AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mahatma Gandhi Death Anniversary: ಮಹಾತ್ಮ ಗಾಂಧಿ ಕುರಿತು ನಿಮಗೆ ತಿಳಿಯದ ಸಂಗತಿ, ಸ್ಪೂರ್ತಿದಾಯಕ ಸಂದೇಶಗಳು

ಇಂದು (ಜ.30) ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ 75ನೇ ಪುಣ್ಯಸ್ಮರಣೆ. ಮಹಾತ್ಮ ಗಾಂಧಿ ಅವರ ಬಗ್ಗೆ ನಿಮಗೆ ತಿಳಿಯದ ಕೆಲವು ಸಂಗತಿಗಳು ಇಲ್ಲಿವೆ.

Mahatma Gandhi Death Anniversary: ಮಹಾತ್ಮ ಗಾಂಧಿ ಕುರಿತು ನಿಮಗೆ ತಿಳಿಯದ ಸಂಗತಿ, ಸ್ಪೂರ್ತಿದಾಯಕ ಸಂದೇಶಗಳು
ರಾಷ್ಟ್ರಪಿತ ಮಹಾತ್ಮ ಗಾಂಧಿ
TV9 Web
| Edited By: |

Updated on:Jan 30, 2023 | 7:15 AM

Share

ರಾಷ್ಟ್ರಪಿತ ಮಹಾತ್ಮ ಗಾಂಧಿ (Mahatma gandhi death) ಭಾರತಕ್ಕೆ ಸ್ವಾತಂತ್ರ್ಯ ದೊರಕಿಸಿಕೊಡುವಲ್ಲಿ ಮುಂಚುವಳಿ ನಾಯಕರಲ್ಲಿ ಇವರು ಒಬ್ಬರು. ಗಾಂಧಿ ಅವರು ಅಕ್ಟೋಬರ್ 2, 1869ರಲ್ಲಿ ಗುಜರಾತ್‌ನ ಪೋರಬಂದರ್‌ನಲ್ಲಿ ಜನಿಸಿದರು. ತಂದೆ ಕರಮಚಂದ್ ಗಾಂಧಿ, ತಾಯಿ ಪುತಲೀಬಾಯಿ. 13 ನೇ ವಯಸ್ಸಿನಲ್ಲಿ ಗಾಂಧೀಜಿ ಕಸ್ತೂರಿ ಬಾ ಅವರನ್ನು ವಿವಾಹವಾದರು. ಇವರಿಗೆ ನಾಲ್ಕು ಮಕ್ಕಳು ಜನಿಸಿದರು, ಹರಿಲಾಲ್ ಗಾಂಧಿ, ಮಣಿಲಾಲ್ ಗಾಂಧಿ, ರಾಮದಾಸ್ ಗಾಂಧಿ ಮತ್ತು ದೇವದಾಸ್ ಗಾಂಧಿ. ಮಹಾತ್ಮ ಗಾಂಧಿ ತಮ್ಮ ಜೀವನದ ಉದ್ದಕ್ಕೂ ಹೋರಾಟಗಳನ್ನೇ ಮಾಡಿಕೊಂಡು ಬಂದಿದ್ದಾರೆ. ಗಾಂಧಿಯವರು ಜನವರಿ 30 1948ರಂದು ನಾಥುರಾಮ್​ ಗೋಡ್ಸೆ ಗುಂಡೇಟಿನಿಂದ ನಿಧನರಾದರು.

ಗಾಂಧಿಜಿ ಕುರಿತಾದ ಆಸಕ್ತಿದಾಯಕ ಸಂಗತಿಗಳು

1. ನೊಬೆಲ್ ಪ್ರಶಸ್ತಿ ವಿಜೇತ ಕವಿ ರವೀಂದ್ರನಾಥ ಠಾಗೋರ್ ಅವರು ಗಾಂಧೀಜಿಗೆ ಮಹಾತ್ಮ ಎಂಬ ಬಿರುದನ್ನು ನೀಡಿದರು.

2. ರಾಷ್ಟ್ರಪಿತ ಎಂದು ಜೂನ್​ 4 1944 ರಂದು ನೇತಾಜಿ ಸುಭಾಷ ಚಂದ್ರ ಬೋಸ್​ ಅವರು ಸಂಭೋದಿಸಿದರು.

3. ಸಂಶೋಧಕ ಆಲ್ಬರ್ಟ್ ಐನ್‌ಸ್ಟೈನ್ ಅವರು ಬಾಪು ಅವರಿಂದ ಬಹಳ ಪ್ರಭಾವಿತರಾಗಿದ್ದರು.

4. 36ನೇ ವಯಸ್ಸಿನಲ್ಲಿ ಗಾಂಧೀಜಿಯವರು ಬ್ರಹ್ಮಚರ್ಯ ವ್ರತವನ್ನು ಸ್ವೀಕರಿಸಿದರು.

5. ಮಾರ್ಟಿನ್ ಲೂಥರ್ ಕಿಂಗ್, ನೆಲ್ಸನ್ ಮಂಡೇಲಾ ಮೊದಲಾದ ಅಹಿಂಸಾವಾದಿ ಹೋರಾಟಗಾರರು ಗಾಂಧೀಜಿಯವರ ಸತ್ಯಾಗ್ರಹದ ತತ್ವದಿಂದ ಆಳವಾಗಿ ಪ್ರಭಾವಿತರಾದವರು.

ಮಹಾತ್ಮ ಗಾಂಧಿಜಿ ಅವರ ಸ್ಪೂರ್ತಿದಾಯಕ ಸಂದೇಶಗಳು

1. ಮಹಾತ್ಮ ಗಾಂಧಿ ಅವರ ಮುಖ್ಯ ಸಂದೇಶ ಸತ್ಯ ಮತ್ತು ಅಹಿಂಸೆ.

2. ಯಾವುದೇ ಸಂದರ್ಭದಲ್ಲೂ ಸಶಸ್ತ್ರ ಶಕ್ತಿಗಿಂತ ನಿರಾಯುಧ ಅಹಿಂಸೆಯ ಶಕ್ತಿ ಶ್ರೇಷ್ಠವಾಗಿರುತ್ತದೆ.

3. ಕ್ರೌರ್ಯವನ್ನು ಕ್ರೌರ್ಯದಿಂದ ಉತ್ತರಿಸುವುದು ಎಂದರೆ ನಿಮ್ಮ ನೈತಿಕ ಮತ್ತು ಬೌದ್ಧಿಕ ಅವನತಿಯನ್ನು ಒಪ್ಪಿಕೊಳ್ಳುವುದು.

4. ಭಯವು ದೇಹದ ರೋಗವಲ್ಲ, ಅದು ಆತ್ಮವನ್ನು ಕೊಲ್ಲುತ್ತದೆ.

5. ನೀವು ಮಾನವೀಯತೆಯ ಮೇಲಿನ ನಂಬಿಕೆಯನ್ನು ಕಳೆದುಕೊಳ್ಳಬಾರದು. ಮಾನವೀಯತೆಯು ಸಾಗರದಂತೆ; ಸಮುದ್ರದ ಕೆಲವು ಹನಿಗಳು ಕೊಳಕಾಗಿದ್ದರೆ, ಸಾಗರವು ಕೊಳಕು ಆಗುವುದಿಲ್ಲ.

Published On - 7:12 am, Mon, 30 January 23

Follow Us
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