಬಹುದು ಎಂಬ ನಂಬಿಕೆ ಬಂದಿತ್ತು. ಅಲ್ಲಿಂದ ಹೊರಬಂದಾದ ಮೇಲೆ ಗುಟ್ಟಹಳ್ಳಿ, ಬಿ. ಡಿ. ಎ. ಆಫೀಸ್ ಹತ್ತಿರ ಸಣ್ಣ ಪುಟ್ಟ ಕೆಲಸಗಳನ್ನು ಮಾಡುತ್ತಿದ್ದೆ. ತರುವಾಯ ಪ್ಯಾಲೇಸ್ ಗ್ರೌಂಡ್ ಹತ್ತಿರ ಕಟೌಟ್ ಪೇಂಟಿಂಗ್ ಅಂಗಡಿಯಲ್ಲಿ ಸಹಾಯಕನಾಗಿ ಕೆಲಸಕ್ಕೆ ಸೇರಿಕೊಂಡೆ. ಅಲ್ಲಿ ಒಂದೂವರೆ ವರ್ಷ ಕೆಲಸ ಮಾಡಿದೆ.

ಐದು ವರ್ಷದ ಹಿಂದೆ ಮುನಿಯಮ್ಮ ಎಂಬುವವರನ್ನು ಮದುವೆ ಮಾಡಿಕೊಂಡೆ. ಈಗ ಮಗಳು ಜಾಸ್ಮಿನ್ ನನ್ನ ಕಷ್ಟದಲ್ಲಿ ತುಸು ನಗುವನ್ನು ಮೂಡಿಸಲು ಜೊತೆಯಾಗಿದ್ದಾಳೆ. ಎರಡು ವರ್ಷದ ಹಿಂದೆ ಆರ್. ಟಿ. ನಗರದ ಹೋಟೆಲ್ ಒಂದರಲ್ಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದೆ. ಕೋವಿಡ್ ಬಂದ ಮೇಲೆ ಹೋಟೆಲ್ ವ್ಯಾಪಾರವೂ ಕಡಿಮೆಯಾಯ್ತು. ಹೋಟೆಲ್ ನಷ್ಟದಲ್ಲಿ ನಡೆಯುತ್ತಿದ್ದರಿಂದ ಬೇರೆಯವರಿಗೆ ಮಾರಿದರು.

ಇದನ್ನೂ ಓದಿ : Nomad: ಹಾದಿಯೇ ತೋರಿದ ಹಾದಿ; ‘ನಮ್ಮ ದೇಶದ ಸ್ಥಿತಿಗತಿಯನ್ನೇ ಕಲೆಯ ಮೂಲಕ ತೋರಿಸುತ್ತ ಹೊರಟಿದ್ದೇವೆ’

ಈಗ ನಾಗವಾರ, ಅಲ್ಲಾಳಸಂದ್ರ, ಜಕ್ಕೂರ್ ಎಲ್ಲೇ ಕೆಲಸ ಕೇಳಿದರೂ ಯಾರೂ ಕೆಲಸ ಕೊಟ್ಟು ನೋಡುತ್ತಿಲ್ಲ. ಕೈ ಕಾಲು ಚೆನ್ನಾಗಿರುವವರೇ ಸರಿಯಾಗಿ ಕೆಲಸ ಮಾಡಲ್ಲ. ಇನ್ನೂ ನೀನೇನು ಮಾಡ್ತೀಯ ತಟ್ಟಾಡಿ ಏನಾದರೂ ಬಿದ್ದರೆ, ನಿನ್ನಿಂದ ಏನ್ ಕೆಲಸ ಮಾಡೋಕೆ ಆಗತ್ತೆ ಪಾಪ ಹೋಗು ಅಂತ ಕಳುಹಿಸುತ್ತಿದ್ದಾರೆ. ಇನ್ನು ಮುಂದೆ ಅವರು ಇವರ ಮುಂದೆ ಬೇಡುವುದು ಬೇಡ. ನಾನೆ ಏನಾದರೂ ವ್ಯಾಪಾರ ಮಾಡಿ ಮೂರು ಹೊತ್ತು ತಿನ್ನುವಲ್ಲಿ ಒಂದ್ ಹೊತ್ತು ನೆಮ್ಮದಿಯಿಂದ ಊಟ ಮಾಡೋಣ ಅನ್ನಿಸಿದೆ.

