AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರವನ್ನು ‘ತಾಲಿಬಾನ್’​ಗೆ ಹೋಲಿಸಿದ ಕ್ವೀನಾ ಕಂಗನಾ

ಪ್ರಸ್ತುತವಾಗಿ ತನ್ನ ತಾಯ್ನಾಡಾದ ಹಿಮಾಚಲ ಪ್ರದೇಶದಲ್ಲಿರುವ ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಕಂಗನಾ ರನೌತ್, ಮುಂಬೈ ಪೊಲೀಸ್ ಮತ್ತು ಮಹಾರಾಷ್ಟ್ರ ಸರ್ಕಾರ ವಿರುದ್ಧ ಟೀಕೆ ಮಾಡುವುದನ್ನು ಮುಂದುವರಿಸಿ, ಶಿವ ಸೇನೆ ಹಾಗೂ ಮಹಾರಾಷ್ಟ್ರ ಸರ್ಕಾರದ ಕೆಂಗಣ್ಣಿಗೆ ಗುರಿಯಾಗುತ್ತಿದ್ದಾರೆ. ಗುರುವಾರದಂದು, ಬಾಲಿವುಡ್​ನಲ್ಲಿ ಡ್ರಗ್ಸ್ ಜಾಲ ಸಕ್ರಿಯವಾಗಿದೆ ಮತ್ತು ಮುಂಬೈ ಮಹಾನಗರ ಈಗ ಪಾಕಿಸ್ತಾನ ಆಕ್ರಮಿತ ಕಾಶ್ಮೀರವಾಗಿದೆ ಎಂದಿದ್ದ ಈ ಆತ್ಯಂತ ಪ್ರತಿಭಾನ್ವಿತ ನಟಿ ಇಂದು ಮಹಾರಾಷ್ಟ್ರವನ್ನು ತಾಲಿಬಾನ್​ಗೆ ಹೋಲಿಸಿದ್ದಾರೆ. ನಟ ಸುಶಾಂತ್ ಸಿಂಗ್ ರಜಪೂತ್ ಆವರ ಸಾವಿಗೆ ಡ್ರಗ್ […]

ಮಹಾರಾಷ್ಟ್ರವನ್ನು ‘ತಾಲಿಬಾನ್’​ಗೆ ಹೋಲಿಸಿದ ಕ್ವೀನಾ ಕಂಗನಾ
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Sep 04, 2020 | 6:54 PM

Share

ಪ್ರಸ್ತುತವಾಗಿ ತನ್ನ ತಾಯ್ನಾಡಾದ ಹಿಮಾಚಲ ಪ್ರದೇಶದಲ್ಲಿರುವ ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಕಂಗನಾ ರನೌತ್, ಮುಂಬೈ ಪೊಲೀಸ್ ಮತ್ತು ಮಹಾರಾಷ್ಟ್ರ ಸರ್ಕಾರ ವಿರುದ್ಧ ಟೀಕೆ ಮಾಡುವುದನ್ನು ಮುಂದುವರಿಸಿ, ಶಿವ ಸೇನೆ ಹಾಗೂ ಮಹಾರಾಷ್ಟ್ರ ಸರ್ಕಾರದ ಕೆಂಗಣ್ಣಿಗೆ ಗುರಿಯಾಗುತ್ತಿದ್ದಾರೆ. ಗುರುವಾರದಂದು, ಬಾಲಿವುಡ್​ನಲ್ಲಿ ಡ್ರಗ್ಸ್ ಜಾಲ ಸಕ್ರಿಯವಾಗಿದೆ ಮತ್ತು ಮುಂಬೈ ಮಹಾನಗರ ಈಗ ಪಾಕಿಸ್ತಾನ ಆಕ್ರಮಿತ ಕಾಶ್ಮೀರವಾಗಿದೆ ಎಂದಿದ್ದ ಈ ಆತ್ಯಂತ ಪ್ರತಿಭಾನ್ವಿತ ನಟಿ ಇಂದು ಮಹಾರಾಷ್ಟ್ರವನ್ನು ತಾಲಿಬಾನ್​ಗೆ ಹೋಲಿಸಿದ್ದಾರೆ. ನಟ ಸುಶಾಂತ್ ಸಿಂಗ್ ರಜಪೂತ್ ಆವರ ಸಾವಿಗೆ ಡ್ರಗ್ ಜಾಲವೇ ಕಾರಣವೆಂದು ಸಹ ಕಂಗನಾ ಆರೋಪಿಸಿದ್ದರು.

