AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

How to link Aadhaar to PAN card: ಆಧಾರ್ ಜತೆಗೆ ಪ್ಯಾನ್ ಕಾರ್ಡ್ ಜೋಡಣೆ ಹೇಗೆ?

ಪ್ಯಾನ್- ಆಧಾರ್ ಕಾರ್ಡ್ ಜೋಡಣೆಗೆ ಮಾರ್ಚ್ 31, 2021 ಕೊನೆ ದಿನ. ಅಷ್ಟರ ತನಕ ಕಾಯದೆ ಆದಷ್ಟು ಶೀಘ್ರದಲ್ಲಿ ಜೋಡಣೆ ಮಾಡುವುದು ಉತ್ತಮ. ಆಧಾರ್ ಕಾರ್ಡ್- ಪ್ಯಾನ್ ಕಾರ್ಡ್ ಜೋಡಣೆ ಹೇಗೆ ಎಂಬ ವಿವರಣೆ ಇಲ್ಲಿದೆ.

How to link Aadhaar to PAN card:  ಆಧಾರ್ ಜತೆಗೆ ಪ್ಯಾನ್ ಕಾರ್ಡ್ ಜೋಡಣೆ ಹೇಗೆ?
ಸಾಂದರ್ಭಿಕ ಚಿತ್ರ
Srinivas Mata
|

Updated on: Mar 19, 2021 | 7:48 PM

Share

ಪ್ಯಾನ್- ಆಧಾರ್ ಕಾರ್ಡ್ ಜೋಡಣೆಗೆ ಗಡುವು ಸಮೀಪಿಸುತ್ತಿದೆ. ಕೊನೆ ಕ್ಷಣದ ತನಕ ಕಾಯದೆ ಆದಷ್ಟು ಬೇಗ ಇದನ್ನು ಮಾಡಿ ಮುಗಿಸುವುದು ಉತ್ತಮ. ಆಧಾರ್- ಪ್ಯಾನ್ ಕಾರ್ಡ್ ಜೋಡಣೆಗೆ ಮಾರ್ಚ್ 31, 2021 ಕೊನೆ ದಿನ. ಒಂದು ವೇಳೆ ನೀವಿನ್ನೂ ಈ ಜವಾಬ್ದಾರಿಯನ್ನು ಮುಗಿಸಿಲ್ಲ ಎಂದಾದರೆ, ಇಲ್ಲಿ ನೀಡಿರುವ ವಿವಿಧ ಹಂತಗಳನ್ನು ಅನುಸರಿಸಿ, ಪೂರ್ಣಗೊಳಿಸಿ.

1. ಮೊದಲಿಗೆ ಆದಾಯ ತೆರಿಗೆಯ ಇ- ಫೈಲಿಂಗ್ ಪೋರ್ಟಲ್​ನಲ್ಲಿ ನೋಂದಣಿ ಮಾಡಿಕೊಳ್ಳಬೇಕು. 2. ಲಾಗ್ ಇನ್ ಐಡಿ, ಪಾಸ್​ವರ್ಡ್ ಹಾಗೂ ಜನ್ಮ ದಿನಾಂಕವನ್ನು ನಮೂದಿಸುವ ಮೂಲಕ ಆದಾಯ ತೆರಿಗೆ ಇಲಾಖೆಯ ಇ- ಫೈಲಿಂಗ್ ಪೋರ್ಟಲ್​ಗೆ ಲಾಗ್​ಇನ್ ಆಗಬೇಕು. 3. ಮಾಹಿತಿಯನ್ನು ಭರ್ತಿ ಮಾಡಿದ ಮೇಲೆ ಕೋಡ್ ಸಹ ನಮೂದಿಸಬೇಕು. 4. ವೆಬ್​ಸೈಟ್​ನಲ್ಲಿ ಲಾಗ್​ಇನ್ ಆದ ಮೇಲೆ ಒಂದು ವಿಂಡೋ ತೆರೆದುಕೊಳ್ಳುತ್ತದೆ. ನಿಮ್ಮ ಪ್ಯಾನ್ ಕಾರ್ಡ್ ಅನ್ನು ಆಧಾರ್ ಕಾರ್ಡ್ ಜತೆಗೆ ಜೋಡಣೆ ಮಾಡುವಂತೆ ಸಂದೇಶ ತೋರಿಸುತ್ತದೆ. 5. ಒಂದು ವೇಳೆ ತೋರಿಸದಿದ್ದಲ್ಲಿ ಪ್ರೊಫೈಲ್ ಸೆಟ್ಟಿಂಗ್​​ಗೆ ತೆರಳಿ Link Adhaar ಎಂಬ ಬಟನ್ ಆಯ್ಕೆ ಮಾಡಿಕೊಳ್ಳಬೇಕು. 6. ಹೆಸರು, ಜನ್ಮ ದಿನಾಂಕ ಮತ್ತು ಲಿಂಗ ಮೊದಲಾದ ಮಾಹಿತಿಯನ್ನು ನಮೂದಿಸಬೇಕು. ಇ-ಫೈಲಿಂಗ್ ಪೋರ್ಟಲ್​ನಲ್ಲಿ ನೋಂದಣಿ ವೇಳೆ ಭರ್ತಿ ಮಾಡಿದ್ದ ಮಾಹಿತಿ ಸರಿಯಾಗಿರಬೇಕು. 7. ಆಧಾರ್ ಕಾರ್ಡ್​ನಲ್ಲಿ ಇರುವ ಮಾಹಿತಿಯು ತೆರೆ (ಸ್ಕ್ರೀನ್) ಮೇಲೆ ತೋರಿಸುತ್ತಿರುವುದರ ಜತೆಗೆ ತಾಳೆಯಾಗುತ್ತಿದೆಯಾ ಎಂದು ದೃಢೀಕರಿಸಿಕೊಳ್ಳಬೇಕು. 8. ಮಾಹಿತಿ ಹೊಂದಾಣಿಕೆ ಆಗುತ್ತಿದ್ದಲ್ಲಿ ಆಧಾರ್ ಕಾರ್ಡ್ ಸಂಖ್ಯೆಯನ್ನು ನಮೂದಿಸಿ, link now (ಲಿಂಕ್ ನೌ) ಬಟನ್ ಮೇಲೆ ಕ್ಲಿಕ್ ಮಾಡಬೇಕು. 9. ನಿಮ್ಮ ಆಧಾರ್ ಕಾರ್ಡ್ ಹಾಗೂ ಪ್ಯಾನ್ ಕಾರ್ಡ್ ಯಶಸ್ವಿಯಾಗಿ ಜೋಡಣೆ ಆಗಿದೆ ಎಂಬ ಸಂದೇಶ ಬರುತ್ತದೆ.

