AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weird News: ಈ ಹಳ್ಳಿಯಲ್ಲಿನ ರೈತರು ಕೃಷಿಗೆ ಬಳಸ್ತಾರೆ ಬುಲೆಟ್​ಪ್ರೂಫ್ ಟ್ರ್ಯಾಕ್ಟರ್

ಬುಲೆಟ್​​ಪ್ರೂಫ್ ಕಾರಿನ ಬಗ್ಗೆ ನೀವು ಕೇಳಿರಬಹುದು. ಆದರೆ ಹರ್ಯಾಣ- ಉತ್ತರಪ್ರದೇಶ ಗಡಿಯಲ್ಲಿ ಇರುವ ಈ ಹಳ್ಳಿಯಲ್ಲಿ ರೈತರು ಬುಲೆಟ್​ಪ್ರೂಫ್ ಟ್ರ್ಯಾಕ್ಟರ್ ಬಳಸ್ತಾರೆ. ಪವರ್ ಸ್ಟೇರಿಂಗ್, ಕ್ಯಾಮೆರಾ ಅಳವಡಿಕೆ ಮಾಡಿಕೊಂಡಿರ್ತಾರೆ, ಇದ್ಯಾಕೆ ಹೀಗೆ ಗೊತ್ತಾ?

Weird News: ಈ ಹಳ್ಳಿಯಲ್ಲಿನ ರೈತರು ಕೃಷಿಗೆ ಬಳಸ್ತಾರೆ ಬುಲೆಟ್​ಪ್ರೂಫ್ ಟ್ರ್ಯಾಕ್ಟರ್
ಬುಲೆಟ್​ಪ್ರೂಫ್ ಟ್ರ್ಯಾಕ್ಟರ್
Srinivas Mata
|

Updated on: Mar 20, 2021 | 12:25 PM

Share

ಈ ಹಳ್ಳಿಯ ಬಗ್ಗೆ ನಿಮಗೆ ಹೇಳಿದರೆ ಬಹಳ ಆಶ್ಚರ್ಯ ಪಡ್ತೀರಿ. ಅದರಲ್ಲೂ ಈ ಹಳ್ಳಿ ಭಾರತದಲ್ಲೇ ಇದೆ ಅಂದರಂತೂ ಕೇಳಬೇಕಾ? ಈ ಹಳ್ಳಿಯಲ್ಲಿ ರೈತರು ಕೃಷಿಗಾಗಿ ಬಳಸುವ ಟ್ರ್ಯಾಕ್ಟರ್​​ಗಳು ಬುಲೆಟ್​​ಪ್ರೂಫ್. ಹರ್ಯಾಣ ಮತ್ತು ಉತ್ತರಪ್ರದೇಶದ ಗಡಿ ಭಾಗದಲ್ಲಿ ಈ ಹಳ್ಳಿ ಇದೆ. ತಮ್ಮ ಸುರಕ್ಷತೆಗಾಗಿ ರೈತರು ಈ ಟ್ರ್ಯಾಕ್ಟರ್​ಗಳನ್ನು ಬಳಸ್ತಾರೆ. ಜತೆಗೆ ಇವುಗಳಿಗೆ ಕ್ಯಾಮೆರಾ ಅಳವಡಿಸಲಾಗಿರುತ್ತೆ. ಹಾಗಂತ ಈ ಟ್ರ್ಯಾಕ್ಟರ್​ಗಳು ಮತ್ತೇನೋ ವಿಶಿಷ್ಟ ಅಂತೇನಲ್ಲ. ಫೋರ್ ಸ್ಟ್ರೋಕ್, ಡೈರೆಕ್ಟ್ ಇಂಜೆಕ್ಷನ್, ಡೀಸೆಲ್ ಎಂಜಿನ್. ಆದರೆ ಇವುಗಳ ವೇಗ ಮಾತ್ರ ಮಾಮೂಲಿ ಟ್ರ್ಯಾಕ್ಟರ್​ಗಳಿಗಿಂತ ಎರಡು ಪಟ್ಟು ಹೆಚ್ಚು. ಪವರ್ ಸ್ಟೇರಿಂಗ್, ಡಿಸ್ಕ್ ಬ್ರೇಕ್, ದೂರದಿಂದ ಬರುವವರು ಸಹ ಕಾಣಬೇಕು ಎಂದು ಟೆಲಿಸ್ಕೋಪಿಕ್ ಲೆನ್ಸ್ ಅಳವಡಿಸಲಾಗಿರುತ್ತದೆ.

