AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ಕೊವಿಡ್ ಕೇರ್ ಸೆಂಟರ್​ನಿಂದ ನಾಪತ್ತೆಯಾದವ ಶವವಾಗಿ ಪತ್ತೆಯಾದ

ಕೊವಿಡ್ ಸೋಂಕಿತ ವ್ಯಕ್ತಿಯೊಬ್ಬ ಸೋಮವಾರ ಬೆಳಗ್ಗೆ ಕೋವಿಡ್ ಕೇರ್ ಸೆಂಟರ್​ನಿಂದ ತಪ್ಪಿಸಿಕೊಂಡು ಅದೇ ದಿನ ಶವವಾಗಿ ಪತ್ತೆಯಾಗಿರುವ ಘಟನೆ, ಉತ್ತರ ಮಹಾರಾಷ್ಟ್ರದ ಅಮಲ್ನೇರ್ ತೆಹ್ಸಿಲ್ ವ್ಯಾಪ್ತಿಯಲ್ಲಿ ಬರುವ ವರ್ವಡೆ ಗ್ರಾಮದಲ್ಲಿ ಜರುಗಿದೆ. ಅಧಿಕಾರಿಯೊಬ್ಬರ ಪ್ರಕಾರ, ಸೋಮವಾರ ಕೊವಿಡ್ ಸೆಂಟರ್​ನಲ್ಲಿ ಜಾಸ್ತಿ ಸೋಂಕಿತರಿದ್ದ ಕಾರಣ ಮೃತವ್ಯಕ್ತಿ ನಾಪತ್ತೆಯಾಗಿದ್ದು ವೈದ್ಯರ ಗಮನಕ್ಕೆ ತಡವಾಗಿ ಬಂದಿದೆ. ಅವನಿಗೆ ಸೋಂಕು ತಗುಲಿದ್ದು ರವಿವಾರ ಲಭ್ಯವಾದ ರಿಪೋರ್ಟ್ ಮೂಲಕ ಗೊತ್ತಾಗಿತ್ತು. ಅವನ ದೇಹ, ಆಮಲ್ನೇರ್ ಪುರಸಭೆ ಕಟ್ಟಡದ ಬಳಿ ಸಿಕ್ಕಿತೆಂದು ಅಧಿಕಾರಿ ಹೇಳಿದರು. “ಸದರಿ […]

ಮಹಾರಾಷ್ಟ್ರ: ಕೊವಿಡ್ ಕೇರ್ ಸೆಂಟರ್​ನಿಂದ ನಾಪತ್ತೆಯಾದವ ಶವವಾಗಿ ಪತ್ತೆಯಾದ
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 11, 2020 | 4:51 PM

Share

ಕೊವಿಡ್ ಸೋಂಕಿತ ವ್ಯಕ್ತಿಯೊಬ್ಬ ಸೋಮವಾರ ಬೆಳಗ್ಗೆ ಕೋವಿಡ್ ಕೇರ್ ಸೆಂಟರ್​ನಿಂದ ತಪ್ಪಿಸಿಕೊಂಡು ಅದೇ ದಿನ ಶವವಾಗಿ ಪತ್ತೆಯಾಗಿರುವ ಘಟನೆ, ಉತ್ತರ ಮಹಾರಾಷ್ಟ್ರದ ಅಮಲ್ನೇರ್ ತೆಹ್ಸಿಲ್ ವ್ಯಾಪ್ತಿಯಲ್ಲಿ ಬರುವ ವರ್ವಡೆ ಗ್ರಾಮದಲ್ಲಿ ಜರುಗಿದೆ.

ಅಧಿಕಾರಿಯೊಬ್ಬರ ಪ್ರಕಾರ, ಸೋಮವಾರ ಕೊವಿಡ್ ಸೆಂಟರ್​ನಲ್ಲಿ ಜಾಸ್ತಿ ಸೋಂಕಿತರಿದ್ದ ಕಾರಣ ಮೃತವ್ಯಕ್ತಿ ನಾಪತ್ತೆಯಾಗಿದ್ದು ವೈದ್ಯರ ಗಮನಕ್ಕೆ ತಡವಾಗಿ ಬಂದಿದೆ. ಅವನಿಗೆ ಸೋಂಕು ತಗುಲಿದ್ದು ರವಿವಾರ ಲಭ್ಯವಾದ ರಿಪೋರ್ಟ್ ಮೂಲಕ ಗೊತ್ತಾಗಿತ್ತು. ಅವನ ದೇಹ, ಆಮಲ್ನೇರ್ ಪುರಸಭೆ ಕಟ್ಟಡದ ಬಳಿ ಸಿಕ್ಕಿತೆಂದು ಅಧಿಕಾರಿ ಹೇಳಿದರು.

ಸದರಿ ಸೆಂಟರ್ ಕೇವಲ 20 ಬೆಡ್​ಗಳ ಸಾಮರ್ಥ್ಯವುಳ್ಳದ್ದಾದರೂ 40 ಸೋಂಕಿತರನ್ನು ದಾಖಲಿಸಿಕೊಳ್ಳಲಾಗಿತ್ತು. ಮೃತವ್ಯಕ್ತಿ ಕಾಣೆಯಾದ ಕೂಡಲೇ ಪೊಲೀಸ್​ ದೂರು ನೀಡಲಾಗಿತ್ತು,” ಎಂದು ಪರಿಚಯ ಹೇಳಿಕೊಳ್ಳಲಿಚ್ಛಸದ ಅಧಿಕಾರಿ ಹೇಳಿದರು.

ಆದರೆ, ಸ್ಥಳೀಯ ಬಿಜೆಪಿ ನಾಯಕರೊಬ್ಬರ ಪ್ರಕಾರ, ಇಂಥ ಘಟನೆಗಳು ಆಮಲ್ನೇರ್​ಗೆ ಹೊಸದೇನಲ್ಲ. ಇತ್ತೀಚೆಗಷ್ಟೇಆಮಲ್ನೇರ್ ಗ್ರಾಮೀಣ ಆರೋಗ್ಯ ಕೇಂದ್ರದಿಂದ ಓಡಿಹೋದ ಕೊವಿಡ್-19 ರೋಗಿಯೊಬ್ಬ ರಸ್ತೆ ಅಪಘಾತದಲ್ಲಿ ಸಾವಿಗೀಡಾಗಿದ್ದ. ಈ ನಾಯಕ ಹೇಳುವ ಪ್ರಕಾರ, ಕೊವಿಡ್ ಸೆಂಟರ್ ಸುತ್ತ ಪೊಲೀಸ್ ಭದ್ರತೆ ಹೆಚ್ಚಿಸಬೇಕು, ಹಾಗಾದಲ್ಲಿ ಮಾತ್ರ ಇಂಥ ದುರ್ಘಟನೆಗಳು ಮರುಕಳಿಸುವುದು ತಪ್ಪುತ್ತದೆ.

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