ಇದನ್ನೂ ಓದಿ: Income Tax Return: ಆದಾಯ ತೆರಿಗೆ ಸಂಬಂಧಿತ ಈ 5 ಜವಾಬ್ದಾರಿಗಳನ್ನು ಮುಗಿಸಲು ಮಾರ್ಚ್ 31 ಗಡುವು

ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಒಂದು ಆಧಾರ್ ಕಾರ್ಡ್​ಗೆ 2 ಚೀಲ ಯೂರಿಯಾ
ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಒಂದು ಆಧಾರ್ ಕಾರ್ಡ್​ಗೆ 2 ಚೀಲ ಯೂರಿಯಾ
ಪೂಜೆ ಮಾಡಿದರೆ ಇಷ್ಟಾರ್ಥಗಳು ನೆರವೇರುತ್ತವೆ ಎನ್ನುವ ಗೃಹಿಣಿಯರು
ಪೂಜೆ ಮಾಡಿದರೆ ಇಷ್ಟಾರ್ಥಗಳು ನೆರವೇರುತ್ತವೆ ಎನ್ನುವ ಗೃಹಿಣಿಯರು
‘ನಮ್ಮ ಮನೆ ಹತ್ತಿರವೇ ಅಟ್ಯಾಕ್ ಆಗಿದೆ’: ಪೊಲೀಸ್ ಎದುರು ಪ್ರಥಮ್ ಅಳಲು
‘ನಮ್ಮ ಮನೆ ಹತ್ತಿರವೇ ಅಟ್ಯಾಕ್ ಆಗಿದೆ’: ಪೊಲೀಸ್ ಎದುರು ಪ್ರಥಮ್ ಅಳಲು
ಹುಲಿರಾಯನ ಫೋಸ್​ ಕಂಡು ಹೌದು ಹುಲಿಯಾ ಎಂದ ಪ್ರವಾಸಿಗರು
ಹುಲಿರಾಯನ ಫೋಸ್​ ಕಂಡು ಹೌದು ಹುಲಿಯಾ ಎಂದ ಪ್ರವಾಸಿಗರು
PM Modi Speech Live: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ನೇರಪ್ರಸಾರ
PM Modi Speech Live: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ನೇರಪ್ರಸಾರ
ದರ್ಶನ್ ವಿಗ್ ಧರಿಸುತ್ತಾರೆ, ಅದನ್ನು ಹೇಗೆ ಕಿತ್ತುಕೊಳ್ಳಲಾದೀತು? ಪ್ರಥಮ್
ದರ್ಶನ್ ವಿಗ್ ಧರಿಸುತ್ತಾರೆ, ಅದನ್ನು ಹೇಗೆ ಕಿತ್ತುಕೊಳ್ಳಲಾದೀತು? ಪ್ರಥಮ್
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾವು
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾವು
ಪಹಲ್ಗಾಮ್ ದಾಳಿಗೆ ಭದ್ರತಾ ಲೋಪವೇ ಕಾರಣ: ಖರ್ಗೆ
ಪಹಲ್ಗಾಮ್ ದಾಳಿಗೆ ಭದ್ರತಾ ಲೋಪವೇ ಕಾರಣ: ಖರ್ಗೆ
ಕಾಂಗ್ರೆಸ್​ನ ದಲಿತ ವಿರೋಧಿ ನೀತಿಯಿಂದ ಖರ್ಗೆ ಸಿಎಂ ಆಗಲಿಲ್ಲ: ಜ್ಞಾನೇಂದ್ರ
ಕಾಂಗ್ರೆಸ್​ನ ದಲಿತ ವಿರೋಧಿ ನೀತಿಯಿಂದ ಖರ್ಗೆ ಸಿಎಂ ಆಗಲಿಲ್ಲ: ಜ್ಞಾನೇಂದ್ರ
ಅವಮಾನಗಳ ಹೊರತಾಗಿಯೂ ಸಿಎಂ ವಿರುದ್ಧ ಮಾತಾಡದ ಶಿವಕುಮಾರ್
ಅವಮಾನಗಳ ಹೊರತಾಗಿಯೂ ಸಿಎಂ ವಿರುದ್ಧ ಮಾತಾಡದ ಶಿವಕುಮಾರ್