ಹರ್ಯಾಣ ಮತ್ತು ಉತ್ತರಪ್ರದೇಶ ಗಡಿಯಲ್ಲಿ ಈ ಹಳ್ಳಿ ಇರುವುದರಿಂದ ಕೃಷಿ ಭೂಮಿ ಮೇಲೆ ಎರಡೂ ರಾಜ್ಯದವರು ತಮ್ಮ ಹಕ್ಕಿದೆ ಎಂದು ಸಾಧಿಸುತ್ತಾರೆ. ಈ ಕಾರಣಕ್ಕೆ ರೈತರ ಮಧ್ಯೆ ತಿಕ್ಕಾಟ ಏರ್ಪಡುತ್ತದೆ. ಭತ್ತ ಬೆಳೆಯುವ ಹಾಗೂ ಕೊಯ್ಲಾಗುವ ಸಂದರ್ಭದಲ್ಲಿ ಈ ತಿಕ್ಕಾಟವು ಹಿಂಸಾಚಾರಕ್ಕೆ ತಿರುಗುತ್ತದೆ. ರೈತರು ಪರಸ್ಪರರ ಮೇಲೆ ಕತ್ತಿ, ಲಾಠಿ, ಚಾಕು ಮತ್ತು ಎಷ್ಟೋ ಸಲ ಬಂದೂಕಿನಿಂದ ದಾಳಿ ಮಾಡಿಕೊಳ್ಳುತ್ತಾರೆ. ತಮ್ಮನ್ನು ರಕ್ಷಿಸಿಕೊಳ್ಳುವುದಕ್ಕೋಸ್ಕರ ಬುಲೆಟ್​ಪ್ರೂಫ್ ಟ್ರ್ಯಾಕ್ಟರ್​ಗಳನ್ನು ಬಳಸ್ತಾರೆ.

ವರದಿಗಳು ಹೇಳುವಂತೆ, ಗಡಿ ಭಾಗದಲ್ಲಿ ನಾಲ್ಕು ಹಳ್ಳಿಗಳಿದ್ದು, 450 ಎಕರೆ ಕೃಷಿಭೂಮಿ ಇದೆ. ಕೇಂದ್ರ ಸರ್ಕಾರವು 1974ರಲ್ಲಿ ಈ ವ್ಯಾಜ್ಯವನ್ನು ಬಗೆಹರಿಸುವುದಕ್ಕೆ ಪ್ರಯತ್ನಿಸಿದೆ. ಆದರೆ ಏನೂ ಪ್ರಯೋಜನ ಆಗಿಲ್ಲ. ಕೃಷಿ ಭೂಮಿಯ ಮೇಲಿನ ಹಿಡಿತಕ್ಕಾಗಿ ಇವತ್ತಿಗೂ ಇಲ್ಲಿನ ರೈತರು ಹಾವು- ಮುಂಗುಸಿ ರೀತಿಯಲ್ಲಿ ಜಗಳ ಆಡುತ್ತಾರೆ. ಕಳೆದ ಐವತ್ತು ವರ್ಷಗಳಿಂದ ಈ ಕಚ್ಚಾಟ ನಡೆಯುತ್ತಲೇ ಇದೆ. ಇನ್ನೆಷ್ಟು ಸಮಯ ಇದು ಮುಂದುವರಿಯುತ್ತದೋ? ಅಂದ ಹಾಗೆ ಬುಲೆಟ್​ಪ್ರೂಫ್ ಟ್ರ್ಯಾಕ್ಟರ್​ ಬೆಲೆ ಎಷ್ಟು ಗೊತ್ತಾ? 5 ಲಕ್ಷ ರೂಪಾಯಿ ಆಗುತ್ತದಂತೆ.

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?