AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

How to link Aadhaar to PAN card: ಆಧಾರ್ ಜತೆಗೆ ಪ್ಯಾನ್ ಕಾರ್ಡ್ ಜೋಡಣೆ ಹೇಗೆ?

ಪ್ಯಾನ್- ಆಧಾರ್ ಕಾರ್ಡ್ ಜೋಡಣೆಗೆ ಮಾರ್ಚ್ 31, 2021 ಕೊನೆ ದಿನ. ಅಷ್ಟರ ತನಕ ಕಾಯದೆ ಆದಷ್ಟು ಶೀಘ್ರದಲ್ಲಿ ಜೋಡಣೆ ಮಾಡುವುದು ಉತ್ತಮ. ಆಧಾರ್ ಕಾರ್ಡ್- ಪ್ಯಾನ್ ಕಾರ್ಡ್ ಜೋಡಣೆ ಹೇಗೆ ಎಂಬ ವಿವರಣೆ ಇಲ್ಲಿದೆ.

How to link Aadhaar to PAN card:  ಆಧಾರ್ ಜತೆಗೆ ಪ್ಯಾನ್ ಕಾರ್ಡ್ ಜೋಡಣೆ ಹೇಗೆ?
ಸಾಂದರ್ಭಿಕ ಚಿತ್ರ
Srinivas Mata
|

Updated on: Mar 19, 2021 | 7:48 PM

Share

ಪ್ಯಾನ್- ಆಧಾರ್ ಕಾರ್ಡ್ ಜೋಡಣೆಗೆ ಗಡುವು ಸಮೀಪಿಸುತ್ತಿದೆ. ಕೊನೆ ಕ್ಷಣದ ತನಕ ಕಾಯದೆ ಆದಷ್ಟು ಬೇಗ ಇದನ್ನು ಮಾಡಿ ಮುಗಿಸುವುದು ಉತ್ತಮ. ಆಧಾರ್- ಪ್ಯಾನ್ ಕಾರ್ಡ್ ಜೋಡಣೆಗೆ ಮಾರ್ಚ್ 31, 2021 ಕೊನೆ ದಿನ. ಒಂದು ವೇಳೆ ನೀವಿನ್ನೂ ಈ ಜವಾಬ್ದಾರಿಯನ್ನು ಮುಗಿಸಿಲ್ಲ ಎಂದಾದರೆ, ಇಲ್ಲಿ ನೀಡಿರುವ ವಿವಿಧ ಹಂತಗಳನ್ನು ಅನುಸರಿಸಿ, ಪೂರ್ಣಗೊಳಿಸಿ.

1. ಮೊದಲಿಗೆ ಆದಾಯ ತೆರಿಗೆಯ ಇ- ಫೈಲಿಂಗ್ ಪೋರ್ಟಲ್​ನಲ್ಲಿ ನೋಂದಣಿ ಮಾಡಿಕೊಳ್ಳಬೇಕು. 2. ಲಾಗ್ ಇನ್ ಐಡಿ, ಪಾಸ್​ವರ್ಡ್ ಹಾಗೂ ಜನ್ಮ ದಿನಾಂಕವನ್ನು ನಮೂದಿಸುವ ಮೂಲಕ ಆದಾಯ ತೆರಿಗೆ ಇಲಾಖೆಯ ಇ- ಫೈಲಿಂಗ್ ಪೋರ್ಟಲ್​ಗೆ ಲಾಗ್​ಇನ್ ಆಗಬೇಕು. 3. ಮಾಹಿತಿಯನ್ನು ಭರ್ತಿ ಮಾಡಿದ ಮೇಲೆ ಕೋಡ್ ಸಹ ನಮೂದಿಸಬೇಕು. 4. ವೆಬ್​ಸೈಟ್​ನಲ್ಲಿ ಲಾಗ್​ಇನ್ ಆದ ಮೇಲೆ ಒಂದು ವಿಂಡೋ ತೆರೆದುಕೊಳ್ಳುತ್ತದೆ. ನಿಮ್ಮ ಪ್ಯಾನ್ ಕಾರ್ಡ್ ಅನ್ನು ಆಧಾರ್ ಕಾರ್ಡ್ ಜತೆಗೆ ಜೋಡಣೆ ಮಾಡುವಂತೆ ಸಂದೇಶ ತೋರಿಸುತ್ತದೆ. 5. ಒಂದು ವೇಳೆ ತೋರಿಸದಿದ್ದಲ್ಲಿ ಪ್ರೊಫೈಲ್ ಸೆಟ್ಟಿಂಗ್​​ಗೆ ತೆರಳಿ Link Adhaar ಎಂಬ ಬಟನ್ ಆಯ್ಕೆ ಮಾಡಿಕೊಳ್ಳಬೇಕು. 6. ಹೆಸರು, ಜನ್ಮ ದಿನಾಂಕ ಮತ್ತು ಲಿಂಗ ಮೊದಲಾದ ಮಾಹಿತಿಯನ್ನು ನಮೂದಿಸಬೇಕು. ಇ-ಫೈಲಿಂಗ್ ಪೋರ್ಟಲ್​ನಲ್ಲಿ ನೋಂದಣಿ ವೇಳೆ ಭರ್ತಿ ಮಾಡಿದ್ದ ಮಾಹಿತಿ ಸರಿಯಾಗಿರಬೇಕು. 7. ಆಧಾರ್ ಕಾರ್ಡ್​ನಲ್ಲಿ ಇರುವ ಮಾಹಿತಿಯು ತೆರೆ (ಸ್ಕ್ರೀನ್) ಮೇಲೆ ತೋರಿಸುತ್ತಿರುವುದರ ಜತೆಗೆ ತಾಳೆಯಾಗುತ್ತಿದೆಯಾ ಎಂದು ದೃಢೀಕರಿಸಿಕೊಳ್ಳಬೇಕು. 8. ಮಾಹಿತಿ ಹೊಂದಾಣಿಕೆ ಆಗುತ್ತಿದ್ದಲ್ಲಿ ಆಧಾರ್ ಕಾರ್ಡ್ ಸಂಖ್ಯೆಯನ್ನು ನಮೂದಿಸಿ, link now (ಲಿಂಕ್ ನೌ) ಬಟನ್ ಮೇಲೆ ಕ್ಲಿಕ್ ಮಾಡಬೇಕು. 9. ನಿಮ್ಮ ಆಧಾರ್ ಕಾರ್ಡ್ ಹಾಗೂ ಪ್ಯಾನ್ ಕಾರ್ಡ್ ಯಶಸ್ವಿಯಾಗಿ ಜೋಡಣೆ ಆಗಿದೆ ಎಂಬ ಸಂದೇಶ ಬರುತ್ತದೆ.

ಇದನ್ನೂ ಓದಿ: Income Tax Return: ಆದಾಯ ತೆರಿಗೆ ಸಂಬಂಧಿತ ಈ 5 ಜವಾಬ್ದಾರಿಗಳನ್ನು ಮುಗಿಸಲು ಮಾರ್ಚ್ 31 ಗಡುವು

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