AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2020ರ ಕೊನೆಯ ಸೂರ್ಯಗ್ರಹಣ: ಏನು ವಿಶೇಷ? ವೀಕ್ಷಣೆ ಹೇಗೆ?

ಡಿಸೆಂಬರ್ 14 ಸೋಮವಾರ ಸೂರ್ಯಗ್ರಹಣ ಸಂಭವಿಸಲಿದ್ದು, ಇದು ಈ ವರ್ಷದ ಕೊನೆಯ ಸೂರ್ಯಗ್ರಹಣ ಆಗಿದೆ. ಸೋಮವಾರ ಸಂಜೆ 7.30ಕ್ಕೆ ಆರಂಭವಾಗುವ ಸೂರ್ಯಗ್ರಹಣ ಮಂಗಳವಾರ ಮಧ್ಯರಾತ್ರಿ 12.23ಕ್ಕೆ ಮುಕ್ತಾಯವಾಗಲಿದೆ.

2020ರ ಕೊನೆಯ ಸೂರ್ಯಗ್ರಹಣ: ಏನು ವಿಶೇಷ? ವೀಕ್ಷಣೆ ಹೇಗೆ?
ಸೂರ್ಯಗ್ರಹಣ (ಪ್ರಾತಿನಿಧಿಕ ಚಿತ್ರ)
ರಶ್ಮಿ ಕಲ್ಲಕಟ್ಟ
| Edited By: |

Updated on: Dec 13, 2020 | 11:14 AM

Share

ಡಿಸೆಂಬರ್ 14 ಸೋಮವಾರ ಸೂರ್ಯಗ್ರಹಣ ಸಂಭವಿಸಲಿದ್ದು, ಇದು ಈ ವರ್ಷದ ಕೊನೆಯ ಸೂರ್ಯಗ್ರಹಣ. ಸೋಮವಾರ ಸಂಜೆ 7.30ಕ್ಕೆ ಆರಂಭವಾಗುವ ಸೂರ್ಯಗ್ರಹಣ ಮಂಗಳವಾರ ಮಧ್ಯರಾತ್ರಿ 12.23ಕ್ಕೆ ಮುಕ್ತಾಯವಾಗಲಿದೆ. ರಾತ್ರಿ 9.43ಕ್ಕೆ ಗ್ರಹಣವು ಉತ್ತುಂಗ ಸ್ಥಿತಿಯಲ್ಲಿರಲಿದೆ. ಈ ವರ್ಷದ ಎರಡನೇ ಸೂರ್ಯಗ್ರಹಣ ಇದಾಗಿದ್ದು ಜೂನ್ 21ರಂದು ಮೊದಲ ಸೂರ್ಯಗ್ರಹಣ ಸಂಭವಿಸಿತ್ತು.

ಸಂಪೂರ್ಣ ಸೂರ್ಯಗ್ರಹಣ ಚಂದ್ರನು ಭೂಮಿ ಮತ್ತು ಸೂರ್ಯನ ನಡುವೆ ಹಾದು ಹೋದಾಗ ಸೂರ್ಯನ ಕಿರಣಗಳು ಭೂಮಿಗೆ ಮೇಲೆ ಬೀಳದಂತೆ ತಾತ್ಕಾಲಿಕ ತಡೆಯುಂಟಾಗುತ್ತದೆ. ಹೀಗೆ ಆದಾಗ ಸೂರ್ಯಗ್ರಹಣ ಸಂಭವಿಸುತ್ತದೆ. ಮೂರು ವಿಧದ ಸೂರ್ಯಗ್ರಹಣದಲ್ಲಿ ಮೂರು ವಿಧಗಳು; ಭಾಗಶಃ, ಸಂಪೂರ್ಣ ಮತ್ತು ವಾರ್ಷಿಕ.

