AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನಭವಿಷ್ಯ | ಜನವರಿ 3, 2021

ಜನವರಿ 3, 2021ರ ದ್ವಾದಶ ರಾಶಿಗಳ ದಿನಭವಿಷ್ಯ.

ದಿನಭವಿಷ್ಯ | ಜನವರಿ 3, 2021
ದಿನ ಭವಿಷ್ಯ
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Jan 03, 2021 | 11:46 AM

Share

ಜನವರಿ 03,2021ರ ಭಾನುವಾರದ ರಾಶಿ ಭವಿಷ್ಯ

ಮೇಷ ಯೋಜನೆಗಳಿಗೆ ಪೂರ್ವ ತಯಾರಿ ಮಾಡುವ ಅಗತ್ಯತೆ ಕಂಡುಬರುವುದು. ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವುದು ಒಳಿತು. ಶುಭ ಸಂಖ್ಯೆ: 3

ವೃಷಭ ಹೊಟ್ಟೆಕಿಚ್ಚು ಪಡುವವರಿಗೆ ತಕ್ಕ ಶಾಸ್ತಿಯಾಗಲಿದೆ. ಶತ್ರುಗಳು ತಾವಾಗಿಯೇ ದೂರಸರಿಯುವರು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವುದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ಶುಭ ಸಂಖ್ಯೆ: 5

ಮಿಥುನ ಆಶೆ ಆಕಾಂಕ್ಷಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವುದು. ಸಹೋದರ ಸಹಕಾರ ತೋರುವುದರಿಂದ ನಿರಾತಂಕವಾಗಿ ಕಾರ್ಯ ಪೂರ್ಣವಾಗುವುದು. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 9

ಕರ್ಕ ವ್ಯಕ್ತಿತ್ವಕ್ಕೆ ತಕ್ಕ ಗೌರವಗಳು ದೊರೆಯುವವು. ಚಾಣಾಕ್ಷತನದಿಂದ ಕಷ್ಟ ಪರಿಹರಿಸಿಕೊಳ್ಳುವಿರಿ. ಅಪೇಕ್ಷಿತ ಕಾರ್ಯಗಳು ಕೈಗೂಡುವವು. ಸಂಬಂಧಿಗಳಿಂದ ಸಹಕಾರ ದೊರೆಯುವುದು. ದೂರ ಪ್ರಯಾಣ, ಪರಸ್ಥಳವಾಸ ಸಂಭವ. ಶುಭ ಸಂಖ್ಯೆ: 6

ಸಿಂಹ ಅಲ್ಪ ತ್ರಾಸದಾಯಕ. ಗಡಿಬಿಡಿಯ ವಾತಾವರಣ, ಆರೋಗ್ಯದಲ್ಲಿ ಏರುಪೇರು ಸಂಭವ. ಮಹತ್ವದ ಕೆಲಸಗಳನ್ನು ಮುಂದೂಡುವುದು ಒಳ್ಳೆಯದು. ಮಂಗಲಕಾರ್ಯ, ಹೆಸರು, ಕಡಲೆ ದಾನ ಮಾಡಿರಿ. ಶುಭ ಸಂಖ್ಯೆ: 4

ಕನ್ಯಾ ಕುಟುಂಬದಲ್ಲಿ ವಾದ ಬೇಡ. ಉತ್ತಮ ಸಾಧನೆಯಿಂದ ಬಂಧುವರ್ಗದ ಪ್ರಶಂಸೆಗೆ ಪಾತ್ರರಾಗುವಿರಿ. ವ್ಯವಹಾರದಲ್ಲಿಯ ಚತುರತೆ ಒಳ್ಳೆಯ ಆದಾಯವನ್ನು ತಂದು ಕೊಡುವುದು. ಸಮತೋಲಿತ ಜೀವನವಿರುವುದು. ಶುಭ ಸಂಖ್ಯೆ: 8

ತುಲಾ ಅನಿಸಿಕೆಗಿಂತ ವಾಸ್ತವ ಬೇರೆ ಇರುವುದರಿಂದ ತಕ್ಕ ಬದಲಾವಣೆ ಮಾಡಿಕೊಳ್ಳುವಿರಿ. ನಡತೆಯಲ್ಲ ಸೂಕ್ಷತೆ ಇರಲಿ. ವ್ಯವಹಾರವನ್ನು ಪೂರ್ಣವಾಗಿ ಆಲೋಚಿಸಿ ಮಾಡುವದು ಒಳ್ಳೆಯದು. ಧನಹಾನಿಯ ಸಂಭವವಿದೆ. ಶುಭ ಸಂಖ್ಯೆ: 1

ವೃಶ್ಚಿಕ ವ್ಯವಹಾರಿಕ ಏಳ್ಗೆ ಇರುವುದು. ದೂರ ಪ್ರಯಾಣದ ಸಂಭವ. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ. ವಿವಿಧ ಸೌಭಾಗ್ಯಪ್ರಾಪ್ತಿ. ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್, ವಾಹನ, ಮಶಿನರಿಗಳಿಂದ ತೊಂದರೆ. ಶುಭ ಸಂಖ್ಯೆ: 3

ಧನು ಒಳ್ಳೆಯ ಮಾತುಗಳಿಂದ ಸಂಬಂಧ ಸುಧಾರಿಸುವುದು. ಸ್ನೇಹಿತರಲ್ಲಿಯ ಮನಸ್ತಾಪ ದೂರಾಗುವುದು. ಶಕ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವುದು. ಉದ್ಯೋಗದ ಹೊರತಾಗಿ ಬೇರೆ ಕೆಲಸಕ್ಕೂ ಗಮನಹರಿಸಿ. ಶುಭ ಸಂಖ್ಯೆ: 7

ಮಕರ ವ್ಯವಹಾರದಲ್ಲಿ ಹಾನಿ ಕಂಡುಬರುವುದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವುದು. ಶುಭ ಸಂಖ್ಯೆ: 2

ಕುಂಭ ಆರ್ಥಿಕ ಸ್ಥಿತಿ ಸುಧಾರಿಸುವುದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವುದು. ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ. ಶುಭ ಸಂಖ್ಯೆ: 9

ಮೀನ ಹಣಕಾಸಿನ ವ್ಯವಹಾರದಲ್ಲಿ ಧ್ಯರ್ಯದಿಂದ ಕಾರ್ಯ ಸಾಧನೆ. ಅಪೇಕ್ಷಿಸದ ಲಾಭ ಸಂಭವ. ಗಡಿಬಿಡಿಯ ವಾತಾವತರಣ, ಬಿಡುವಿಲ್ಲದ ಕಾರ್ಯ, ಮಿತ್ರರೊಂದಿಗೆ ಜಟಾಪಟಿ ಸಂಭವ, ದೀಪದಾನ ಮಾಡಿರಿ. ಶುಭ ಸಂಖ್ಯೆ: 1

ಡಾ.ಬಸವರಾಜ ಗುರೂಜಿ

(ಡಾ.ಬಸವರಾಜ ಗುರೂಜಿ ಸಂಪರ್ಕ ಸಂಖ್ಯೆ: 99728 48937)

ಹೊಸ ವರ್ಷ 2021ರ ಫಲಾಫಲ: ಯಾವ ರಾಶಿಯವರಿಗೆ ಏನು ಲಾಭ? ವಿವರಿಸಿದ್ದಾರೆ ಎಸ್‌.ಕೆ.ಜೈನ್

Published On - 10:42 am, Sun, 3 January 21

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!