ಸುಶಾಂತ್ ಸಾವಿನ ಬಗ್ಗೆ ಕಂಗನಾ ಹೇಳಿರುವುದಕ್ಕೆ ಪ್ರತಿಕ್ರಿಯಿಸಿದ ಶಿವ ಸೇನೆಯ ರಾಜ್ಯ ಸಭಾ ಸದಸ್ಯ ಸಂಜಯ ರಾವತ್, ಆಕೆಗೆ ಮುಂಬೈ ಪೊಲೀಸ್​ ಭಯವಿದೆ, ಆಕೆ ಹಿಮಾಚಲ ಪ್ರದೇಶದಲ್ಲೇ ಇರಲಿ, ಮುಂಬೈಗೆ ಬರುವುದು ಬೇಡ ಎಂದಿದ್ದರು. ಕಂಗನಾ ಸಹ, ಅಷ್ಟೇ ಖಡಕ್ಕಾದ ಟ್ವೀಟ್ ಮೂಲಕ ರಾವತ್ ಅವರಿಗೆ ಉತ್ತರ ನೀಡಿ, ಸ್ವಾತಂತ್ರ್ಯದ ಘೋಷಣೆಗಳನ್ನು ಮುಂಬೈ ನಗರದ ಓಣಿಗಳಲ್ಲಿ ಕೂಗಿದ ನಂತರ ರಾವತ್ ಅವರು ನನಗೆ ಬಹಿರಂಗ ಬೆದರಿಕೆ ಒಡ್ಡುತ್ತಿದ್ದಾರೆ ಎಂದಿದ್ದರು.

‘‘ಶಿವ ಸೇನೆಯ ನಾಯಕ ಸಂಜಯ ರಾವತ್ ಅವರು ನನಗೆ ಬಹಿರಂಗ ಬೆದರಿಕೆ ನೀಡಿ ಮುಂಬೈಗೆ ಬರಬೇಡ ಎಂದು ಹೇಳಿದ್ದಾರೆ. ಮುಂಬೈನ ಬೀದಿಗಳಲ್ಲಿ ಇವರೆಲ್ಲ ಮೊದಲು ಸ್ವಾತಂತ್ರ್ಯದ ಘೋಷಣೆಗಳನ್ನು ಕೂಗುತ್ತಾರೆ ನಂತರ ಇಂಥ ಬೆದರಿಕೆಗಳನ್ನು ಒಡ್ಡುತ್ತಾರೆ. ನಂಗ್ಯಾಕೋ ಮುಂಬೈ ನಗರವೀಗ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಂತೆ ಗೋಚರವಾಗುತ್ತಿದೆ@KanganaTeam’’ ಎಂದು ಕಂಗನಾ ಟ್ವೀಟ್ ಮಾಡಿದ್ದರು.

ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್​ಮುಖ್ ಇಂದು ಹೇಳಿಕೆಯೊಂದನ್ನು ನೀಡಿ, ಕಂಗನಾ ಮುಂಬೈನಲ್ಲಿ ವಾಸಿಸಲು ಅಯೋಗ್ಯಳು ಎಂದು ಹೇಳಿದ್ದಾರೆ.

‘‘ಮುಂಬೈ ಪೊಲೀಸನ್ನು ಸ್ಕಾಟ್ಲೆಂಡ್ ಯಾರ್ಡ್​ನೊಂದಿಗೆ ಹೋಲಿಸಲಾಗುತ್ತದೆ. ಕೆಲವು ಜನ ಮುಂಬೈ ಪೊಲೀಸನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಒಬ್ಬ ಐಪಿಎಸ್ ಅಧಿಕಾರಿ ಪೊಲೀಸರ ವಿರುದ್ಧ ನ್ಯಾಯಾಲಯದ ಕಟೆಕಟೆ ಹತ್ತಿದ್ದಾರೆ. ಆಕೆಯ (ಕಂಗನಾ ರನೌತ್) ಹೋಲಿಕೆಯ ನಂತರ……ಮಹಾರಾಷ್ಟ್ರ ಅಥವಾ ಮುಂಬೈನಲ್ಲಿ ವಾಸ ಮಾಡುವುದಕ್ಕೆ ಆಕೆಗೆ ಯಾವುದೇ ಅಧಿಕಾರವಿಲ್ಲ.’’ ಎಂದು ದೇಶ್​ಮುಖ್ ಹೇಳಿದ್ದಾರೆ.

ದೇಶ್​ಮುಖ್​ ಅವರ ಹೇಳಿಕೆಗೂ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಕಂಗನಾ, ‘‘ಗೃಹ ಸಚಿವರು ನನ್ನ ಸಂವೈಧಾನಿಕ ಹಕ್ಕುಗಳ ಮೇಲೆ ಆಕ್ರಮಣ ಮಾಡುತ್ತಿದ್ದಾರೆ, ಒಂದೇ ದಿನದಲ್ಲಿ ಅವರು ಪಾಕ್ ಆಕ್ರಮಿತ ಕಾಶ್ಮೀರವನ್ನು ತಾಲಿಬಾನ್ ಆಗಿ ಪರಿವರ್ತಿಸಿದ್ದಾರೆ,’’ ಎಂದಿದ್ದಾರೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