ಸೂರ್ಯನ ವ್ಯಾಸದ ಮೇಲೆ ಚಂದ್ರನ ನೆರಳು ಎಷ್ಟು ಆವೃತವಾಗಿರುತ್ತದೆ ಎಂಬುದನ್ನು ಆಧರಿಸಿ ಭಾಗಶಃ ಅಥವಾ ಸಂಪೂರ್ಣ ಸೂರ್ಯಗ್ರಹಣ ಎಂದು ಹೇಳಲಾಗುತ್ತದೆ. ಭಾಗಶಃ ಅಥವಾ ವಾರ್ಷಿಕ ಸೂರ್ಯಗ್ರಹಣದ ಪ್ರಮಾಣ 0.0 ಮತ್ತು 1.0 ನಡುವೆ ಇರುತ್ತದೆ. ಅದೇ ವೇಳೆ ಸಂಪೂರ್ಣ ಸೂರ್ಯಗ್ರಹಣದ ಪ್ರಮಾಣವು 1.0ಗೆ ಸಮ ಅಥವಾ ಅದಕ್ಕಿಂತ ಹೆಚ್ಚು ಇರುತ್ತದೆ. ಸೋಮವಾರ ಸಂಭವಿಸಲಿರುವ ಸಂಪೂರ್ಣ ಸೂರ್ಯಗ್ರಹಣದ ಅವಧಿ 2 ನಿಮಿಷ 10 ಸೆೆಕೆಂಡ್ ಆಗಿದೆ.

ಸೂರ್ಯಗ್ರಹಣ ಎಲ್ಲೆಲ್ಲಿ ಗೋಚರಿಸುತ್ತದೆ? ಜಗತ್ತಿನ ಹಲವು ಭಾಗಗಳಲ್ಲಿ ಈ ಸೂರ್ಯಗ್ರಹಣ ಗೋಚರಿಸಲಿದೆ. ಚಿಲಿ ಮತ್ತು ಅರ್ಜೆಂಟಿನಾದಲ್ಲಿ ಮಾತ್ರ ಸಂಪೂರ್ಣ ಸೂರ್ಯಗ್ರಹಣ ಗೋಚರಿಸಲಿದೆ. ಪೆಸಿಫಿಕ್ ಸಮುದ್ರ , ಅಂಟಾರ್ಟಿಕ ಮತ್ತು ದಕ್ಷಿಣ ಅಮೆರಿಕದ ದಕ್ಷಿಣ ಭಾಗಗಳಲ್ಲಿ ಮಾತ್ರ ಭಾಗಶಃ ಗ್ರಹಣ ಗೋಚರಿಸಲಿದೆ.

ಚಿಲಿಯ ಸ್ಯಾಂಟಿಗೊ , ಬ್ರೆಜಿಲ್​​ನ ಸಾವೊ ಪಾಲೊ, ಅರ್ಜೆಂಟಿನಾದ ಬೆನೊಸ್ ಐರಿಸ್, ಪೆರುವಿನ ಲಿಮಾ, ಉರುಗ್ವೆಯ ಮೊಂಟೆವಿಡಿಯೊ ಪೆರುಗ್ವೆಯ ಅಸನ್ಸಿಯನ್ ನಲ್ಲಿ ಸೂರ್ಯಗ್ರಹಣ ಸ್ಪಷ್ಟವಾಗಿ ಗೋಚರಿಸುತ್ತದೆ.

ಸೂರ್ಯಗ್ರಹಣ ವೀಕ್ಷಣೆ ಹೇಗೆ? ಚಿಲಿ ಮತ್ತು ಅರ್ಜೆಂಟಿನಾದಲ್ಲಿ ಡಿಸೆಂಬರ್ 14ರಂದು ಪೂರ್ಣ ಸೂರ್ಯಗ್ರಹಣ ಗೋಚರಿಸಲಿದ್ದು, ಬೆಳಗ್ಗೆ 9.40ರಿಂದ ನಾಸಾ ಲೈವ್ ಚಿತ್ರಗಳನ್ನು ಶೇರ್ ಮಾಡಲಿದೆ.

Solar Eclipse 2020: ನಾಳೆ ನಡೆಯಲಿದೆ ವರ್ಷದ ಕೊನೆಯ ಸೂರ್ಯಗ್ರಹಣ

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