ಕೊರೋನ ಸಮಯದಲ್ಲಿ ಬಾಡಿಗೆ ಕಟ್ಟುವುದು ಅಸಾಧ್ಯವಾಗಿ ಮನೆ ಬಿಡುವಂತಾಯಿತು. ಕೊನೆಗೆ ಒಂದು ಗಸಗಸೆ ಮರದ ಕೆಳಗೆ ಆರು ತಿಂಗಳು ವಾಸಮಾಡಿದ್ದೇವೆ. ಪುಟ್ಟ ಮಗುವಿನೊಂದಿಗೆ ಬಿಸಿಲು, ಮಳೆ, ಗಾಳಿ, ಚಳಿ ಎನ್ನದೆ ಅವರಿವರು ಕೊಟ್ಟ ದಿನಸಿಯಿಂದ, ಅಲ್ಲಿ ಇಲ್ಲಿ ಬಿದ್ದ ಪುಡಿ ಸೌದೆಯನ್ನು ಆಯ್ದು ತಂದು ಅಡುಗೆ ಮಾಡಿಕೊಂಡು ಜೀವನ ಸಾಗಿಸಿದ್ದೇವೆ. ಶೌಚಕ್ಕೆ, ಸ್ನಾನಕ್ಕೆ ಹತ್ತಿರದಲ್ಲೇ ಇದ್ದ ಹಮಾಮ್ ಗೆ ಹೋಗಿ ಬರುತ್ತಿದ್ದೆವು. ಛತ್ರಗಳಲ್ಲಿ ಪಾತ್ರೆ ತೊಳೆದು, ಅಲ್ಲಿ ಇಲ್ಲಿ ಸಣ್ಣ ಪುಟ್ಟ ಸಿಕ್ಕ ಕೆಲಸಗಳನ್ನು ಮಾಡಿ ಒಂದು ಸಣ್ಣ ಬಾಡಿಗೆ ಮನೆಗೆ ಬಂದಿದ್ದೇವೆ.

ಭಾರ ಎತ್ತಲು ಆಗುವುದಿಲ್ಲ. ನಾನೆ ಕುಳಿತುಕೊಂಡು ಒಂದೆಡೆ ಏನಾದರೂ ವ್ಯಾಪಾರ ಮಾಡಬೇಕು ಎಂಬ ಛಲವಿದೆ. ಪ್ಲಾಸ್ಟಿಕ್, ಸ್ಟೀಲ್, ತೆಂಗಿನಕಾಯಿ, ಜೋಳ, ಸೊಪ್ಪು ನಿಂಬೆಹಣ್ಣು ಇಂತದ್ದನ್ನೆಲ್ಲ ವ್ಯಾಪಾರ ಮಾಡಿ ಜೀವನ ಸಾಗಿಸಬೇಕೆಂಬ ತುಡಿತವಿದೆ. ತಳ್ಳುವಗಾಡಿ ಹೊಸದು 12,000. ಹಳೆಯದ್ದು ತೆಗೆದುಕೊಳ್ಳಬೇಕು ಅಂದರೂ ಸುಮಾರು 5 ರಿಂದ 6 ಸಾವಿರ ರೂಪಾಯಿ ಇರುತ್ತದೆ. ಇನ್ನು ಬಂಡವಾಳ ಅಂತ 5000 ಆದರೂ ಇದ್ದರೆ ನನ್ನ ಅನ್ನ ನಾನು ದುಡಿದು ನನ್ನ ಹೆಂಡತಿ ಮಕ್ಕಳನ್ನು ಸಾಕಬಹುದು.

ನಾನು ಓದಿಲ್ಲವಾದ್ದರಿಂದ ಸರ್ಕಾರದಿಂದ ಸಿಗುವ ಸೌಲಭ್ಯಗಳ ಮಾಹಿತಿ ಗೊತ್ತಿಲ್ಲ. ಯಾರನ್ನಾದರೂ ಕೇಳಿಕೊಂಡು ಮಾಡಿಸೋಣ ಎಂದರೆ ಅವರಿಗೆ ಲಂಚ ಕೊಡಲು ನನ್ನಲ್ಲಿ ಹಣವಿಲ್ಲ. ಎಲ್ಲರೂ ಹೀಗಿದ್ದೀಯ ಭಿಕ್ಷೆ ಕೇಳಲು ಹೋಗು ಅಂತಾರೆ. ನನಗೆ ಭಿಕ್ಷೆ ಬೇಡಿ ತಿನ್ನಲು ಮನಸ್ಸು ಒಪ್ಪುವುದಿಲ್ಲ. ದುಡಿದು ತಿನ್ನುವ ಆಸೆ. ನಾನು ಕೆಲಸ ಮಾಡುತ್ತೇನೆ. ನಾನೆ ಕುಂತಿದ್ದ ಕಡೆ ಏನಾದರೂ ವ್ಯಾಪಾರ ಮಾಡುವ ಆಸೆ. ದುಡಿದು ಮಗಳನ್ನು ಚೆನ್ನಾಗಿ ಓದಿಸಬೇಕು. ಅವಳಿಗೊಂದು ನೆಲೆ ಸಿಗುವ ಹಾಗೆ ಮಾಡಬೇಕು ಎನ್ನುವ ಗುರಿಯಿದೆ ಎನ್ನುತ್ತಾರೆ ಮೂವತ್ತೇಳು ವರ್ಷದ ಅರಸು.

ಇವರಿಗೆ ಸಹಾಯ ಮಾಡುವ ಕೈಗಳಿಗೆ ಬಲ ಹೆಚ್ಚಲಿ. ಅರಸು ಮೊಬೈಲ್ : 6364511062

ಮುಂದಿನ ಹಾದಿ : 28.4.2022

ಪ್ರತಿಕ್ರಿಯೆಗಾಗಿ :  tv9kannadadigital@gmail.com

ಈ ಅಂಕಣದ ಎಲ್ಲಾ ಬರಹಗಳನ್ನೂ ಇಲ್ಲಿ ಓದಿ : https://tv9kannada.com/tag/haadiye-torida-haadi

Published On - 8:57 am, Thu, 21 April 22

ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?